ಬೆಳಗಾವಿ ಜಿಲ್ಲೆಯಲ್ಲೂ 29 ಬಾಣಂತಿಯರು, 322 ನವಜಾತ ಶಿಶುಗಳ ಸಾವು

ಅಧಿವೇಶನದ ಹೊತ್ತಿನಲ್ಲಿ ಸರಕಾರಕ್ಕೆ ಮುಜುಗರವಾಗುವ ಮಾಹಿತಿ ಬಹಿರಂಗ ಬೆಳಗಾವಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಮರ್ಪಕ ಚಿಕಿತ್ಸೆ ಸಿಗದೆ ಮೃತಪಟ್ಟಿರುವುದು ದೇಶವ್ಯಾಪಿಯಾಗಿ ಸುದ್ದಿಯಾಗಿ ಸರಕಾರ ತೀವ್ರ ಮುಜುಗರ ಅನುಭವಿಸುತ್ತಿರುವಾಗಲೇ ಬೆಳಗಾವಿಯ ವಿವಿಧ ಆಸ್ಪತ್ರೆಗಳಲ್ಲಿ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು 322 ಶಿಶುಗಳ ಮೃತಪಟ್ಟಿವೆ ಎಂಬ ಮಾಹಿತಿ ಹೊರಬಿದ್ದಿದೆ.ಬೆಳಗಾವಿಯಲ್ಲಿ ನಾಳೆಯಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ಬಾಣಂತಿಯುರ ಸಾವುಗಳ ಪ್ರಕರಣವನ್ನು ಪ್ರಸ್ತಾಪಿಸಿ ಸರಕಾರದ ಮೇಲೆ ದಾಳಿ ಮಾಡಲು ಸಿದ್ಧವಾಗಿರುವಾಗಲೇ ಸ್ವತಹ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ ಬೆಳಗಾವಿಯ […]

ಬೆಳಗಾವಿ ಜಿಲ್ಲೆಯಲ್ಲೂ 29 ಬಾಣಂತಿಯರು, 322 ನವಜಾತ ಶಿಶುಗಳ ಸಾವು Read More »

ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ : ಅರವಿಂದಚೊಕ್ಕಾಡಿ | ವಿದ್ಯಾಸ್ಪೂರ್ತಿ – 2024 ಉದ್ಘಾಟನೆ

ಪುತ್ತೂರು: ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್  ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಹಾಗೂ  ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ  ಶ್ರೀರಾಮ ಸಭಾಭವನದಲ್ಲಿ  ‘ವಿದ್ಯಾಸ್ಫೂರ್ತಿ – 2024’ ನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಾಹಿತಿ ಅರವಿಂದ ಚೊಕ್ಕಾಡಿ ಮಾತನಾಡಿ, ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ, ಎಷ್ಟು ಸಂಸ್ಕಾರ ಎನ್ನುವುದು ಯೋಚನೆ ಮತ್ತು ಯೋಜನೆಗಳಲ್ಲಿ ಕಾರ್ಯಗತವಾಗಬೇಕು. ವಿದ್ಯಾಸ್ಪೂರ್ತಿಯಂತಹ ಕಾರ್ಯಕ್ರಮಮ ಬಹು ವಿಧದ ಚಿಂತನೆಯಲ್ಲಿ ಸಹಕರಿಸುತ್ತದೆ ಎಂದುಹೇಳಿದರು. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಂಚಾಲಕ ಟಿ.

ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ : ಅರವಿಂದಚೊಕ್ಕಾಡಿ | ವಿದ್ಯಾಸ್ಪೂರ್ತಿ – 2024 ಉದ್ಘಾಟನೆ Read More »

ಪಾಕಿಸ್ಥಾನದಲ್ಲಿ 22 ಭಯೋತ್ಪಾದಕರ ಹತ್ಯೆ

ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ 6 ಸೈನಿಕರ ಸಾವು ಇಸ್ಲಾಮಾಬಾದ್‌: ವಾಯುವ್ಯ ಪಾಕಿಸ್ಥಾನದ ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದಲ್ಲಿ ಎರಡು ದಿನಗಳ ಕಾಲ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 22 ಭಯೋತ್ಪಾದಕರನ್ನು ಪಾಕಿಸ್ಥಾನದ ಭದ್ರತಾ ಪಡೆ ಹತ್ಯೆಗೈದಿದೆ. ಈ ಕಾರ್ಯಾಚರಣೆಯಲ್ಲಿ ಆರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ಥಾನದ ಸೇನೆಯ ಮಾಧ್ಯಮ ವಿಭಾಗ ತಿಳಿಸಿದೆ.ಗುಪ್ತಚರ ಮಾಹಿತಿ ಆಧಾರದ ಮೇಲೆ ಖೈಬರ್ ಪುಖ್ತುನ್‌ಖ್ವಾದ ಟ್ಯಾಂಕ್, ಉತ್ತರ ವಜಿರಿಸ್ಥಾನ್ ಮತ್ತು ಥಾಲ್ ಜಿಲ್ಲೆಗಳಲ್ಲಿ ಡಿ.6 ಮತ್ತು 7ರಂದು ಈ ಕಾರ್ಯಾಚರಣೆ ನಡೆಸಲಾಗಿದೆ. ಟ್ಯಾಂಕ್ ಜಿಲ್ಲೆಯಲ್ಲಿ,

ಪಾಕಿಸ್ಥಾನದಲ್ಲಿ 22 ಭಯೋತ್ಪಾದಕರ ಹತ್ಯೆ Read More »

ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಸಾವು : ಓರ್ವನ ರಕ್ಷಣೆ

ಕುಂದಾಪುರ ಕೋಡಿ ಬೀಚ್‌ನಲ್ಲಿ ಸಂಭವಿಸಿದ ದುರಂತ ಉಡುಪಿ: ಕುಂದಾಪುರದ ಕೋಡಿ ಬೀಚಿನಲ್ಲಿ ಈಜಾಡಲು ಸಮುದ್ರಕ್ಕಿಳಿದ ಮೂವರು ಸಹೋದರರ ಪೈಕಿ ಇಬ್ಬರು ಮುಳುಗಿ ಸಾವಿಗೀಡಾದ ದಾರುಣ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಓರ್ವನನ್ನು ರಕ್ಷಿಸಲಾಗಿದೆ.ಅಂಪಾರು ಐದು ಸೆಂಟ್ಸ್ ನಿವಾಸಿ ದಾಮೋದರ್ ಪ್ರಭು ಎಂಬವರ ಪುತ್ರರಾದ ಧನರಾಜ್ (23) ಮತ್ತು ದರ್ಶನ್ (18) ಸಾವನ್ನಪ್ಪಿದ್ದರೆ, ಇನ್ನೊಬ್ಬ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಯುವಕರು ಸಹೋದರರಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್

ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಸಾವು : ಓರ್ವನ ರಕ್ಷಣೆ Read More »

ಮಂಗಳೂರಿನಲ್ಲಿ ಕಲಿಯುತ್ತಿದ್ದ ಗೋಣಿಕೊಪ್ಪದ ಯುವಕ ನಿಗೂಢವಾಗಿ ನಾಪತ್ತೆ

ದೀಪಾವಳಿ ರಜೆ ಮುಗಿಸಿ ಕಾಲೇಜಿಗೆಂದು ಹೊರಟವ ಕಣ್ಮರೆ, ಊರೂರು ಅಲೆದು ಹುಡುಕುತ್ತಿರುವ ತಾಯಿ ಮಡಿಕೇರಿ: ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಮಡಿಕೇರಿಯ ದೀಕ್ಷಿತ್‌ (17) ಎಂಬ ಯುವಕ ಕಳೆದ ಸುಮಾರು ಒಂದು ತಿಂಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ದೀಪಾವಳಿ ಹಬ್ಬದ ರಜೆಯಲ್ಲಿ ಮನೆಗೆ ಬಂದಿದ್ದ ಯುವಕ ರಜೆ ಮುಗಿಸಿ ಕಾಲೇಜಿಗೆಂದು ಹೊರಟವ ಅತ್ತ ಹಾಸ್ಟೆಲ್‌ ತಲುಪದೆ ಇತ್ತ ಮನೆಗೂ ಬಾರದೆ ನಾಪತ್ತೆಯಾಗಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಗ ಕಾಣೆಯಾಗಿ ಒಂದು ತಿಂಗಳು ಕಳೆದರೂ

ಮಂಗಳೂರಿನಲ್ಲಿ ಕಲಿಯುತ್ತಿದ್ದ ಗೋಣಿಕೊಪ್ಪದ ಯುವಕ ನಿಗೂಢವಾಗಿ ನಾಪತ್ತೆ Read More »

ಡಿ.25 : ಕಡಬ ಹೊಸಮಠದಲ್ಲಿರುವ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಪೂರ್ವಭಾವಿ ಸಭೆ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಕಡಬದ ಹೊಸಮಠದಲ್ಲಿರುವ ನೂತನ ಸಮುದಾಯ ಭವನದಲ್ಲಿ ಡಿ.25 ರಂದು ನಡೆಯುವ ಸಂಘದ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಹಾಗೂ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಪೂರ್ವಭಾವಿ ಸಭೆ ಶನಿವಾರ ಕಡಬದಲ್ಲಿ ನಡೆಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಅಂದು ಬೆಳಿಗ್ಗೆ 7 ಗಂಟೆಗೆ ನಾಗ ತಂಬಿಲ ಹಾಗೂ

ಡಿ.25 : ಕಡಬ ಹೊಸಮಠದಲ್ಲಿರುವ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಪೂರ್ವಭಾವಿ ಸಭೆ Read More »

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ

ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ Read More »

ಮೊಬೈಲ್‍ ಟವರ್ ಬ್ಯಾಟರಿ ಕಳವು | ಆರೋಪಿ ಬಂಧನ

ಪುತ್ತೂರು  : ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್ ಮಾವಲೆಕೊಚ್ಚಿ ಎಂಬಲ್ಲಿ  ಮೊಬೈಲ್ ಟವರ್ ಬ್ಯಾಟರಿಗಳ ಕಳ್ಳತನವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪತ್ತೆಗಾಗಿ ರವಿ ಬಿ. ಎಸ್ ಪಿಐ ಪುತ್ತೂರು ಗ್ರಾಮಾಂತರ ಠಾಣೆಯ ನೇತೃತ್ವದಲ್ಲಿ ತನಿಖಾ ತಂಡವು ವಿವಿಧ ಆಯಾಮಗಳಲ್ಲಿ ಹಾಗೂ ತಾಂತ್ರಿಕ ಮಾಹಿತಿಯನ್ನಾಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.  ಹರೀಶ್ ನಾಯ್ಕ (30), ಕಾವಳಮುಡೂರು ಗ್ರಾಮ, ಬಂಟ್ವಾಳ ತಾಲೂಕು ಬಂಧಿತ ಅರೋಪಿ ಎಂದು ತಿಳಿದು

ಮೊಬೈಲ್‍ ಟವರ್ ಬ್ಯಾಟರಿ ಕಳವು | ಆರೋಪಿ ಬಂಧನ Read More »

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ, ಆಶ್ಲೇಷ ಪೂಜೆ, ನಾಗತಂಬಿಲ ಸೇವೆ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಷಷ್ಠಿ ಮಹೋತ್ಸವದ ಅಂಗವಾಗಿ ಪಂಚಮಿ ದಿನವಾದ ಶುಕ್ರವಾರ ಬೆಳಗ್ಗೆ ಭಕ್ತಾದಿಗಳಿಂದ ಮೂಲನಾಗನ ಕಟ್ಟೆಯಲ್ಲಿ ಆಶ್ಲೇಷ ಪೂಜೆ, ನಾಗತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಡೆದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 5 ರಿಂದ ನೃತ್ಯೋಪಾಸನಾ ಕಲಾ ಕೇಂದ್ರದ ವತಿಯಿಂದ ನೃತ್ಯೋಹಂ ಪ್ರದರ್ಶನಗೊಂಡಿತು. ಸಂಜೆ 6 ರಿಂದ ಬೆದ್ರಾಳ ಶ್ರೀ

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ, ಆಶ್ಲೇಷ ಪೂಜೆ, ನಾಗತಂಬಿಲ ಸೇವೆ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ | ಸಾವಿರಾರು ಮಂದಿ ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ 10 ರಿಂದ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ 3 ಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಜೆ 6 ರಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ | ಸಾವಿರಾರು ಮಂದಿ ಭಕ್ತರ ಪಾಲ್ಗೊಳ್ಳುವಿಕೆ Read More »

error: Content is protected !!
Scroll to Top