ಇರಾನ್‌ನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಆಯ್ಕೆ

ದೇವ ಪ್ರಭುತ್ವ ಪರಂಪರೆಯ ಮುಂದುವರಿಕೆಯಾಗಿ ಮೊಜ್ತಬಾ ಖಮೇನಿಗೆ ಪರಮಾಧಿಕಾರ ಟೆಹ್ರಾನ್‌: ಇಸ್ರೇಲ್‌-ಅಮೆರಿಕದ ಪ್ರತೀಕಾರದ ದಾಳಿಯ ನಡುವೆ ಇರಾನ್‌ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ತಜ್ಞರ ಸಭೆಯು ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಇರಾನ್‌ನ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. 56 ವರ್ಷದ ಮೊಜ್ತಬಾ ಅವರನ್ನು ದೇಶದ ನಿಯಂತ್ರಣ ವಹಿಸಿಕೊಳ್ಳಲು ಆಯ್ಕೆ ಮಾಡಲಾಗಿದ್ದು, ದೀರ್ಘಕಾಲದ ನಾಯಕನಾಗಿ ಮುಂದುವರಿಯಲು ಎದುರು ನೋಡುತ್ತಿದ್ದಾರೆ. ಇದಕ್ಕೂ […]

ಇರಾನ್‌ನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಆಯ್ಕೆ Read More »

ಪುತ್ತೂರಿನಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ‌ಜೆಟ್ ವಿಮಾನ

ಪುತ್ತೂರು: ಭೂಮಿಯಿಂದ ಕೆಲವೇ ಮಟ್ಟಗಳ ದೂರದಲ್ಲಿ ಜೆಟ್ ವಿಮಾನವೊಂದು ಹಾರಾಟ ನಡೆಸಿದ್ದು, ಪುತ್ತೂರಿಗರಲ್ಲಿ ‌ಕೆಲಕಾಲ ಆಂತಕ ಸೃಷ್ಟಿಸಿದ ಘಟನೆ ನಡೆಯಿತು. ಮಂಗಳವಾರ ಮಧ್ಯಾಹ್ನ ಮಹಾಲಿಂಗೇಶ್ವರ ದೇಗುಲದ ಸಮೀಪದಲ್ಲಿ ಜೆಟ್ ವಿಮಾನ ಹಾರಾಟ ನಡೆಸಿದ್ದು, ಏನಿದು? ಯಾತಕ್ಕಾಗಿ ವಿಮಾನ ಹಾರಾಟ ನಡೆಸುತ್ತಿದೆ ಎಂಬ ಗೊಂದಲ ಕೆಲಕಾಲ ಸೃಷ್ಟಿಯಾಯಿತು. ಆ ಬಳಿಕ ಇದು ಭೂಮಿಯ ರಚನೆ, ಅಧ್ಯಯನಕ್ಕೆ ನಡೆದ ಜೆಟ್ ವಿಮಾನ ಸರ್ವೇ ಕಾರ್ಯ. ಭೂ ವಿಜ್ಞಾನಕ್ಕೆ ನಡೆದ ವೈಮಾನಿಕ ಸರ್ವೇ ಎಂದು ತಿಳಿದ ಬಳಿಕ ಜನರು ನಿರಾಳರಾದರು ಎಂದು

ಪುತ್ತೂರಿನಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ‌ಜೆಟ್ ವಿಮಾನ Read More »

ಪ್ರೇಮ ವೈಫಲ್ಯ: ಸೋಮೇಶ್ವರದ ಯುವಕ ಒಮಾನಿನಲ್ಲಿ ಆತ್ಮಹತ್ಯೆ

ಉಳ್ಳಾಲ: ಪ್ರೇಮ ವೈಫಲ್ಯದ ಕಾರಣಕ್ಕ. ಒಮಾನ್‌ನಲ್ಲಿ ಉದ್ಯೋಗ ಮಾಡುತ್ತಿದ್ದ ಸೋಮೇಶ್ವರದ ಯುವಕನೊಬ್ಬ ತನ್ನ ಕೊಠಡಿಯಲ್ಲೇ ‌ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ಪುನೀತ್ ಪೂಜಾರಿ(32) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಒಮಾನ್‌ನ ಲಿಫ್ಟ್ ಕಂಪನಿಯೊಂದರಲ್ಲಿ ಪುನೀತ್ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ಮತ್ತೆ ಒಮಾನ್‌ಗೆ ತೆರಳಿದ್ದರು. ಪುನೀತ್ ಉರ್ವಾ ಮೂಲದ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಆ ಯುವತಿ ಪುನೀತ್ ಅವರ ಕರೆ, ಸಂದೇಶಗಳಿಗೆ ‌ಸ್ಪಂದನೆ ನೀಡುತ್ತಿರಲಿಲ್ಲ.

ಪ್ರೇಮ ವೈಫಲ್ಯ: ಸೋಮೇಶ್ವರದ ಯುವಕ ಒಮಾನಿನಲ್ಲಿ ಆತ್ಮಹತ್ಯೆ Read More »

ಅನಗತ್ಯವಾಗಿ ಓಡಾಡದಂತೆ ಇರಾನಿನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಸೂಚನೆ

ತೆಹ್ರಾನ್: ಇರಾನ್ ಮತ್ತು ಅಮೆರಿಕಾ, ಇಸ್ರೇಲ್ ನಡುವಿನ ಜಟಾಪಟಿಯಲ್ಲಿ ಇರಾನಿನ ಪರಿಸ್ಥಿತಿ ಹದೆಗೆಟ್ಟಿದೆ. ಭದ್ರತಾ ಪರಿಸ್ಥಿತಿ ಬಿಗುವಾಗಿದೆ. ಯುದ್ಧದ ಭೀತಿಯ ಕಾರಣಕ್ಕಾಗಿ ಅಲ್ಲಿನ ಭಾರತೀಯರಿಗೆ ಸಂಬಂಧಿಸಿದ ಹಾಗೆ ಭಾರತೀಯ ರಾಯಭಾರ ಕಚೇರಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಇರಾನಿನಲ್ಲಿರುವ ಎಲ್ಲಾ ಭಾರತೀಯರು ಅನಗತ್ಯ ಓಡಾಟ ತಪ್ಪಿಸಿ, ಆದಷ್ಟು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಸ್ಥಳೀಯ ಸುದ್ದಿಗಳು, ರಾಯಭಾರ ಕಚೇರಿಯ ಪ್ರಕಟಣೆಗಳನ್ನು ಗಮನಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳು, ಪ್ರತಿಭಟನೆ ನಡೆವ ಸ್ಥಳಗಳಿಂದ ದೂರವಿರುವಂತೆಯೂ ಎಚ್ಚರಿಕೆ

ಅನಗತ್ಯವಾಗಿ ಓಡಾಡದಂತೆ ಇರಾನಿನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಸೂಚನೆ Read More »

ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ

ಬೀದರ್: ಪತ್ನಿಗೆ ಅನೈತಿಕ ಸಂಬಂಧ ಇರುವ ಸಂದೇಹದಲ್ಲಿ ಗಂಡನೊಬ್ಬ ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ‌ಹತ್ಯೆ ಮಾಡಿದ ಘಟನೆ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಶ್ವಿನಿ(28) ಎಂದು ಗುರುತಿಸಲಾಗಿದೆ. ಕಿಶನ್ ಎಂಬವನೇ ಆರೋಪಿ. ಕಿಶನ್ ಮಹಾರಾಷ್ಟ್ರದ ಡಾಬಾ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅಶ್ವಿನಿ ಮೂವರು ಮಕ್ಕಳ ಜೊತೆಗೆ ಮನ್ನಳ್ಳಿಯಲ್ಲೇ ವಾಸವಿದ್ದಳು. ಕಿಶನ್ ತನ್ನ ಪತ್ನಿಗೆ ಅಕ್ರಮ ಸಂಬಂಧ ಇದೆ ಎಂದು ಹೇಳಿ ಪ್ರತಿನಿತ್ಯ ಆಕೆಯ ಜೊತೆಗೆ ಜಗಳವಾಡುತ್ತಿದ್ದ. ಬೇರೊಬ್ಬ ವ್ಯಕ್ತಿಯ ಜೊತೆ ಆಕೆ

ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ Read More »

ನೀನು ಓದಬಾರದು ಎಂದು ಪಿಯುಸಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ ಸೋದರ ಮಾವ

ಮೈಸೂರು: ನೀನು ಓದಬಾರದು ಎಂದು ಹೇಳಿ ಪರೀಕ್ಷೆ ಬರೆಯಲು ಹೋಗಿ ಬಂದ ವಿದ್ಯಾರ್ಥಿನಿಯ ‌ಮೇಲೆ ಸೋದರ ಮಾವ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ನಂಜನಗೂಡಿನ ಪಾಳ್ಯಾ ಎಂಬಲ್ಲಿ ನಡೆದಿದೆ. ಹಲ್ಲೆಗೆೊಳಗಾದ ವಿದ್ಯಾರ್ಥಿನಿಯನ್ನು ಪೂರ್ಣಿಮಾ ಎಂದು ಗುರುತಿಸಲಾಗಿದೆ. ಆಕೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಮನೆಗೆ ಬಂದಿದ್ದು, ಆ‌ವೇಳೆ ಮನೆಗೆ ನುಗ್ಗಿದ ಸೋದರ ಮಾವ ಆಕೆಯ ಮೇಲೆ ಹಲ್ಲೆ ಮಾಡಿರುವುದಾಗಿದೆ. ಹಳೆಯ ದ್ವೇಷದ ಕಾರಣಕ್ಕೆ ಆತ ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ. ಈ ವೇಳೆ ವಿದ್ಯಾರ್ಥಿನಿಯನ್ನು ಕಾಪಾಡಲು ಬಂದ

ನೀನು ಓದಬಾರದು ಎಂದು ಪಿಯುಸಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ ಸೋದರ ಮಾವ Read More »

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ – ಜಿಲ್ಲಾ ಘಟಕದ ಪದಗ್ರಹಣ

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಇದರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೂರ್ವಾಧ್ಯಕ್ಷ, ಸುಳ್ಯ ಸುದ್ಧಿ ಬಿಡುಗಡೆಯ ಪ್ರಧಾನ ಸಂಪಾದಕ ಹರೀಶ್ ಬಂಟ್ವಾಳರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು , ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪತ್ರಿಕಾ ಮಾಧ್ಯಮ ಯಾವಾಗಲೂ ಧನಾತ್ಮಕ ಅಂಶಗಳನ್ನೇ ಬಿಂಬಿಸುವ ಕೆಲಸ ಮಾಡಬೇಕು ಎಂದು

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ – ಜಿಲ್ಲಾ ಘಟಕದ ಪದಗ್ರಹಣ Read More »

ಘನಘೋರ ಸಮರ : ಇರಾನ್‌ನಲ್ಲಿ ಮಕ್ಕಳ ಸಹಿತ 700ಕ್ಕೂ ಅಧಿಕ ಮಂದಿ ಸಾವು

ತೀವ್ರಗೊಂದ ಸೇನಾ ಕಾರ್ಯಾಚರಣೆ, ಮಿಸೈಲ್‌, ಡ್ರೋನ್‌, ಫೈಟರ್‌ ವಿಮಾನಗಳ ಆರ್ಭಟ ಟೆಹ್ರಾನ್‌ : ಇದು ಸದ್ಯಕ್ಕೆ ಮುಗಿಯುವ ಯುದ್ಧವಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಿಗೆ ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಯುದ್ಧವನ್ನು ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಇರಾನ್ ಕೂಡ ಪ್ರತೀಕಾರದ ದಾಳಿ ಮುಂದುವರಿಸಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಗಲ್ಫ್‌ ರಾಷ್ಟ್ರಗಳ ಮೇಲಿನ ದಾಳಿಯನ್ನು ಇರಾನ್‌ ಮುಂದುವರಿಸಿದೆ. ಇರಾನ್‌ನ ಕ್ಷಿಪಣಿ

ಘನಘೋರ ಸಮರ : ಇರಾನ್‌ನಲ್ಲಿ ಮಕ್ಕಳ ಸಹಿತ 700ಕ್ಕೂ ಅಧಿಕ ಮಂದಿ ಸಾವು Read More »

ಅಕ್ಷಯ ಕಾಲೇಜು ವಾರ್ಷಿಕ ಶಿಬಿರ 2025-26 ಸಮಾರೋಪ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯಡಿ ಅಕ್ಷಯ ಕಾಲೇಜು ಪುತ್ತೂರು ವತಿಯಿಂದ “ನನ್ನ ಭಾರತಕ್ಕಾಗಿ ಯುವಜನತೆ – ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಆಶಯದೊಂದಿಗೆ ಆಯೋಜಿಸಲಾದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಶ್ರೀ ರಾಮಚಂದ್ರ ಪದವಿ ಪರ‍್ವ ವಿದ್ಯಾಲಯದಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ವಹಿಸಿದ್ದರು. ಅಧ್ಯಕ್ಷ ಜಯಂತ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಏಳು ದಿನಗಳ ಕಾಲ ಪರ್ನೆ ಪರಿಸರವನ್ನು ಆಯ್ಕೆ ಮಾಡಿಕೊಂಡು ಶಿಬಿರವನ್ನು

ಅಕ್ಷಯ ಕಾಲೇಜು ವಾರ್ಷಿಕ ಶಿಬಿರ 2025-26 ಸಮಾರೋಪ Read More »

ಗಲ್ಫ್‌ನಲ್ಲಿ ಸಿಲುಕಿರುವವರನ್ನು ಕರೆತರಲು ವಿಮಾನ ರವಾನೆ

ಪರ್ಯಾಯ ವಾಯು ಮಾರ್ಗಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನವದೆಹಲಿ: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮಧ್ಯಪ್ರಾಚ್ಯದ ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಡಿಗೋ ಏರ್​ಲೈನ್ಸ್​ನ 10 ವಿಶೇಷ ವಿಮಾನಗಳು ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ ತಿಳಿಸಿದೆ. ಜೆದ್ದಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಇಂಡಿಗೋ ಸಂಪರ್ಕದಲ್ಲಿದೆ. ಯಾವ ವಾಯುಮಾರ್ಗದ

ಗಲ್ಫ್‌ನಲ್ಲಿ ಸಿಲುಕಿರುವವರನ್ನು ಕರೆತರಲು ವಿಮಾನ ರವಾನೆ Read More »

error: Content is protected !!
Scroll to Top