ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ

ಪುತ್ತೂರು: ನಗರದ ಬೊಳ್ಳಾರ್ ನಲ್ಲಿ ಇತ್ತಂಡಗಳ ಮಧ್ಯೆ  ವಾದಗಳು ನಡೆದಿದ್ದು,ಕೋಪಕ್ಕೆ ತುತ್ತಾಗಿ ವ್ಯಕ್ತಿಯೊರ್ವರಿಗೆ  ಸೋಡಾ ಬಾಟಲಿಯಿಂದ ಚುಚ್ಚಿದ್ದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಘಟನೆಯ ಕುರಿತು ಉಮೇಶ್ ಬಾಳುಗೋಡು ದೂರು ನೀಡಿದ್ದು,  ಪುತ್ತೂರು ನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ತಿಂಗಳಾಡಿ ನೀವಾಸಿ ನರ್ಮೇಶ್ ರೈ, ಪ್ರಸಾದ್ ಪ್ರಕರಣದ ಆರೋಪಿತರು.  ನರ್ಮೇಶ್ ರೈ ಎಂಬುವರು ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇತ್ತಂಡದವರು ಕುಡಿತದ ಮತ್ತಿನಲ್ಲಿ ಜಗಳವಾಡಿದ್ದು, ಈ ವೇಳೆ ಇದು ತಾರಕಕ್ಕೆ ಹೋಗಿ […]

ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ Read More »

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ

ಪುತ್ತೂರು : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆದಿದೆ. ಮುಷ್ಕರಕ್ಕೆ ಇಂದು ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿ ಬೆಂಬಲವಿತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪ್ರದಾನ ಕಾರ್ಯದರ್ಶಿ ಗಳಾದ ಉಮೇಶ್, ಪ್ರಶಾಂತ್ ನೆಕ್ಕಿಲಾಡಿ. ಅನಿಲ್ ತೆಂಕಿಲ. ಟೌನ್ ಬ್ಯಾಂಕ್ ನಿರ್ದೇಶಕರು ರಾಜು ಶೆಟ್ಟಿ, ಶಕ್ತಿ ಕೇಂದ್ರ ದ ಅಧ್ಯಕ್ಷ ಪ್ರಜ್ವಲ್ ಘಾಟೆ, ಹರೀಶ್ ಆಚಾರ್, ರೂಪೇಶ್, ಪ್ರದೀಪ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ Read More »

ಮಂಗಳೂರು : ಅಡಿಕೆ ವರ್ತಕರ ಮೇಲೆ ಐಟಿ ದಾಳಿ

ಸಾವಿರಾರು ಕೋ.ರೂ. ತೆರಿಗೆ ವಂಚನೆ, ಅಕ್ರಮ ಗಳಿಕೆ ಪತ್ತೆ ಮಂಗಳೂರು: ಅಡಿಕೆ ರಫ್ತು ವ್ಯವಹಾರ ನಡೆಸುತ್ತಿರುವ ಮಂಗಳೂರಿನ ಕೆಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಮಂಗಳೂರಿನ ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐಟಿ ದಾಳಿಯಾಗಿದೆ. ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗೂ ಟ್ರೇಡಿಂಗ್ ಕಂಪನಿ ಮಾಲೀಕರ ಮನೆ ಮೇಲೂ ದಾಳಿ‌ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ

ಮಂಗಳೂರು : ಅಡಿಕೆ ವರ್ತಕರ ಮೇಲೆ ಐಟಿ ದಾಳಿ Read More »

ಕುಖ್ಯಾತ ಬೈಕ್‍ ಕಳ್ಳರ ಬಂಧನ

ಪಡುಬಿದ್ರಿ : ಮುಂಡೂರು ಗ್ರಾಮದ ಪರೀಕ್ಷಿತ್ ಅವರಿಗೆ ಸೇರಿದ ಬುಲೆಟ್ ಬೈಕನ್ನುಜ. 21ರಂದು ಪಡುಬಿದ್ರಿಯಲ್ಲಿ ಪಾರ್ಕ್ ಮಾಡಿದ್ದಲ್ಲಿಂದ ಕಳವು ಮಾಡಿರುವ ಘಟನೆ ನಡೆದಿದೆ. ಬೈಕ್‍ ಕದ್ದವರು ಸೂಳೆಬೈಲು ಶಿವಮೊಗ್ಗದ ಮೊಹಮ್ಮದ್ ರೂಹಾನ್ ಮತ್ತು ಶಿವಮೊಗ್ಗದ ತಾಜುದ್ದೀನ್ ಯಾನೆ ತಾಜು ಇಬ್ಬರು ಅಂತರ್ ಜಿಲ್ಲಾ ಕುಖ್ಯಾತ ಬೈಕ್ ಕಳ್ಳರಾಗಿದ್ದಾರೆ. ಇವರನ್ನು ಪಡುಬಿದ್ರಿ ಪೊಲೀಸರು ಶಿವಮೊಗ್ಗದಿಂದ ಬಂಧಿಸಿದ್ದಾರೆ 4 ಲ.ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ್ದ  ಬುಲೆಟ್ ಹಾಗೂ ಈ ಕೃತ್ಯಕ್ಕೆ ಬಳಸಿದ್ದ ಮಾರುತಿ ರಿಟ್ಸ್ ಕಾರು ಸಹಿತ

ಕುಖ್ಯಾತ ಬೈಕ್‍ ಕಳ್ಳರ ಬಂಧನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ   ತಂಡಕ್ಕೆ  ಯಕ್ಷಭಾರತಿ ದಶಮಾನೋತ್ಸವ ಸೇವಾ ಗೌರವ

ಬೆಳ್ತಂಗಡಿ : ಪ್ರಕೃತಿ ವಿಕೋಪದಿಂದ ಉಂಟಾಗುವ ನೆರೆ, ಭೂ ಕುಸಿತ, ಮನೆಗಳ ಕುಸಿತ, ಪ್ರಾಕೃತಿಕ ಅಥವಾ ಮಾನವಕೃತ ಅಗ್ನಿ ದುರಂತಗಳು ಸಂಭವಿಸಿದಾಗ ಉಂಟಾಗುವ ಅಪಾರ ಹಾನಿಯ ತಡೆ ,ಜನ -ಜಾನುವಾರುಗಳ ರಕ್ಷಣೆ, ತೆರವು ಕಾರ್ಯಾಚರಣೆ,ತುರ್ತು ಸೌಲಭ್ಯಗಳನ್ನು ಒದಗಿಸುವ ಉದ್ದೇಶಕ್ಕೆ  ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಕಲ್ಪನೆ ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಂತೆ 2020 ಜೂನ್ 21 ರಂದು ಬೆಳ್ತಂಗಡಿ ಮತ್ತು ಗುರುವಾಯನಕೆರೆ ಘಟಕಗಳೊಂದಿಗೆ ಧರ್ಮಸ್ಥಳದಲ್ಲಿ ಲೋಕಾರ್ಪಣೆಗೊಂಡಿತು.  ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ   ತಂಡಕ್ಕೆ  ಯಕ್ಷಭಾರತಿ ದಶಮಾನೋತ್ಸವ ಸೇವಾ ಗೌರವ Read More »

ರಜತ್ ಪಾಟಿದಾರ್ ಆರ್‌ಸಿಬಿ ಕ್ಯಾಪ್ಟನ್‌

ವಿರಾಟ್‌ ಕೊಹ್ಲಿಗೆ ಕೈತಪ್ಪಿದ ಅವಕಾಶ ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದು, ವಿರಾಟ್‌ ಕೊಹ್ಲಿಗೆ ಕ್ಯಾಪ್ಟನ್‌ ಆಗುವ ಅವಕಾಶ ತಪ್ಪಿದೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್​ಗೆ ವಹಿಸಲಾಗಿದೆ. ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. 2021ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಕಾಯಂ ಸದಸ್ಯರಾಗಿ

ರಜತ್ ಪಾಟಿದಾರ್ ಆರ್‌ಸಿಬಿ ಕ್ಯಾಪ್ಟನ್‌ Read More »

ಮೆಟ್ರೋ ಬೆಲೆ ಏರಿಕೆ | ರಾಜ್ಯ ಸರ್ಕಾರದ ವಿರುದ್ಧ ಡಿವಿ ಸದಾನಂದ ಗೌಡ ಆಕ್ರೋಶ

ಮೆಟ್ರೋ ದರ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ. ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ, ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ. ಮೆಟ್ರೋ ದರ ಕಡಿಮೆ ಅಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು

ಮೆಟ್ರೋ ಬೆಲೆ ಏರಿಕೆ | ರಾಜ್ಯ ಸರ್ಕಾರದ ವಿರುದ್ಧ ಡಿವಿ ಸದಾನಂದ ಗೌಡ ಆಕ್ರೋಶ Read More »

ಅಪಾರ್ಟ್‌ಮೆಂಟ್‌ ನಿಂದ ಜಿಗಿದು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ SSLC ಪರೀಕ್ಷೆ ಹತ್ತಿರ ಬರುತ್ತಾ ಇದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ.

ಅಪಾರ್ಟ್‌ಮೆಂಟ್‌ ನಿಂದ ಜಿಗಿದು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ : 1,000ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್‌

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣ ಸಂಬಂಧ ಕಲ್ಲು ತೂರಿದ ಸಾವಿರಕ್ಕೂ ಅಧಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಭೆಯಲ್ಲಿ ಇದ್ದವರು ಒಂದು ಸಾವಿರಕ್ಕೂ ಹೆಚ್ಚು ಎಂದು ಪೊಲಿಸರು ಅಧಿಕೃತವಾಗಿ ನಮೂದಿಸಿದ್ದಾರೆ. ಎಫ್‌ಐಆರ್ ಪ್ರತಿಯಲ್ಲಿ ಘಟನೆಯ ಸಂಪೂರ್ಣ ಮಾಹಿತಿ ಇದೆ.ಆರಂಭದಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಪೊಲೀಸರು ಇರಿಸಿದ್ದರು. ಫೆ.9ರಂದು ಕಲ್ಯಾಣಗಿರಿಯ ಪಾಂಡುರಂಗ ಅಲಿಯಾಸ್‌ ಸತೀಶ್‌ನನ್ನು ಠಾಣೆಗೆ ಕರೆತರಲಾಗಿತ್ತು. ರಾತ್ರಿ 8.30ಕ್ಕೆ ಠಾಣೆಯ ಬಳಿ ಮುಸ್ಲಿಂ ಯುವಕರು ಜಮಾಯಿಸಿ ಆರೋಪಿಯನ್ನು ನಮ್ಮ ವಶಕ್ಕೆ

ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ : 1,000ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್‌ Read More »

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನ

ಕಾರವಾರ: ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅನಾರೋಗ್ಯದಿಂದಾಗಿ (88) ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಎಂದೂ ಕರೆಯಲಾಗುತ್ತಿತ್ತು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನ Read More »

error: Content is protected !!
Scroll to Top