ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ

ಅಧ್ಯಕ್ಷರಾಗಿ ಮೋಹನ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ರಾಜೇಂದ್ರ ಪ್ರಸಾದ್ ಶೆಟ್ಟಿ ನೇಮಕ ಪುತ್ತೂರು: ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿಯ ಕುರಿಯ ಏಳ್ನಾಡುಗುತ್ತಿನ ವಾರ್ಷಿಕ ಮಹಾಸೇವೆ ಅಧ್ಯಕ್ಷ ಚೆನ್ನಪ್ಪ ರೈ ಬಳಜ್ಜ ಇವರ ನೇತೃತ್ವದಲ್ಲಿ ಸಾಂಗವಾಗಿ ಜರುಗಿತು. ಇದೇ ಸಂದರ್ಭದಲ್ಲಿ 2025ನೇ ಸಾಲಿನ ವರದಿ ಮಂಡನೆ, ಅನುಮೋದನೆಗಳು ನಡೆದವು. ಸಮಿತಿಯ ಪುನಾರಚನೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಮೋಹನ್ ರೈ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ ಅಧ್ಯಕ್ಷ ಮತ್ತು G5 Nexus […]

ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ Read More »

ಕತಾರ್‌ನಲ್ಲಿರುವ ಜಗತ್ತಿನ ಅತಿದೊಡ್ಡ ಅನಿಲ ಸ್ಥಾವರದ ಮೇಲೆ ಇರಾನ್‌ ದಾಳಿ

ಭಾರತಕ್ಕೆ ಗ್ಯಾಸ್‌ ಪೂರೈಸುತ್ತಿರುವ ಪ್ರಮುಖ ಅನಿಲ ಸ್ಥಾವರ ಟೆಹ್ರಾನ್: ಕತಾರ್‌ನಲ್ಲಿರುವ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಪರ್ಷಿಯನ್ ಕೊಲ್ಲಿಯಾದ್ಯಂತ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆ, ವಿಶ್ವದ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ ರಫ್ತು ಸ್ಥಾವರವನ್ನು ಹೊಂದಿರುವ ಕತಾರ್‌ ಸಂಕೀರ್ಣವು ವ್ಯಾಪಕ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸುವ ಮೊದಲು ಜಾಗತಿಕ ಪೂರೈಕೆಯ ಐದನೇ ಒಂದು ಭಾಗದಷ್ಟು ಪಾಲನ್ನು ಹೊಂದಿದ್ದ ಎಲ್‌ಎನ್‌ಜಿ ಸ್ಥಾವರ ರಾಸ್ ಲಫಾನ್

ಕತಾರ್‌ನಲ್ಲಿರುವ ಜಗತ್ತಿನ ಅತಿದೊಡ್ಡ ಅನಿಲ ಸ್ಥಾವರದ ಮೇಲೆ ಇರಾನ್‌ ದಾಳಿ Read More »

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ

ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್‌ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ Read More »

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡಬಿದ್ರೆ ಪೊಲೀಸರು ದಾಳಿ ಮಾಡಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಮೂಡುಬಿದ್ರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ Read More »

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ

ಫಾರ್ಚುನರ್‌ ಕಾರಲ್ಲಿ ದನಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಮಂಗಳೂರು: ದನಗಳನ್ನು ವಧೆಗಾಗಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಸುಮಾರು 4.30ರ ವೇಳೆಗೆ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಬಜರಂಗದಳ ಸಂಘಟನೆಯ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನೊಳಗೆ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ Read More »

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ

ಬಂಟ್ವಾಳ : ಏಳು ಅಡಿ ಉದ್ದವಿದ್ದ ಬೃಹತ್‌ ಗಾತ್ರದ ಮೊಸಳೆಯೊಂದು ಮನೆಯಂಗಳಕ್ಕೆ ಬಂದ ಘಟನೆ ಬಂಟ್ವಾಳದಲ್ಲಿ ಮುಂಜಾನೆ ವೇಳೆ ಸಂಭವಿಸಿದೆ. ಸರಪಾಡಿ ನಾವೂರು ಗ್ರಾಮದ ಪೂಪಾಡಿಕಟ್ಟೆ ನೆಕ್ಕಿಲಾರು ರಾಜೇಶ್ ನಾಯಕ್ ಎಂಬವರ ಮನೆಯ ಅಂಗಳಕ್ಕೆ ಈ ಮೊಸಳೆ ಬಂದಿದೆ. ನೇತ್ರಾವತಿ ನದಿ ತೀರದಿಂದ ಅವರ ಮನೆ ಸುಮಾರು 250 ಮೀಟರ್‌ ದೂರದಲ್ಲಿದೆ. ನೇತ್ರಾವತಿ ನದಿ ತೀರದಿಂದ ಸುಮಾರು 250 ಮೀಟರ್‌ ದೂರದಲ್ಲಿ ಇವರ ಮನೆಯಿದೆ. ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮನೆಯ ಹೊರಗೆ ತರಗೆಲೆಗಳ ಶಬ್ದ

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ Read More »

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಹಣ, ತಿಂಡಿಯ ಆಮಿಷವೊಡ್ಡಿ ಕೃತ್ಯ ಎಸಗಿದ ಯುವಕ​ಮಂಗಳೂರು : ಒಂಬತ್ತು ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು ಪೋಸ್ಟ್ ವ್ಯಾಪ್ತಿಯ ಮಡ್ಯಾರ್ ನಿವಾಸಿ, ಬಿಜೈನ ಲಾಜಿಸ್ಟಿಕ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆಶೀಶ್ ಪೂಜಾರಿ (33) ಬಂಧಿತ ಆರೋಪಿ. ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ವಿಕೃತ ಚಟುವಟಿಕೆಗಳಿಗೆ ಪ್ರೇರೇಪಿಸಿದಲ್ಲದೆ, ದೈಹಿಕ ದೌರ್ಜನ್ಯ ಎಸಗಿರುವ ಬಗ್ಗೆ ಪೋಷಕರು ನೀಡಿದ ದೂರಿನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ Read More »

ಇರಾನ್‌ನ ಇನ್ನೋರ್ವ ಪ್ರಮುಖ ನಾಯಕನ ಹತ್ಯೆ

ಇಸ್ರೇಲ್‌ ದಾಳಿಗೆ ಬಲಿಯಾದ ಭದ್ರತಾ ಸಚಿವ ಎಸ್ಮಾಯಿಲ್‌ ಖತೀಬ್‌ ನವದೆಹಲಿ : ಇರಾನ್‌ನ ಭದ್ರತಾ ಸಚಿವ ಅಲಿ ಲಾಲಿಜಾರಿಯನ್ನು ಸಾಯಿಸಿದ ಬೆನ್ನಿಗೆ ಇನ್ನೋರ್ವ ಸಚಿವನನ್ನು ಇಸ್ರೇಲ್‌ ಬಲಿತೆಗೆದುಕೊಂಡಿದೆ. ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಮೃತಪಟ್ಟಿದ್ದಾರೆ. ಗುಪ್ತಚರ ಇಲಾಖೆಯ ಎಸ್ಮಾಯಿಲ್ ಖತೀಬ್ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ದೃಢಪಡಿಸಿದ್ದಾರೆ. ಈ ದಾಳಿಯನ್ನು ಅವರು ಹೇಡಿತನದ ಹತ್ಯೆ ಎಂದು ಕರೆದಿದ್ದಾರೆ. ಇಸ್ರೇಲ್ ಪಡೆಗಳು ಟೆಹ್ರಾನ್ ಮೇಲೆ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿ ನಡೆಸಿ ಸಚಿವ

ಇರಾನ್‌ನ ಇನ್ನೋರ್ವ ಪ್ರಮುಖ ನಾಯಕನ ಹತ್ಯೆ Read More »

ನದಿಯಲ್ಲಿ ಮುಳುಗಿ ಬಾಲಕ ಸಾವು

ಮುಂಡಾಜೆ: ದ್ವಿತೀಯ ಪಿಯುಸಿಯ ವಿದ್ಯಾರ್ಥಿಯೊಬ್ಬ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಸಮಜಲು ಎಂಬಲ್ಲಿ ನಡೆದಿದೆ. ಮೃತನನ್ನು ನಿಶಾಂತ್ ಎಂದು ಗುರುತಿಸಲಾಗಿದೆ. ಈತ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ. ಮಾ. 18 ರ ಮಧ್ಯಾಹ್ನ ಆತ ಈಜಾಟಕ್ಕೆಂದು ನದಿಗೆ ತೆರಳಿದ್ದು, ಈ ವೇಳೆ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆತನ ಜೊತೆಗಿದ್ದವರು ಅವನನ್ನು ರಕ್ಷಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ದುರದೃಷ್ಟವಶಾತ್ ಅದಾಗಲೇ ಆತ ಸಾವನ್ನಪ್ಪಿದ್ದಾನೆ.

ನದಿಯಲ್ಲಿ ಮುಳುಗಿ ಬಾಲಕ ಸಾವು Read More »

ಬ್ಯಾಂಕ್ ಲಾಕರಿನಲ್ಲಿರಿಸಿದ್ದ ಚಿನ್ನಾಭರಣ ಮಾಯ: ದೂರು ದಾಖಲು

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ ಲಾಕರಿನಲ್ಲಿ ಇರಿಸಲಾಗಿದ್ದ ಸುಮಾರು 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಬೆಂಗಳೂರಿನ ವೈದ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ 57 ವರ್ಷದ ಮಹಿಳೆ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ಮಗನ ಮದುವೆ ಪ್ರಯುಕ್ತ ಲಾಕರಿನಲ್ಲಿ ಇರಿಸಿದ್ದ ಒಡವೆಗಳನ್ನು ತೆಗೆದುಕೊಂಡು ಹೋಗಿದ್ದ ಅವರು, ಆ ಬಳಿಕ ಅದನ್ನು ಮತ್ತೆ ಬ್ಯಾಂಕ್ ಲಾಕರಿನಲ್ಲಿ ಇರಿಸಿದ್ದರು. ಮತ್ತೆ ಕೆಲವು ಆಭರಣಗಳನ್ನು ಲಾಕರಿನಲ್ಲಿಡಲು ಕೆಲ ದಿನಗಳ ಬಳಿಕ ಅವರು

ಬ್ಯಾಂಕ್ ಲಾಕರಿನಲ್ಲಿರಿಸಿದ್ದ ಚಿನ್ನಾಭರಣ ಮಾಯ: ದೂರು ದಾಖಲು Read More »

error: Content is protected !!
Scroll to Top