ದೇವಸ್ಥಾನದ ಉತ್ಸವಕ್ಕೆ ಕರೆತಂದ ಆನೆಗೆ ಮದವೇರಿ ರಂಪಾಟ : ಮಾವುತ ಬಲಿ, ಸಹ ಮಾವುತ ಗಂಭೀರ

ಕೆರಳಿದ ಆನೆಯ ಅಟ್ಟಹಾಸಕ್ಕೆ ಸಿಲುಕಿ ಕಾರು, ದ್ವಿಚಕ್ರ ವಾಹನ ಧ್ವಂಸ ತಿರುವನಂತಪುರಂ: ಎರ್ನಾಕುಳಂ ಜಿಲ್ಲೆಯ ಅಂಗಾಮಾಲಿಯ ಕಿದಂಗೂರ್ ಮಹಾವಿಷ್ಣು ದೇವಸ್ಥಾನದ ಆವರಣದಲ್ಲಿ ಇಂದು ಮದವೇರಿದ ಆನೆಯೊಂದು ಅಟ್ಟಹಾಸಗೈದಾಗ ಆನೆಯ ತುಳಿತಕ್ಕೆ ಸಿಲುಕಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾವುತನ ಸ್ಥಿತಿ ಗಂಭೀರವಾಗಿದೆ. ಅಕ್ಕಪಕ್ಕದ ದೇವಸ್ಥಾನಗಳ ಉತ್ಸವದಲ್ಲಿ ಪಾಲ್ಗೊಳ್ಳಲು ‘ಮಯ್ಯನಾಡ್ ಪಾರ್ಥಸಾರಥಿ’ ಹೆಸರಿನ ಆನೆಯನ್ನು ಕರೆತರಲಾಗಿತ್ತು. ಇಂದು ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಆನೆಯನ್ನು ಸ್ನಾನ ಮಾಡಿಸಲು ಕಿದಂಗೂರ್ ದೇವಸ್ಥಾನಕ್ಕೆ ಕರೆತಂದಾಗ ಅದು ಇದ್ದಕ್ಕಿದ್ದಂತೆ ಮದವೇರಿ ಗಲಾಟೆ ಮಾಡಲು […]

ದೇವಸ್ಥಾನದ ಉತ್ಸವಕ್ಕೆ ಕರೆತಂದ ಆನೆಗೆ ಮದವೇರಿ ರಂಪಾಟ : ಮಾವುತ ಬಲಿ, ಸಹ ಮಾವುತ ಗಂಭೀರ Read More »

ಮೇಲಿನಕುರುವಳ್ಳಿಯಲ್ಲಿ ಕಾಣಸಿಕ್ಕಿದ ಎರಡು ಚಿರತೆ ಮರಿಗಳು: ಗ್ರಾಮಸ್ಥರಲ್ಲಿ ಆತಂಕ

ತೀರ್ಥಹಳ್ಳಿ: ತಾಲೂಕಿನ ಮೇಲಿನಕುರುವಳ್ಳಿ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಕಾಣ ಸಿಕ್ಕಿದ್ದು, ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಈ ಚಿರತೆ ಮರಿಗಳು ಕುರುವಳ್ಳಿಯಿಂದ ಹರಳಿಮಠಕ್ಕೆ ಹೋಗುವ ರಸ್ತೆಯಲ್ಲಿ ಕಾಣಸಿಕ್ಕಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಈ ಘಟನೆ ಇಂದು ಬೆಳಗ್ಗೆ ನಡೆದಿದ್ದು‌ ಮರಿಗಳ ಜೊತೆಗೆ ಚಿರತೆಯೂ ಇರಬಹುದೇನೋ ಎಂಬ ಭಯ ಗ್ರಾಮದಲ್ಲಿ ಆವರಿಸಿದೆ. ಈ ಮಾಹಿತಿಯನ್ನು ಅರಣ್ಯ ಇಲಾಖಾ ಸಿಬ್ಬಂದಿಗೂ ತಲುಪಿಸಲಾಗಿದ್ದು, ಯಾವುದೇ ಕಾರಣಕ್ಕೂ ಚಿರತೆ ಮರಿಗಳಿಗೆ ಆತಂಕವಾಗುವಂತಹ ಸ್ಥಿತಿ ನಿರ್ಮಾಣ ಮಾಡದಂತೆ ಅವರು ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.

ಮೇಲಿನಕುರುವಳ್ಳಿಯಲ್ಲಿ ಕಾಣಸಿಕ್ಕಿದ ಎರಡು ಚಿರತೆ ಮರಿಗಳು: ಗ್ರಾಮಸ್ಥರಲ್ಲಿ ಆತಂಕ Read More »

ಹತ್ತನೇ ತರಗತಿ ಟಾಪರ್ ವಿದ್ಯಾರ್ಥಿನಿ ಧನ್ವಿ ಹೆಬ್ಬಾರ್‌ಗೆ ಸನ್ಮಾನ

ಉಡುಪಿ: ಸಾಧನೆ ಮಾಡಲು ತಂದೆ ತಾಯಿ , ಗುರುಹಿರಿಯರ ಮಾರ್ಗದರ್ಶನ ಅತ್ಯಂತ ಮುಖ್ಯ. ಮಕ್ಕಳ ಸಾಧನೆಯ ಯಶಸ್ಸನ್ನು ಹೆಚ್ಚು ಸಂಭ್ರಮಿಸುವವರು ಅವರುಗಳ ತಾಯಿ ಆಗಿರುತ್ತಾರೆ. ಮಕ್ಕಳ ಲಾಲನೆ ಪಾಲನೆಯಲ್ಲಿ ತಾಯಿಯ ಪಾತ್ರ ಮುಖ್ಯ. ಸಾಧಕ ವಿದ್ಯಾರ್ಥಿನಿ ಧನ್ವಿ ಹೆಬ್ಬಾರ್ ಶಾಲೆ ಮತ್ತು ಮನೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ ಎಂದು ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷ ಪಾಂಡುರಂಗ ಪೈ ಸಿದ್ಧಾಪುರ ಮಾತನಾಡಿದರು. ಪಿ.ಆರ್. ಎನ್.‌ ಅಮೃತ ಭಾರತಿ ವಿದ್ಯಾ ಕೇಂದ್ರ ಸಿಬಿಎಸ್ಇ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿನಿ

ಹತ್ತನೇ ತರಗತಿ ಟಾಪರ್ ವಿದ್ಯಾರ್ಥಿನಿ ಧನ್ವಿ ಹೆಬ್ಬಾರ್‌ಗೆ ಸನ್ಮಾನ Read More »

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ

ಬೆಂಗಳೂರು: ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಚಿನ್ನದಂಗಡಿಯೊಂದಕ್ಕೆ ಗೋಡೆ ಕೊರೆದು ಕನ್ನ ಹಾಕಿರುವ ಕಳ್ಳರು ಕೋಟಿಗಟ್ಟಲೆ ಬೆಲೆಬಾಳುವ ಬೆಳ್ಳಿ ಆಭರಣಗಳನ್ನು ಕಳವುಗೈದಿದ್ದಾರೆ. ಎಂಬಿ ಜ್ಯುವೆಲ್ಲರ್ಸ್ ಅಂಗಡಿಯಿಂದ ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ Read More »

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಹಿಳೆಯನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲೆತ್ನಿಸಿದ್ದ ಅಪರಾಧಿಗಳು ಉಡುಪಿ : ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು. ಮಂಚಿಕುಮೇರಿ ನಿವಾಸಿ ರಮಾನಾಥ ರೈ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »

ಉಪ್ಪಿನಂಗಡಿ-ಗುರುವಾಯನಕೆರೆ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ

13 ಕೋ. ರೂ. ಅಂದಾಜುಪಟ್ಟಿಗೆ ಸಚಿ ಸಂಪುಟ ಅನುಮೋದನೆ ಮಂಗಳೂರು: ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಕ್ಕೆ ಹಾಗೂ ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ

ಉಪ್ಪಿನಂಗಡಿ-ಗುರುವಾಯನಕೆರೆ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ Read More »

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಪ್ರೀತಿಸಿದ ಯುವಕನ ಜೊತೆ ಮದುವೆಯಾಗಲು ಮನೆಯವರು ಅನುಮತಿ ನೀಡಲಿಕ್ಕಿಲ್ಲ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿ ಎರಡನೇ ಪುತ್ರಿ ರಮಾ (19) ಎಂಬಾಕೆ ಕಳೆದ ಏ.19ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು,

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು Read More »

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಕಳೆದ ವರ್ಷ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಭವಿಸಿದ ಭೀಕರ ಹತ್ಯೆ ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆಪರಾಧಿಗಳಾದ ರವಿ, ವಿಜಯ್, ಧನರಾಜ್, ಭರತ್, ಸಲೀಮ್ ಮಹಮ್ಮದ್ ರಫೀಕ್, ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ತೀರ್ಪು ನೀಡಿದ್ದಾರೆ. 2025ರ ಅ.7ರಂದು ಹಳೆಯ

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ Read More »

ಇವಿಎಂ ಇರಿಸಿದ ಸ್ಟ್ರಾಂಗ್‌ ರೂಮ್‌ ಎದುರು ನಡುರಾತ್ರಿ ಮಮತಾ ಬ್ಯಾನನರ್ಜಿ ಹೈಡ್ರಾಮಾ

ಸ್ಟ್ರಾಂಗ್‌ ರೂಮ್‌ ತೆರೆಯಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಕೋಲ್ಕತ್ತಾ: ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮನ್ನು ಅಕ್ರಮವಾಗಿ ತೆರೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ ಪ್ರತಿಭಟನೆ ನಡೆಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ತಾನು ಸ್ಪರ್ಧಿಸಿರುವ ಭವಾನಿಪುರ ಕ್ಷೇತ್ರದ ಮತ ಎಣಿಕಾ ಕೇಂದ್ರವಾದ ಸಖಾವತ್ ಮೆಮೋರಿಯಲ್ ಸ್ಕೂಲ್ ಬಳಿ ಮಮತಾ ಬ್ಯಾನರ್ಜಿ ಅವರು ಸ್ವತಃ ಭೇಟಿ ನೀಡಿ ಸುಮಾರು ನಾಲ್ಕು ಗಂಟೆಗಳ ಕಾಲ ತಂಗಿದ್ದರು. ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ

ಇವಿಎಂ ಇರಿಸಿದ ಸ್ಟ್ರಾಂಗ್‌ ರೂಮ್‌ ಎದುರು ನಡುರಾತ್ರಿ ಮಮತಾ ಬ್ಯಾನನರ್ಜಿ ಹೈಡ್ರಾಮಾ Read More »

ವಾಣಿಜ್ಯ ಸಿಲಿಂಡರ್‌ ಬೆಲೆ 993 ರೂ. ಏರಿಕೆ

ಹೋಟೆಲ್‌, ಕ್ಯಾಟರಿಂಗ್‌ ಉದ್ಯಮಿಗಳಿಗೆ ಶಾಕ್‌ ನೀಡಿದ ಬೆಲೆ ಹೆಚ್ಚಳ ನವದೆಹಲಿ : ವಾಣಿಜ್ಯ ಸಿಲಿಂಡರ್​ ಬೆಲೆ ಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರಿ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು. ಬೆಂಗಳೂರಿನಲ್ಲಿ 991 ರೂಪಾಯಿ

ವಾಣಿಜ್ಯ ಸಿಲಿಂಡರ್‌ ಬೆಲೆ 993 ರೂ. ಏರಿಕೆ Read More »

error: Content is protected !!
Scroll to Top