ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ

ಬೆಂಗಳೂರು : ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆ ಸಲಹೆ ನೀಡಲಾಗಿದೆ. ಸರ್ಕಾರಿ ಆದೇಶದಲ್ಲೇನಿದೆ? ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ […]

ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ Read More »

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ

ಪುತ್ತೂರು : ಪುತ್ತೂರು ಕೇಂದ್ರವಾಗಿರಿಸಿ ಕಳೆದ ಕೆಲವು ವರ್ಷಗಳಿಂದ ಜನಪರ ಸೇವಾಧಾರಿತ ಕಾರ್ಯ ಚಟುವಟಿಗಳನ್ನು ನೀಡುತ್ತಾ ಜನರ ಪ್ರೀತಿ ವಿಶ್ವಾಸಗಳಿಗೆ ಪಾತ್ರವಾಗಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ವ್ಯಾಪ್ತಿಯಲ್ಲಿ ಜನಮನದ ಪ್ರತಿಧ್ವನಿಯಾಗಿ ಕಾರ್ಯಾಚರಿಸುತ್ತಿರುವ ಸಮಗ್ರ ನೈಜ ಸುದ್ದಿಗಳ ಪ್ರಸರಣದ “ನ್ಯೂಸ್ ಪುತ್ತೂರು” ವಾಹಿನಿಯ ಸಂಪಾದಕರಾಗಿ ಹಿರಿಯ ಅನುಭವಿ ಪತ್ರಕರ್ತ, ಸಾಹಿತಿ ಹಾಗೂ ಲೇಖಕರಾಗಿರುವ  ಜ್ಯೋತಿಪ್ರಕಾಶ್ ಪುಣಚ ಅವರನ್ನು ಸಂಸ್ಥೆ ನೇಮಕ ಮಾಡಿದೆ. ಕರಾವಳಿ ಮಾಧ್ಯಮ ಲೋಕದಲ್ಲಿ ಎರಡನೇಯ ವರ್ಷಕ್ಕೆ ಕಾಲಿಡುತ್ತಿರುವ ನ್ಯೂಸ್ ಪುತ್ತೂರು ಪುತ್ತೂರಿನ ಏಳ್ಮುಡಿಯಲ್ಲಿ ಸುಸಜ್ಜಿತ

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ Read More »

ಟ್ಯಾಕ್ಟರ್ ಪಲ್ಟಿ : ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬಗಳು

ಪುತ್ತೂರು: ನರಿಮೊಗರು ಶಾಲಾ ಬಳಿ ಟ್ರ್ಯಾಕ್ಟರ್ ಒಂದು ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್‍ ಕಂಬ ಮುರಿದುಬಿದ್ದ ಬುಧವಾರ ಸಂಜೆ ನಡೆದಿದೆ. ಟ್ರ್ಯಾಕ್ಟರ್ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಅಪಘಾತದಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಗಡಿಪಿಲ ಬಳಿ ಮೇಲೆ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ನೀರು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಇದಾಗಿತ್ತು.

ಟ್ಯಾಕ್ಟರ್ ಪಲ್ಟಿ : ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬಗಳು Read More »

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು

ಪುತ್ತೂರು : ಮುಖ್ಯ ರಸ್ತೆಗೆ ಬದಿಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ರಾಜೇಶ್ ಬನ್ನೂರು  ವಾಸಿಸುತ್ತಿದ್ದ  ಮನೆಯನ್ನು ಮಂಗಳವಾರ ತಡ ರಾತ್ರಿ ತೆರವುಗೊಳಿಸಿದ ವಿಚಾರವಾಗಿ ಬುಧವಾರ ಬೆಳಿಗ್ಗೆ ಪೊಲೀಸ್‍  ಠಾಣೆಗೆ ತೆರಳಿ ದೂರು ನೀಡಿದ ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಸುಮಾರು 2.30ರಿಂದ 3 ಗಂಟೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೂರಲಾಗಿದೆ. ಮಂಗಳೂರಿನ ಜಾತ್ರೆಗೆ ತೆರಳಿದ್ದ ವೇಳೆ ಹಿಂಭಾಗದಿಂದ ಜೆಸಿಬಿ ಮೂಲಕ ಮನೆಯನ್ನು ದೂಡಿ ಹಾಕಲಾಗಿದೆ.

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು Read More »

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ವಿಟ್ಲ : ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ತಿಳಿದು ಬಂದಿದೆ ಎಂಬುವುದು ವರದಿಯಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದ್ದು, ಅವರು ಯಾಕೆ ಅಲ್ಲಿ  ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿಲ್ಲ. ಆತನ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್ Read More »

ಮಹಾಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಮುಳುಗೆದ್ದ ಮೋದಿ

ಪ್ರಯಾಗ್‌ರಾಜ್‌ : ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪ್ರಧಾನಿ ಮೋದಿ ಜೊತೆಗಿದ್ದರು. ಬೆಳಗ್ಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಪ್ರಯಾಗ್‌ರಾಜ್‌ ನದಿ ಬಳಿಗೆ ಸಾಗಿ ದೋಣಿಯಲ್ಲಿ ಹೋಗಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಕಳೆದ ಜ.13ರಂದು ಪ್ರಾರಂಭವಾಗಿರುವ ಮಹಾಕುಂಭಮೇಳಕ್ಕೆ ದೇಶ-ವಿದೇಶಗಳ ಅನೇಕ ಗಣ್ಯರು ಭೇಟಿ ನೀಡಿದ್ದಾರೆ. ಈಗಾಗಲೇ 38 ಕೋಟಿಗೂ ಅಧಿಕ ಜನ

ಮಹಾಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಮುಳುಗೆದ್ದ ಮೋದಿ Read More »

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್

ಮಂಗಳೂರು : ಕರಾವಳಿಯ ಹಲವೆಡೆ ಚಿಕನ್ ಪಾಕ್ಸ್ ಕಂಡುಬಂದಿದ್ದು, ಇದೀಗ ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ  21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ ಎಂಬುವುದು ವರದಿಯಾಗಿದೆ. ಮಾಹಿತಿ ಪ್ರಕಾರ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು 9 ಮಕ್ಕಳಿಗೆ, ಸುಬ್ರಹ್ಮಣ್ಯದಲ್ಲಿ 6 ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೊಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್ Read More »

ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ

ಭಾರಿ ಪ್ರಮಾಣದ ಅಕ್ರಮ ಸಂಪತ್ತಿನ ಶೋಧ ಬೆಂಗಳೂರು: ರಾಜ್ಯದ ಪ್ರಮುಖ ಸರಕಾರಿ ಗುತ್ತಿಗೆದಾರನ ಬಂಗಲೆಯೂ ಸೇರಿದಂತೆ ಸುಮಾರು 30 ಕಡೆ ಇಂದು ಬೆಳ್ಳಂಬೆಳಗ್ಗ ಆದಾಯ ಕರ ಇಲಾಖೆಯ ದಾಳಿ ನಡೆದಿದ್ದು, ಪರಿಶೋಧನೆ ಮುಂದುವರಿದಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಎಂಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ

ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ನೆಪ | ರಾತ್ರೋ ರಾತ್ರಿ ಶ್ವಾನಪ್ರೇಮಿಯ ಮನೆ ಕೆಡವಿದ ಆಡಳಿತ ಮಂಡಳಿ | ನಾಲ್ಕು ನಾಯಿಮರಿಗಳ ಸಾವು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಕೆಲವರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ರಾತ್ರೋರಾತ್ರಿ ಶ್ವಾನ ಪ್ರೇಮಿಯೊಬ್ಬರ ಮನೆಯನ್ನು ಆಡಳಿತ ಮಂಡಳಿ ಕಡೆವಿ ಹಾಕಿದ್ದು, ಮನೆಯೊಳಗಿದ್ದ ನಾಲ್ಕು ನಾಯಿ ಮರಿಗಳು ಸಾವನಪ್ಪಿದೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಆಡಳಿತ ಮಂಡಳಿ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 60 ಕೋ.ರೂ.ವೆಚ್ಚದ ಮಾಸ್ಟರ್ ಪ್ಲಾನ್‌ಗೆ ಪೂರಕವಾಗಿ ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಬಹುತೇಕ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ನೆಪ | ರಾತ್ರೋ ರಾತ್ರಿ ಶ್ವಾನಪ್ರೇಮಿಯ ಮನೆ ಕೆಡವಿದ ಆಡಳಿತ ಮಂಡಳಿ | ನಾಲ್ಕು ನಾಯಿಮರಿಗಳ ಸಾವು Read More »

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ -ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಾಯಗೊಂಡ ಬೈಕ್‍ ಸವಾರ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕ್ನಿ ಕಲೆಕ್ಟರ್ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ಹಿಂತಿರುಗುವಾಗ ಈ ಘಟನೆ ಸಂಭವಿಸಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ Read More »

error: Content is protected !!
Scroll to Top