ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಪತ್ತೆ

ಪುತ್ತೂರು :ಮನೆಯಿಂದ ಹೊರಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವ ಭಾನುವಾರ ಅರಸಿಕೆರೆಯಲ್ಲಿ ಪತ್ತೆಯಾಗಿದ್ದಾನೆ. ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ (15)  ಪತ್ತೆಯಾದಾತ. ಈ ಕುರಿತು ಪೋಷಕರು ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದು ಪೋಷಕರಿಂದ ಮಾಹಿತಿ ಪಡೆದು ಹುಡುಕಾಡುತ್ತಿದ್ದಂತೆ ಸಂಜೆ ಅರಸಿಕೆರೆ ಸಮೀಪ ಈತ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಪತ್ತೆ Read More »

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌

ಎಚ್ಚರಿಕೆ ನೀಡಿ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌ Read More »

ಪುತ್ತೂರು ತಾಲೂಕು ವ್ಯಾಪ್ತಿಯ ಸರಕಾರಿ ನೌಕರರಿಗೆ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಾಹಿತಿ ಕಾರ್ಯಾಗಾರ | ಸರಕಾರಿ ನೌಕರರ ದಿನಾಚರಣೆ

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆ ವತಿಯಿಂದ ಸರಕಾರಿ ನೌಕರರ ದಿನಾಚರಣೆ ಅಂಗವಾಗಿ ಪುತ್ತೂರು ತಾಲೂಕು ವ್ಯಾಪ್ತಿಯ ಸರಕಾರಿ ನೌಕರರಿಗೆ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಾಹಿತಿ ಕಾರ್ಯಾಗಾರ ಭಾನುವಾರ ದರ್ಬೆ ಆಫೀಸರ್ಸ್‍ ಕ್ಲಬ್‍ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್‍ ಕುಮಾರ್ ಎಂ.ಎಸ್‍. ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರಕಾರಿ ನೌಕರರಿಗೆ ಮುಖ್ಯ ಸಮಸ್ಯೆಯಾಗಿರುವ ಎನ್‍ಪಿಎಸ್‍ಜ್ಯಾರಿಯನ್ನು ನ್ನು ರದ್ದುಪಡಿಸಿ ಒಪಿಎಸ್‍ಜ್ಯಾರಿಗೊಳಿಸುವಂತೆ ನಮ್ಮ ಮುಂದಿನ ಬಹುಮುಖ್ಯ ಹೋರಾಟವಾಗಿದ್ದು, ಎಲ್ಲಾ

ಪುತ್ತೂರು ತಾಲೂಕು ವ್ಯಾಪ್ತಿಯ ಸರಕಾರಿ ನೌಕರರಿಗೆ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಾಹಿತಿ ಕಾರ್ಯಾಗಾರ | ಸರಕಾರಿ ನೌಕರರ ದಿನಾಚರಣೆ Read More »

ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) 2025ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ವಾರವೇ ಪ್ರಕಟಸುವ ನಿರೀಕ್ಷೆ ಇದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಲು ಅವಕಾಶವಿದೆ. karresults.nic.in ಮತ್ತು kseab.karnataka.gov.in ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ

ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ Read More »

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ

ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಯಕ್ಷಗಾನದ ಕಥೆಯೇ ಸಿನಿಮಾ ಆದ ಚಿತ್ರ ಉಡುಪಿ: ಸುಮಾರು ಕಲಾವಿದರು ನಟಿಸಿರುವ, ಹಿರಿಯ ನಟ ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಯಕ್ಷಗಾನವೇ ಕಥಾವಸ್ತು ಆಗಿ ಉಳ್ಳ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗಿದ್ದು, ಏ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಯಕ್ಷಗಾನ ಮತ್ತು ಯಕ್ಷಗಾನದ ಪಾತ್ರಗಳನ್ನು ಸಾಂದರ್ಭಿಕವಾಗಿ ಬಳಸಿಕೊಂಡಿರುವ ಅನೇಕ ಚಿತ್ರಗಳು ಬಂದಿವೆ. ಆದರೆ ಯಕ್ಷಗಾನ ಪ್ರಸಂಗವೊಂದನ್ನೇ ಸಿನಿಮಾ ಮಾಡಿ ಅದರಲ್ಲಿ ಯಕ್ಷಗಾನ ಕಲಾವಿದರೇ ನಟಿಸಿದ್ದು, ಇದೇ ಮೊದಲು. ಈ ಚಿತ್ರವನ್ನು ನಿರ್ದೇಶಿಸಿದವರು ಈಗಾಗಲೇ ಕನ್ನಡದಲ್ಲಿ

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ Read More »

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಮಾಟಮಂತ್ರ ತೆಗೆಯುವ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಅವರು ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ Read More »

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ

ಬೆಂಗಳೂರು : ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಉದ್ಯಮಿ ರಾಹುಲ್ ತೋನ್ಸೆಗೆ ನ್ಯಾಯಾಲಯ ಬರೋಬ್ಬರಿ 61.50 ಲಕ್ಷ ರೂಪಾಯಿ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 33ನೇ ಎಸಿಜೆಎಂ ನ್ಯಾಯಾಲಯ ಈ ತೀರ್ಪು ನೀಡಿದೆ. ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗಧಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ Read More »

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ

ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ Read More »

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ

ವಿಟ್ಲ: ತುಳು ರಂಗ ಭೂಮಿ ಕಲಾವಿದ, ಮಂಜೇಶ್ವರ ಶಾರದಾ ಆರ್ಟ್ಸ್ನ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ Read More »

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಸುಬ್ರಹ್ಮಣ್ಯ: ತಾಯಿ-ಮಗ ಇಬ್ಬರೂ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಮಗ ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ. ಸುಲೋಚನಾ ಹಾಗೂ ಮಗ ನಿತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದು, ಮಗ ನಿತಿನ್‍ (35) ಮೃತಪಟ್ಟಿದ್ದಾರೆ. ತಾಯಿ ಸುಲೋಚನಾ ಅವರನ್ನು ಸುಳ್ಯ  ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top