ಪುತ್ತೂರು ಬಿಜೆಪಿ 146ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಶೇಖರ್‍ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 146ನೇ ಬೂತುನ ನೂತನ ಅಧ್ಯಕ್ಷರಾಗಿ ಶೇಖರ್ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆಯಾದರು. ನರಿಮೊಗರು ಶಕ್ತಿ ಕೇಂದ್ರದ ಅಧ್ಯಕ್ಷೆ ಲಕ್ಷ್ಮಿ ಪ್ರಸಾದ್ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ, ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿ ಆಗಿರುವ ನಿತೇಶ್ ಕುಮಾರ್ ಶಾಂತಿವನ  ಇವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಕರುಣಾಕರ ಗೌಡ, ಚಿತ್ರ, ಗಣೇಶ್ ನಾಯಕ್, ನಾರಾಯಣಗೌಡ, […]

ಪುತ್ತೂರು ಬಿಜೆಪಿ 146ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಶೇಖರ್‍ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆ Read More »

ಈ ಸಲ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಾವಣೆಯಿಲ್ಲ

ಕಳೆದ ವರ್ಷದಂತೆಯೇ ಪ್ರಶ್ನೆ ಪತ್ರಿಕೆ ಇರಲಿದೆ ಎಂದು ಸ್ಪಷ್ಟನೆ ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ, ಕಳೆದ ವರ್ಷದ ಮಾದರಿಯಲ್ಲೇ ಪ್ರಶ್ನೆಪತ್ರಿಕೆ ಇರುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಶ್ನೆ ಪತ್ರಿಕೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುರುವ ಸುದ್ದಿ ಸುಳ್ಳು. 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ

ಈ ಸಲ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಾವಣೆಯಿಲ್ಲ Read More »

ಕಂಟೈನರ್‌ ಮೇಲೆ ನಮಾಜು ಮಾಡುತ್ತಿದ್ದ ವ್ಯಕ್ತಿಯನ್ನು ಕೆಳಗೆಸೆದು ಕೊಂದ ಪೊಲೀಸರು

ಭಾರತದಲ್ಲಿ ಈ ಘಟನೆ ಸಂಭವಿಸಿದ್ದರೆ ಏನಾಗುತ್ತಿತ್ತು ಎಂದು ಕೇಳಿದ ನೆಟ್ಟಿಗರು ಇಸ್ಲಮಾಬಾದ್‌: ಇಸ್ಲಾಮಾಬಾದ್‌ನ ಡೆಮಾಕ್ರಸಿ ಚೌಕ್‌ನಲ್ಲಿ (ಡಿ ಚೌಕ್‌) ಇಮ್ರಾನ್‌ ಖಾನ್‌ ಬೆಂಬಲಿಗ ಪ್ರತಿಭಟನೆಕಾರರನ್ನು ತಡೆಯಲು ಪೊಲೀಸರು ರಸ್ತೆಗಡ್ಡವಾಗಿ ಇಟ್ಟಿದ್ದ ಕಂಟೈನರ್‌ಗಳ ಮೇಲೇರಿ ನಮಾಜು ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಕೆಳಗೆಸೆದು ಕೊಂದ ವೀಡಿಯೊ ತುಣುಕೊಂದು ಭಾರತದಲ್ಲಿ ಭಾರಿ ವೈರಲ್‌ ಆಗಿದೆ. ಅನೇಕ ಮಂದಿ ಈ ವೀಡಿಯೊವನ್ನು ನೋಡಿ ಎಲ್ಲಾದರೂ ಭಾರತದಲ್ಲಿ ಈ ಘಟನೆ ನಡೆದಿದ್ದರೆ ಏನಾಗುತ್ತಿತ್ತು ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಮರ ರಕ್ಷಕ ಎಂದು ಹೇಳಿಕೊಳ್ಳುತ್ತಿರುವ, ಭಾರತದಲ್ಲಿ ಮುಸ್ಲಿಮರಿಗೆ

ಕಂಟೈನರ್‌ ಮೇಲೆ ನಮಾಜು ಮಾಡುತ್ತಿದ್ದ ವ್ಯಕ್ತಿಯನ್ನು ಕೆಳಗೆಸೆದು ಕೊಂದ ಪೊಲೀಸರು Read More »

ಮತ್ತೊಂದು ಭ್ರಷ್ಟಾಚಾರ ಪ್ರಕರಣದ ಸುಳಿಯಲ್ಲಿ ಸಚಿವ ಚಲುವರಾಯಸ್ವಾಮಿ

ಬಾರ್‌ ಲೈಸೆನ್ಸ್‌ ನೀಡಲು ನಡೆದ ಲಂಚದ ಮಾತುಕತೆಯಲ್ಲಿ ಸಚಿವರ ಹೆಸರು ಉಲ್ಲೇಖ ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತೊಂದು ಲಂಚದ ಸುಳಿಯಲ್ಲಿ ಸಿಲುಕಿದ್ದಾರೆ. ಬಾರ್‌ ಲೈಸೆನ್ಸ್‌ ನೀಡಲು ಕಾಂಗ್ರೆಸ್‌ ಕಾರ್ಯಕರ್ತರೊಬ್ಬರಿಂದಲೇ ಅಬಕಾರಿ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿದ ಪ್ರಕರಣದಲ್ಲಿ ಮಂಡ್ಯದ ಉಸ್ತುವಾರಿ ಸಚಿವರೂ ಆಗಿರುವ ಚಲುವರಾಯಸ್ವಾಮಿಯ ಹೆಸರೂ ಪ್ರಸ್ತಾಗೊಂಡಿದ್ದು, ಈಗ ಈ ಪ್ರಕರಣದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಮಂಡ್ಯದ ಚಂದೂಪುರದಲ್ಲಿ ಬಾರ್‌​​ಗೆ ಲೈಸೆನ್ಸ್‌ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ

ಮತ್ತೊಂದು ಭ್ರಷ್ಟಾಚಾರ ಪ್ರಕರಣದ ಸುಳಿಯಲ್ಲಿ ಸಚಿವ ಚಲುವರಾಯಸ್ವಾಮಿ Read More »

ನಾಳೆ (ನ.30) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ | ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.30 ಶನಿವಾರ ನಡೆಯುವ ಲಕ್ಷದೀಪೋತ್ಸವದ ಅಂಗವಾಗಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ವಿವಿಧ ಸಂಘ ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ದೇವಸ್ಥಾನದ ರಥಬೀದಿ ಸಹಿತ ಸುತ್ತಮುತ್ತಲಲ್ಲಿ ಬಿದ್ದಿರುವ ಪ್ಲಾಸ್ಟಿಕ್‍, ಇನ್ನುಇನ್ನಿತರ ಕಡಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛತೆಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬಜರಂಗದಳದ ಮುರಳೀಕೃಷ್ಣ ಹಸಂತಡ್ಕ, ಕೃಷ್ಣಪ್ರಸಾದ್ ಮುಳಿಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ನಾಳೆ (ನ.30) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ | ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ Read More »

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ವಿಶ್ವ ಹಿಂದೂ ಪರಿಷದ್ ನಿಂದ ಖಂಡನೆ

ಪುತ್ತೂರು: ವಿಶ್ವದ ಹಿಂದೂ ಸಮುದಾಯ ಬಾಂಗ್ಲಾದೇಶದಲ್ಲಿ ಆಗುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಅತ್ಯಂತ ಉಗ್ರವಾಗಿ ಖಂಡಿಸಬೇಕಿದೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಇಸ್ಕಾನ್ ನ ಚಿನ್ಮಯ ಕೃಷ್ಣ ದಾಸರನ್ನು ಕೂಡಲೇ ಬಿಡುಗೊಡೆಗೊಳಿಸುವಂತೆ ಬಾಂಗ್ಲಾದ ಮತಾಂಧ ಸರ್ಕಾರವನ್ನು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದ್ದು, 70ರ ದಶಕದಲ್ಲಿ ಬಾಂಗ್ಲಾದೇಶ ಪಾಕಿಸ್ತಾನದಿಂದ ವಿಮೋಚನೆಯಾದಾಗ ಕಷ್ಟದಲ್ಲಿದ್ದ ಲಕ್ಷಾಂತರ ಬಾಂಗ್ಲಾದೇಶೀಯರಿಗೆ ಅನ್ನ ನೀಡಿ ಸಹಾಯ ಮಾಡಿದ ಇಸ್ಕಾನ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಮತಾಂಧ ಜಿಹಾದಿಗಳು ದಾಳಿ ಮಾಡಿ ದೌರ್ಜನ್ಯ ನಡೆಸುತ್ತಿವೆ.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ವಿಶ್ವ ಹಿಂದೂ ಪರಿಷದ್ ನಿಂದ ಖಂಡನೆ Read More »

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದ ಸ್ವಾಮೀಜಿ ವಿರುದ್ಧ ಕೇಸ್‌

ಭಾರಿ ವಿವಾದಕ್ಕೀಡಾಗಿದ್ದ ಸ್ವಾಮೀಜಿಯ ಹೇಳಿಕೆ ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹೊರಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸ್ವಾಮೀಜಿಯ ಹೇಳಿಕೆಗಳು ಪ್ರಚೋದನಕಾರಿಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ವಕ್ಫ್ ಬೋರ್ಡ್ ವಿರುದ್ಧ ನಡೆದ ಪ್ರತಿಭಟನಾ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದ ಸ್ವಾಮೀಜಿ ವಿರುದ್ಧ ಕೇಸ್‌ Read More »

ಸಂಪುಟ ಸರ್ಜರಿಗೆ ಹೈಕಮಾಂಡ್‌ ನಕಾರ : ಸಚಿವರಾಗಲು ಕಾಯುತ್ತಿದ್ದವರಿಗೆ ನಿರಾಶೆ

ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಷ್ಟೇ ಅನುಮತಿ ಬೆಂಗಳೂರು: ಸದ್ಯಕ್ಕೆ ಸಂಪುಟ ಪುನರ್‌ ರಚನೆ ಬೇಡ ಎಂದು ಹೈಕಮಾಂಡ್‌ ಹೇಳಿರುವುದರಿಂದ ಮಂತ್ರಿಯಾಗಲು ಕಾಯುತ್ತಿದ್ದವರಿಗೆ ಭಾರಿ ನಿರಾಶೆಯಾಗಿದೆ. ಸಂಪುಟ ಪುನರ್‌ ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಹೈಕಮಾಂಡ್‌ ಜೊತೆ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿನ್ನೆ ದಿಲ್ಲಿಗೆ ಹೋಗಿದ್ದರು. ಈ ಮಾತುಕತೆಯಲ್ಲಿ ಹೈಕಮಾಂಡ್‌ ನಾಯಕರು ಸಂಪುಟ ಪುನರ್‌ ರಚನೆ ಈಗ ಬೇಡ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಸಂಪುಟ ಸರ್ಜರಿಗೆ ಹೈಕಮಾಂಡ್‌ ನಕಾರ : ಸಚಿವರಾಗಲು ಕಾಯುತ್ತಿದ್ದವರಿಗೆ ನಿರಾಶೆ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಗುರುವಾರ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನವೀನ್ ಡಿ. ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಪವಿತ್ರಾ ಕೆ.ಪಿ., ನಿರ್ದೇಶಕರಾದ ವಿಶ್ವನಾಥ ಬಲ್ಯಾಯ ಮುಂಡೋಡಿ, ಪ್ರವೀಣ್ ಕುಮಾ‌ರ್ ಶೆಟ್ಟಿ ಜಯರಾಮ ಪೂಜಾರಿ ಒತ್ತೆಮುಂಡೂರು, ವಿ. ಬಾಬು ಶೆಟ್ಟಿ ವೀರಮಂಗಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ್ ಎಚ್, ಸಿಬ್ಬಂದಿಗಳಾದ ಸಂದೀಪ್ ಕೆ.,

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ Read More »

ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಅಸಂಘಟಿತರನ್ನು ಓಡಿಸುವ ಬೆದರಿಕೆ | ಇಂತಹಾ ಘಟನೆ ಮರುಕಳಿಸಿದರೆ ಗೂಂಡಾ ಕಾಯ್ದೆಯಡಿ ಬಳ್ಳಾರಿ ಜೈಲಿಗೆ ಹಾಕಲು ಸರಕಾರಕ್ಕೆ ಆಗ್ರಹ : ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಹೊರ ಜಿಲ್ಲೆಯಿಂದ ಅಂದರೆ ಘಟ್ಟ ಪ್ರದೇಶದಿಂದ ಬಂದು ಜೆಸಿಬಿ, ಹಿಟಾಚಿ ಇಟ್ಟುಕೊಂಡು ಕೆಲಸ ಮಾಡುತ್ತಿರುವವರ ಮೇಲೆ ಸ್ಥಳೀಯವಾಗಿ ಕೆಲವೊಂದು ವ್ಯಕ್ತಿಗಳು ದಬ್ಬಾಳಿಕೆ ಮಾಡುವ ಮೂಲಕ ಒಂದು ರೀತಿಯ ಗೊಂದಲ ಉಂಟು ಮಾಡುತ್ತಿದ್ದು, ಇಂತಹಾ ಘಟನೆಗಳು ಮುಂದಿನ ದಿನಗಳಲ್ಲಿ ಪುನಾರಾವರ್ತನೆಯಾದಲ್ಲಿ ಅಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಬಳ್ಳಾರಿ ಜೈಲಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಈ ಕುರಿತು ಹೊರ ಜಿಲ್ಲೆಯಿಂದ ಬಂದ ಜೆಸಿಬಿ ಮಾಲಕರು ಹಾಗೂ ಆಪರೇಟರ್‍ಗಳಿಗೆ

ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಅಸಂಘಟಿತರನ್ನು ಓಡಿಸುವ ಬೆದರಿಕೆ | ಇಂತಹಾ ಘಟನೆ ಮರುಕಳಿಸಿದರೆ ಗೂಂಡಾ ಕಾಯ್ದೆಯಡಿ ಬಳ್ಳಾರಿ ಜೈಲಿಗೆ ಹಾಕಲು ಸರಕಾರಕ್ಕೆ ಆಗ್ರಹ : ಕಾವು ಹೇಮನಾಥ ಶೆಟ್ಟಿ Read More »

error: Content is protected !!
Scroll to Top