ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ

ಪಾಲುದಾರಿಕೆ ವ್ಯವಹಾರದಲ್ಲಿ ಬೆನ್ನಿಗಿರಿದ ಪರಂಗಿಪೇಟೆಯ ಸ್ನೇಹಿತರು ಉಡುಪಿ : ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸುವ ಭರವಸೆ ನೀಡಿ ಉದ್ಯಮಿಯೋರ್ವರಿಗೆ 2 ಕೋಟಿ ರೂ. ವಂಚಿಸಿದ ಪ್ರಕರಣ ಕಾರ್ಕಳದಲ್ಲಿ ಸಂಭವಿಸಿದೆ. ಈ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಮಹಾಲಕ್ಷ್ಮೀ ಪ್ರಭಾ ಕಾಂಪ್ಲೆಕ್ಸ್‌ನಲ್ಲಿ ಮೊಬೈಲ್‌ ಅಂಗಡಿ ಹೊಂದಿರುವ ಮರ್ಣೆಯ ದಾವುದುಲ್‌ ಹಕೀಂ ಎಂಬವರಿಗೆ ಕಳೆದ 20 ವರ್ಷಗಳಿಂದ ಪರಿಚಯಸ್ಥರಾಗಿರುವ ಫರಂಗಿಪೇಟೆಯ ಅಬ್ದುಲ್‌ ರಹಿಮಾನ್‌, ಹಫೀಜ್ ಟಿ.ಎ., ಅಯ್ಯೂಬ್‌, ಸದಕತ್ತುಲ್ಲಾ, ಮೊಹಮ್ಮದ್‌ ಎಂಬವರು ವಂಚನೆ […]

ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ Read More »

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ

ಬಾಕಿಯಿರುವ 30 ಸಾವಿರ ಕೋ.ರೂ. 7 ದಿನಗಳಲ್ಲಿ ಬಿಡುಗಡೆ ಮಾಡಲು ಒತ್ತಾಯ ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿಯಿಟ್ಟಿರುವ ಸುಮಾರು 30 ಸಾವಿರ ಕೋಟಿ ರೂಪಾಯಿ ಕೂಡಲೇ ಬಿಡುಗಡೆಗೊಳಿಸದಿದ್ದರೆ ಭಾರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿ ರಾಜ್ಯ ಗುತ್ತಿಗೆದಾರರ ಸಂಘ ಆರು ಸಚಿವರಿಗೆ ಬರೆದಿರುವ ಪತ್ರ ಸರಕಾರಕ್ಕೆ ಮತ್ತೊಮ್ಮೆ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್‌ ಸರಕಾರದಲ್ಲಿ ಶೇ. 60 ಕಮಿಷನ್‌ ಇಲ್ಲದೆ ಕೆಲಸವಾಗುವುದಿಲ್ಲ ಎಂದು ವಿಪಕ್ಷ ಆರೋಪಿಸಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದವರು ನೀಡಿರುವ ಎಚ್ಚರಿಕೆ ವಿಪಕ್ಷಕ್ಕೆ ಹೋರಾಟ ಮಾಡಲು ಇನ್ನೊಂದು ಅಸ್ತ್ರವಾಗಿ

ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ Read More »

ಪರ್ಲಡ್ಕ ಶಾಲಾ ಆವರಣದಲ್ಲಿ ಚರಂಡಿ, ಸ್ವ್ಲಾಬ್ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ | ಶಂಕುಸ್ಥಾಪನೆ ನೆರವೇರಿಸಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ

ಪುತ್ತೂರು : ದ.ಕ.ಜಿಲ್ಲಾ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ. ಅನುದಾನದಲ್ಲಿ ಚರಂಡಿ ಹಾಗೂ ಸ್ಲ್ಯಾಬ್‍ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸೋಮವಾರ ಪರ್ಲಡ್ಕ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು. ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಶಂಕುಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್.ಗೌರಿ, ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್

ಪರ್ಲಡ್ಕ ಶಾಲಾ ಆವರಣದಲ್ಲಿ ಚರಂಡಿ, ಸ್ವ್ಲಾಬ್ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ | ಶಂಕುಸ್ಥಾಪನೆ ನೆರವೇರಿಸಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ Read More »

ಗೋವಿನ ಕೆಚ್ಚಲು ಕಡಿದ ರಕ್ತಭೀಜಾಸುರರು-ಸರ್ಕಾರದ ಗೋ ವಿರೋಧಿ ನಡೆಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ

ಮಂಗಳೂರು: ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದು ಕ್ರೌರ್ಯ ಮೆರೆದವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ರವಿಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಜಿಲ್ಲೆಯ ಶಾಸಕರುಗಳು ಭಾಗವಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತಾಂದರರ ವಿರುದ್ಧ ಪ್ರತಿಭಟಿಸುವಂತೆ ಪ್ರಕಟಣೆ ತಿಳಿಸಿದೆ.

ಗೋವಿನ ಕೆಚ್ಚಲು ಕಡಿದ ರಕ್ತಭೀಜಾಸುರರು-ಸರ್ಕಾರದ ಗೋ ವಿರೋಧಿ ನಡೆಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ Read More »

ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು| ಪ್ರಕರಣ ದಾಖಲು

ಕಡಬ : ಹಾಡುಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ನಗದು ಮತ್ತು ಚಿನ್ನಾಭರಣವನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ನಿನ್ನೆ ನಡೆದಿದೆ. ಬಜಕೆರೆ ನಿವಾಸಿ ಜೇಮ್ಸ್ ಹಾಗೂ ಮನೆಯವರು ನೆಲ್ಯಾಡಿಯಲ್ಲಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಸಂಜೆ ವೇಳೆಗೆ ಮನೆಗೆ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಕಳ್ಳರು ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದು

ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು| ಪ್ರಕರಣ ದಾಖಲು Read More »

1win Burkina Faso Se Connecter Au Site Officiel”

1win Nigeria Official Betting Site Logon Bonus 830, 1000 Ngn Content Casino Games Available With 1win Site In Programme Sobre Fidélité Pour Les Joueurs Bf How To Logout By 1win Online? In Which Jurisdiction Truly Does 1win Have A New License? Login At 1win In Excellent Ainsi Que Promotions Fill Les Joueurs Man Burkina Faso

1win Burkina Faso Se Connecter Au Site Officiel” Read More »

ಮಹಾಕುಂಭ ಮೇಳಕ್ಕೆ ಹೋಗುವ ಭಕ್ತರಿದ್ದ ರೈಲಿಗೆ ಕಲ್ಲು ತೂರಾಟ

ಮುಂಬಯಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಮಹಾರಾಷ್ಟ್ರದಲ್ಲಿ ಕಲ್ಲುತೂರಲಾಗಿದೆ. ತಪತಿ ಗಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಮಾಹಾರಾಷ್ಟ್ರದ ಜಲಗಾಂವ್‌ನಲ್ಲಿ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ರೈಲಿನಲ್ಲಿ ಗುಜರಾತ್‌ನಿಂದ ಕುಂಭಮೇಳಕ್ಕೆ ಭಕ್ತರು ಪ್ರಯಾಣಿಸುತ್ತಿದ್ದರು. ರೈಲು ಸೂರತ್‌ನಿಂದ ಛಾಪ್ರಾಕ್ಕೆ ಹೋಗುತ್ತಿದ್ದ ವೇಳೆ ಜಲಗಾಂವ್‌ನಲ್ಲಿ ಕಿಡಿಗೇಡಿಯೋರ್ವ ಕಲ್ಲುತೂರಿದ್ದಾನೆ. ರೈಲಿನ ಕಿಟಿಕಿ ಗಾಜು ಒಡೆದಿದ್ದು, ಯಾರಿಗೂ ಗಾಯವಾಗಿಲ್ಲ ಎಂದು ತಿಳಿಸಿದ್ದಾರೆ. ಬಾಬಾ ಬನಾರಸ್‌ ಎಂಬ ಎಕ್ಸ್‌ ಪೇಜ್‌ನಲ್ಲಿ ಕಲ್ಲುತೂರಾಟ ಮಾಡಿದ ವೀಡಿಯೊ ಮತ್ತು ಫೋಟೊ

ಮಹಾಕುಂಭ ಮೇಳಕ್ಕೆ ಹೋಗುವ ಭಕ್ತರಿದ್ದ ರೈಲಿಗೆ ಕಲ್ಲು ತೂರಾಟ Read More »

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

ಪುತ್ತೂರು: ಕರ್ನಾಟಕ ಸರಕಾರ ಗ್ರಾಮೀಣ ಪ್ರೌಢಶಾಲೆ, ಗ್ರಾಮೀಣ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು 17 ರ ವಯೋಮಾನದ ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪಾಂಗ್ಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಶಾಲಾ 9ನೇ ತರಗತಿಯವಿದ್ಯಾರ್ಥಿಗಳಾದ ವೈಗಾ ಎಂ , ಫಾತಿಮರಿಧಾ, ನಿಹಾನಿಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್‍ ಫೆರ್ನಾಂಡಿಸ್, ಪ್ರಿಯಾಂಕ ಪಿ., ಹಾಗೂ ಹಿತಾಶ್ರೀ ಜಿ

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ Read More »

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ

ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಶುರು ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಇಂದು ನಸುಕಿನ ಹೊತ್ತು ವಿದ್ಯುಕ್ತ ಚಾಲನೆ ದೊರೆತಿದೆ.ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾಶಿವರಾತ್ರಿ ದಿನವಾದ ಫೆಬ್ರವರಿ 26ರಂದು ಕೊನೆಯ ಶಾಹಿ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಮಹಾಕುಂಭಮೇಳಕ್ಕೆ ಇಂದು ಬೆಳಗ್ಗಿನಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ Read More »

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ

ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ದುರುಳರ ವಿಕೃತಿ ಬೆಂಗಳೂರು: ಚಾಮರಾಜಪೇಟೆಯ ಓಲ್ಡ್​ ಪೆನ್ಶನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿ ಸ್ಥಳ ಮಹಜರು ನಡೆಸಿದ್ದಾರೆ. ನಿನ್ನೆ ತಡರಾತ್ರಿಯಿಂದಲೇ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದರು. ಕರ್ಣ ನೀಡಿದ ​ದೂರು ಆಧರಿಸಿ

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ Read More »

error: Content is protected !!
Scroll to Top