ಬಾವಿಗೆ ಬಿದ್ದ ಬೆಕ್ಕು | ರಕ್ಷಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಕಚ್ಚಿ ಗಾಯಗೊಳಿಸಿದ ಬೆಕ್ಕು

ಪುತ್ತೂರು : ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ಧರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸೋಮವಾರ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬೆಕ್ಕೊಂದು ಬಿದ್ದಿತ್ತು. ಮಂಗಳವಾರ ಬೆಕ್ಕಿನ ರಕ್ಷಣೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿದ್ದರು. ಬೆಕ್ಕನ್ನ ಹಿಡಿಯಲು ಬಾವಿಯೊಳಗಡೆ ಸಿದ್ಧರೂಢ ಮತ್ತು ಮೌನೇಶ್ ಎಂಬವರು ಇಳಿದಿದ್ದರು. ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು. ಬೆಕ್ಕನ್ನ ಹಿಡಿಯಲು […]

ಬಾವಿಗೆ ಬಿದ್ದ ಬೆಕ್ಕು | ರಕ್ಷಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಕಚ್ಚಿ ಗಾಯಗೊಳಿಸಿದ ಬೆಕ್ಕು Read More »

ಪುತ್ತೂರನ್ನು ಹೊಸ ಜಿಲ್ಲೆಯಾಗಿ ಸರಕಾರ ಘೋಷಿಸಬೇಕು : ಅನ್ವರ್ ಸಾದತ್

ಪುತ್ತೂರು: ಜಿಲ್ಲಾ ಕೇಂದ್ರವಾಗಲು ಎಲ್ಲಾ ಸೌಲಭ್ಯಗಳಿರುವ ಪುತ್ತೂರನ್ನು ಸರಕಾರ ಹೊಸ ಜಿಲ್ಲೆಯಾಗಿ ಘೋಷಿಸಬೇಕು ಎಂದು ಎಸ್‍ ಡಿಪಿಐ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಆಗ್ರಹಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದ.ಕ.ಜಿಲ್ಲೆ ಭೌಗೋಳಿಕವಾಗಿ ವಿಶಾಲ ಪ್ರವೇಶವಾಗಿದ್ದು, ಆಡಳಿತಾತ್ಮಕ ಸುಲಭ ನಿರ್ವಹಣೆ ಮತ್ತು ಸಾವರ್ಜನಿಕರ ಅನುಕೂಲಕ್ಕಾಗಿ ಪುತ್ತೂರನ್ನು ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.ಈಗಾಗಲೇ ರಾಜ್ಯ ಸರಕಾರದ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಬಸ್‍ ಗಳ ಓಡಾಟದಲ್ಲಿ ಕಡಿತ ಕಂಡು ಬಂದಿದೆ.

ಪುತ್ತೂರನ್ನು ಹೊಸ ಜಿಲ್ಲೆಯಾಗಿ ಸರಕಾರ ಘೋಷಿಸಬೇಕು : ಅನ್ವರ್ ಸಾದತ್ Read More »

ಮೈಕ್ರೊ ಫೈನಾನ್ಸ್‌ ಕಿರುಕುಳ : ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ

ಬರೀ ಒಂದು ಕಂತು ಬಾಕಿಯಿಟ್ಟದ್ದಕ್ಕೆ ಶಿಕ್ಷಕ ದಂಪತಿಯನ್ನು ಪೀಡಿಸಿದ್ದ ಮೈಕ್ರೊ ಫೈನಾನ್ಸ್‌ ಸಿಬ್ಬಂದಿ ಬೆಂಗಳೂರು: ಮೈಕ್ರೊ ಫೈನಾನ್ಸ್‌ನವರ ಕಿರುಕುಳ ತಾಳಲಾರದೆ ದಾವಣಗೆರೆಯ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಬಳಿ ಅವರ ಶವ ಇಂದು ಪತ್ತೆಯಾಗಿದೆ. ಮೈಕ್ರೊ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ ಎರಡು ದಿನಗ ಹಿಂದೆ ತುಂಗಭದ್ರಾ ನದಿಗೆ ಹಾರಿದ್ದರು. ಮೃತದೇಹ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ. ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ

ಮೈಕ್ರೊ ಫೈನಾನ್ಸ್‌ ಕಿರುಕುಳ : ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ Read More »

ಹುಲಿಯ ಹೊಟ್ಟೆಯಲ್ಲಿತ್ತು ಮಹಿಳೆಯ ಕಿವಿಯೋಲೆ, ಕೂದಲು

ನರಭಕ್ಷಕ ವ್ಯಾಘ್ರ ನಿಗೂಢವಾಗಿ ಸಾವು ವಯನಾಡು : ಕೇರಳದಲ್ಲಿ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ ಸಾಯಿಸಿತ್ತು. ನಾಲ್ಕರಿಂದ ಐದು ವರ್ಷ ವಯಸ್ಸಿನ ಹೆಣ್ಣು ಹುಲಿಯನ್ನು ಸೋಮವಾರ ಬೆಳಗ್ಗೆ ವನ್ಯಜೀವಿ ಸಿಬ್ಬಂದಿ ಗುರುತಿಸಿ ಬೆನ್ನಟ್ಟಿದ್ದರು. ಆಗ ತಪ್ಪಿಸಿಕೊಂಡಿದ್ದ ಹುಲಿ ನಂತರ ಪಿಲಕಾವು

ಹುಲಿಯ ಹೊಟ್ಟೆಯಲ್ಲಿತ್ತು ಮಹಿಳೆಯ ಕಿವಿಯೋಲೆ, ಕೂದಲು Read More »

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ (ರಿ ) ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.  ಈ ಸಂದರ್ಭದಲ್ಲಿ  ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಮಹಾಭಾರತ ಸರಣಿಯ  62ನೇ ತಾಳಮದ್ದಳೆ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪಿನಂಗಡಿ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ   ಶ್ರೀ ಮಹಾಭಾರತ ಸರಣಿಯಲ್ಲಿ 62 ನೇ ತಾಳಮದ್ದಳೆ ಕನಕಾಂಗಿ ಕಲ್ಯಾಣ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಡಾ. ಹನೀಶ್ ಕಿರಣ್ ಪಿ.ಟಿ ರಾಮನಗರ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು. ಭಾಗವತರಾಗಿ ಪದ್ಮನಾಭ ಕುಲಾಲ್, ಕಿಶೋರ್ ಶೆಟ್ಟಿ ಮೂಡಾಯಿರು,  ಹರೀಶ್ ಆಚಾರ್ಯ ಬಾರ್ಯ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ, ಅರ್ಥದಾರಿಗಳಾಗಿ  ಪಾತಾಳ ಅಂಬಾ ಪ್ರಸಾದ್ (ಸುಭದ್ರೆ1), ಹರೀಶ

ಶ್ರೀ ಮಹಾಭಾರತ ಸರಣಿಯ  62ನೇ ತಾಳಮದ್ದಳೆ Read More »

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ : ಡಾ. ಅನುರಾಧಾ ಕುರುಂಜಿ

ಎಡಮಂಗಲ : ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ  ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ  8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪರೀಕ್ಷಾ ತಯಾರಿ ಹಾಗೂ ವೃತ್ತಿ

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ : ಡಾ. ಅನುರಾಧಾ ಕುರುಂಜಿ Read More »

ಪ್ರಖ್ಯಾತ ಹೃದ್ರೋಗ ತಜ್ಞ ಡಾ. ಕೆ. ಎಂ. ಚೆರಿಯನ್ ನಿಧನ

ಬೆಂಗಳೂರು : ಖ್ಯಾತ ಹೃದ್ರೋಗ ತಜ್ಞ, ಹೆಸರುವಾಸಿಯಾದ ಪ್ರಖ್ಯಾತ ಶಸ್ತ್ರ ಚಿಕಿತ್ಸಕ ಡಾ. ಕೆ. ಎಂ. ಚೆರಿಯನ್ ಬೆಂಗಳೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ಡಾ. ಚೆರಿಯನ್ ಫ್ರಾಂಟಿಯರ್ ಲೈಫ್ಲೈನ್ ಮತ್ತು ಡಾ.ಚೆರಿಯನ್ ಹಾರ್ಟ್ ಫೌಂಡೇಶನ್ ನ್ನು ಸ್ಥಾಪಿಸಿದರು. ಅವರು 1991 ರಲ್ಲಿ ಪದ್ಮಶ್ರೀ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ. 1975 ರಲ್ಲಿ ಚೆನ್ನೈನ ಪೆರಂಬೂರಿನ ದಕ್ಷಿಣ ರೈಲ್ವೆ ಪ್ರಧಾನ ಕಚೇರಿ ಆಸ್ಪತ್ರೆಯಲ್ಲಿ ಭಾರತದ ಮೊದಲ ಯಶಸ್ವಿ ಪರಿಧಮನಿ ಅಪಧಮನಿ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಿದ್ದರು. ಮೊದಲ ಹೃದಯ-ಶ್ವಾಸಕೋಶ ಕಸಿ, ಮೊದಲ

ಪ್ರಖ್ಯಾತ ಹೃದ್ರೋಗ ತಜ್ಞ ಡಾ. ಕೆ. ಎಂ. ಚೆರಿಯನ್ ನಿಧನ Read More »

ಬಾಂಗ್ಲಾದೇಶದ ನುಸುಳುಕೋರರಿಗೆ ಆಶ್ರಯ ಒದಗಿಸಿ : ಅಕ್ರಮ ವಲಸಿಗರ ಪರವಾಗಿ ಪಿತ್ರೋಡ ಬ್ಯಾಟಿಂಗ್‌

ಅಕ್ರಮವಾಗಿ ಬರುವವರಿಗೆ ನೆಲೆ ಒದಗಿಸಬೇಕೆಂದು ಹೇಳಿದ ರಾಹುಲ್‌ ಗಾಂಧಿ ಮಾರ್ಗದರ್ಶಕ ಹೊಸದಿಲ್ಲಿ: ಬಾಂಗ್ಲಾದೇಶದ ಅಕ್ರಮ ನುಸುಳುಕೋರರಿಗೆ ಭಾರತದಲ್ಲಿ ನೆಲೆ ಕಲ್ಪಿಸಬೇಕೆಂದು ಹೇಳಿರುವ ರಾಹುಲ್‌ ಗಾಂಧಿಯ ಮಾರ್ಗದರ್ಶಕ ಸ್ಯಾಮ್‌ ಪಿತ್ರೋಡ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಂಗ್ಲಾದೇಶದ ಅಕ್ರಮ ವಲಸಿಗರ ಸಮಸ್ಯೆ ಬಿಗಡಾಯಿಸಿರುವಾಗ ಮತ್ತು ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಿರಂತರ ಹಿಂಸಾಚಾರ ನಡೆಯುತ್ತಿರುವ ಹೊರತಾಗಿಯೋ ಪಿತ್ರೋಡ ಬಾಂಗ್ಲಾದ ಅಕ್ರಮ ವಲಸಿಗರ ಪರವಾಗಿ ಮಾತನಾಡಿರುವುದು ಕಾಂಗ್ರೆಸ್‌ನ ರಹಸ್ಯ ಅಜೆಂಡಾದ ಭಾಗ ಎಂದು ಅನೇಕರು ಟೀಕಿಸಿದ್ದಾರೆ. ಬಾಂಗ್ಲಾ ವಲಸಿಗರು ಒಂದು ವೇಳೆ

ಬಾಂಗ್ಲಾದೇಶದ ನುಸುಳುಕೋರರಿಗೆ ಆಶ್ರಯ ಒದಗಿಸಿ : ಅಕ್ರಮ ವಲಸಿಗರ ಪರವಾಗಿ ಪಿತ್ರೋಡ ಬ್ಯಾಟಿಂಗ್‌ Read More »

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು : ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಾವು ಜಾತ್ರೋತ್ಸವವು ಫೆ. 28 ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಿನ್ನೆ ಸಂಜೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ ಕೆರೆಮಾರು, ಯುವ ಉದ್ಯಮಿ ಹರೀಶ್ ಕುಂಜತ್ತಾಯ, ಗ್ರಾಮ ಪಂಚಾಯತ್ ಸದಸ್ಯ  ಲೋಕೇಶ್ ಚಾಕೋಟೆ, ಹಿರಿಯ ಕರಸೇವಕರಾದ ನಾರಾಯಣ ಆಚಾರ್ಯ ಮಳಿ, ಹಿರಿಯ ಭಜನಾಪಟು ಶೇಷಪ್ಪ ಗೌಡ ಪರ ನೀರು,

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top