ಬೈಕ್‌ ಅಪಘಾತ : ಕಾಲೇಜ್‌ ವಿದ್ಯಾರ್ಥಿ ಸಾವು

ಮಧ್ಯರಾತ್ರಿ ಉಜಿರೆ ಸಮೀಪ ಸಂಭವಿಸಿದ ಅಪಘಾತ, ಸವಾರ ಗಂಭೀರ ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಪುತ್ರ ನಿತೇಶ್(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪುತ್ತೂರು ನಿವಾಸಿ ಲಿಖಿತ್(20) ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಬೈಕ್‌ ಅಪಘಾತ : ಕಾಲೇಜ್‌ ವಿದ್ಯಾರ್ಥಿ ಸಾವು Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ತಪ್ಪೊಪ್ಪಿಕೊಂಡ ಉಗ್ರ

2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಶಿವಮೊಗ್ಗದ ಶಾರೀಕ್ (27) 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಕಂಕನಾಡಿ ಸಮೀಪ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ ಸ್ಫೋಟದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಉಗ್ರನನ್ನು ಆಸ್ಪತ್ರೆಗೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ತಪ್ಪೊಪ್ಪಿಕೊಂಡ ಉಗ್ರ Read More »

ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ

ದೇವಸ್ಥಾನಗಳಿಗೆ ಭೇಟಿ ನೀಡಿ ಮರಳುತ್ತಿರುವಾಗ ಸಂಭವಿಸಿದ ಅಪಘಾತ ಉಡುಪಿ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನ ನೆಲಮಂಗಲ ನಿವಾಸಿ ರಾಘು ಎಂಬವರ ಪತ್ನಿ ಮಮತಾ (36), ಪುತ್ರಿ ಧೃತಿಕ (14) ಮೃತ ದುರ್ದೈವಿಗಳು. ಇನ್ನೊರ್ವ ಮಗಳು ಜಾಹ್ನವಿ (12) ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಘು ಕುಂದಾಪುರ

ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ Read More »

ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಅಪರಾಧಿ ಪತ್ತೆ

ಬಸವರಾಜು ಎಂದು ಹೆಸರು ಬದಲಿಸಿಕೊಂಡಿದ್ದ ಸುಳ್ಯದ ಅಜೀಜ್‌ ಮಂಗಳೂರು: ಎಂಟು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ಹೆಸರು ಬದಲಿಸಿ ಆಂಧ್ರಪ್ರದೇಶದಲ್ಲಿ ಅಡಗಿದ್ದ ಸುಳ್ಯದ ಮೋಸ್ಟ್ ವಾಂಟೆಡ್ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಪ್ರಕರಣದಲ್ಲಿ ಶಿಕ್ಷೆಯಾದ ಬಳಿಕ ತಲೆಮರೆಸಿಕೊಂಡಿದ್ದ ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ. ಅಜೀಜ್‌ ಎಂಬಾತನನ್ನು ಆಂಧ್ರದ ಚಿತ್ತೂರು ಜೈಲಿನಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ.​​ಕಡಬ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣವೊಂದರಲ್ಲಿ ಈತನಿಗೆ ಹೈಕೋರ್ಟ್ ಹತ್ತು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. 2018ರಲ್ಲಿ ಕೇರಳ ಪೊಲೀಸರು ಈತನನ್ನು ಸುಳ್ಯ ನ್ಯಾಯಾಲಯಕ್ಕೆ

ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಅಪರಾಧಿ ಪತ್ತೆ Read More »

ಈಜಲು ನದಿಗಿಳಿದ ಬಾಲಕ ಮುಳುಗಿ ಸಾವು

ಬೆಳ್ತಂಗಡಿ: ಈಜಲು ನದಿಗಿಳಿದ 14 ವರ್ಷದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಂತರಾಯ ಪಲ್ಕೆಯಲ್ಲಿ ಶನಿವಾರ ಸಂಜೆ ನಡೆದಿದೆ. ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಎಂಬವರ ಪುತ್ರ ಮೊಹಮ್ಮದ್ ಹಫೀಜ್ ಮೃತ ಬಾಲಕ. ನೇತ್ರಾವತಿ ನದಿಯ ಅಂತ್ರಾಯ ಕೊಳದಲ್ಲಿ ನಾಲ್ವರು ಮಕ್ಕಳು ಈಜಲು ಇಳಿದಿಗಿದ್ದ ಹಫೀಜ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಅಲ್ಲಿದ್ದವರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಾಲಕನ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ತನಿಖೆ ನಡೆಯುತ್ತಿದೆ.

ಈಜಲು ನದಿಗಿಳಿದ ಬಾಲಕ ಮುಳುಗಿ ಸಾವು Read More »

ಮತ್ತೆ ವಕ್ಕರಿಸಿದ ಕೊರೋನಾ : ಅಮೆರಿಕದಲ್ಲಿ ರೂಪಾಂತರಿ ವೈರಸ್‌ ಹಾವಳಿ

25ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ಹೊಸ ರೂಪಾಂತರಿ ತಳಿಯ ಕಾಟ ವಾಷಿಂಗ್ಟನ್‌ : ಜಗತ್ತಿನಾದ್ಯಂತ ಕೊರೋನಾ ಮತ್ತೆ ಆತಂಕ ಸೃಷ್ಟಿಸಿದೆ. ಅಮೆರಿಕದಲ್ಲಿ ಕೋವಿಡ್-19‌ ಹೊಸ ರೂಪಾಂತರಿ BA.3.2 ಸಿಕಾಡಾ ಕಾಣಿಸಿಕೊಂಡು ವೇಗವಾಗಿ ಹರಡುತ್ತಿದೆ. ಈ ವೈರಸ್ ಈಗಾಗಲೇ ಕೆಲವು ದೇಶಗಳಲ್ಲಿ ಕಾಟ ಕೊಡಲಾರಂಭಿಸಿದೆ. ಅಮೆರಿಕದ ರೋಗ ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕೇಂದ್ರ ದೇಶದೆಲ್ಲೆಡೆ ನೀರಿನ ಮಾದರಿ ಪರೀಕ್ಷಿಸಿದ್ದು, 25ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ಹೊಸ ರೂಪಾಂತರಿ ಪತ್ತೆಯಾಗಿದೆ. ಕೀಟದ ಹೆಸರು ಸಿಕಾಡಾ ಬಿಎ 3.2 ಅಥವಾ ʼಸಿಕಾಡಾʼ

ಮತ್ತೆ ವಕ್ಕರಿಸಿದ ಕೊರೋನಾ : ಅಮೆರಿಕದಲ್ಲಿ ರೂಪಾಂತರಿ ವೈರಸ್‌ ಹಾವಳಿ Read More »

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು

ಸಾಲಗಾರರ ಕಾಟದಿಂದ ಬೇಸತ್ತು ಕೃತ್ಯ – ಇಬ್ಬರ ಸ್ಥಿತಿ ಚಿಂತಾಜನಕ ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು Read More »

ಐಪಿಎಲ್‌ : ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಗೆ ಭರ್ಜರಿ ಜಯ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200ಕ್ಕೂ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬೆಂಗಳೂರು: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್‌ಎಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌

ಐಪಿಎಲ್‌ : ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಗೆ ಭರ್ಜರಿ ಜಯ Read More »

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು

ಶಿವಮೊಗ್ಗ: ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಹತ್ತನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ರಿಪ್ಪನ್ ಪೇಟೆಯ ಬರುವೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಎಂದು ಗುರುತಿಸಲಾಗಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಬಾಲಕ ಆ‌ನಂತರ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು Read More »

ಅಸೌಖ್ಯದಿಂದ ಮಹಿಳೆ ಸಾವು

ಪುತ್ತೂರು: ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ದೇವಚಳ್ಳ ಗ್ರಾಮದ ಕಲ್ಲುಪಣೆ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರಿ ಉಷಾಲತಾ(31) ಎಂದು ಗುರುತಿಸಲಾಗಿದೆ. ಉಷಾ ಅವರು ಮಾವಿನಕಟ್ಟೆಯ ಅರ್ಣ ಗ್ಯಾಸ್‌ನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಎರಡು ವರ್ಷದ ಹಿಂದಷ್ಟೇ ಅಲೆಟ್ಟಿಯ ಸೂರಜ್ ಎಂಬವರ ಜೊತೆ ಇವರ ವಿವಾಹ ನಡೆದಿತ್ತು. ಮೃತರು ಪತಿ, ತಂದೆ, ತಾಯಿ, ಸಹೋದರಿಯರನ್ನು ಅಗಲಿದ್ದಾರೆ.

ಅಸೌಖ್ಯದಿಂದ ಮಹಿಳೆ ಸಾವು Read More »

error: Content is protected !!
Scroll to Top