ಶ್ರೀ ರಾಮ ಭಜನಾ ತಂಡ ಆನಡ್ಕ ಪ್ರಥಮ ವಾರ್ಷಿಕೋತ್ಸವದಲ್ಲಿ ಮೇಳೈಸಿದ ಭಜನ ಸಂಕೀರ್ತನ | ಭಕ್ತಿ-ಭಾವ-ಕುಣಿತದ ಸಮ್ಮಿಲನ | ಮನಸೂರೆಗೊಂಡ ವೈಭವದ ಶೋಭಾಯಾತ್ರೆ

ಪುತ್ತೂರು : ಶಾಂತಿಗೋಡು ಗ್ರಾಮದ ಆನಡ್ಕ ಶ್ರೀರಾಮ ಭಜನಾ ತಂಡದ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಭಜನ ಕೀರ್ತನ ಸಂಭ್ರಮ, ಭಕ್ತಿ-ಭಾವ-ಕುಣಿತದ ಸಮ್ಮಿಲನ ಭಾನುವಾರ ಸಂಜೆ ಆನಡ್ಕದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಜೆ 6.30 ಕ್ಕೆ ಬೀಟಿಕಾಡುವಿನಿಂದ ಆನಡ್ಕದ ವರೆಗೆ ವೈಭವದ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ಬನ್ನೂರು ಶನೀಶ್ವರ ಭಜನಾ ತಂಡ, ಕೈಕಾರ ಶ್ರೀ ವಿದ್ಯಾನಿಧಿ ಸರಸ್ವತಿ ಭಜನಾ ತಂಡ, ಸರ್ವೆ ಶ್ರೀ ಸುಬ್ರಾಯ ಭಜನಾ ತಂಡ ಪಾಲ್ಗೊಂಡಿದ್ದು, ಇರ್ದೆ ಶ್ರೀ ವಿಷ್ಣು ಸಿಂಗಾರಿ ಮೇಳಂ ನಿಂದ ಚೆಂಡೆ ಪ್ರದರ್ಶನಗೊಂಡಿತು. […]

ಶ್ರೀ ರಾಮ ಭಜನಾ ತಂಡ ಆನಡ್ಕ ಪ್ರಥಮ ವಾರ್ಷಿಕೋತ್ಸವದಲ್ಲಿ ಮೇಳೈಸಿದ ಭಜನ ಸಂಕೀರ್ತನ | ಭಕ್ತಿ-ಭಾವ-ಕುಣಿತದ ಸಮ್ಮಿಲನ | ಮನಸೂರೆಗೊಂಡ ವೈಭವದ ಶೋಭಾಯಾತ್ರೆ Read More »

ಕರ್ನಾಟಕದ ಪಿಎಫ್‌ಐ ಉಗ್ರರಿಗೆ ಹಣ ಹಂಚುತ್ತಿದ್ದವ ಸೆರೆ

ಬೆಂಗಳೂರು : ನಿಷೇಧಿತ ಪಿಎಫ್​ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದಲ್ಲಿ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದಿಲ್ಲಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತ ಬಂಧಿತ ವ್ಯಕ್ತಿ. ಈತ ದುಬೈನಿಂದ ದಿಲ್ಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಬಂಧಿಸಲಾಗಿದೆ.ಪಿಎಫ್‌ಐ ತರಬೇತಿ ಪಡೆದಿರುವ ಉಗ್ರ ಆಲಂ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಅವನ ವಿರುದ್ಧ ಲುಕ್‌ಔಟ್

ಕರ್ನಾಟಕದ ಪಿಎಫ್‌ಐ ಉಗ್ರರಿಗೆ ಹಣ ಹಂಚುತ್ತಿದ್ದವ ಸೆರೆ Read More »

ಮನೆಯೊಳಗೆ ಉಸಿರುಕಟ್ಟಿ ಒಂದೇ ಕುಟುಂಬದ ಐವರು ಸಾವು

ಚಳಿಯಿಂದ ಪಾರಾಗಲು ಬಳಸಿದ ಹೀಟರ್‌ ಮೃತ್ಯುವಾಯಿತು ಶ್ರೀನಗರ: ಮನೆಯಲ್ಲಿಯೇ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಂಭವಿಸಿದೆ. ಚಳಿಯಿಂದ ಪಾರಾಗಲು ಬಳಸಿದ ಎಲ್‌ಪಿಜಿ ರೂಮ್‌ ಹೀಟರ್‌ ಅವರ ಸಾವಿಗೆ ಕಾರಣ ಎನ್ನಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಿಂದ ಬಂದಿದ್ದ ದಂಪತಿ ಹಾಗೂ ಅವರ ಮೂವರು ಮಕ್ಕಳು ಶ್ರೀನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ದಂಪತಿ ಮತ್ತು ಅವರ 3 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5

ಮನೆಯೊಳಗೆ ಉಸಿರುಕಟ್ಟಿ ಒಂದೇ ಕುಟುಂಬದ ಐವರು ಸಾವು Read More »

ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಎಂಟು ತಿಂಗಳ ಮಗುವಿಗೆ ವೈರಸ್‌ ಸೋಂಕು ಬೆಂಗಳೂರು : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಎಚ್​ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ.ಈ ಮೂಲಕ ದೇಶದ ಮೊದಲ ಎಚ್​ಎಂಪಿವಿ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಭಾರತದಲ್ಲೂ ಎಚ್‌ಎಂಪಿ ವೈರಸ್‌ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ಚೀನದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ

ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ Read More »

ಮಾರುತಿಗೆ ಟಾಟಾ ಸಡ್ಡು : ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ ಪಂಚ್‌

ಮಾರುತಿ ಕಂಪನಿಯ 40 ವರ್ಷಗಳ ಪಾರಮ್ಯ ಬ್ರೇಕ್‌ ಹೊಸದಿಲ್ಲಿ: ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಕಂಪನಿಯ ಕಾರುಗಳು ಹೊಸ ಕ್ರಾಂತಿಯನ್ನು ಮಾಡಿವೆ. ಮಾರುತಿ ಸುಝುಕಿ ಕಂಪನಿಯ 40 ವರ್ಷಗಳ ದಾಖಲೆಯನ್ನು ಮುರಿದು ಟಾಟಾ ಕಾರುಗಳು ಮಾರಾಟದಲ್ಲಿ ವಿಕ್ರಮ ಸಾಧಿಸಿವೆ. ಉತ್ಪನ್ನದಲ್ಲಿ ಹೊಸತನ ಇದ್ದಲ್ಲಿ ಮಾರುಕಟ್ಟೆಯಲ್ಲಿ ಯಶಸ್ವಿಯಾಗುತ್ತದೆ ಎನ್ನುವುದನ್ನು ಟಾಟಾ ಕಾರುಗಳು ಸಾಬೀತುಪಡಿಸಿವೆ. ಕಳೆದ 40 ವರ್ಷಗಳಿಂದ ಭಾರತದ ಮಾರುಕಟ್ಟೆಯಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿದ್ದ ಮಾರುತಿ ಸುಝುಕಿ ಕಂಪನಿಯನ್ನು ದೇಶೀಯ ಕಂಪನಿ ಟಾಟಾ ಮೋಟಾರ್ಸ್‌ ಹಿಂದಿಕ್ಕಿದೆ. ಇಲ್ಲಿಯವರೆಗೆ ದೇಶದಲ್ಲಿ

ಮಾರುತಿಗೆ ಟಾಟಾ ಸಡ್ಡು : ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ ಪಂಚ್‌ Read More »

ಎಚ್‌ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ

ಜ್ವರ, ಶೀತ ಇದ್ದರೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಬೆಂಗಳೂರು: ಚೀನದಲ್ಲಿ ಹ್ಯೂಮನ್ ಮೆಟಾ ನ್ಯೂಮೊ ವೈರಸ್ (ಎಚ್‌ಎಂಪಿವಿ) ಹಾವಳಿ ತೀವ್ರಗೊಂಡು ಆತಂಕ ಸೃಷ್ಟಿಸಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಚೀನದಲ್ಲಿ ಕಾಣಿಸಿಕೊಂಡಿರುವ ಎಚ್‌ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ ವೈರಸ್‌ ನಿಯಂತ್ರಿಸಲು ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲದ ಕಾರಣ

ಎಚ್‌ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ Read More »

ಮೌಲ್ಯಯುತ ಕಾದಂಬರಿಗಳ ಲೇಖಕ ನಾ.ಡಿ.ಸೋಜ

ನೂರಾರು ಶ್ರೇಷ್ಠ ಕೃತಿಗಳನ್ನು ಬರೆದ ಹಿರಿಯ ಸಾಹಿತಿ ಕನ್ನಡದ ಹಿರಿಯ ಸಾಹಿತಿ ಡಾ. ನಾ. ಡಿಸೋಜ (87) ನಿನ್ನೆ ಸಂಜೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಮತ್ತು ಮಾತೃಭಾಷೆಯಾದ ಕೊಂಕಣಿಯಲ್ಲಿ ನೂರರಷ್ಟು ಶ್ರೇಷ್ಠ ಕೃತಿಗಳನ್ನು ಶ್ರೀಮಂತವಾಗಿ ಬರೆದವರು ಅವರು. ಒಂದು ಸಣ್ಣ ಗ್ರಾಮದಲ್ಲಿ ಬದುಕಿನ ಉದ್ದಕ್ಕೂ ವಾಸವಾಗಿದ್ದುಕೊಂಡು ಜಾಗತಿಕ ಮಟ್ಟಕ್ಕೆ ಸಂವಾದಿಯಾಗುವ 40 ಮೌಲ್ಯಯುತ ಕಾದಂಬರಿಗಳನ್ನು ಬರೆದದ್ದು ಅವರ ಶ್ರೇಷ್ಠ ಕೊಡುಗೆ ಎಂದು ಖಂಡಿತವಾಗಿ ಹೇಳಬಹುದು. ಪ್ರಕೃತಿಯ ಹಿನ್ನೆಲೆಯ ಶಕ್ತಿಶಾಲಿ ಕಾದಂಬರಿಗಳು ವಿಶೇಷವಾಗಿ ಕಾದಂಬರಿಯ ಕ್ಷೇತ್ರ ಅವರಿಗೆ ಹೃದಯಕ್ಕೆ

ಮೌಲ್ಯಯುತ ಕಾದಂಬರಿಗಳ ಲೇಖಕ ನಾ.ಡಿ.ಸೋಜ Read More »

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಪುತ್ತೂರು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ. ಸಹಕಾರ ಭಾರತಿಯಿಂದ ಸ್ಪರ್ಧೆಗಿಳಿದಿದ್ದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ನನ್ಯ ಅಚ್ಚುತ ಮೂಡೆತ್ತಾಯ, ಮಂಜುನಾಥ ರೈ ಸಾಂತ್ಯ, ಶಿವರಾಮ ಪಿ ಈಶ್ವರಮಂಗಲ, ನಹುಷ ಭಟ್ ಪಳನೀರು, ನವೀನ ನನ್ನಪಟ್ನಾಜೆ, ಸಾಲಗಾರ ಮಹಿಳಾ ಸ್ಥಾನದಿಂದ ತಾರಾ ಸಂಕಪ್ಪ ಪೂಜಾರಿ ಚಾಕೋಟೆ, ಮೋಹನಾಂಗಿ ಬೀಜಂತ್ತಡ, ಹಿಂದುಳಿದ ವರ್ಗ ಬಿ ಯಿಂದ ಲೋಕೇಶ್‍ ಚಾಕೋಟೆ, ಹಿಂದುಳಿದ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು Read More »

ಜ.18 : ವಿಟ್ಲ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ವತಿಯಿಂದ ‘ಸಮರ್ಪಣ್ ಕಲೋತ್ಸವ-2025’ | ಬಿಡುಗಡೆಗೊಂಡ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಹಿನ್ನಲೆಯಲ್ಲಿ ಶ್ರೀ ದೇವರ ಬಯ್ಯದ ಬಲಿ ಉತ್ಸವ ದಿನವಾದ ಜ.18 ರಂದು ಸಮರ್ಪಣ್ ವಿಟ್ಲ ಇವರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ‘ಸಮರ್ಪಣ್ ಕಲೋತ್ಸವ -2025’ ಅಂಗವಾಗಿ ಮಂಗಳೂರು ಬೆನಕ ಆರ್ಟ್ಸ್ ವತಿಯಿಂದ ‘ಪೊರಿಪುದಪ್ಪೆ ಜಲದುರ್ಗೆ’ ತುಳು ಸಿನಿ ನಾಟಕ ವಿಶೇಷ ದೃಶ್ಯ ಸಂಯೋಜನೆಯೊಂದಿಗೆ ನಡೆಯಲಿದ್ದು, ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷ

ಜ.18 : ವಿಟ್ಲ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ವತಿಯಿಂದ ‘ಸಮರ್ಪಣ್ ಕಲೋತ್ಸವ-2025’ | ಬಿಡುಗಡೆಗೊಂಡ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾನುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷದ ಪ್ರಮುಖರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಪಿ.ಬಿ.ಶಿವಕುಮಾರ್, ಕಾರ್ಯದರ್ಶಿ ನಾಗೇಶ್‍ ಪ್ರಭು ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಬಿಜೆಪಿ ಕಚೇರಿಗೆ ಭೇಟಿ Read More »

error: Content is protected !!
Scroll to Top