ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್‍ ಕಳವು | ಆರೋಪಿಯ ಬಂಧನ

ಮಂಗಳೂರು: ಪಾರ್ಕ್‌ ಮಾಡಿದ್ದ ಕಾರಿನ ಗ್ಲಾಸ್ ಹೊಡೆದು 6,80,000ರೂ. ಬೆಲೆಬಾಳುವ ಚಿನ್ನಾಭರಣ, ಮತ್ತು ಲ್ಯಾಪ್ ಟಾಪನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ತೀವ್ರವಾಗಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಳವು ಮಾಡಿದ ಸೊತ್ತನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ. ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ […]

ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್‍ ಕಳವು | ಆರೋಪಿಯ ಬಂಧನ Read More »

ಕುದುರೆಮುಖ ರಕ್ಷಿತಾರಣ್ಯದಲ್ಲಿ ಕಡವೆ ಬೇಟೆ

ಅಪೂರ್ಣ ತನಿಖೆ ನಡೆಸಿದ ಆರೋಪ ಬೆಳ್ತಂಗಡಿ: ಕುದುರೆಮುಖ ರಕ್ಷಿತಾರಣ್ಯದಲ್ಲಿ ಭಾರಿ ಗಾತ್ರದ ಕಡವೆಯನ್ನು ಬೇಟೆಯಾಡಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಆದರೆ ಈ ಪ್ರಕರಣದಲ್ಲಿ ಅರಣ್ಯ ಇಲಾಖೆ ತನಿಖೆ ನಡೆಸಿದ ರೀತಿಗೆ ಅಪಸ್ವರ ವ್ಯಕ್ತವಾಗಿದೆ. ಕಡವೆ ಬೇಟೆಯಲ್ಲಿ ಹತ್ತು ಮಂದಿ ಶಾಮೀಲಾಗಿರುವ ಶಂಕೆಯಿದ್ದರೂ ಇಬ್ಬರ ವಿರುದ್ಧ ಮಾತ್ರ ಕೇಸ್‌ ದಾಖಲಾಗಿದೆ. ಈ ಇಬ್ಬರೂ ಈಗ ತಲೆಮರೆಸಿಕೊಂಡಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ 28ರಂದು ಕಡವೆ ಬೇಟೆಯಾಡಲಾಗಿದೆ. ಪ್ರಕರಣದಲ್ಲಿ

ಕುದುರೆಮುಖ ರಕ್ಷಿತಾರಣ್ಯದಲ್ಲಿ ಕಡವೆ ಬೇಟೆ Read More »

ಡಿ.28-29: ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ : ಕಡಬ ತಾಲೂಕು ಸಮಿತಿ ರಚನೆ

ಪುತ್ತೂರು : ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ  ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು  ನಡೆಯಲಿದ್ದು, ಈ ನಿಟ್ಟಿನಲ್ಲಿ ಕಡಬ ತಾಲೂಕು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ವೆಂಕಟ್ರಮಣ ಕಡಬ, ಅಧ್ಯಕ್ಷರಾಗಿ ಜನಾರ್ದನ ರಾವ್ ಕಡಬ , ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ದಾಸ್ ಪೂಂಜಾ ಕುಂತೂರು ಹಾಗೂ ಕಾರ್ಯದರ್ಶಿಯಾಗಿ ಗಿರೀಶ್ ಕಡಬ ಅವರನ್ನು ಆಯ್ಕೆ ಮಾಡಲಾಯಿತು. ಈ  ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ

ಡಿ.28-29: ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ : ಕಡಬ ತಾಲೂಕು ಸಮಿತಿ ರಚನೆ Read More »

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಉಡುಪಿ: ಮಹಿಳೆಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ನಡೆದಿದೆ. ಡಿಸೆಂಬರ್‍ 4 ರಂದು  ಮನೆಯಿಂದ ಹೊರಗೆ ಹೋದವರು ವಾಪಾಸು ಬರಲಿಲ್ಲ ಎಂದು ತಿಳೀದು ಬಂದಿದೆ ನಾಪತ್ತೆಯಾದವರನ್ನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನಾಪತ್ತೆಯಾದವರು ಎಂದು

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ Read More »

ವಿರಾಸತ್‌ ಭವ್ಯ ಮೆರವಣಿಗೆ : ಧರೆಗಿಳಿದು ಬಂದ ಕಲಾಲೋಕ

ದೇಶ-ವಿದೇಶಗಳ ಅದ್ಭುತ ಕಲಾಪರಂಪರೆ ಮೂಡುಬಿದಿರೆಯಲ್ಲಿ ಅನಾವರಣ ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ನಡೆದ ದೇಶ-ವಿದೇಶಗಳ ಅದ್ಭುತ ಕಲಾಪರಂಪರೆಯನ್ನು ಧರೆಗಿಳಿಸಿ ಸಾರ್ಥಕವಾಯಿತು. ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ, ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಂದಂತೆ ಭಾಸವಾಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳು ಮಾತ್ರವಲ್ಲದೆ ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು.

ವಿರಾಸತ್‌ ಭವ್ಯ ಮೆರವಣಿಗೆ : ಧರೆಗಿಳಿದು ಬಂದ ಕಲಾಲೋಕ Read More »

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ

ಕೊಯ್ಯರು: ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ, ಕದ್ದೊಯ್ದ ಚಿನ್ನದ ಕರಿಮಣಿ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯರು ಗ್ರಾಮದ ಗಿರಿಗುಡ್ಡೆ, ಡೆಂಬುಗ ನಿವಾಸಿ ಉಮೇಶ್ ಗೌಡ(38) ಆರೋಪಿ ಎಂದು ತಿಳಿದು ಬಂದಿದ್ದು, ಆತನನ್ನು ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡದ ಸಿಬ್ಬಂದಿಗಳು ಕೊಯ್ಯರು ಗ್ರಾಮದ ಆದೂರ್ ಪೆರಲ್ ಬಸ್ ನಿಲ್ದಾಣದಲ್ಲಿ

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ Read More »

ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್‌ ವಶ

39ಕ್ಕೂ ಅಧಿಕ ಪ್ರಕರಣಗಳಿರುವ ಕುಖ್ಯಾತ ಕಳ್ಳರು 24 ತಾಸೊಳಗೆ ಅರೆಸ್ಟ್‌ ಮಂಗಳೂರು : ಕಾರ್ಕಳದಲ್ಲಿ ಕಳೆದ ಡಿ.9ರಂದು ನಡೆದ ಸರಗಳ್ಳತನ ಕೃತ್ಯದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡ ಪರಾರಿಯಾದ ಪ್ರಕರಣಗಳ ಆರೋಪಿಗಳು ಇವರು ಎಂದು ಮಂಗಳೂರು ಪೊಲೀಸರು ತಿಳಿಸಿದ್ದಾರೆ. ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನದ

ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್‌ ವಶ Read More »

ಶಿರೂರು ಭೂಕುಸಿತ ದುರಂತ : ಐದು ತಿಂಗಳು ಕಳೆದರೂ ಸಿಕ್ಕಿಲ್ಲ ಎರಡು ಶವ

ಪರಿಹಾರ ಕಾರ್ಯಾಚರಣೆಯಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಭೀಕರ ಭೂಕುಸಿತ ಸಂಭವಿಸಿ ಐದು ತಿಂಗಳೇ ಕಳೆದು ಹೋದರೂ ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ಕಳೆದ ಜುಲೈ 16ರಂದು ಭೀಕರ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಇಡೀ ಒಂದು ಬೆಟ್ಟವೇ ಜಾರಿ ಹೆದ್ದಾರಿಗೆ ಬಿದ್ದು, ರಸ್ತೆ ಬದಿಯಲ್ಲಿದ್ದ ಒಂದು ಚಿಕ್ಕ ಚಹಾದಂಗಡಿ, ಅದರ ಪಕ್ಕ ನಿಂತಿದ್ದ ಲಾರಿ ಸಮೇತ ಪಂಚಗಂಗಾವಳಿ ನದಿಗೆ ದೂಡಿ ಹಾಕಿತ್ತು. ಈ ದುರಂತದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಕೇರಳದ ಲಾರಿಯೊಂದು

ಶಿರೂರು ಭೂಕುಸಿತ ದುರಂತ : ಐದು ತಿಂಗಳು ಕಳೆದರೂ ಸಿಕ್ಕಿಲ್ಲ ಎರಡು ಶವ Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಮತ್ತು 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಮೇಶ್ ಕೋಡಿಬೈಲು, ರವಿಚಂದ್ರ ಶೆಟ್ಟಿ ಪುತ್ತೂರು, ಮಹೇಂದ್ರ ವರ್ಮ, ಜನಾರ್ಧನ್ ರಾವ್ ಕಡಬ, ವೆಂಕಟರಮಣ ಕುತ್ಯಾಡಿ, ಸಂತೋಷ್ ಸುವರ್ಣ, ಸುರೇಶ್ ದುರ್ಗ ಗಣೇಶ್,

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಆಮಂತ್ರಣ ಬಿಡುಗಡೆ Read More »

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ

ಸಿದ್ದರಾಮಯ್ಯ, ಪ್ರಹ್ಲಾದ್‌ ಜೋಶಿ ಸಹಿತ ಗಣ್ಯರಿಂದ ಅಂತಿಮ ನಮನ ಬೆಂಗಳೂರು : ನಿನ್ನೆ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗ ಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ,

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ Read More »

error: Content is protected !!
Scroll to Top