ಕಂದಕಕ್ಕೆ ಉರುಳಿದ ಕಾರು | ಐವರು ಪ್ರಾಣಾಪಾಯದಿಂದ ಪಾರು

ಪುತ್ತೂರು: ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದು ಸಂಪೂರ್ಣ ಜಖಂಗೊಂಡ ಘಟನೆ ಉಪ್ಪಿನಂಗಡಿ-ಪುತ್ತೂರು ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ಇಂದು ನಡೆದಿದೆ. ಕಾರಿನಲ್ಲಿ ತೆರಳಿ ಒತ್ತೆಕೋಲದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ತೆರಳುತ್ತಿದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು ಮಾರುತಿ ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಚಲಿಸುತ್ತಿದ್ದ ವೇಳೆ ಸೇಡಿಯಾಪು ಜಂಕ್ಷನ್ ನಿಂದ 250 ಮೀ ದೂರದ ಕಾಪು ಎಂಬಲ್ಲಿ ಎಡ ಬದಿಗೆ ಚಲಿಸಿ ತೋಟದ ನೀರು ಹರಿಯುವ ಕಾಲುವೆಗೆ […]

ಕಂದಕಕ್ಕೆ ಉರುಳಿದ ಕಾರು | ಐವರು ಪ್ರಾಣಾಪಾಯದಿಂದ ಪಾರು Read More »

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ  ಕೈವಾಡವಿರುವುದನ್ನು ಆರೋಪಿಸಿ ಆರೋಪಿಸಿ ಪುತ್ತೂರು ಬಿಜೆಪಿಯಿಂದ ಬಿಜೆಪಿ ಕಚೇರಿ ಬಳಿ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದಿಂದ ತುಂಬಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖಗೆ ಅವರ ಕೈವಾಡ ಇರುವ ಬಗ್ಗೆ, ಡೆತ್ ನೋಟ್ ನಲ್ಲಿ ಉಲ್ಲೇಖವಿರುವುದರಿಂದ ಕೂಡಲೇ ಸಚಿವ ಪ್ರಿಯಾಂಕ ಖರ್ಗೆಯವರನ್ನು ಸಂಪುಟದಿಂದ ವಜಾಗೊಳಿಸಿ ಅವರ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ Read More »

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸರಕಾರದಿಂದ ಗ್ಯಾರಂಟಿ ವಾಪಸ್‌ ಪಡೆಯುವ ಅಭಿಯಾನ

ಉಚಿತ ವಿದ್ಯುತ್‌ ಗ್ಯಾರಂಟಿ ಕೈ ಬಿಡುವಂತೆ ಜನರಿಗೆ ಮನವಿ ಶಿಮ್ಲಾ: ಕರ್ನಾಟಕದಂತೆ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರಕಾರ ಈಗ ದಿವಾಳಿಯಂಚಿಗೆ ತಲುಪಿದ್ದು, ಆರ್ಥಿಕ ಸ್ಥಿತಿಯ ಚೇತರಿಕೆಗಾಗಿ ಗ್ಯಾರಂಟಿಗಳನ್ನು ಹಿಂದೆಗೆದುಕೊಳ್ಳಲು ಪ್ರಾರಂಭಿಸಿದೆ. ಮೊದಲ ಹಂತವಾಗಿ ರಾಜ್ಯದಲ್ಲಿ ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಶುರುವಾಗಿದೆ. ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಸ್ವತಃ ತನ್ನ ಐದು ವಿದ್ಯುತ್‌ ಸಂಪರ್ಕಗಳ ಸಬ್ಸಿಡಿಯನ್ನು ವಾಪಸು ನೀಡಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಹಣ ಉಳಿಸುವ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸರಕಾರದಿಂದ ಗ್ಯಾರಂಟಿ ವಾಪಸ್‌ ಪಡೆಯುವ ಅಭಿಯಾನ Read More »

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ

ಸುಳ್ಯ: ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥದ ಭೂ ಸ್ಪರ್ಶ ಕಾರ್ಯಕ್ರಮ ಇಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕುರುಂಜಿ ಚಿದಾನಂದ ಗೌಡ, ರಥಶಿಲ್ಪಿ ರಾಜಗೋಪಾಲ ಅಚಾರ್ಯ, ಲಯನ್ಸ್ ರಾಜ್ಯಪಾಲ ಎಂ.ಬಿ. ಸದಾಶಿವ, ಬ್ರಹ್ಮಶ್ರೀ ವೇದಮೂರ್ತಿ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಭೂಸ್ಪರ್ಶ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಧಾರ್ಮಿಕ ಭಾವನೆ ಕೆಡಿಸುವ ಹುನ್ನಾರದ ಆರೋಪ

ಧರ್ಮಸ್ಥಳದಲ್ಲಿ ನೇತ್ರಾವತಿ ಸೇರುವ ಉಪನದಿಯನ್ನು ಮಲಿನಗೊಳಿಸಿದ ದುಷ್ಕರ್ಮಿಗಳು ಧರ್ಮಸ್ಥಳ : ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಎಸೆದಿರುವ ಕೃತ್ಯದ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹುನ್ನಾರ ಇದೆ ಎಂದು ಆರೋಪಿಸಿರುವ ಹಿಂದು ಸಂಘಟನೆಗಳು ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.ಧರ್ಮಸ್ಥಳದ ಪುಣ್ಯನದಿಯಾಗಿರುವ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ. ಇದರ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಪಷ್ಟ ಉದ್ದೇಶ ಇದೆ ಎಂದು

ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಧಾರ್ಮಿಕ ಭಾವನೆ ಕೆಡಿಸುವ ಹುನ್ನಾರದ ಆರೋಪ Read More »

ರೇಷನ್‌ ಕಾರ್ಡ್‌ ತಿದ್ದುಪಡಿ ಅಂತಿಮ ಗಡು ಒಂದು ತಿಂಗಳು ವಿಸ್ತರಣೆ

ಜ.31ರ ತನಕ ಗ್ರಾಮ ಒನ್‌ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ಬೆಂಗಳೂರು : ರೇ‌ಷನ್ ಕಾರ್ಡ್‌ ತಿದ್ದುಪಡಿ ಅಂತಿಮ ಗಡುವನ್ನು ಸರಕಾರ ಒಂದು ತಿಂಗಳು ವಿಸ್ತರಣೆ ಮಾಡಿದೆ. ರೇಷನ್ ಕಾರ್ಡ್‌ ತಿದ್ದುಪಡಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇನ್ನೂ ಅನೇಕ ಕಾರ್ಡ್‌ಗಳ ತಿದ್ದುಪಡಿ ಬಾಕಿ ಇರುವುದರಿಂದ ಜ.31ರ ತನಕ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ಮೊದಲು ರೇಷನ್‌ ಕಾರ್ಡ್‌ ತಿದ್ದುಪಡಿಗೆ ಡಿ.31 ಅಂತಿಮ ಗಡುವು ನೀಡಿತ್ತು. ಆದರೆ ತಿದ್ದಪಡಿಯಲ್ಲೇ ಸಾಕಷ್ಟು

ರೇಷನ್‌ ಕಾರ್ಡ್‌ ತಿದ್ದುಪಡಿ ಅಂತಿಮ ಗಡು ಒಂದು ತಿಂಗಳು ವಿಸ್ತರಣೆ Read More »

ವಿಟ್ಲದ ಲಾರಿ ಚಾಲಕ ಲಿಯೋ ಡಿ’ಸೋಜಾ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ : ಲಾರಿ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡವರು. ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು. ರಾತ್ರಿ  ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತಿಳಿದು

ವಿಟ್ಲದ ಲಾರಿ ಚಾಲಕ ಲಿಯೋ ಡಿ’ಸೋಜಾ ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು : ಆಧುನಿಕ ವಿದ್ಯೆಗೆ ಕೊರತೆ ಇಲ್ಲಾ, ನೂರು ವರ್ಷಗಳ ಹಿಂದೆ ದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.5 ಇದ್ದು, ಇದೀಗ ಪ್ರಸ್ತುತ ದಿನಗಳಲ್ಲಿ ಶೇ.80 ಕ್ಕಿಂತಲೂ ಸಾಕ್ಷರತೆ ಸಿಗುತ್ತಿದೆ. ಆಧುನಿಕ ವಿದ್ಯೆಯ ಭರದಲ್ಲಿ ಸಿಲುಕಿ, ಆಧ್ಯಾತ್ಮಿಕ ವಿದ್ಯೆಯನ್ನು ಮರೆಯುತ್ತಿದ್ದೇವೆ ಎಂಬ ಭಯದ ಕಾಲಘಟ್ಟದಲ್ಲಿದ್ದೇವೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ Read More »

ಬೆಂಕಿ ಅವಘಡ : 60 ಬೈಕ್‌ಗಳು ಸುಟ್ಟು ಕರಕಲು

ಶೋರೂಮ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತ ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ 60ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೆ ಸಹ ಬೆಂಕಿ ತಗುಲಿದೆ. ತಕ್ಷಣ

ಬೆಂಕಿ ಅವಘಡ : 60 ಬೈಕ್‌ಗಳು ಸುಟ್ಟು ಕರಕಲು Read More »

ಸಂಕ್ರಾಂತಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ

ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಉಳಿಸಲು ಟಿಕೆಟ್‌ ದರ ಏರಿಕೆ ಅನಿವಾರ್ಯ ಬೆಂಗಳೂರು : ಸಂಕ್ರಾಂತಿ ಹಬ್ಬದ ನಂತರ ಕೆಎಸ್‌ಆರ್‌ಟಿಸಿ ಬಸ್‌ಗಳ ಟಿಕೆಟ್‌ ದರ ಹೆಚ್ಚಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಸಾರಿಗೆ ಮುಖಂಡರ ‌ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನಾಲ್ಕು ನಿಗಮಗಳಡಿಯಲ್ಲಿರುವ ಬಸ್​ಗಳ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಸಾರಿಗೆ ನೌಕರರು ಮನವಿ ಮಾಡಲು ಈಗಾಗಲೇ ‌ಅಂಕಿಅಂಶಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆಎಸ್ಆರ್​ಟಿಸಿ ಟಿಕೆಟ್

ಸಂಕ್ರಾಂತಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ Read More »

error: Content is protected !!
Scroll to Top