ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು  ಆಯ್ಕೆ

ಪುತ್ತೂರು : ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು, ಇದರ ಕೃಷಿಕ ಸಮಾಜ ನಿರ್ದೇಶಕರ  ಚುನಾವಣೆಯಲ್ಲಿ ಅವಿರೋಧ ಸದಸ್ಯರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಜಯ್ ಕುಮಾರ್ ರೈ ಕೋರಂಗ, ವಿನೋದ್ ಕುಮಾರ್ ರೈ, ಮೂಲಚಂದ್ರ, ಎಪಿ ಸದಾಶಿವ,  ಬಿ ಗೋವಿಂದ ಬೋರ್ಕರ್, ಎಂ ವೈ ರಾಮ ಪ್ರಸಾದ್, ಬಾಲಕೃಷ್ಣ ಕೆ, ದಯಾನಂದ ಕೆ, ಎಂ ದೇವಣ್ಣರೈ, ಡಿ. […]

 ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು  ಆಯ್ಕೆ Read More »

ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ

ಮಹಾರಾಷ್ಟ್ರ : ಮೂರನೇ ಬಾರಿಯೂ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಹೆಣ್ಣು-ಗಂಡು ಇಬ್ಬರೂ ಸಮಾನರು ಎನ್ನುವ ಈ ಕಾಲದಲ್ಲಿ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿ ಗಂಡ ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಮಹಿಳೆ ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು, ಕೋಪಗೊಂಡ ಪತಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಆಕೆ ಹೆರುವ ಮೊದಲೆ ಮುಂದೆ ಯು ಹೆಣ್ಣು ಮಗುವಿಗೆ

ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ Read More »

ಕಾರಿಗೆ ಟಿಪ್ಪರ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

ಬೆಳ್ತಂಗಡಿ : ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ  ಹೊಡೆದ ಘಟನೆ ಇಂದು(ಡಿ.31) ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ  ಕಾರಿನಲ್ಲಿದ್ದ  ಏರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.

ಕಾರಿಗೆ ಟಿಪ್ಪರ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ Read More »

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ

ಕರ್ನಾಟಕದ ಸಿಎಂ ಬಳಿ ಎಷ್ಟು ಸಂಪತ್ತು ಇದೆ ಗೊತ್ತೇ? ಹೊಸದಿಲ್ಲಿ: ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಿರಿವಂತ ಸಿಎಂಗಳ ಸಾಲಿನಲ್ಲಿ ಮೊದಲ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು 931 ಕೋಟಿ ರೂ. ಹಾಗೂ ಪೆಮಾ

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ Read More »

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಬರೆದಿಟ್ಟ ಪತ್ರದಲ್ಲಿದೆ ಸ್ಫೋಟಕ ಮಾಹಿತಿ ಬೆಂಗಳೂರು : ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳುತ್ತಿದ್ದರೂ ಸಚಿನ್‌ ಪಾಂಚಾಲ್‌ ಬರೆದಿಟ್ಟಿದ್ದ ಆರು ಪುಟಗಳ ಡೆತ್‌ನೋಟ್‌ನಲ್ಲಿ ಹಲವು ಬಾರಿ ಪ್ರಿಯಾಂಕ್‌ ಖರ್ಗೆ ಹೆಸರು ಉಲ್ಲೇಖಿಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ. ಪ್ರಿಯಾಂಕ್‌ ಖರ್ಗೆಯ ಆಪ್ತ ರಾಜು ಕಪನೂರ್ (ಗುತ್ತಿಗೆದಾರನಿಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿ) ಈ ಪ್ರಕರಣದ ಪ್ರಮುಖ ಆರೋಪಿ ಎನ್ನುವುದನ್ನು

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು Read More »

ಹಿಂದು ಯುವಕನಿಗೆ ಮುಸ್ಲಿಂ ಯುವಕರಿಂದ  ಥಳಿತ | ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ | ಎರಡು ಕಡೆಯಿಂದ ದೂರು ದಾಖಲು

ಬಂಟ್ವಾಳ : ಹಿಂದೂಯುವಕನಿಗೆ ಮುಸ್ಲಿಂ ಯುವಕರು ಸೇರಿ ಹೊಡೆದಿರುವ ಘಟನೆ ಡಿ.31 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿ ದೂರನ್ನು ನೀಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಜಿಲ್ಲಾ ಎಸ್‌ಪಿ ಯತೀಶ್ ಅವರು ಗ್ರಾಮಾಂತರ ಠಾಣೆಗೆ ಭೇಟಿ ನೀಡಿ ತನಿಖೆಯ ಕುರಿತು ಸಲಹೆ ನೀಡಿದ್ದಾರೆ. ಹಿಂದೂ ಯುವಕನಿಗೆ ಮುಸ್ಲಿಂ ಯುವಕರು ಹೊಡೆದಿದಲ್ಲದೆ ಅವಾಚ್ಯವಾದ ಶಬ್ದದಿಂದ ಬೈದು ಕಲ್ಲಿನಿಂದ ಹಲ್ಲೆ ನಡೆಸಿ ಬೆದರಿಕೆ ನೀಡಿದ

ಹಿಂದು ಯುವಕನಿಗೆ ಮುಸ್ಲಿಂ ಯುವಕರಿಂದ  ಥಳಿತ | ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ | ಎರಡು ಕಡೆಯಿಂದ ದೂರು ದಾಖಲು Read More »

ಉಡುಪಿ : 20 ಲ.ರೂ. ಮಾದಕ ವಸ್ತು, ಕಾರು ವಶ

ಉಡುಪಿ : ಹೊಸ ವರ್ಷಾಚರಣೆ ಸಂದರ್ಭದ ಪಾರ್ಟಿಗಳಲ್ಲಿ ಮಾರಾಟ ಮಾಡಲು ಕರಾವಳಿಗೆ ತಂದಿದ್ದ ಅಪಾರ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೆ ಸೇತುವೆ ಬಳಿ ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರಿಂದ ಮಾದಕ ವಸ್ತು ಮತ್ತು ಕಾರಿನ ಸಹಿತ 20,11,900 ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋಟೆ ಗ್ರಾಮದ ಕಟಪಾಡಿ ಕಾಪು ನಿವಾಸಿ

ಉಡುಪಿ : 20 ಲ.ರೂ. ಮಾದಕ ವಸ್ತು, ಕಾರು ವಶ Read More »

ಆತ್ಮಹತ್ಯೆಗೆ ಯತ್ನಿಸಿದವ ನೇಣಿನ ಹಗ್ಗ ತುಂಡಾಗಿ ಬಿದ್ದು ಸಾವು

ಮಣಿಪಾಲ : ನೇಣು ಹಾಕಿಕೊಂಡು ಆತ್ನಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರು ನೇಣಿನ ಹಗ್ಗ ತುಂಡಾಗಿ ಬಿದ್ದು ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ಸೋಮವಾರ ಸಂಭವಿಸಿದೆ. ಮಣಿಪಾಲದ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯ ಎಫ್.ಜೆ.ಎ.ಫೆರ್ನಾಂಡಿಸ್ ಎಂಬವರ ಮಗ ಮೆಲ್ರಾಯ್(55) ವಿಚಿತ್ರ ರೀತಿಯಲ್ಲಿ ಸಾವಿಗೀಡಾದ ವ್ಯಕ್ತಿ. ಇವರು ಮನೆಯ ಮೊದಲ ಅಂತಸ್ತಿನ ಮೇಲ್ಛಾವಣೆಯ ಕಬ್ಬಿಣದ ಅಡ್ಡಪಟ್ಟಿಗೆ ನೇಣು ಬೀಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನೇಣು ಕುಣಿಕೆಯಲ್ಲಿ ಉಸಿರುಕಟ್ಟಿ ನರಳಾಡುತ್ತಿದ್ದಾಗ ಅವರ ದೇಹದ ಭಾರಕ್ಕೆ ನೇಣಿನ ಹಗ್ಗ ತುಂಡಾಗಿದೆ. ಪರಿಣಾಮ ಮೆಲ್ರಾಯ್ ಸುಮಾರು 20

ಆತ್ಮಹತ್ಯೆಗೆ ಯತ್ನಿಸಿದವ ನೇಣಿನ ಹಗ್ಗ ತುಂಡಾಗಿ ಬಿದ್ದು ಸಾವು Read More »

ತಿಗಣೆ ಕಡಿದಿದ್ದಕ್ಕೆ 1.29 ಲ.ರೂ. ಪರಿಹಾರ !

ಖಾಸಗಿ ಬಸ್‌ ವಿರುದ್ಧ ಹೋರಾಡಿ ಗೆದ್ದ ಮಹಿಳೆ ಮಂಗಳೂರು : ಖಾಸಗಿ ಬಸ್‌ನಲ್ಲಿ ತಿಗಣೆ ಕಡಿದು ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರಿಗೆ ಬರೋಬ್ಬರಿ 1.29 ಲ.ರೂ. ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ನಲ್ಲಿ ರಾತ್ರಿ ವೇಳೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ತಿಗಣೆ ಕಚ್ಚಿ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿದ್ದ ಪ್ರಕರಣಕ್ಕೆ ಸಂಬಂಧಪಟ್ಟು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ಬಸ್ ಮಾಲಕರಿಗೆ ಈ ಆದೇಶ ನೀಡಿದೆ. ಘಟನೆ ಬಗ್ಗೆ ಮಹಿಳೆ

ತಿಗಣೆ ಕಡಿದಿದ್ದಕ್ಕೆ 1.29 ಲ.ರೂ. ಪರಿಹಾರ ! Read More »

ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಪುತ್ತೂರು : ಪುತ್ತೂರಿನ ಹೈಸ್ಕೂಲ್ ನಲ್ಲಿ ವ್ಯಾಸಂಗ ಪಡೆಯುತ್ತಿದ್ದ ವಿದ್ಯಾರ್ಥಿನಿ ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.  ವಿದ್ಯಾರ್ಥಿನಿ  ಗಂಭೀರವಾಗಿ ಅಸ್ವಸ್ಥಗೊಂಡಿದ್ದಾಳೆಂದು ತಿಳಿದು ಬಂದಿದೆ. ಶಾಲಾ ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಮನನೊಂದು ಈ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಸಂತ್ರಸ್ತೆಯ  ತಂದೆ ಆರೋಪಿಸಿದ್ದಾರೆ. ಮಗಳು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ಸದ್ಯ ಪಡೀಲುನಲ್ಲಿದ್ದು ಪುತ್ತೂರು ನಗರದಲ್ಲಿರುವ ಸರಕಾರಿ ಪ್ರೌಢ ಶಾಲೆಯೊಂದರಲ್ಲಿ ಓದುತ್ತಿರುವ

ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ Read More »

error: Content is protected !!
Scroll to Top