ವಕ್ಫ್‌ ವರದಿ ಬಹಿರಂಗಪಡಿಸದಂತೆ ಲಂಚದ ಆಮಿಷವೊಡ್ಡಿದ್ದು ಕಾಂಗ್ರೆಸ್ಸಿನವರು : ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟನೆ

ವಿಜಯೇಂದ್ರ ಮೇಲೆ ಮಾಡಿದ ಆರೋಪ ಕಾಂಗ್ರೆಸ್‌ಗೆ ತಿರುಗುಬಾಣ ಮಂಗಳೂರು : ವಕ್ಫ್​ ಆಸ್ತಿ ಕಬಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅನ್ವರ್‌ ಮಾಣಿಪ್ಪಾಡಿ, ಸಿದ್ದರಾಮಯ್ಯ ಹೇಳಿರುವುದು ಶೇ.90 ಸುಳ್ಳು. ಕಾಂಗ್ರೆಸ್​ನವರೇ ಲಂಚದ ಆಮಿಷವೊಡ್ಡಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.ಬಿ.ವೈ.ವಿಜಯೇಂದ್ರ ನನಗೆ ಯಾವುದೇ ಲಂಚದ ಅಮಿಷವೊಡ್ಡಿಲ್ಲ. 2012-13ರಲ್ಲಿ ವಿಜಯೇಂದ್ರ ಯಾರು ಅಂತಾನೆ ನನಗೆ ಗೊತ್ತಿರಲಿಲ್ಲ. ಅಂದು […]

ವಕ್ಫ್‌ ವರದಿ ಬಹಿರಂಗಪಡಿಸದಂತೆ ಲಂಚದ ಆಮಿಷವೊಡ್ಡಿದ್ದು ಕಾಂಗ್ರೆಸ್ಸಿನವರು : ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟನೆ Read More »

ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ನೂತನ ‘ಸಾವರ್ಕರ್’ ಸಭಾಭವನ ಉದ್ಘಾಟನೆ

ಪುತ್ತೂರು: ವಿನಾಯಕ ದಾಮೋದರ ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ. ಅವರ ಜೀವನ ಚರಿತ್ರೆಯನ್ನು ಸರಿಯಾಗಿ ಓದದವರು ಮಾತ್ರ ಸಾವರ್ಕರ್ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಲು ಸಾಧ್ಯ. ಅವರನ್ನು ಸರಿಯಾಗಿ ತಿಳಿದವರಿಗೆ ಈ ಪ್ರಶ್ನೆ ಬರಲು ಸಾಧ್ಯವೇ ಇಲ್ಲ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಸಾವರ್ಕರ್ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ

ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ನೂತನ ‘ಸಾವರ್ಕರ್’ ಸಭಾಭವನ ಉದ್ಘಾಟನೆ Read More »

ವೇತನ ವಿಳಂಬ, ಕಡಿತ | ಪುತ್ತೂರು ಕೆಎಸ್‍ ಆರ್ ಟಿಸಿ ಹೊರಗುತ್ತಿಗೆ ಚಾಲಕರಿಂದ ಮುಷ್ಕರ

ಪುತ್ತೂರು: ವೇತನ ಪಾವತಿ ವಿಳಂಬ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳ ನಡೆಯನ್ನು ವಿರೋಧಿಸಿ ಪುತ್ತೂರು ಕೆಎಸ್‌ ಆರ್‌ ಟಿಸಿ ಹೊರಗುತ್ತಿಗೆ ಚಾಲಕರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಮುಷ್ಕರದ ಪರಿಣಾಮ ಪ್ರಯಾಣಿಕರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದಲ್ಲಿ ಹತ್ತು ಮಂದಿ ಚಾಲಕರು ಪನ್ನಗ ಮತ್ತು ಪೂಜಾಯ ಸೆಕ್ಯುರಿಟೀಸ್ ಎಂಬ ಸಂಸ್ಥೆಯ ಅಧೀನದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮಗೆ ನೀಡುವ ವೇತನದಲ್ಲಿ ಪ್ರತಿ ತಿಂಗಳು ಒಬ್ಬೊಬ್ಬರಿಂದ 3000 ದಿಂದ 5000 ತನಕ ಕಡಿತ

ವೇತನ ವಿಳಂಬ, ಕಡಿತ | ಪುತ್ತೂರು ಕೆಎಸ್‍ ಆರ್ ಟಿಸಿ ಹೊರಗುತ್ತಿಗೆ ಚಾಲಕರಿಂದ ಮುಷ್ಕರ Read More »

ಕುಂಬ್ರ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆಯಲ್ಲಿ ನಡೆದಿದೆ. ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ (35) ಆತ್ಮಹತ್ಯ ಮಾಡಿಕೊಂಡವರು. ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕುಂಬ್ರ ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಸಾಹಿತ್ಯ ಸಮ್ಮೇಳನ : ಸಾಹಿತ್ಯಕ್ಕಿಂತ ಬಾಡೂಟದ ಚರ್ಚೆಯೇ ಜೋರು

ಸಮ್ಮೇಳನದಲ್ಲಿ ಮಾಂಸಾಹಾರವೂ ಇರಬೇಕೆಂಬ ಬಲವಾದ ಬೇಡಿಕೆ ಬೆಂಗಳೂರು : ಮಂಡ್ಯದಲ್ಲಿ ಡಿ.20ರಿಂದ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಈಗ ಸಾಹಿತ್ಯಕ್ಕಿಂತ ಹೆಚ್ಚಾಗಿ ಬಾಡೂಟವೇ ಚರ್ಚೆಗೆ ಈಡಾಗಿದೆ. ಕಳೆದ ಕೆಲವು ವರ್ಷಗಳಿಂದ ಕನ್ನಡಿಗರ ಸಂಭ್ರಮದ ನುಡಿ ಜಾತ್ರೆಯಾಗಬೇಕಾಗಿದ್ದ ಸಾಹಿತ್ಯ ಸಮ್ಮೇಳನ ಬೇರೆ ಬೇರೆ ಕಾರಣಗಳಿಗೆ ವಿವಾದಗಳಿಗೆ ಗುರಿಯಾಗುತ್ತಿದೆ. ಸಮ್ಮೇಳನದ ಅಧ್ಯಕ್ಷರು, ಗೋಷ್ಠಿಗಳು, ಭಾಗವಹಿಸುವವರು, ಅವಕಾಶ ಪಡೆದವರು, ಅವಕಾಶ ವಂಚಿತರು…ಹೀಗೆ ಪ್ರತಿವರ್ಷ ಸಮ್ಮೇಳನಕ್ಕೆ ವಿವಾದ ಸುತ್ತಿಕೊಳ್ಳುತ್ತಲೇ ಇದೆ. ಅವುಗಳೆಲ್ಲ ಸಾಹಿತ್ಯಕ್ಕೆ ಸಂಬಂಧಪಟ್ಟ ವೈಚಾರಿಕ ವಿಚಾರಗಳಾದ

ಸಾಹಿತ್ಯ ಸಮ್ಮೇಳನ : ಸಾಹಿತ್ಯಕ್ಕಿಂತ ಬಾಡೂಟದ ಚರ್ಚೆಯೇ ಜೋರು Read More »

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ

ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ವೃತ್ತಿಪರ ಯಕ್ಷಗಾನ ಭಾಗವತೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಲೀಲಾವತಿ ಬೈಪಡಿತ್ತಾಯ (77) ಶನಿವಾರ ನಿಧನರಾಗಿದ್ದಾರೆ. ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ Read More »

ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ್‍ ಶೆಟ್ಟಿ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ

ಪುತ್ತೂರು: ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಹಿಂದಿನಿಂದಲೂ ಮುಂಚೂಣಿಯಲ್ಲಿತ್ತು. ದಕ್ಷಿಣ ಕನ್ನಡವನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆದಿದ್ದಾರೆ. ಕೆನರಾ ಬ್ಯಾಂಕ್, ವಿಜಯ ಬ್ಯಾಂಕ್, ಆಗಿನ ಸಿಂಡಿಕೇಟ್ ಬ್ಯಾಂಕುಗಳು ಪ್ರಾರಂಭಿಕ ಹಂತದಲ್ಲೇ ತುಂಬಾ ಹೆಸರು ಪಡೆದಿವೆ ಎಂದು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ  ಆಯೋಜಿಸಲಾದ ಎಚ್‍.ಆರ್.ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಹರಿ,

ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ್‍ ಶೆಟ್ಟಿ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ Read More »

ಟೆಕ್ಕಿ ಅತುಲ್‌ ಆತ್ಮಹತ್ಯೆ ಪ್ರಕರಣ : ಪತ್ನಿ ಹರ್ಯಾಣದಲ್ಲಿ ಸೆರೆ

ಹೆಂಡತಿಯ ಕಾಟ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡ ಅತುಲ್‌ ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್‌ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅವರ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಅತುಲ್‌ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್‌ ಸಿಂಘಾನಿಯಾ ಅರೆಸ್ಟ್‌ ಆಗಿದ್ದರು. ಈಗ ಹರ್ಯಾಣದ ಗುರುಗ್ರಾಮದಲ್ಲಿ ಅತುಲ್‌ ಪತ್ನಿ ನಿಖಿತಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಪತಿ

ಟೆಕ್ಕಿ ಅತುಲ್‌ ಆತ್ಮಹತ್ಯೆ ಪ್ರಕರಣ : ಪತ್ನಿ ಹರ್ಯಾಣದಲ್ಲಿ ಸೆರೆ Read More »

ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು

ಧೈರ್ಯವಿದ್ದರೆ ಮುಡಾ ಹಗರಣವನ್ನು ಸಿಬಿಐಗೊಪ್ಪಿಸಿ ಎಂದು ಸವಾಲು ಬೆಂಗಳೂರು: ವಕ್ಪ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಗೋಚರಿಸುತ್ತಿಲ್ಲ. ಬಿಜೆಪಿಗರು ತಮ್ಮ ವಿರುದ್ಧ ಮಾಡಿದ ಆರೋಪಗಳನ್ನೇ ಕಾಂಗ್ರೆಸಿಗರು ತಿರುಗಿಸಿ ಹೊಡೆಯಲು ಬಳಸುತ್ತಿದ್ದಾರೆ. ನಿನ್ನೆಯಿಂದೀಚೆಗೆ ವಕ್ಫ್‌ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂಬ ಕಾಂಗ್ರೆಸ್‌ ಆರೋಪ ಸುದ್ದಿ ಮಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ

ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು Read More »

ಗಂಡು ಕಲೆಯಲ್ಲಿ ಮೆರೆದ ಹೆಣ್ಣು ಕಂಠ ಲೀಲಾವತಿ ಬೈಪಾಡಿತ್ತಾಯ

ಯಕ್ಷಗಾನದ ಹಿರಿಯಕ್ಕ ಖ್ಯಾತಿಯ ಪ್ರಥಮ ಮಹಿಳಾ ಭಾಗವತೆ ಕಲಾಲೀನ ಕಾರ್ಕಳ : ಹೆಣ್ಣುಮಕ್ಕಳು ಯಕ್ಷಗಾನ ನೋಡುವುದಕ್ಕೂ ಸಂಪ್ರದಾಯದ ಕಟ್ಟುಪಾಡುಗಳ ಬೇಲಿ ಇದ್ದ ಕಾಲದಲ್ಲಿ ಮಹಿಳೆಯೊಬ್ಬರು ಯಕ್ಷಗಾನ ಮೇಳದ ಪ್ರಧಾನ ಭಾಗವತರಾಗಿ ಮೇಳದೊಂದಿಗೆ ಊರೂರು ತಿರುಗಾಡಿ ಇಡೀ ರಾತ್ರಿ ವೇದಿಕೆಯಲ್ಲಿ ಹಾಡುತ್ತಾ ಪ್ರಸಂಗವನ್ನು ಮುನ್ನಡೆಸುತ್ತಿದ್ದರು ಎಂಬುದು ಆ ಕಾಲಕ್ಕೊಂದು ಅಚ್ಚರಿಯೇ ಆಗಿತ್ತು. ಗಂಡುಕಲೆಯೆಂದೇ ಅರಿಯಲ್ಪಡುವ ಯಕ್ಷಗಾನದಲ್ಲಿ ಹೆಣ್ಣು ಧ್ವನಿಯೊಂದು ಮೊಳಗಿ ಉಚ್ಛ್ರಾಯ ಸ್ಥಿತಿಗೆ ತಲುಪಿ ಯಕ್ಷಗಾನದ ಅಗಾಧ ಸಾಧ್ಯತೆಗಳಿಗೊಂದು ಮುನ್ನುಡಿ ಬರೆದಿತ್ತು. ಹೀಗೆ ವೃತ್ತಿಪರ ಮೇಳಗಳ ಮೊದಲ ಮಹಿಳಾ

ಗಂಡು ಕಲೆಯಲ್ಲಿ ಮೆರೆದ ಹೆಣ್ಣು ಕಂಠ ಲೀಲಾವತಿ ಬೈಪಾಡಿತ್ತಾಯ Read More »

error: Content is protected !!
Scroll to Top