ಬಂಟ್ವಾಳ : ರೈಲ್ವೆ ಹಳಿಯಲ್ಲಿ ನೆಟ್ಟಣ ವ್ಯಕ್ತಿಯ ಶವ ಪತ್ತೆ

ಕಡಬ: ಬಂಟ್ವಾಳ ತಾಲೂಕಿನ ಪುದು ಗ್ರಾಮದ ನೆತ್ತರಕೆರೆ ಸಮೀಪದ ರೈಲ್ವೆ ಹಳಿಯ ಬದಿಯ ಪೊದೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದು ಬಿಳಿನೆಲೆ ಗ್ರಾಮದ ನೆಟ್ಟಣ ನಿವಾಸಿ ದಿ. ಚಂದನ್ ಎಂಬವರ ಪುತ್ರ ಶಶಿಕುಮಾರ್ ಎಸ್.(40ವ.) ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಹಾಗೂ ಮಂಗಳೂರು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವ್ಯಕ್ತಿಯ ತಲೆಯ ಮೇಲೆ ಗಾಯವಾದ ಕುರುಹುಗಳು ಕಂಡುಬಂದಿದ್ದು, ರಕ್ತಸಿಕ್ತ ಮಾದರಿಯಲ್ಲಿರುವ ಶವವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಶಿಕುಮಾರ್ ಅವರು […]

ಬಂಟ್ವಾಳ : ರೈಲ್ವೆ ಹಳಿಯಲ್ಲಿ ನೆಟ್ಟಣ ವ್ಯಕ್ತಿಯ ಶವ ಪತ್ತೆ Read More »

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಆರು ತಿಂಗಳ ಸೆರೆವಾಸದ ಬಳಿಕ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ನಿನ್ನೆಯೇ ಬಿಡುಗಡೆಯಾಗಬೇಕಿದ್ದರೂ ಕಾನೂನಿನ ವಿಧಿವಿಧಾನಗಳು ಪೂರ್ಣಗೊಳ್ಳದ ಕಾರಣ ಒಂದು ದಿನ ತಡವಾಗಿ ಜೈಲಿನಿಂದ ಹೊರಬರಬೇಕಾಯಿತು. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ Read More »

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ?

ಮೂರು ದಿನಗಳಿಂದ ಕಾಣಿಸದ ಸ್ನೇಹಮಯಿ ಕೃಷ್ಣ; ಮೊಬೈಲ್‌ ಸ್ವಿಚ್‌ ಆಫ್‌ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದು ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸ್ನೇಹಮಯಿ ಕೃಷ್ಣ ಅವರ ದೂರಿನಿಂದಾಗಿ ಮುಡಾದಲ್ಲಾಗಿರುವ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿತ್ತು. ದಿನಕ್ಕೊಂದರಂತೆ ದಾಖಲೆಗಳನ್ನು ಬಿಡುಗಡೆ ಮಾಡಿ ಸ್ನೇಹಮಯಿ ಕೃಷ್ಣ ಬಲಿಷ್ಠ ಕಾಂಗ್ರೆಸ್‌ ಸರಕಾರದ ವಿರುದ್ಧ ಸಮರವನ್ನೇ ಸಾರಿದ್ದರು. ಆ ಬಳಿಕ

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ? Read More »

ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಹೊಸದಿಲ್ಲಿ: ವೃಕ್ಷಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ದಾರಿದೀಪವಾಗಿದ್ದ ತುಳಸಿ ಗೌಡ ಜೀವನ ನಮಗೆಲ್ಲ ಪ್ರೇರಣೆಯಾಗಲಿ ಎಂದು ಮೋದಿ ಸಂತಾಪ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಕರ್ನಾಟಕದ ಖ್ಯಾತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸುವುದಕ್ಕಾಗಿ ಅವರು ಜೀವನವನ್ನೇ ಮುಡಿಪಾಗಿಟ್ಟರು. ಪರಿಸರ ಸಂರಕ್ಷಣೆ ವಿಚಾರದಲ್ಲಿ ಅವರು ಇನ್ನು ಮುಂದೆಯೂ ನಮಗೆ ದಾರಿದೀಪವಾಗಿ

ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ Read More »

ಅಕ್ಷಯ ಕಾಲೇಜಿನಲ್ಲಿ ಎನ್ ಎಸ್ ಎಸ್ ಸಹಯೋಗದಿಂದ ಸೇವಾಧಾಮ ಸೇವಾಭಾರತಿ ಪುನರ್ವಸತಿ ಮಾಹಿತಿ ಕಾರ್ಯಾಗಾರ

ಪುತ್ತೂರು : ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಸೇವಾಧಾಮ ಸೇವಾಭಾರತಿ  ಪುನರ್ವಸತಿ ಮಾಹಿತಿ ಕಾರ್ಯಾಗಾರ ನಡೆಯಿತು. ಸೇವಾಭಾರತಿ  ಪುನರ್ವಸತಿ ಕೇಂದ್ರ ವತಿಯಿಂದ  ಬೆನ್ನೆಲುಬು  ಸಂಬಂಧಿಸಿದ  ಸಮಸ್ಯೆಗಳು  , ಅಂಗವಿಕಲತೆ, ಬೆನ್ನುರಿಗೆ  ಕಾರಣಗಳು  ಮತ್ತು  ಪರಿಹಾರದ  ಬಗ್ಗೆ ಮಾಹಿತಿ  ಕಾರ್ಯಗಾರ ಆಯೋಜಿಸಲಾಗಿತ್ತು.         ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವ್ಯವಸ್ಥಾಪಕ ಸೇವಾಭಾರತಿ  ಸೇವಾಧಾಮ ಚರಣ್ ಕುಮಾರ್ ರವರು ಸೇವಾಭಾರತಿ  ಪುನರ್ವಸತಿ ಕೇಂದ್ರ ವತಿಯಿಂದ ಲಭ್ಯ ವಾಗುವ ಸೇವೆಗಳ  ಕುರಿತು ಮಾಹಿತಿ ಕಾರ್ಯಾಗಾರ  ನಡೆಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸೇವಾ

ಅಕ್ಷಯ ಕಾಲೇಜಿನಲ್ಲಿ ಎನ್ ಎಸ್ ಎಸ್ ಸಹಯೋಗದಿಂದ ಸೇವಾಧಾಮ ಸೇವಾಭಾರತಿ ಪುನರ್ವಸತಿ ಮಾಹಿತಿ ಕಾರ್ಯಾಗಾರ Read More »

ಶಬರಿಮಲೆ ಸನ್ನಿಧಾನದಲ್ಲೇ ಅಯ್ಯಪ್ಪ ವ್ರತಧಾರಿ ಆತ್ಮಹತ್ಯೆ

ಶಬರಿಮಲೆ : ಅಯ್ಯಪ್ಪ ವ್ರತಧಾರಿಯೊಬ್ಬರು ಶಬರಿಮಲೆ ಸನ್ನಿಧಾನದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಭಕ್ತನನ್ನು ಕರ್ನಾಟಕದ ಕನಕಪುರ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಸಾವಿರಾರು ಭಕ್ತರ ಮುಂದೆಯೇ ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತುಪ್ಪದ ಅಭಿಷೇಕ ಕೌಂಟರ್‌ ಮಂಟಪದ ಮೇಲಿನಿಂದ ಅವರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ವೀಡಿಯೊ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿ ಈಗ ವೈರಲ್‌ ಆಗಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಕುಮಾರಸ್ವಾಮಿ ಆತ್ಮಹತ್ಯೆಗೆ

ಶಬರಿಮಲೆ ಸನ್ನಿಧಾನದಲ್ಲೇ ಅಯ್ಯಪ್ಪ ವ್ರತಧಾರಿ ಆತ್ಮಹತ್ಯೆ Read More »

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ

ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಉದ್ದೇಶ ಹೊಂದಿರುವ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವ ನಿರೀಕ್ಷೆಯಿದೆ. ನಂತರ ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಶಿಫಾರಸು ಮಾಡುವಂತೆ ಮೇಘವಾಲ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ.

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ Read More »

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಮೊಬೈಲ್‍ ನಲ್ಲಿ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿ ಜೀವನ ಮಾಡಿಕೊಂಡಿದ್ದ ಪುರುಷೋತ್ತಮ್ ತನ್ನ ಮೊಬೈಲ್ ಸ್ಟೇಟಸ್ ನಲ್ಲಿ “ಓಂ ಶಾಂತಿ ಎನ್ನ ಜೋಕ್ಲೆನ್ ಸೋಕುಡು ತೂವೆನ್ಲೆ ಅಣ್ಣ” ಎಂದು ಬರೆದು ಹಾಕಿ ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಸಾಧಕರ ಸಾಧನೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ : ಪಿ.ಜಿ. ಸತ್ಯನಾರಾಯಣ ಪ್ರಸಾದ್ | ಜಿಲ್ಲಾ ಮಟ್ಟದ ಜ್ಯೂನಿಯರ್ ಚೆಸ್ ಪಂದ್ಯಾಟ

ಪುತ್ತೂರು: ಚದುರಂಗದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಮಂದಿ ಸಾಧನೆಯನ್ನು ಮೆರೆದಿದ್ದಾರೆ. ಇದಕ್ಕೆ ಡಿ. ಗುಕೇಶ್ ಅವರು ಜಲ್ವಂತ ಸಾಕ್ಷಿಯಾಗಿದ್ದಾರೆ. ಸಾಧಕರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಚದುರಂಗಾಟದಲ್ಲಿ ಶೌರ್ಯವನ್ನು ಮೆರೆಯಬೇಕು ಎಂದು ಸುಳ್ಯದ ಕಲ್ಮಡದ ಬಿ ಎಫ್ ಸಿ ಎ ನಿರ್ದೇಶಕ ಪಿ. ಜಿ. ಸತ್ಯನಾರಾಯಣ ಪ್ರಸಾದ್ ಹೇಳಿದರು. ಅವರು ವಿವೇಕಾನಂದ  ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಐಕ್ಯುಎಸಿ ಘಟಕ ಹಾಗೂ ಸುಳ್ಯದ ಕಲ್ಮಡ್ಕದ ಬಾಬಿ ಫಿಶರ್ಸ್ ಚೆಸ್ ಅಸೋಸಿಯೇಶನ್ ನ ಆಶ್ರಯದಲ್ಲಿ

ಸಾಧಕರ ಸಾಧನೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ : ಪಿ.ಜಿ. ಸತ್ಯನಾರಾಯಣ ಪ್ರಸಾದ್ | ಜಿಲ್ಲಾ ಮಟ್ಟದ ಜ್ಯೂನಿಯರ್ ಚೆಸ್ ಪಂದ್ಯಾಟ Read More »

ರೆಸಾರ್ಟ್‌ನೊಳಗೆ 12 ಭಾರತೀಯರು ಶವವಾಗಿ ಪತ್ತೆ

ಕಾರ್ಬನ್‌ ಮೊನೊಕ್ಸೈಡ್‌ ಅನಿಲ ಸೋರಿಕೆಯಿಂದ ಸಾವು ಸಂಭವಿಸಿದ ಶಂಕೆ ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪರ್ವತದ ರೆಸಾರ್ಟ್‌ನ ರೆಸ್ಟೋರೆಂಟ್‌ನಲ್ಲಿ 12 ಭಾರತೀಯ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಬನ್ ಮೊನೊಕ್ಸೈಡ್ ವಿಷಾನಿಲದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಜಾರ್ಜಿಯಾ ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ. ಮೃತರೆಲ್ಲ ಈ ರೆಸಾರ್ಟ್‌ನ ನೌಕರರು. ರಾತ್ರಿ ಕರೆಂಟ್‌ ಹೋದಾಗ ಕೋಣೆಯ ಮೂಲೆಯಲ್ಲಿದ್ದ ಜನರೇಟರ್‌ ಸ್ಟಾರ್ಟ್‌ ಮಾಡಿದ್ದು, ಇದರಿಂದ ಹೊರಸೂಸಿದ ಕಾರ್ಬನ್‌ ಮೊನೊಕ್ಸೈಡ್‌ ಅನಿಲ ಸೇವಿಸಿ ಅವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ರೆಸಾರ್ಟ್‌ ಮಾಲಕನ ವಿರುದ್ಧ ನಿರುದ್ದೇಶದ

ರೆಸಾರ್ಟ್‌ನೊಳಗೆ 12 ಭಾರತೀಯರು ಶವವಾಗಿ ಪತ್ತೆ Read More »

error: Content is protected !!
Scroll to Top