ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಬಾಲಕಿ ಸಾವು; ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಲ್ಲೇರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾಳನ್ನು ಕುಳ್ಳಿರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ವೇಣೂರು ಮೂಲದ ಶಿವಪ್ರಸಾದ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಸುಹೈರಾ ಮತ್ತಾಕೆಯ ತಾಯಿ ಸಾಜಿರಾ […]

ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಬಾಲಕಿ ಸಾವು; ಇಬ್ಬರಿಗೆ ಗಾಯ Read More »

ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳೆ

ಗಂಡನನ್ನು ಅರೆಸ್ಟ್‌ ಮಾಡಿ ಬಿಡುಗಡೆ ಮಾಡಲು ಲೈಂಗಿಕ ಪೀಡನೆ ಎಂದು ಗಂಭೀರ ಆರೋಪ ಮಂಗಳೂರು: ಮೂಡುಬಿದಿರೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಗೃಹಿಣಿಯೊಬ್ಬರು ಮಾಡಿರುವ ಲೈಂಗಿಕ ಕಿರುಕುಳ ಆರೋಪ ಭಾರಿ ಸಂಚಲನವುಂಟು ಮಾಡಿದೆ. ಮಹಿಳೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪೊಲೀಸ್‌ ಅಧಿಕಾರಿಯ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಸಂದರ್ಶನದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಕಾರ್ಯಕರ್ತರಾಗಿದ್ದ ತನ್ನ ಗಂಡನನ್ನು ಅರೆಸ್ಟ್‌ ಮಾಡಿ ಬಿಡುಗಡೆ ಮಾಡಬೇಕಿದ್ದರೆ ನನ್ನ ಜೊತೆ ಸಹಕರಿಸು ಎಂದು ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ.

ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳೆ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಉಪ್ಪಿನಂಗಡಿ: ಪಾರದರ್ಶಕತೆಯಿಂದ ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಸಂಸ್ಥೆಗಳಿಗೆ ಜನರ ಬೆಂಬಲವಿದ್ದು ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಸೇವಾ ಕಾರ್ಯಗಳನ್ನು ನಡೆಸಲು ಕರ್ನಾಟಕ ಸೇವಾ ಭಾರತೀ ಸಂಸ್ಥೆಯು ಮಾರ್ಗದರ್ಶನ ನೀಡಲು ಬದ್ಧವಾಗಿದೆ ಎಂದು ಸೇವಾ ಭಾರತಿ ಸಂಸ್ಥೆಯ ದಕ್ಷಿಣ ಪ್ರಾಂತ್ಯದ ಸಂಚಾಲಕ ಕೆ. ಚೆನ್ನಯ್ಯ ಸ್ವಾಮಿ ದೇರೆಬೈಲು ತಿಳಿಸಿದರು. ಉಪ್ಪಿನಂಗಡಿಯ ಪಾತಾಳ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಸಿದ್ಧ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ರಾಜ್ಯದ ಹೊಟೇಲ್ ಉದ್ಯಮಕ್ಕೆ ಗ್ಯಾಸ್ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಸಂಘರ್ಷದ ಕಾರಣಕ್ಕೆ ರಾಜ್ಯದಲ್ಲೂ ‘ಗ್ಯಾಸ್ ಟ್ರಬಲ್’ ಸಮಸ್ಯೆ ತಲೆದೋರಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಟೇಲ್ ಉದ್ಯಮಕ್ಕೆ ಶಾಕ್ ನೀಡಿದೆ. ಸಚಿವ ಕೆ. ಎಚ್. ಮುನಿಯಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತೈಲ ಕಂಪನಿಗಳ ಜೊತೆ ಈಗಾಗಲೇ ಈ ಸಂಬಂಧ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿರುವ ಹೊಟೇಲ್‌ಗಳಿಗೆ ಸದ್ಯದ ಸ್ಥಿತಿಯಲ್ಲಿ ಗ್ಯಾಸ್ ಪೂರೈಕೆ ಕಷ್ಟಸಾಧ್ಯ ಎಂದಿದ್ದಾರೆ. ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು, ಏರ್‌ಲೈನ್ಸ್ ಮತ್ತು ರೈಲ್ವೆ ಕ್ಯಾಂಟೀನ್‌ಗಳಿಗೆ ಯಾವುದೇ ಅಡೆತಡೆ ಇಲ್ಲದೆ ಗ್ಯಾಸ್ ಪೂರೈಕೆಗೆ

ರಾಜ್ಯದ ಹೊಟೇಲ್ ಉದ್ಯಮಕ್ಕೆ ಗ್ಯಾಸ್ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು ಗೊತ್ತಾ? Read More »

ಕಬ್ಬಿನ ತೋಟದಲ್ಲಿ ಮಹಿಳೆಯ ಹತ್ಯೆ: ಆರೋಪಿ ಪೊಲೀಸ್ ವಶಕ್ಕೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಬ್ಬಿನ ತೋಟವೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ‌ಸುಜಾತಾ ಪವಾರ(34) ಎಂದು ಗುರುತಿಸಲಾಗಿದೆ. ಸುಜಾತಾರನ್ನು ಮಾ. 5 ರಂದು ಅಥಣಿ ಪಟ್ಟಣದ ಪ್ರದೀಪ್ ಗುಂಡ ಎಂಬವರ ಕಬ್ಬಿನ ತೋಟದಲ್ಲಿ ಹತ್ಯೆ ಮಾಡಲಾಗಿದೆ. ಸುಜಾತಾ ತನ್ನ ಗಂಡನ ಜೊತೆಗೆ ಸಂಬಂಧ ಮುರಿದುಕೊಂಡು ‌ಅಥಣಿಯ ತನ್ನ ತವರಿನಲ್ಲಿ ಜೀವನ ನಡೆಸುತ್ತಿದ್ದರು. ಈ‌ ಸಂದರ್ಭದಲ್ಲಿ ಕುಮಾರ್ ಹವಾಲ್ದಾರ್ ಎಂಬಾತನ ಜೊತೆಗೆ ಆಕೆಗೆ ನಂಟು ಬೆಳೆದಿತ್ತು. ಮಹಿಳೆಯ ಆಸ್ತಿ ಕಬಳಿಸಿ ಕುಮಾರ್

ಕಬ್ಬಿನ ತೋಟದಲ್ಲಿ ಮಹಿಳೆಯ ಹತ್ಯೆ: ಆರೋಪಿ ಪೊಲೀಸ್ ವಶಕ್ಕೆ Read More »

ಸದನದಲ್ಲಿ ‌ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು: ಶಾಸಕರು ಪ್ರಶ್ನೆಗಳಿಗೆ ವಿಧಾನಸಭಾ ಅಧಿವೇಶನದಲ್ಲಿ ಸಚಿವರು ಸೂಕ್ತ ಉತ್ತರ ನೀಡದೇ ಇದ್ದು, ಸಚಿವರ ನಡೆಗೆ ಅಸಮಾಧಾನ ಸೂಚಿಸಿ ಸ್ಪೀಕರ್ ಯು.ಟಿ. ಖಾದರ್ ಸದನ ಮುಗಿಸಲು ಕಾಲ ಮಿತಿ ನೀಡದೆ ಪೀಠ ಬಿಟ್ಟು ನಡೆದ ಘಟನೆ ನಡೆದಿದೆ. ಸಚಿವ ಪರಮೇಶ್ವರ್ ಅವರು ಸದನದಲ್ಲಿ ಉತ್ತರ ಮಂಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಿಪಕ್ಷ ಸದಸ್ಯರು ಟೀಕೆ ಆರಂಭ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿರೋಧ ವ್ಯಕ್ತಪಡಿಸಿ, ನಿಯಮಾವಳಿಗಳನ್ನು ಸರ್ಕಾರ ಪಾಲನೆ ಮಾಡುತ್ತಿಲ್ಲ. ಸದನದಲ್ಲಿ ನಿರ್ಧಿಷ್ಟ ಉತ್ತರ

ಸದನದಲ್ಲಿ ‌ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್ Read More »

ಆಸ್ತಿಗಾಗಿ ಅಣ್ಣನನ್ನೇ ಕೊಂದ ಪಾಪಿ ಪೊಲೀಸ್ ವಶಕ್ಕೆ

ವಿಜಯನಗರ: ಆಸ್ತಿಗಾಗಿ ‌ತಮ್ಮನೇ ತನ್ನ ಅಣ್ಣನನ್ನು ‌ಸಂಬಂಧಿಯೊಬ್ಬನ ಸಹಾಯದಿಂದ ಕೊಲೆ‌ ಮಾಡಿರುವ ಘಟನೆ ಹರಪ್ಪನಹಳ್ಳಿಯಲ್ಲಿ ‌ನಡೆದಿದೆ. ಕೊಲೆಯಾದವನನ್ನು ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್(26) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಪತ್ರಿಗೌಡ (24) ಮತ್ತು ಅವನ ಸಂಬಂಧಿ ನಾರಪ್ಪ (29) ಎಂದು ಗುರುತಿಸಲಾಗಿದೆ. ಪತ್ರಿಗೌಡ‌ನಿಗೆ ವಿಪರೀತ ಕುಡಿಯುವ ಚಟ ಇತ್ತು. ಆತ ಅಸ್ತಿಗಾಗಿ ಕೆಲ ಸಮಯದಿಂದ ತನ್ನ ತಾಯಿಯ ಜೊತೆಗೆ ಜಗಳವಾಡುತ್ತಿದ್ದ. ಹಾಗೆಯೇ ಕೆಲಸಕ್ಕಾಗಿ ಬೆಂಗಳೂರಿಗೆ ಹೋಗುವುದಾಗಿಯೂ ಜಗಳವಾಡಿದ್ದ. ಆ ಬಳಿಕ ಸಂಪೂರ್ಣ ಆಸ್ತಿ ತನಗೇ ಸೇರಬೇಕು ಎನ್ನುವ ಉದ್ದೇಶದಿಂದ ಅಣ್ಣನನ್ನು

ಆಸ್ತಿಗಾಗಿ ಅಣ್ಣನನ್ನೇ ಕೊಂದ ಪಾಪಿ ಪೊಲೀಸ್ ವಶಕ್ಕೆ Read More »

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ

ಕಡಬ: ತಾಲೂಕಿನ ಕುಟ್ರುಪ್ಪಾಡಿಯ ಯುವಕ ಸ್ಯಾಂಜೋ ಸುನಿಲ್ ಕೆಲ ದಿನಗಳ ಹಿಂದಷ್ಟೇ ಐರ್ಲೆಂಡಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿಗೆ ಸಂಬಂಧಿಸಿದ ಹಾಗೆ ಸಮಗ್ರ ರೀತಿಯಲ್ಲಿ ತನಿಖೆ ನಡೆಯಬೇಕು ಎಂದು ಕಡಬದಲ್ಲಿ ‌ನಿನ್ನೆ ನೂರಾರು ಮಂದಿ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದರು. ಕಡಬದ ‌ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್ ಮತ್ತು ಮಲಯಾಳಿ ಸಂಘಟನೆಗಳ ನೇತೃತ್ವದಲ್ಲಿ ಅನುಗ್ರಹ ಸಭಾಭವನದಿಂದ ‌ಸೈಂಟ್ ಜೋಕಿಮ್ಸ್ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾ ನಿರತರು, ಈ ಸಾವಿನ ಹಿಂದಿನ ಸತ್ಯಗಳು ಅನಾವರಣವಾಗಬೇಕು ಎಂದು ಆಗ್ರಹಿಸಿದರು. ಸಾಂಜೋ

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ Read More »

ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್ : ಆತಂಕದಲ್ಲಿ ‌ಸ್ಥಳೀಯರು

ಕಟಪಾಡಿ: ಗ್ಯಾಸ್‌ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆ ಕಟಪಾಡಿ ಸಮೀಪ ನ್ಯಾಷನಲ್ ಹೈವೇ 66 ರಲ್ಲಿ ನಡೆದಿದೆ. ಕಟಪಾಡಿ ಜಂಕ್ಷನ್ ಸಮೀಪ ನಡೆದಿರುವ ಈ ಘಟನೆಯಿಂದ ಸಾರ್ವಜನಿಕರಲ್ಲಿ ಗ್ಯಾಸ್ ಸೋರಿಕೆಯ ಭೀತಿ ಎದುರಾಗಿದೆ. ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನೆಯ ಕಾರಣಕ್ಕೆ ಹೆದ್ದಾರಿಯಲ್ಲಿ ವಾಹನಗಳು ಸಹ ಸಾಲುಗಟ್ಟಿ ‌ನಿಂತಿವೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಕಾಪು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್ : ಆತಂಕದಲ್ಲಿ ‌ಸ್ಥಳೀಯರು Read More »

ಅಪಾಯಕಾರಿ ವ್ಹೀಲಿಂಗ್: ಇಬ್ಬರು ಯುವಕರ ಬಂಧನ

ಹುಣಸೂರು: ಅಪಾಯಕಾರಿ ಎನ್ನುವ ರೀತಿಯಲ್ಲಿ ಬೈಕ್ ವ್ಹೀಲಿಂಗ್ ಮಾಡಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಇಬ್ಬರು ಯುವಕರು ಸದ್ಯ ಹುಣಸೂರು ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತರನ್ನು ಶಬ್ಬೀರ್ ‌ನಗರದ ನಿವಾಸಿ ಫುರ್ಸಾನ್ ಮತ್ತು ಅವನ ಗೆಳೆಯ ಎಂದು ಗುರುತಿಸಲಾಗಿದೆ. ಈ ಇಬ್ಬರು ಹುಣಸೂರು – ಮಡಿಕೇರಿ ಹೆದ್ದಾರಿಯ ಹಾಳಗೆರೆ ಸಮೀಪ ಬೈಕ್ ವ್ಹೀಲಿಂಗ್ ಮಾಡಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಗಳಲ್ಲಿ ಅಪ್ಲೋಡ್ ಮಾಡಿಕೊಂಡಿದ್ದರು. ಈ ಪ್ರಕರಣದ ಮಾಹಿತಿ ಪಡೆದ ಹುಣಸೂರು ಪೊಲೀಸರು, ಇದನ್ನು

ಅಪಾಯಕಾರಿ ವ್ಹೀಲಿಂಗ್: ಇಬ್ಬರು ಯುವಕರ ಬಂಧನ Read More »

error: Content is protected !!
Scroll to Top