ಇಸ್ರೇಲ್‌ ದಾಳಿಗೆ ಅಲಿ ಲಾರಿಜಾನಿ ಬಲಿ : ಒಪ್ಪಿಕೊಂಡ ಇರಾನ್‌

ಖಮೇನಿ ಬಳಿಕ ಇನ್ನೋರ್ವ ಪ್ರಮುಖ ನಾಯಕನನ್ನು ಸಾಯಿಸಿದ ಇಸ್ರೇಲ್‌ ಟೆಹ್ರಾನ್ : ಇಸ್ರೇಲ್ ಮಂಗಳವಾರ ಮುಂಜಾನೆ ನಡೆಸಿದ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ನಾಯಕ ಅಲಿ ಲಾರಿಜಾನಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರ ದೃಢಪಡಿಸಿದೆ. ಇರಾನ್‌ನ ಸರ್ಕಾರಿ ಸುದ್ದಿ ಮಾಧ್ಯಮ ‘ಮೆಹರ್ ನ್ಯೂಸ್’ ವರದಿಯ ಪ್ರಕಾರ, ದೇಶದ ಸರ್ವೋಚ್ಚ ರಾಷ್ಟ್ರೀಯ ಭದ್ರತಾ ಮಂಡಳಿಯು ಈ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಿದೆ. ಇಸ್ರೇಲ್ ತನ್ನ ದಾಳಿಯಲ್ಲಿ ಲಾರಿಜಾನಿಯವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ನಂತರ ಈ ದೃಢೀಕರಣ ಹೊರಬಂದಿದೆ. ಇರಾನ್‌ನ […]

ಇಸ್ರೇಲ್‌ ದಾಳಿಗೆ ಅಲಿ ಲಾರಿಜಾನಿ ಬಲಿ : ಒಪ್ಪಿಕೊಂಡ ಇರಾನ್‌ Read More »

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸರ್ವ ಸಿದ್ಧತೆ

ಪರೀಕ್ಷೆ ಬರೆಯಲಿದ್ದಾರೆ 9 ಲಕ್ಷ ವಿದ್ಯಾರ್ಥಿಗಳು ಬೆಂಗಳೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ರಾಜ್ಯದಾದ್ಯಂತ ಆರಂಭವಾಗಲಿದೆ. ಶಿಕ್ಷಣ ಇಲಾಖೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಲ್ಲಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಜೆರಾಕ್ಸ್, ಸೈಬರ್/ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆಯನ್ನು

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸರ್ವ ಸಿದ್ಧತೆ Read More »

ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಮಂಗಳೂರು: ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಹೊತ್ತಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಆದರೆ ತನಿಖಾ

ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌ Read More »

ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ

ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ತರಬೇತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿ ನಡೆದ ಚರ್ಚೆಯಲ್ಲಿ, ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳು ನೀಟ್ ವ್ಯವಸ್ಥೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸಾಮರ್ಥ್ಯ ಇಲ್ಲದಿರುವುದು ಪ್ರಮುಖ ಸಮಸ್ಯೆ ಎಂಬುದಾಗಿ ಸರ್ಕಾರದ ಗಮನಕ್ಕೆ ತಂದಿದ್ದರು. ಈ ಬಗ್ಗೆ

ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ Read More »

ಮಧ್ಯಪ್ರಾಚ್ಯ ಯುದ್ಧ ನಿಲ್ಲಿಸುವ ಶಕ್ತಿ ಭಾರತಕ್ಕಿದೆ: ಫಿನ್‌ಲ್ಯಾಂಡ್

ನವದೆಹಲಿ: ಇಸ್ರೇಲ್ – ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧ ನಿಲ್ಲಿಸುವ ತಾಕತ್ತು ಭಾರತಕ್ಕೆ ಇದೆ. ಈ ಯುದ್ಧದಿಂದ ಇಡೀ ಜಗತ್ತು ಸಮಸ್ಯೆ ಎದುರಿಸುತ್ತಿದೆ. ಭಾರತ ಮಧ್ಯಸ್ಥಿಕೆ ವಹಿಸಿ‌ ಯುದ್ಧ ನಿಲ್ಲಿಸಲಿ ಎಂದು ಫಿನ್‌ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಾಂತಿ ಸಭೆ ನಡೆಸುವ ಮೂಲಕ ಯುದ್ಧ ನಿರತ ರಾಷ್ಟ್ರಗಳ ಬಿಕ್ಕಟ್ಟು ಶಮನಕ್ಕೆ ಭಾರತ ಪ್ರಯತ್ನ ಮಾಡಬೇಕು. ವಿಶ್ವಕ್ಕೆ ಈಗ ಯುದ್ಧ ವಿರಾಮದ ಅಗತ್ಯತೆ ಇದೆ. ಭಾರತ ಈ ಕಾರ್ಯಕ್ಕೆ ಭಾಗಿಯಾಗಬಹುದೇ ಎನ್ನುವ ಕುತೂಹಲವೂ ಇದೆ.

ಮಧ್ಯಪ್ರಾಚ್ಯ ಯುದ್ಧ ನಿಲ್ಲಿಸುವ ಶಕ್ತಿ ಭಾರತಕ್ಕಿದೆ: ಫಿನ್‌ಲ್ಯಾಂಡ್ Read More »

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ‌ವಾರಂಟ್ ಆರೋಪಿಯ ಬಂಧನ

ಬಂಟ್ವಾಳ: ಪೊಲೀಸರ ಕಣ್ಣಿಗೆ ಮಣ್ಣೆರಚಿ ಸುಮಾರು ಎಂಟು ವರ್ಷಗಳಿಂದ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹಮ್ಮದ್ ಅನಾಸ್ (38) ಎಂದು ಗುರುತಿಸಲಾಗಿದೆ. ಈತ ಕೇರಳದ ಮಲಪ್ಪುರಂ ಜಿಲ್ಲೆಯವನು. ಈತನ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 166/2017 ರ ಪ್ರಕರಣಕ್ಕೆ ಸಂಬಂಧಿಸಿ, ಐಪಿಸಿ ಕಲಂ 379 ಹಾಗೂ 34 ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಮಾ. 16 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ ಕೆ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ‌ವಾರಂಟ್ ಆರೋಪಿಯ ಬಂಧನ Read More »

ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಮಗುವಿನ ರಕ್ಷಣೆ

ಕಾರವಾರ: ಆಟವಾಡುತ್ತಿದ್ದ ಎರಡು ವರ್ಷದ ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಆ ಮಗುವನ್ನು ವ್ಯಕ್ತಿಯೊಬ್ಬ ರಕ್ಷಣೆ ಮಾಡಿದ ಘಟನೆ ಶಿರಸಿಯ ಕಸ್ತೂರ್ಬಾ ‌ನಗರದಲ್ಲಿ ನಡೆದಿದೆ. ಬಾವಿಗೆ ಬಿದ್ದ ಮಗುವನ್ನು ಭುವಿ(2) ಎಂದು ಗುರುತಿಸಲಾಗಿದೆ. ಮಗು ಮನೆಯಲ್ಲಿ ಕಾಣದೇ ಇದ್ದಾಗ ಗಾಬರಿಯಾದ ಅಜ್ಜಿ ಹುಡುಕಾಡಲು ಆರಂಭಿಸಿದ್ದಾರೆ. ಹುಡುಕುತ್ತಾ ಬಾವಿಯ ಹತ್ತಿರ ಹೋದಾಗ ಬಾವಿಯಿಂದ ಮಗು ಅಳುವ ಶಬ್ಧ ಕೇಳಿಸಿದೆ. ಇಣುಕಿದಾಗ ಮಗು ಬಾವಿಗೆ ಇಳಿಸಲಾಗಿದ್ದ ಪಂಪ್‌ನ ‌ಹಗ್ಗದಲ್ಲಿ ನೇತಾಡುತ್ತಾ ಅಳುವುದು ಕಂಡು ಬಂದಿದೆ. ತಕ್ಷಣವೇ ಸಮೀಪದ ಫಯಾಜ್ ಚೌಟಿ

ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಮಗುವಿನ ರಕ್ಷಣೆ Read More »

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

ಕಾಸರಗೋಡು: ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಭಾಗವತರು, ಹಿಮ್ಮೇಳದ ಗುರು ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ ಶ್ರೇಯ ನಿವಾಸದಲ್ಲಿ ಪ್ರದಾನಿಸಲಾಯಿತು. ಪ್ರಶಸ್ತಿಯ ಪ್ರಾಯೋಜಕ ಮತ್ತು ಭಾಗವತ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಹಿಮ್ಮೇಳ ಕಲಾವಿದ ಚಂದ್ರಶೇಖರ ಭಟ್ ಕೊಂಕಣಾಜೆ, ಉಪನ್ಯಾಸಕ, ಕಲಾವಿದ ಜಯಪ್ರಕಾಶ ನಾಕೂರು, ಹವ್ಯಾಸಿ ಭಾಗವತ ವೆಂಕಟ್ರಮಣ ರಾವ್ ಬನ್ನೆಂಗಳ, ಉಪನ್ಯಾಸಕ ಪ್ರೊ. ಜಿ. ಪಿ. ಹೆಗಡೆ ಮೋಹನ

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ Read More »

ಐಸಿಸ್ ಜೊತೆ ನಂಟು: ವೈದ್ಯಕೀಯ ವಿದ್ಯಾರ್ಥಿಯ ಬಂಧನ

ಲಕ್ನೋ: ಉಗ್ರಗಾಮಿ ಸಂಘಟನೆ ಐಸಿಸ್ ಜೊತೆಗೆ ಸಂಬಂಧ ಹೊಂದಿರುವ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಹರಿಷ್ ಅಲಿ(19) ಎಂದು ಗುರುತಿಸಲಾಗಿದೆ. ಈತ ದಂತ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು ಐಸಿಸ್ ಆನ್‌ಲೈನ್ ಮಾಡ್ಯೂಲ್ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದ. ಈತ ಸಹರಾನ್‌ಪುರ ನಿವಾಸಿಯಾಗಿದ್ದಾನೆ. ಈತನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿರುವುದಾಗಿದೆ. ದೇಶದಲ್ಲಿ ಐಸಿಸ್ ಆನ್‌ಲೈನ್ ನೆಟ್ವರ್ಕ್ ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಈ ವೇಳೆ ಅಲಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈತ ಐಸಿಸ್ ಭಯೋತ್ಪಾದಕರ ಜೊತೆಗೆ

ಐಸಿಸ್ ಜೊತೆ ನಂಟು: ವೈದ್ಯಕೀಯ ವಿದ್ಯಾರ್ಥಿಯ ಬಂಧನ Read More »

ಕೋಳಿ ಅಂಕಕ್ಕೆ ದಾಳಿ ಮಾಡಿಸಿದ್ದಾಗಿ ಆರೋಪಿಸಿ ವ್ಯಕ್ತಿಯ ಮೇಲೆ ಹಲ್ಲೆ: ದೂರು ದಾಖಲು

ಹೆಬ್ರಿ: ವ್ಯಕ್ತಿಯೊಬ್ಬರ ಮೇಲೆ ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವುದಾಗಿ ಆರೋಪಿಸಿ ಹಲ್ಲೆ ನಡೆಸಿದ ಘಟನೆ ಹೆಬ್ರಿಯಲ್ಲಿ ವರದಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ನಾಲ್ಕೂರು ಗ್ರಾಮದ ವಿಠಲ ಎಂದು ಗುರುತಿಸಲಾಗಿದೆ. ಕೆಂಜೂರು ಜಯಕರ ಶೆಟ್ಟಿ ಎಂಬವರೇ ಹಲ್ಲೆ ನಡೆಸಿದ ಆರೋಪಿ. ವಿಠಲ ಅವರು ಮುದ್ದೂರಿಗೆ ಹೋಗುವ ಸಂದರ್ಭದಲ್ಲಿ ಜಯಕರ ಅವರು ಪಾದೆ ಮಠದಲ್ಲಿ ನಡೆದ ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವುದಾಗಿ ಆರೋಪ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾಗಿ ವಿಠಲ ಅವರು ಹೆಬ್ರಿ ಠಾಣೆಗೆ ದೂರು ನೀಡಿರುವುದಾಗಿದೆ.

ಕೋಳಿ ಅಂಕಕ್ಕೆ ದಾಳಿ ಮಾಡಿಸಿದ್ದಾಗಿ ಆರೋಪಿಸಿ ವ್ಯಕ್ತಿಯ ಮೇಲೆ ಹಲ್ಲೆ: ದೂರು ದಾಖಲು Read More »

error: Content is protected !!
Scroll to Top