ದೇವರ ಪ್ರಭಾವಳಿಗೆ ಬಡಿದ ಡ್ರೋನ್‌!

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದಲ್ಲಿ ನಡೆದ ಘಟನೆ ಭಾರಿ ವೈರಲ್‌ ಮಂಗಳೂರು: ವಿಟ್ಲದ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ನಿಯಂತ್ರಣ ತಪ್ಪಿದ ಡ್ರೋನ್‌ ರಥದ ಮೇಲಿದ್ದ ದೇವರ ಪ್ರಭವಳಿಗೆ ಬಡಿದಿದ್ದು, ಈ ಘಟನೆ ಇಲ್ಲಿನ ಭಕ್ತರ ಆತಂಕಕ್ಕೆ ಕಾರಣವಾಗಿದೆ. ಜ.21ರಂದು ಕ್ಷೇತ್ರದ ವರ್ಷಾವಧಿ ಉತ್ಸವದ ನಿಮಿತ್ತ ರಥೋತ್ಸವ ನೆರವೇರಿದ್ದು, ಈ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ. ಬ್ರಹ್ಮವಾಹಕರು ದೇವರನ್ನು ಹೊತ್ತುಕೊಂಡು ರಥವೇರಿ ಒಳ ಪ್ರವೇಶಿಸುವ ಮೊದಲೊಮ್ಮೆ ಭಕ್ತರತ್ತ ತಿರುಗಿದ ಸಂದರ್ಭದಲ್ಲೇ ಹಾರಿಕೊಂಡು ಬಂದ ಡ್ರೋನ್‌ […]

ದೇವರ ಪ್ರಭಾವಳಿಗೆ ಬಡಿದ ಡ್ರೋನ್‌! Read More »

ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್‌

ಇದು ನಿರೀಕ್ಷಿತ ತನಿಖಾ ವರದಿ ಎಂದ ಸ್ನೇಹಮಯಿ ಕೃಷ್ಣ ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ನಿರೀಕ್ಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಯವರಿಗೆ ಕ್ಲೀನ್‌ಚಿಟ್‌ ನೀಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲವೊಂದು ತಿಳಿಸಿದೆ. ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ.

ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್‌ Read More »

ಬಾಲಿವುಡ್‌ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಗೆ ಜೈಲು

ವಿಚಾರಣೆಗೆ ಹಾಜರಾಗದಿರುವುದಕ್ಕೆ ಬಂಧನ ವಾರಂಟ್‌ ಜಾರಿ ಮುಂಬಯಿ: ಬಾಲಿವುಡ್‌ನ ಖ್ಯಾತ ನಿರ್ದೇಶಕ ರಾಮ್‌ಗೋಪಾಲ್‌ ವರ್ಮ ಅವರಿಗೆ ಮುಂಬಯಿ ನ್ಯಾಯಾಲಯವೊಂದು ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮೂರು ತಿಂಗಳ ಕಾರಾಗೃಹ ವಾಸದ ಶಿಕ್ಷೆ ಮತ್ತು ದಂಡ ವಿಧಿಸಿದೆ. ರಾಮ್‌ಗೋಪಾಲ್‌ ವರ್ಮ ಸೋಮವಾರವಷ್ಟೇ ಹೊಸಚಿತ್ರ ಸಿಂಡಿಕೇಟ್‌ನ ಘೋಷಣೆ ಮಾಡಿದ್ದರು. ಇದಾದ ಮರುದಿನವೇ ಕೋರ್ಟ್‌ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ. ಇಷ್ಟು ಮಾತ್ರವಲ್ಲದೆ ತೀರ್ಪಿನ ದಿನವೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ. ಅಂಧೇರಿಯ ನ್ಯಾಯಾಲಯದಲ್ಲಿ

ಬಾಲಿವುಡ್‌ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಗೆ ಜೈಲು Read More »

ಬಿಜೆಪಿಯಲ್ಲೀಗ ರಾಮುಲು-ರೆಡ್ಡಿ ಕಲಹ

ಒಂದು ಕಾಲದ ಗೆಳೆಯರ ನಡುವೆ ತೀವ್ರ ಕಚ್ಚಾಟ ಬೆಂಗಳೂರು: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವುದಕ್ಕೆ ಬಿಜೆಪಿಯಲ್ಲಿ ಈಗ ನಡೆಯುತ್ತಿರುವ ಶ್ರೀ ರಾಮುಲು ಮತ್ತು ಜನಾರ್ದನ ರೆಡ್ಡಿ ಕಲಹವೇ ಸಾಕ್ಷಿ. ಬಳ್ಳಾರಿಯ ಪ್ರಭಾವಿ ರಾಜಕೀಯ ನಾಯಕರಾಗಿದ್ದ ಶ್ರೀರಾಮುಲು ಮತ್ತು ರೆಡ್ಡಿ ಒಂದು ಕಾಲದಲ್ಲಿ ರಾಮ-ಲಕ್ಷ್ಮಣರಂತೆ ಪಕ್ಷಕ್ಕಾಗಿ ದುಡಿದವರು. ಆದರೆ ಈಗ ಪರಸ್ಪರರ ವಿರುದ್ಧ ಕತ್ತಿ ಮಸೆಯುವ ಹಂತಕ್ಕೆ ಅವರ ದ್ವೇಷ ಬಂದಿದೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮಧ್ಯೆ ಕಿಡಿ ಹಚ್ಚಿದ್ದು ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಬಂಗಾರು

ಬಿಜೆಪಿಯಲ್ಲೀಗ ರಾಮುಲು-ರೆಡ್ಡಿ ಕಲಹ Read More »

ಡಾ.ಎಚ್. ಜಿ ಶ್ರೀಧರ್ ಅವರ ಚಪಡ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಪುತ್ತೂರು: ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್  ಎಚ್‍.ಜಿ. ಅವರ ಚಪಡ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಪ್ಪಳದ ಶಿವಶಾಂತ ಮಂಗಳ ಭವನದಲ್ಲಿ ನಡೆದ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಡಾ ಶ್ರೀಧರ ಎಚ್ ಜಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದ ರಾಜ್, ಹಿರಿಯ ಸಾಹಿತಿ ಪ್ರೊ. ಅಲ್ಲಮಪ್ರಭು

ಡಾ.ಎಚ್. ಜಿ ಶ್ರೀಧರ್ ಅವರ ಚಪಡ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ಶ್ರೀಮಂತನೆಂದು ಹೇಳಿಕೊಂಡು ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಮುಸ್ಲಿಂ ಯುವಕ | ಬಸ್ಸಿಗೂ ಟಿಕೇಟ್ ನೀಡಲು ಹಣವಿಲ್ಲ ಎಂದು ಗೊತ್ತಾದಾಗ ಬಸ್‍ ನಿಲ್ದಾಣದಲ್ಲೇ ಪತಿಗೆ ಥಳಿಸಿದ ಪತ್ನಿ

ಉಪ್ಪಿನಂಗಡಿ : ಶ್ರೀಮಂತನೆಂದು ಹೇಳಿಕೊಂಡು ಯುವತಿಯೊಬ್ಬಳನ್ನು ಯಾಮಾರಿಸಿ ವಿವಾಹವಾಗಿದ್ದ ವ್ಯಕ್ತಿಗೆ ಆತನಲ್ಲಿ ಬಸ್ಸು ಟಿಕೆಟ್ ಖರೀದಿಸಲು ಹಣವಿಲ್ಲವೆಂದು ತಿಳಿಯುತ್ತಲೇ ಪತ್ನಿ ಸಾರ್ವಜನಿಕರ ಎದುರೇ ಆತನಿಗೆ ಹೊಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಯುವತಿಯಾಗಿದ್ದು, ಆಕೆಯ ಗಂಡ ಸಮಿರುಲ್ಲಾ ಹಿಂದಿ ಭಾಷಿಗನಾಗಿದ್ದಾನೆ. ಯುವತಿಯು ಮಧ್ಯಮ ಕುಟುಂಬದಿಂದ ಬಂದಿದ್ದು, ಆಕೆಯ ಮುಂದೆ ಸಮಿರುಲ್ಲಾ ಶ್ರೀಮಂತನೆಂದು ತಿಳಿಸಿದ್ದ. ಅವನ ಐಷರಾಮಿ ಜೀವನ ಶೈಲಿಗೆ ಯುವತಿ ಮಾರು ಹೋಗಿದ್ದಾಳೆ ಅವರಿಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದು, ಇವರಿಬ್ಬರ ಪ್ರೀತಿಗೆ

ಶ್ರೀಮಂತನೆಂದು ಹೇಳಿಕೊಂಡು ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಮುಸ್ಲಿಂ ಯುವಕ | ಬಸ್ಸಿಗೂ ಟಿಕೇಟ್ ನೀಡಲು ಹಣವಿಲ್ಲ ಎಂದು ಗೊತ್ತಾದಾಗ ಬಸ್‍ ನಿಲ್ದಾಣದಲ್ಲೇ ಪತಿಗೆ ಥಳಿಸಿದ ಪತ್ನಿ Read More »

ವಾಹನಗಳ ಮೇಲೆ ವಿವಾದಾತ್ಮಕ ಸ್ಟಿಕ್ಕರ್‌ ಹಾಕಿದರೆ ದಂಡ

ಭಾವನೆ ಕೆರಳಿಸುವ ಸ್ಟಿಕ್ಕರ್‌, ಪೋಸ್ಟರ್‌ಗಳ ವಿರುದ್ಧ ಕ್ರಮ ಬೆಂಗಳೂರು: ವಾಹನಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ ವಾಹನ ಸೀಜ್ ಆಗುವ ಸಾಧ್ಯತೆಯೂ ಇದೆ. ಆಟೋ, ಟ್ಯಾಕ್ಸಿ ಮತ್ತಿತರ ವಾಹನಗಳ ಮೇಲೆ ವಿವಾದಾತ್ಮಕ ಫೋಟೊ ಅಥವಾ ಬರಹಗಳ ಸ್ಟಿಕ್ಕರ್‌ ಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ಮಚ್ಚು, ಲಾಂಗ್‌ನಂಥ ಆಯುಧಗಳನ್ನು ಹಿಡಿದು ರಕ್ತ

ವಾಹನಗಳ ಮೇಲೆ ವಿವಾದಾತ್ಮಕ ಸ್ಟಿಕ್ಕರ್‌ ಹಾಕಿದರೆ ದಂಡ Read More »

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ದುರಂತ : ಸಾವಿನ ಸಂಖ್ಯೆ 11ಕ್ಕೇರಿಕೆ

ಬೆಂಕಿ ಹತ್ತಿಕೊಂಡ ವದಂತಿ ನಂಬಿ ಹಳಿಗೆ ಹಾರಿದವರ ಮೇಲೆ ಹರಿದ ಇನ್ನೊಂದು ರೈಲು ಮುಂಬಯಿ: ಬೆಂಗಳೂರಿನಿಂದ ದಿಲ್ಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ನಾಸಿಕ್ ರೈಲ್ವೆ ವಿಭಾಗೀಯ ಆಯುಕ್ತ ಪ್ರವೀಣ್ ಗೆದಮ್ ತಿಳಿಸಿದ್ದಾರೆ.ಮಹಾರಾಷ್ಟ್ರದ ಜಲಗಾಂವ್ ದಾಟುತ್ತಿದ್ದ ಪುಷ್ಪಕ್‌ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಪ್ರಯಾಣಿಕರು ರೈಲಿನ ಚೈನ್‌ ಎಳೆದಿದ್ದಾರೆ. ರೈಲು ನಿಂತ ತಕ್ಷಣ ಪ್ರಯಾಣಿಕರು ಇಳಿದು ರೈಲ್ವೆ ಹಳಿ ಮೇಲೆ ತೆರಳುತ್ತಿದ್ದರು. ಈ

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ದುರಂತ : ಸಾವಿನ ಸಂಖ್ಯೆ 11ಕ್ಕೇರಿಕೆ Read More »

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ

ಪುತ್ತೂರು: ನಾವೀನ್ಯ ಹಾಗೂ ಪರಿಶುದ್ಧ ಆಭರಣಗಳ ಮನೆಮಾತಾಗಿರುವ ಮುಳಿಯ ಜ್ಯುವೆಲ್ಸ್ ಗಣರಾಜ್ಯೋತ್ಸವದ ಪ್ರಯುಕ್ತ ಜ.25.ಹಾಗೂ 26 ರಂದು ಮುಳಿಯ ರಾಷ್ಟ್ರ ಸಿಂಚನ ಆನ್ ಲೈನ್ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಸೋಲೋ ವಿಭಾಗದಲ್ಲಿ ಮೊದಲ 100 ಮಂದಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, 12 ರಿಂದ 20 ವರ್ಷ ವಯೋಮಿತಿಯ ಹಾಗೂ ಸಾರ್ವಜನಿಕ ವಿಭಾಗ 21 ವರ್ಷ ಮೇಲ್ಪಟ್ಟು ಎರಡು ವಿಭಾಗಗಳಲ್ಲಿ ನಡೆಯಲಿದೆ. ಗ್ರೂಪ್ ವಿಭಾಗದಲ್ಲಿ ಮೊದಲ 35 ಗುಂಪುಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಹೆಸರು ನೊಂದಾಯಿಸಲು ಜ.23 ಕೊನೆಯ ದಿನವಾಗಿದ್ದು, ಹೆಚ್ಚಿನ

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ Read More »

ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ⁠ಉತ್ತಮ ವೇತನ | ಪ್ರತೀ ತಾಲೂಕಿಗೆ ಎಐ ಪ್ರಾದೇಶಿಕ ಪ್ರತಿನಿಧಿಗಳ ಆಯ್ಕೆ

ಮಂಗಳೂರು: ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ. ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್‌ಗಳನ್ನು ನೀಡುತ್ತಿದೆ. ಹುದ್ದೆ ಹೆಸರು – ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ

ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ⁠ಉತ್ತಮ ವೇತನ | ಪ್ರತೀ ತಾಲೂಕಿಗೆ ಎಐ ಪ್ರಾದೇಶಿಕ ಪ್ರತಿನಿಧಿಗಳ ಆಯ್ಕೆ Read More »

error: Content is protected !!
Scroll to Top