ರೆಂಜದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ

ಪುತ್ತೂರು: ಆಟೋ ಚಾಲಕರು ಮತ್ತು ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣುಗಳಿದ್ದಂತೆ. ಅವರು ಇಲ್ಲದೇ ಇರುವ ಅದು ಪರಿಪೂರ್ಣತೆಯನ್ನು ಹೊಂದಲು ಸಾಧ್ಯವೇ ಇಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶಾಸಕರ ಅನುದಾನದಿಂದ ನಿರ್ಮಾಣವಾದ ನೂತನ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಆಟೋ ಚಾಲಕರು ಸಂಕಷ್ಟದಲ್ಲಿ ನೆರವಿಗೆ ದಾವಿಸುವ ಆಪತ್ಬಾಂದವರಾದರೆ, ಸ್ವಚ್ಚತಾ ಕಾರ್ಮಿಕರು ಜನರ ಆರೋಗ್ಯ ಕಾಪಾಡುವ ರಕ್ಷಕರು. ಈ ಕಾರಣಕ್ಕೆ ಇವರನ್ನು ಸಮಾಜ ಯಾವತ್ತೂ ಅಗೌರವದಿಂದ ಕಾಣಬಾರದು. ಬೆಳಿಗ್ಗೆಯಿಂದ […]

ರೆಂಜದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »

ಜ.24: ಹೊಟೇಲ್‍ ಶ್ರೀಕೃಷ್ಣಭವನ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು: ಪುತ್ತೂರಿನ ನೆಹರು ನಗರದ ನಿಮ್ಮ ಪ್ರೀತಿಯ ಹೋಟೆಲ್ ಶ್ರೀಕೃಷ್ಣಭವನ ಸ್ಥಳಾoತರಗೊಳ್ಳುತ್ತಿದೆ  20 ವರುಷಗಳಿಂದಲೂ ಅಧಿಕ ಸಮಯದಿಂದ ನೆಹರು ನಗರದಲ್ಲಿನ ಪುತ್ತೂರು-ಮಂಗಳೂರು ಹೆದ್ದಾರಿ ರಸ್ತೆಯ ಈಚೆ ಬದಿಯ ಅಶ್ವಿನಿ ಕಾಂಪ್ಲೆಕ್ಸ್’ನಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್ ಶ್ರೀಕೃಷ್ಣಭವನವು ಆಚೆ ಬದಿಯ ಪಟ್ಲ ಕಾಂಪ್ಲೆಕ್ಸ್’ಗೆ ಸ್ಥಳಾoತರಗೊಳ್ಳುತ್ತಿದೆ ಇದೇ 2025ನೆ ಜನವರಿ 24ರಂದು ಲಕ್ಷ್ಮೀ ಪೂಜೆಯೊಂದಿಗೆ ನಿಮ್ಮ ಉಪಸ್ಥಿತಿಯಲ್ಲಿ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ. ಆ ಶುಭ ಘಳಿಗೆಯಲ್ಲಿ ನೀವು ನಮ್ಮೊಂದಿಗಿರಬೇಕು. ನಮ್ಮೆಲ್ಲಾ ಬಂಧು ಮಿತ್ರರಿಗೆ ಮತ್ತು ಆತ್ಮೀಯ ಗ್ರಾಹಕರಿಗೆ ಪ್ರೀತಿಯ ಸ್ವಾಗತ.

ಜ.24: ಹೊಟೇಲ್‍ ಶ್ರೀಕೃಷ್ಣಭವನ ಸ್ಥಳಾಂತರಗೊಂಡು ಶುಭಾರಂಭ Read More »

ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ

ದರೋಡೆ ಮಾಡಲು ಮನೆಗೆ ನುಗ್ಗಿದವರಿಂದ ಚಾಕು ಇರಿತ ಮುಂಬಯಿ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಿನ್ನೆ ರಾತ್ರಿ ಮಾರಕಾಸ್ತ್ರದಿಂದ ದಾಳಿ ಮಾಡಲಾಗಿದೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದು, ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 2.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು

ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಅದಾನಿ ಸಮೂಹವನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ

ವಾಷಿಂಗ್ಟನ್‌ : ಭಾರತದ ಅಗ್ರಗಣ್ಯ ಉದ್ಯಮಿ ಗೌತಮ್‌ ಅದಾನಿಯವರ ನೇತೃತ್ವದ ಅದಾನಿ ಕಂಪನಿಗಳಿಗೆ ಇನ್ನಿಲ್ಲದಂತೆ ಕಾಟ ಕೊಟ್ಟಿದ್ದ ಹಿಂಡನ್‌ಬರ್ಗ್‌ ಸಂಸ್ಥೆಗೆ ಬೀಗ ಬಿದ್ದಿದೆ. ಹಿಂಡನ್‌ಬರ್ಗ್‌ ರೀಸರ್ಚ್‌ ಕಂಪನಿಯನ್ನು ಮುಚ್ಚುತ್ತಿರುವುದಾಗಿ ಅದರ ಸಂಸ್ಥಾಪಕ ನೇಟ್‌ ಆಂಡರ್‌ಸನ್‌ ಹೇಳಿದ್ದಾರೆ. ನಾವು ಏನು ಸಾಧಿಸಬೇಕೆಂದಿದ್ದೆವೋ ಅದನ್ನು ಸಾಧಿಸಿದ್ದೇವೆ. ಈಗ ಕಂಪನಿಯನ್ನು ಮುಚ್ಚುವ ಸಮಯ ಬಂದಿದೆ. ಈ ಸಂಸ್ಥೆಯನ್ನು ನಡೆಸಿದ್ದು ಬದುಕಿ ಅದ್ಭುತ ಸಾಹಸವಾಗಿತ್ತು ಎಂದು ನೇಟ್‌ ಹೇಳಿದ್ದಾರೆ.2023ರಲ್ಲಿ ಅದಾನಿ ಕಂಪನಿಯ ವಿರುದ್ಧ ಹಿಂಡನ್‌ಬರ್ಗ್‌ ಬಿಡುಗಡೆ ಮಾಡಿದ್ದ ವರದಿ ಇಡೀ ಜಗತ್ತಿನಲ್ಲಿ ಕೋಲಾಹಲ

ಅದಾನಿ ಸಮೂಹವನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ Read More »

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ

ಮಂಗಳೂರು : ಮಂಗಳೂರು ತಾಲೂಕಿನ ಬಾಳ ಗ್ರಾಮದ ಟ್ಯಾಂಕರ್ ಯಾರ್ಡಿನಲ್ಲಿರುವ ಟ್ಯಾಂಕರುಗಳಿಂದ ಮಾಲಕರಿಗೆ ತಿಳಿಯದೇ ಡೀಸೆಲ್‌ನ್ನು ಕಳವು ಮಾಡಿ ದಾಸ್ತಾನು ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂದಿಸಿ ಪತ್ತೆ ಹಚ್ಚಿರುವ ಮಂಗಳೂರು ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುಳಾಯಿಗುಡ್ಡೆಯ ಸಂತೋಷ್ (42), ಕಾಟಿಪಳ್ಳದ ಐರನ್ ರಿತೇಶ್ ಮಿನೇಜ್ (36), ಟ್ಯಾಂಕರ್ ಚಾಲಕ ಕಡಿರುದ್ಯಾವರ, ನಾರಾಯಣ ( 23 ) ಮತ್ತು ಹೆಜಮಾಡಿಯ ರವಿ ಜನಾಂದ್ರ ಪುತ್ರನ್ (59)ಎಂದು ತಿಳಿದು ಬಂದಿದೆ. ಬಂಧಿತ

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ Read More »

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ

ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದ 17 ರ ವಯೋಮಾನದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ ಪಡೆದು ಶಾಲೆಗೆ ಹಿರಿಮೆ ತಂದಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ ಸನ್ಮಾನ ಸಮಾರಂಭ ಬುಧವಾರ ಶಾಲಾ ಆಡಿಟೋರಿಯಂನಲ್ಲಿ ನಡೆಯಿತು. 8ನೇ ತರಗತಿಯ ಹನಾನಫೀಸ, 9ನೇ ತರಗತಿಯ ವೈಗಾ ಎಂ., ಫಾತಿಮರಿಧಾ, ನಿಹಾನಿ ಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್ ಫೆರ್ನಾಂಡಿಸ್, ಪ್ರಿಯಾಂಕ ಪಿ. ಹಾಗೂ ಹಿತಾಶ್ರೀ

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ Read More »

ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ

ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಳ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿದೆ.ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ

ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ Read More »

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ ” ಬಿ ” ರಿಪೋರ್ಟ್ ನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ವರ್ಷದ ಹಿಂದೆ ಪುತ್ತೂರಿನ ನಗರದಲ್ಲಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಯುವಕರ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ Read More »

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಕೆಲ ದಿನಗಳ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿದ್ದು,ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು  ನಿಧನ ಹೊಂದಿದ್ದಾರೆ ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ದಿನವಾದ ಮಂಗಳವಾರ ರಾತ್ರಿ ಬಲಿಮೂರ್ತಿಗೆ ಕನಕಾಭಿಷೇಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಮಂಗಳವಾರ ಬೆಳಿಗ್ಗೆ ಧನುರ್ಮಾಸದ ಪೂಜಾ ಕಾರ್ಯಗಳು ಸಂಪನ್ನಗೊಂಡಿದ್ದು, ರಾತ್ರಿ ಪೂಜೆಯ ಬಳಿಕ ಕನಕಾಭಿಷೇಕ ಜರಗಿತು. ಹರಿವಾಣದಲ್ಲಿ ವೀಳ್ಯದೆಲೆ, ಅಡಿಕೆ, ಕಾಳು ಮೆಣಸಿ, ಚಿನ್ನ, ಬೆಳ್ಳಿಯ ತುಣುಕುಗಳನ್ನು ಸುವಸ್ತುಗಳೊಂದಿಗೆ ಹಾಕಿ ದೇವಸ್ಥಾನದ ಒಳಾಂಗಣದಲ್ಲಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ನಡೆಯ ಎದುರು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ Read More »

error: Content is protected !!
Scroll to Top