ಡಿ.7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಡಿ.7 ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ.6 ಶುಕ್ರವಾರ ಬೆಳಿಗ್ಗೆ 10 ರಿಂದ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 3 ಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಜೆ 6 ರಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ […]

ಡಿ.7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ

ಮಗನ ಸ್ಥಿತಿ ಚಿಂತಾಜನಕ; ಅನೇಕ ಮಂದಿಗೆ ಗಾಯ ಹೈದರಾಬಾದ್:‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನೆಮಾದ ಪ್ರೀಮಿಯರ್‌ ಶೋ ವೇಳೆ ಜನರ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ದಿಲ್‌ಸುಖ್‌ನಗರದ ರೇವತಿ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಸಿನೆಮಾಕ್ಕೆ ಬಂದಿದ್ದರು.ರಾತ್ರಿ 10.30ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು.

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ Read More »

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ

ಪುತ್ತೂರು: ಜೆಸಿಐ ನ ತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ (41) ನಿಧನರಾಗಿದ್ದಾರೆ. ಆಲಂಕಾರು ನಿವಾಸಿಯಾಗಿದ್ದ ಪ್ರದೀಪ್ ರವರ ಮೃತದೇಹ ಮನೆಯ ಅಂಗಳದಲ್ಲಿರುವ ಶೆಡ್ ನಲ್ಲಿ ಪತ್ತೆಯಾಗಿದೆ. ಹೃದಯಾಘಾತ ಸಂಭವಿಸಿರಬಹುದು ಎಂದು ಹೇಳಲಾಗಿತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ Read More »

ಯತ್ನಾಳ್‌ಗೆ ಹೈಕಮಾಂಡ್‌ ಶಿಸ್ತಿನ ಪಾಠ : ಪಕ್ಷದ ಚೌಕಟ್ಟಿನೊಳಗಿರಲು ಖಡಕ್‌ ಸೂಚನೆ

ಬಿಜೆಪಿಯ ಒಳಜಗಳ ಸದ್ಯಕ್ಕೆ ಶಮನ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ದಿಲ್ಲಿಯಲ್ಲಿ ಬಿಜೆಪಿ ಹೈಕಮಾಂಡ್ ಶಿಸ್ತಿನ ಪಾಠ ಮಾಡಿದೆ. ಕೇಂದ್ರ ಶಿಸ್ತು ಸಮಿತಿ ಕೊಟ್ಟ ನೋಟಿಸ್​ಗೆ 6 ಪುಟಗಳ ಉತ್ತರ ನೀಡಿರುವ ಯತ್ನಾಳ್, ಖುದ್ದು ಹಾಜರಾಗಿ ಲಿಖಿತ ಮಾತ್ರವಲ್ಲದೆ ಮೌಖಿಕವಾಗಿಯೂ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಚೌಕಟ್ಟು ಮೀರಿ ಹೋಗದಂತೆ

ಯತ್ನಾಳ್‌ಗೆ ಹೈಕಮಾಂಡ್‌ ಶಿಸ್ತಿನ ಪಾಠ : ಪಕ್ಷದ ಚೌಕಟ್ಟಿನೊಳಗಿರಲು ಖಡಕ್‌ ಸೂಚನೆ Read More »

ಹಾಸನದಲ್ಲಿ ಕಾಂಗ್ರೆಸ್‌ ʼಜನ ಕಲ್ಯಾಣʼ ಬಲಪ್ರದರ್ಶನಕ್ಕೆ ಕ್ಷಣಗಣನೆ

ಲಕ್ಷಕ್ಕೂ ಮೀರಿ ಜನ ಭಾಗವಹಿಸುವ ನಿರೀಕ್ಷೆ; ಸಚಿವರ ದಂಡೇ ಹಾಸನದತ್ತ ಬೆಂಗಳೂರು: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದೆ.ಅರಸೀಕೆರೆ ರಸ್ತೆಯ ಎಸ್​.ಎಂ ಕೃಷ್ಣ ನಗರದಲ್ಲಿರುವ ಕೆ.ಎಸ್​ ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಲಕ್ಷ ಲಕ್ಷ ಜನರ ಆಗಮನದ ನಿರೀಕ್ಷೆ ಇದೆ. ಬೆಳಗ್ಗೆ 11.30ಕ್ಕೆ ಹಾಸನದಲ್ಲಿ ಜನಕಲ್ಯಾಣ

ಹಾಸನದಲ್ಲಿ ಕಾಂಗ್ರೆಸ್‌ ʼಜನ ಕಲ್ಯಾಣʼ ಬಲಪ್ರದರ್ಶನಕ್ಕೆ ಕ್ಷಣಗಣನೆ Read More »

ನೀವೆಷ್ಟು ಪಾಸಿಟಿವ್ ಥಿಂಕರ್ ಆಗಿದ್ದೀರಿ?

ಅದಕ್ಕೊಂದು ಸ್ವಯಂಮಾಪಕ ಇಲ್ಲಿದೆ ನೀವೆಷ್ಟು ಪಾಸಿಟಿವ್ ಥಿಂಕರ್ ಆಗಿರುತ್ತೀರಿ ಅಷ್ಟು ಯಶಸ್ಸು ನಿಮ್ಮದಾಗುತ್ತದೆ. ನೀವು ಪಾಸಿಟಿವ್ ಆಗಿದ್ದರೆ ನಿಮ್ಮ ಬದುಕು ಇನ್ನೊಬ್ಬರಿಗೆ ಮಾದರಿ ಆಗುತ್ತದೆ. ನೀವು ಎಲ್ಲರಿಗೂ ಸ್ಫೂರ್ತಿ ತುಂಬುವ ಐಕಾನ್ ಆಗುತ್ತೀರಿ. ನಿಮ್ಮ ಬದುಕು ಇತರರಿಗೆ ಯಶೋಗಾಥೆ ಆಗುತ್ತದೆ. ನಿಮ್ಮ ಸಿಗ್ನೇಚರ್ ಸಾವಿರಾರು ಮಂದಿಗೆ ಆಟೋಗ್ರಾಫ್ ಆಗುತ್ತದೆ. ನಿಮ್ಮ ಆತ್ಮವಿಶ್ವಾಸದ ಮಟ್ಟವು ಯಾವಾಗಲೂ ಒಂದೇ ರೀತಿ ಇರುತ್ತದೆ. ಸೋಲು ನಿಮ್ಮನ್ನು ಕಂಡು ಹೆದರುತ್ತದೆ. ನಿಮ್ಮ ಬದುಕಿನ ಪುಸ್ತಕ ಸಾವಿರಾರು ಮಂದಿಗೆ ಪ್ರೇರಣೆ ಕೊಡುವ ಆಟೊಬಯೋಗ್ರಾಫಿ ಆಗುತ್ತದೆ.

ನೀವೆಷ್ಟು ಪಾಸಿಟಿವ್ ಥಿಂಕರ್ ಆಗಿದ್ದೀರಿ? Read More »

ಡಿ.11 -14. : ದತ್ತ ಜಯಂತಿ ಹಿನ್ನಲೆಯಲ್ಲಿ ಮುಳ್ಳಯ್ಯನಗಿರಿಗೆ ನಿರ್ಬಂಧ : ಜಿಲ್ಲಾಡಳಿತ ಆದೇಶ

ಚಿಕ್ಕಮಗಳೂರು : ದತ್ತ ಪಾದುಕೆ ದರ್ಶನ ಹಾಗೂ ದತ್ತ ಜಯಂತಿಯ ಹಿನ್ನಲೆ ಪ್ರವಾಸಿಗರಿಗೆ 4 ದಿನ ಮುಳ್ಳಯ್ಯನ ಗಿರಿ ಹಾಗೂ ಮಾಣಿಕ್ಯಧಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ. ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ದತ್ತ ಜಯಂತಿ ಡಿ.11ರಿಂದ 14ರವರೆಗೆ ನಡೆಯಲಿದೆ. ಈ ಹಿನ್ನೆಲೆ ನಾಲ್ಕು ದಿನಗಳವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಅಧಿಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್  ಡಿ. 15ರ ಸಂಜೆಯ ನಂತರ ಮುಳ್ಳಯ್ಯನ ಗಿರಿಧಾಮ, ಚಂದ್ರದ್ರೋಣ ಪರ್ವತ ತಪ್ಪಲಿಗೆ ಪ್ರವಾಸಕ್ಕೆ ಅನುವು ಮಾಡಲಾಗಿದೆ ಎಂದು

ಡಿ.11 -14. : ದತ್ತ ಜಯಂತಿ ಹಿನ್ನಲೆಯಲ್ಲಿ ಮುಳ್ಳಯ್ಯನಗಿರಿಗೆ ನಿರ್ಬಂಧ : ಜಿಲ್ಲಾಡಳಿತ ಆದೇಶ Read More »

ಸಂಪ್ಯದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ

ಪುತ್ತೂರು : ಪುತ್ತೂರು ಬಿರುಮಲೆ ಬೆಟ್ಟವನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈಗಾಗಲೇ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮಂಗಳವಾರ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಸಂಪ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣ, ಉದ್ಯೋಗ ನೀಡುವ ದೃಷ್ಟಿಕೋನವನ್ನಿಟ್ಟುಕೊಂಡು ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ. ಒಟ್ಟಾರೆಯಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ ಎಂದ ಅವರು, ಈಗಾಗಲೇ

ಸಂಪ್ಯದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »

ಕೋಡಿಂಬಾಡಿ ಗ್ರಾಪಂ ಸಾಮಾನ್ಯ ಸಭೆ ರದ್ದು : ಕೋರಂ ಕೊರತೆ

ಪುತ್ತೂರು: ಡಿ.4 ರಂದು ನಡೆಯಬೇಕಿದ್ದ ಕೋಡಿಂಬಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಸದಸ್ಯರ ಕೋರಂ ಕೊರತೆಯ ಹಿನ್ನೆಲೆಯಲ್ಲಿ ರದ್ದುಗೊಂಡಿದೆ. 11 ಮಂದಿ ಸದಸ್ಯರನ್ನು ಗ್ರಾಮ ಪಂಚಾಯಿತಿ ಹೊಂದಿದೆ. ಈ ಪೈಕಿ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಜಯಪ್ರಕಾಶ್‍ ಬದಿನಾರು, ಸದಸ್ಯರಾದ ಉಷಾ ಲಕ್ಷ್ಮಣ ಪೂಜಾರಿ, ಪುಷ್ಪಾ  ಅವರುಗಳು ಮಾತ್ರ ಸಭೆಗೆ ಹಾಜರಾಗಿದ್ದರು. ಉಳಿದಂತೆ ಜಗನ್ನಾಥ ಶೆಟ್ಟಿ ನಡುಮನೆ, ಗೀತಾ, ಪೂರ್ಣಿಮಾ, ರಾಮಣ್ಣ ಗೌಡ ಗುಂಡೋಳೆ, ರಾಮಚಂದ್ರ ಪೂಜಾರಿ ಶಾಂತಿನಗರ, ವಿಶ್ವನಾಥ ಹಾಗೂ ಮೋಹಿನಿಯವರು ಸಭೆಗೆ ಗೈರಾಗಿದ್ದರು. ಈ ಹಿನ್ನಲೆಯಲ್ಲಿ

ಕೋಡಿಂಬಾಡಿ ಗ್ರಾಪಂ ಸಾಮಾನ್ಯ ಸಭೆ ರದ್ದು : ಕೋರಂ ಕೊರತೆ Read More »

ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್,  ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್, ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆಯಾಗಿದ್ದಾರೆ. ಸಂಕಪ್ಪ ಪಂಜಳ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಪರಮೇಶ್, ಗುರುಪ್ರಸಾದ್, ಪ್ರವೀಣ್ ಶುಭರಾತ್ರಿ ಶಿಬರ, ನವೀನ್ ರೈ ಶಿಬರ, ಉಷಾ, ಹರಿಣಿ , ಸನತ್, ಉಮಾವತಿ,

ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್,  ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆ Read More »

error: Content is protected !!
Scroll to Top