ಟ್ಯಾಕ್ಟರಿಗೆ ಡಿಕ್ಕಿ ಹೊಡೆದ ಬೈಕ್‍ | ಸ್ಥಳದಲ್ಲೇ ಮೂವರ ಮೃತ್ಯು

ತುಮಕೂರು : ಬೈಕೊಂದು ಮುಂದೆ ಸಾಗುತ್ತಿದ್ದ ಟ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ನಡೆದಿದೆ. ಡಿಕ್ಕಿ ಹೊಡೆದ  ಪರಿಣಾಮ ಬೈಕ್‌ನಲ್ಲಿದ್ದ ತಾಯಿ ಹಾಗೂ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮಧುಗಿರಿ ತಾಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ನಿವಾಸಿ ಮುತ್ತಾಝ್ (38), ಅವರ ಪುತ್ರರಾದ ಮುಹಮ್ಮದ್ ಆಸಿಫ್(12) ಹಾಗೂ ಶಾಕಿರ್ ಹುಸೇನ್ (22) ಎಂದು ಗುರುತಿಸಲಾಗಿದೆ. ಈ ಮೂವರು ಇಂದು ಮುಂಜಾನೆ ಬೈಕ್‌ನಲ್ಲಿ ತುಮಕೂರಿನಿಂದ ತಮ್ಮ ಊರಿಗೆ ತೆರಳುತ್ತಿದ್ದು, ಮುಂಜಾನೆ […]

ಟ್ಯಾಕ್ಟರಿಗೆ ಡಿಕ್ಕಿ ಹೊಡೆದ ಬೈಕ್‍ | ಸ್ಥಳದಲ್ಲೇ ಮೂವರ ಮೃತ್ಯು Read More »

ದ್ವಿ ಚಕ್ರ ವಾಹನ – ರಿಕ್ಷಾ ಡಿಕ್ಕಿ

ವಿಟ್ಲ: ಸುಬ್ರಹ್ಮಣ್ಯ ಮಂಜೇಶ್ವರ ಹೆದ್ದಾರಿಯ ಪುಣಚದಲ್ಲಿ ರಿಕ್ಷಾವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂದಕಕ್ಕೆ ಬಿದ್ದ ಘಟನೆ ಸೋಮವಾರ ನಡೆದಿದೆ. ಪುಣಚ ಪೇಟೆಯಿಂದ ಗರಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರವಾಹನಕ್ಕೆ ಬುಳೇರಿಕಟ್ಟೆ ಕಡೆಯಿಂದ ಬಂದ ರಿಕ್ಷಾ ಗುದ್ದಿದೆ. ಗುದ್ದಿದ ಪರಿಣಾಮ ರಿಕ್ಷಾ ಚಾಲಕ ನಿಯಂತ್ರಣ ಕಳೆದುಕೊಂಡು ಬಲ ಬದಿಗೆ ಹೋಗಿ ಚರಂಡಿಗೆ ಬಿದ್ದಿದೆ. ರಿಕ್ಷಾ ಹಾಗೂ ದ್ವಿಚಕ್ರವಾಹನ ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರವಾಹನದಿಂದ ಬಾಲಕ ರಸ್ತೆಗೆ ಎಸೆಯಲ್ಪಟ್ಟಿದ್ದು. ಕೆಲ ಕಾಲ ಆತಂಕ ಮೂಡಿಸಿತ್ತು. ರಿಕ್ಷಾ ಚಾಲಕ ಅತಿಯಾದ

ದ್ವಿ ಚಕ್ರ ವಾಹನ – ರಿಕ್ಷಾ ಡಿಕ್ಕಿ Read More »

ವಿಕ್ರಂ ಗೌಡ ಎನ್‌ಕೌಂಟರ್‌ನ ನ್ಯಾಯಾಂಗ ತನಿಖೆ, ಗೌರವಯುತವಾದ ಬದುಕಿಗೆ ವ್ಯವಸ್ಥೆ…

ಶರಣಾಗಲು ನಕ್ಸಲರು ಇಟ್ಟಿದ್ದಾರೆ ಬೇಡಿಕೆಗಳ ದೀರ್ಘ ಪಟ್ಟಿ ಬೆಂಗಳೂರು: ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್​ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂ ಗೌಡ ಎನ್​​ಕೌಂಟರ್​​ ಪ್ರಕರಣವನ್ನು ನ್ಯಾಯಾಂಗ ತನಿಖೆ…ಹೀಗೆ ಶರಣಾಗಲು ಬಯಸಿರುವ ನಕ್ಸಲರು ಸರಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯಿಂದ ನಡೆಯಬೇಕು. ನಮ್ಮ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗುವ ಯಾವುದೇ ರೀತಿಯ ಒತ್ತಡ ಹೇರಬಾರದು. ಕೇಸ್‌ಗಳ ನೆಪದಲ್ಲಿ ವರ್ಷಗಟ್ಟಲೆ ಜೈಲಿನಲ್ಲಿ ಕೊಳೆಸಬಾರದು, ಸಮಾಜದಲ್ಲಿ ಗೌರವಯುತವಾದ ಜೀವನ ನಡೆಸಲು ವ್ಯವಸ್ಥೆ ಕಲ್ಪಿಸಬೇಕೆಂಬ

ವಿಕ್ರಂ ಗೌಡ ಎನ್‌ಕೌಂಟರ್‌ನ ನ್ಯಾಯಾಂಗ ತನಿಖೆ, ಗೌರವಯುತವಾದ ಬದುಕಿಗೆ ವ್ಯವಸ್ಥೆ… Read More »

ಟಿಬೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ : ಕನಿಷ್ಠ 36 ಮಂದಿ ಸಾವು

ಉತ್ತರ ಭಾರತ, ನೇಪಾಳ, ಚೀನದಲ್ಲೂ ಕಂಪನದ ಅನುಭವ ಹೊಸದಿಲ್ಲಿ : ಟಿಬೆಟ್‌ನಲ್ಲಿ ಇಂದು ಬೆಳಗ್ಗೆ ಒಂದು ತಾಸಿನೊಳಗೆ ಬೆನ್ನುಬಿನ್ನಿಗೆ 6 ಭೂಕಂಪಗಳು ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಈ ಪೈಕಿ ಮೊದಲ ಭೂಕಂಪ 7.1 ತೀವ್ರತೆ ಹೊಂದಿತ್ತು. ನಂತರ ಐದು ಪಶ್ಚಾತ್‌ ಕಂಪನಗಳು ಸಂಭವಿಸಿವೆ. ಭಾರತ, ನೇಪಾಳ, ಭೂತಾನ್‌ ಮತ್ತು ಚೀನದಲ್ಲೂ ಬೆಳಗ್ಗೆ ಕಂಪನದ ಅನುಭವ ಆಗಿದೆ. ಭೂಕಂಪದಿಂದಾಗಿ ಟಿಬೆಟ್‌ನಲ್ಲಿ ಅನೇಕ ಕಟ್ಟಡಗಳು ಉರುಳಿದ್ದು, ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ. ಪರಿಹಾರ ಕಾರ್ಯಾಚರಣೆ ಶುರುವಾಗಿದ್ದು, ಅವಶೇಷಗಳನ್ನು ಎತ್ತಿದಾಗ

ಟಿಬೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ : ಕನಿಷ್ಠ 36 ಮಂದಿ ಸಾವು Read More »

ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯ ಫೋಟೋ ತೆಗೆದ ದುಷ್ಕರ್ಮಿ| ಆರೋಪಿ ವಿರುದ್ದ ದೂರು ದಾಖಲು

ಸುಳ್ಯ : ಇಲ್ಲಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿದ್ದ ಮಹಿಳಾ ಶೌಚಾಲಯದಲ್ಲಿ ಮಹಿಳೆಯೊಬ್ಬರ ಅಪರಿಚಿತ ವ್ಯಕ್ತಿ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಶೌಚಾಲಯದ  ಕಿಟಕಿಯ ಗ್ಲಾಸ್‍ ಸರಿದಿದ್ದು, ಸರಿದ ಭಾಗದಿಂದ ಫೋಟೋವನ್ನು ಕ್ಲಿಕ್ಕಿಸಿದ್ದಾನೆ. ಈ ವೇಳೆ ಮಹಿಳೆ ಗಾಭಾರಿಗೊಂಡು ಜೋರಾಗಿ ಕಿರುಚಿಕೊಂಡಾಗ ಆತ ಪರಾರಿಯಾಗಿದ್ದಾನೆ ಎಂದು  ಮಹಿಳೆ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರಿನನ್ವಯ ತನಿಖೆ ಪ್ರಾರಂಭಿಸಿದ್ದಾರೆ.

ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯ ಫೋಟೋ ತೆಗೆದ ದುಷ್ಕರ್ಮಿ| ಆರೋಪಿ ವಿರುದ್ದ ದೂರು ದಾಖಲು Read More »

ಎಐ ಕ್ಯಾಮರಾ, ಫುಲ್‌ ಎಸಿ, ಡಿಜಿಟಲ್‌ ಸೂಚನಾ ಫಲಕ…

ಧರ್ಮಸ್ಥಳದಲ್ಲಿ ಇಂದು ಲೋಕಾರ್ಪಣೆಗೊಳ್ಳಲಿರುವ ಶ್ರೀ ಸಾನಿಧ್ಯ ಕಾಂಪ್ಲೆಕ್ಸ್‌ನಲ್ಲಿರುವ ವಿಶೇಷತೆಗಳ ಪೂರ್ಣ ಮಾಹಿತಿ ಇಲ್ಲಿದೆ ಧರ್ಮಸ್ಥಳ : ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದಲ್ಲಿ ಇನ್ನು ದೇವರ ದರ್ಶನಕ್ಕಾಗಿ ತಾಸುಗಟ್ಟಲೆ ಕಾಯುವ ಕಷ್ಟ ತಪ್ಪಲಿದೆ. ಇಂದು ಲೋಕಾರ್ಪಣೆಗೊಳ್ಳಲಿರುವ ಶ್ರೀ ಸಾನಿಧ್ಯ ನಿರೀಕ್ಷಣಾ ಕಾಂಪ್ಲೆಕ್ಸ್‌ನಲ್ಲಿ ಭಕ್ತರು ಆರಾಮವಾಗಿ ಹೋಗಿ ಒಂದರಿಂದ ಒಂದೂವರೆ ತಾಸಿನೊಳಗೆ ದೇವರ ದರ್ಶನ ಮಾಡಿಕೊಂಡು ಬರಬಹುದು. ಭಕ್ತರಿಗೆ ಸರ್ವ ರೀತಿಯಲ್ಲೂ ಅನುಕೂಲವಾಗುವಂತೆ ಶ್ರೀ ಸಾನಿಧ್ಯವನ್ನು ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.ಇಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್‌

ಎಐ ಕ್ಯಾಮರಾ, ಫುಲ್‌ ಎಸಿ, ಡಿಜಿಟಲ್‌ ಸೂಚನಾ ಫಲಕ… Read More »

ನಾಳೆ ಆರು ನಕ್ಸಲರಿಂದ ಶಸ್ತ್ರ ತ್ಯಾಗ?

ಮುಖ್ಯವಾಹಿನಿಗೆ ಬರಲಿಚ್ಚಿಸಿದ ಮುಂಡಗಾರು ಲತಾ ನೇತೃತ್ವದ ನಕ್ಸಲ್‌ ಟೀಮ್‌ ಬೆಂಗಳೂರು: ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಬಳಿಕ ಎದೆಗುಂದಿರುವ ಕೆಲವು ನಕ್ಸಲರು ಶರಣಾಗಲು ಬಯಸಿದ್ದು, ನಾಳೆ ಶರಣಾಗತಿ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಜ.8ರಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠರ ಸಮ್ಮುಖದಲ್ಲಿ ಆರು ನಕ್ಸಲರು ಶಸ್ತ್ರತ್ಯಾಗ ಮಾಡಿ ಸಮಾಜದ ಮುಖ್ಯವಾಹಿನಿಗೆ ಸೇರಲಿದ್ದಾರೆ ಎನ್ನಲಾಗಿದೆ. ನಕ್ಸಲ್‌ ಶರಣಾಗತಿ ಪ್ಯಾಕೇಜ್‌ ಅಡಿಯಲ್ಲಿ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ವಿಕ್ರಂ

ನಾಳೆ ಆರು ನಕ್ಸಲರಿಂದ ಶಸ್ತ್ರ ತ್ಯಾಗ? Read More »

ಇಂದು ದಿಲ್ಲಿ ಚುನಾವಣಾ ದಿನಾಂಕ ಪ್ರಕಟ

ಕುತೂಹಲ ಕೆರಳಿಸಿದ ರಾಷ್ಟ್ರ ರಾಜಧಾನಿಯ ಮತ ಸಮರ ಹೊಸದಿಲ್ಲಿ: ದೇಶ ಇನ್ನೊಂದು ಚುನಾವಣೆ ಕದನ ಕುತೂಹಲಕ್ಕೆ ಸಜ್ಜಾಗುತ್ತಿದೆ. ಚುನಾವಣಾ ಆಯೋಗ ಇಂದು ಮಧ್ಯಾಹ್ನ 2 ಗಂಟೆಗೆ ದಿಲ್ಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ರಾಷ್ಟ್ರ ರಾಜಧಾನಿಯಿರುವ ರಾಜ್ಯದ ಚುನಾವಣೆ ಆದ ಕಾರಣ ದಿಲ್ಲಿ ಸಮರ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಾಕಷ್ಟು ಕುತೂಹಲ ಕೆರಳಿಸಿದೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ. ಈಗಾಗಲೇ ದಿಲ್ಲಿ ವಿಧಾನಸಭಾ ಚುನಾವಣೆಗಾಗಿ ಆಮ್

ಇಂದು ದಿಲ್ಲಿ ಚುನಾವಣಾ ದಿನಾಂಕ ಪ್ರಕಟ Read More »

24 ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು ಎಚ್‌ಎಂಪಿ ವೈರಸ್‌

ಪ್ರಕರಣಗಳ ಸಂಖ್ಯೆ 5ಕ್ಕೇರಿಕೆ; ಕೇಂದ್ರದಿಂದ ಮಾರ್ಗಸೂಚಿ ಪ್ರಕಟ ಹೊಸದಿಲ್ಲಿ: ಚೀನದಲ್ಲಿ ಕಾಣಿಕೊಂಡು ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಿಗೆ ಹರಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್‌ಎಂಪಿಸಿ) ಹೊಸ ವೈರಸ್‌ ಅಲ್ಲ. 2001ರಲ್ಲೇ ಇದನ್ನು ಗುರುತಿಸಲಾಗಿತ್ತು ಮತ್ತು ಇದು ಅಪಾಯಕಾರಿಯಲ್ಲ ಎಂದು ಐಸಿಎಂಆರ್‌ ಹೇಳಿದೆ. 2001ರಲ್ಲಿ ಮೊದಲ ಬಾರಿಗೆ ಗುರುತಿಸಲಾದ ಈ ವೈರಸ್‌ ಹಲವು ವರ್ಷಗಳಿಂದ ಜಾಗತಿಕವಾಗಿ ಅಸ್ತಿತ್ವದಲ್ಲಿದೆ. ಹಾಗಾಗಿ ಜನರು ಆತಂಕ ಪಡಬೇಕಿಲ್ಲ. ಹಾಗಂತ ನಿರ್ಲಕ್ಷ್ಯವೂ ಮಾಡುವಂತಿಲ್ಲ ಎಂದು ಐಸಿಎಂಆರ್ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದೆ.ಕರ್ನಾಟಕದಲ್ಲಿ ಇಬ್ಬರು ಸೋಂಕಿತರು

24 ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು ಎಚ್‌ಎಂಪಿ ವೈರಸ್‌ Read More »

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಅಮಾನವೀಯ ಆಕ್ರಮಣ | ಹಿಂದೂ ಜನಜಾಗೃತಿ ಸಮಿತಿಯಿಂದ ಬಿತ್ತಿಪತ್ರ ಹಿಡಿದು ಪ್ರತಿಭಟನೆ

ಪುತ್ತೂರು :ಹಿಂದೂ ಜನ ಜಾಗೃತಿ ಸಮಿತಿ ಪುತ್ತೂರು ವತಿಯಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ಅಮಾನವೀಯ ಆಕ್ರಮಣವನ್ನ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ಭಿತ್ತಿಪತ್ರ ಹಿಡಿದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.  ಕಳೆದ ಅನೇಕ ವರ್ಷಗಳಿಂದ ಬಾಂಗ್ಲಾದೇಶದಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ಅತ್ಯಂತ ಅಮಾನವೀಯವಾಗಿ ಆಕ್ರಮಣಗಳಾ ಗುತ್ತಿದ್ದು, ಹಿಂದೂಗಳನ್ನು ಅತ್ಯಂತ ಬರ್ಬರ ವಾಗಿ ಹತ್ಯೆ ಮಾಡುತ್ತಿದ್ದಾರೆ. ಹಿಂದೂ ಸ್ತ್ರೀಯರನ್ನು ಅತ್ಯಾಚಾರ ಮಾಡುವುದು, ಹಿಂದೂಗಳ ಅಸ್ತಿ ವಶ ಪಡಿಸಿಕೊಳ್ಳುವುದು ನಿರಂತರ ನಡೆಯುತ್ತಿದೆ. ಅನೇಕ

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಅಮಾನವೀಯ ಆಕ್ರಮಣ | ಹಿಂದೂ ಜನಜಾಗೃತಿ ಸಮಿತಿಯಿಂದ ಬಿತ್ತಿಪತ್ರ ಹಿಡಿದು ಪ್ರತಿಭಟನೆ Read More »

error: Content is protected !!
Scroll to Top