ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಪುತ್ತೂರು  : ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತಜಯಂತಿ 2024 ಅಂಗವಾಗಿ ಇಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಇಂದು  ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕರಾದ ಜಯಂತ್ ಕುಂಜೂರುಪಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ […]

ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ Read More »

ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು:  ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತೋಡಿನ ಸಮೀಪ ಸ್ಥಳೀಯ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೃತದೇಹ ಕಾಣಿಸಿದ್ದು ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಬಿಯರ್‌ ಬಾಟಲಿಯಿಂದ ಇರಿದು ಹೋಟೆಲ್‌ ಕಾರ್ಮಿಕನ ಹತ್ಯೆ

ಉಡುಪಿ: ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಕೊಲೆಗೈದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬ್ಯಾಕಸಿನ್ ರೆಸ್ಟೊರೆಂಟ್‌ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹೊನ್ನಾವರದ ಕಾಸರಕೋಡಿನ ನಿವಾಸಿ ಶ್ರೀಧರ ನಾಯಕ್ (38)ಎಂದು ಗುರುತಿಸಲಾಗಿದೆ. ಶ್ರೀಧರ ನಾಯಕ್ ಮಣಿಪಾಲ ಈಶ್ವರ ನಗರದ ಹೊಟೇಲ್ ಒಂದರ ಕುಕ್ ಆಗಿದ್ದರು ಎಂದು ತಿಳಿದುಬಂದಿದೆ. ಬೆಳಿಗ್ಗೆ 6 ಗಂಟೆ ವೇಳೆಗೆ ರಸ್ತೆಯಲ್ಲಿ ವಾಕಿಂಗ್‌ ಹೋದವರಿಗೆ ರಸ್ತೆ ಬದಿ ಬಿದ್ದಿದ್ದ ಶವ ಕಂಡು ಪೊಲೀಸರಿಗೆ ತಿಳಿಸಿದ್ದಾರೆ.

ಬಿಯರ್‌ ಬಾಟಲಿಯಿಂದ ಇರಿದು ಹೋಟೆಲ್‌ ಕಾರ್ಮಿಕನ ಹತ್ಯೆ Read More »

ಮುಡಾದಲ್ಲಿ ನಡೆದಿರುವುದು ಬರೋಬ್ಬರಿ 2800 ಕೋ. ರೂ. ಭ್ರಷ್ಟಾಚಾರ

4921 ನಿವೇಶನಗಳನ್ನು ಅಕ್ರಮವಾಗಿ ಹಂಚಿರುವ ಮಾಹಿತಿ ಇ.ಡಿ.ಗೆ ಲಭ್ಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾದಿಂದ ಅಕ್ರಮವಾಗಿ 14 ಸೈಟ್‌ಗಳನ್ನು ಪಡೆದುಕೊಂಡ ಪ್ರಕರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಈಗ ಮುಡಾದ ಬ್ರಹ್ಮಾಂಡ ಭ್ರಷ್ಟಾಚಾರವನ್ನೆಲ್ಲ ಬಯಲಿಗೆಳೆದಿದೆ. ಮುಡಾದಲ್ಲಿ ಆಗಿರುವುದು ಬರೀ 14 ಸೈಟ್‌ಗಳ ಅಕ್ರಮವಲ್ಲ, ಬರೋಬ್ಬರಿ 2800 ಕೋ. ರೂ. ಬೃಹತ್‌ ಅಕ್ರಮ ಎಂಬ ಅಂಶ ಇ.ಡಿ. ತನಿಖೆಯಿಂದ ಬಯಲಿಗೆ ಬಂದಿದೆ. ಕೆಲ ದಿನಗಳ ಹಿಂದೆ 1,095 ಸೈಟ್‌ಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ ತನಿಖೆ ಮುಂದುವರಿದಂತೆ

ಮುಡಾದಲ್ಲಿ ನಡೆದಿರುವುದು ಬರೋಬ್ಬರಿ 2800 ಕೋ. ರೂ. ಭ್ರಷ್ಟಾಚಾರ Read More »

ಶೀಘ್ರದಲ್ಲೇ ಪುತ್ತೂರಿನಲ್ಲಿ ತಲೆ ಎತ್ತಲಿದೆ ಆಯುಷ್ ಆಸ್ಪತ್ರೆ | ಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು : ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಹರ್ಷಗುಪ್ತ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈಗಾಗಲೇ 1.27 ಎಕ್ರೆ ಜಾಗವನ್ನು ಕಬಕದಲ್ಲಿ ಕಾಯ್ದಿರಿಸಲಾಗಿದೆ. ಅದೇ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವ ವಿಚಾರಕ್ಕೆ

ಶೀಘ್ರದಲ್ಲೇ ಪುತ್ತೂರಿನಲ್ಲಿ ತಲೆ ಎತ್ತಲಿದೆ ಆಯುಷ್ ಆಸ್ಪತ್ರೆ | ಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು : ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ Read More »

ಗೋಮಾಂಸ ಸೇವನೆ ನಿಲ್ಲಿಸಿ : ಮುಸ್ಲಿಂ ಧರ್ಮಗುರುವಿನ ಅಚ್ಚರಿಯ ಸಲಹೆ

ಇಸ್ಲಾಂನಲ್ಲಿ ಗೋಮಾಂಸ ಸೇವನೆ ಕಡ್ಡಾಯ ಅಲ್ಲ ಎಂದು ಹೇಳಿಕೆ ಲಖನೌ: ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಬೇಕು ಎಂದು ಕರೆ ಕೊಡುವ ಮೂಲಕ ಮುಸ್ಲಿಂ ಧರ್ಮಗುರುವೊಬ್ಬರು ಅಚ್ಚರಿಯುಂಟುಮಾಡಿದ್ದಾರೆ. ಮೌಲಾನಾ ಶಹಾಬುದ್ದೀನ್‌ ರಿಜ್ವಿ ಬರೇಲ್ವಿ ಈ ಕರೆ ನೀಡಿದವರು. ಅಸ್ಸಾಂನಲ್ಲಿ ಹೋಟೆಲ್‌ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗೋಮಾಂಸ ನಿಷೇಧಿಸಿ ಅಸ್ಸಾಂ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಸ್ಲಿಂ ಧರ್ಮಗುರು, ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ವಿರೋಧಿ

ಗೋಮಾಂಸ ಸೇವನೆ ನಿಲ್ಲಿಸಿ : ಮುಸ್ಲಿಂ ಧರ್ಮಗುರುವಿನ ಅಚ್ಚರಿಯ ಸಲಹೆ Read More »

ಈಗ ಉಪ್ಪು ಕೂಡ ಅಪಾಯಕಾರಿ

ಉಪ್ಪಿನಲ್ಲಿ ರಾಸಾಯನಿಕ ಅಂಶ, ಅಯೋಡಿನ್‌ ಕೊರತೆ ಪತ್ತೆ ಬೆಂಗಳೂರು: ಪ್ರತಿಯೊಬ್ಬರೂ ನಿತ್ಯವೂ ಸೇವಿಸುವ ಉಪ್ಪು ಕೂಡ ಈಗ ಕಲಬೆರೆಕೆ ಆಗುತ್ತಿದೆ ಎಂಬ ಆಘಾತಕಾರಿ ಅಂಶ ಪತ್ತೆಯಾಗಿದೆ. ಈ ವಿಚಾರವನ್ನು ಖುದ್ದು ಆಹಾರ ಮತ್ತು ಸುರಕ್ಷತಾ ಇಲಾಖೆ ಬಹಿರಂಗಪಡಿಸಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಉಪ್ಪಿನ ಮಾದರಿಗಳನ್ನು ಸಂಗ್ರಹಿಸಲು ಮುಂದಾದ ಆಹಾರ ಮತ್ತು ಸುರಕ್ಷತಾ ಇಲಾಖೆ ಉಪ್ಪಿನಲ್ಲಿ ಅಯೋಡಿನ್ ಕೊರತೆ ಇರುವುದು ಲ್ಯಾಬ್ ಟೆಸ್ಟ್‌ನಲ್ಲಿ ಪತ್ತೆಹಚ್ಚಿದೆ. ಅಷ್ಟೆ ಅಲ್ಲ ಉಪ್ಪಿನಲ್ಲಿ ಸೀಮೆಸುಣ್ಣ, ಸಿಂಥೆಟಿಕ್ ಪೊಟ್ಯಾಶಿಯಂ ಕ್ಲೋರೈಡ್‌ನಂತಹ ರಾಸಾಯನಿಕಗಳ ಅಂಶ ಇರುವುದು

ಈಗ ಉಪ್ಪು ಕೂಡ ಅಪಾಯಕಾರಿ Read More »

ಮಕ್ಕಳ ಬಾಲ್ಯ ಕಸಿದ ಮೊಬೈಲ್ ಎಂಬ ಮಾಯಾಂಗನೆ

ಮಕ್ಕಳನ್ನು ಅಡಿಕ್ಷನ್ ಮಟ್ಟದಿಂದ ಹೊರತರುವುದು ಹೇಗೆ? ಆನ್ಲೈನ್ ಕ್ಲಾಸ್ ನೆಪದಲ್ಲಿ ಮಕ್ಕಳ ಕೈಗೆ ಮೊಬೈಲ್ ಎಂಬ ಮಾಯಾಂಗನೆ ಬಂದಾಗಿದೆ. ನಮ್ಮ ಮಕ್ಕಳನ್ನು ಈ ಮಾಯಾಜಾಲದಿಂದ ಸದ್ಯಕ್ಕೆ ಹೊರತರುವುದು ಕಷ್ಟ ಎಂಬ ಪರಿಸ್ಥಿತಿ ಎದುರಾಗಿದೆ. ನನ್ನ ಅನುಭವಕ್ಕೆ ಸಾವಿರಾರು ಇಂತಹ ಘಟನೆಗಳು ಬಂದಿವೆ. ಅವುಗಳಲ್ಲಿ ಒಂದೆರಡನ್ನು ಮಾತ್ರ ಇಲ್ಲಿ ಉಲ್ಲೇಖ ಮಾಡುತ್ತೇನೆ. ಘಟನೆ 1– ಒಂದು ಮಧ್ಯಾಹ್ನದ ಹೊತ್ತಿಗೆ ನನಗೆ ನನ್ನ ಶಾಲೆಯ ಪೋಷಕರಿಂದ ಒಂದು ಕಾಲ್ ಬಂತು. ಆ ಅಮ್ಮ ತುಂಬಾ ಆತಂಕದಿಂದ ಮಾತಾಡುತ್ತಿದ್ದರು.ಸರ್, ನನ್ನ ಮಗಳು

ಮಕ್ಕಳ ಬಾಲ್ಯ ಕಸಿದ ಮೊಬೈಲ್ ಎಂಬ ಮಾಯಾಂಗನೆ Read More »

ಸಿಡಿಲು ಬಡಿದು ಬನ್ನೂರು ಗ್ರಾಪಂ ಪಿಡಿಒ ಚಿತ್ರಾವತಿ ಆಸ್ಪತ್ರೆಗೆ ದಾಖಲು

ಪುತ್ತೂರು: ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಪರಿಣಾಮ ಬನ್ನೂರು ಗ್ರಾಪಂ ಪಿಡಿಒ ಕುಸಿದು ಬಿದ್ದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದಿದೆ ಬನ್ನೂರು ಗ್ರಾಮ ಪಂಚಾಯತ್ ಪಿಡಿಓ ಚಿತ್ರಾವತಿ ಯವರು ಕಂಪ್ಯೂಟರ್ ಸ್ವಿಚ್ ಆಫ್ ಮಾಡುವ ಸಂದರ್ಭ ಸಿಡಿಲು ಬಡಿದು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳದಲ್ಲಿದ್ದ ಸದಸ್ಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು

ಸಿಡಿಲು ಬಡಿದು ಬನ್ನೂರು ಗ್ರಾಪಂ ಪಿಡಿಒ ಚಿತ್ರಾವತಿ ಆಸ್ಪತ್ರೆಗೆ ದಾಖಲು Read More »

ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ

ಬೆಳಗಾವಿ: ಮಗಳ ಪ್ರೀತಿ ವಿರೋಧ ಮಾಡಿದ್ದ ತಾಯಿ ಹಾಗೂ ಸಹೋದರನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೊಳದಲ್ಲಿ ಇಂದು ನಡೆದಿದೆ. ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಮೃತ ದುರ್ದೈವಿಗಳು. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ಧಿ ಮಾತು ಹೇಳಿದ್ದಾರೆ. ತಾಯಿ ಬುದ್ದಿ ಮಾತು ಹೇಳಿದರು ಕೇಳದ ಮಗಳು ಮತ್ತೆ ತನ್ನ ಹಳೆಯ ಚಾಳಿಯನ್ನು

ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ Read More »

error: Content is protected !!
Scroll to Top