ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ

ಪುತ್ತೂರು: ಮೃತಪಟ್ಟ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಎಂಬವರನ್ನ ರಸ್ತೆ ಬದಿ ಮಲಗಿಸಿ ಅವಮಾನಕಾರಿ ರೀತಿಯಲ್ಲಿ ಬಿಟ್ಟು ಹೋದ ಮಾಲಿಕ, ಪ್ರಮುಖ ಆರೋಪಿ ಹೆನ್ರಿ ತಾವ್ರೋರನ್ನು ಪುತ್ತೂರು ನಗರ ಠಾಣಾ ಪೊಲೀಸರು ಇನ್ನೂ ಬಂಧಿಸದೇ ಇರುವ ನಿಟ್ಟಿನಲ್ಲಿ ನ.22 ನಾಳೆ ಪುತ್ತೂರು ನಗರ ಠಾಣೆ ಎದುರು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಬಾಬು […]

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24”

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” ವಿವಿಧ ಸ್ಪರ್ಧೆಗಳು ನಡೆಯಿತು. ಈ ಸ್ಪರ್ದೆಯಲ್ಲಿ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರಶ್ಮಿ  ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭ ಹಾರೈಸಿದರು.  MIT ಮೂಡಬಿದ್ರೆಯ ಎಂಸಿಎ ವಿಭಾಗದ ಅಸಿಸ್ಟೆಂಟ್  ಪ್ರೊಸೆಸರ್  ರಾಜೇಶ್ ರಾಜು ಅತಿಥಿಯಾಗಿ ಮಾತನಾಡಿ, ಈ ರೀತಿಯ ಫೆಸ್ಟ್ ನಲ್ಲಿ

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” Read More »

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್‍ ಟ್ರಸ್ಟ್ ಗೆ ಮಂಜೂರು ಹುನ್ನಾರ | ಸರಕಾರಿ ಜಾಗ ಕಬಳಿಕೆಗೆ ಯತ್ನ : ಶಾಸಕ ಸಂಜೀವ ಮಠಂದೂರು

ಪುತ್ತೂರು :  ಪುತ್ತೂರು ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪುತ್ತೂರು ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಮಾಡುವ ಹುನ್ನಾರ ನಡೆಯುತ್ತಿದ್ದು, ಇದರ ವಿರುದ್ಧ ಬಿಜೆಪಿಯಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,  ವಕ್ಫ್ ನಂತೆ ಸರಕಾರಿ ಜಮೀನನ್ನು ನುಂಗುವ ಕೆಲಸ ನಡೆಯುತ್ತಿದೆ. ಇದೇ ರೀತಿ ಮುಂದುವರಿದರೆ ವಿಧಾನಸೌಧದ ಜಾಗವನ್ನು ಕಬಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಪುತ್ತೂರು ಸರಕಾರಿ

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್‍ ಟ್ರಸ್ಟ್ ಗೆ ಮಂಜೂರು ಹುನ್ನಾರ | ಸರಕಾರಿ ಜಾಗ ಕಬಳಿಕೆಗೆ ಯತ್ನ : ಶಾಸಕ ಸಂಜೀವ ಮಠಂದೂರು Read More »

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಪುತ್ತೂರು : ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2024ರ ಸಾಲಿನ ವಾರ್ಷಿಕ ಕ್ರೀಡೋತ್ಸವ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ  ನಡೆಯಿತು. ಪುತ್ತೂರು ಅರಣ್ಯ ಇಲಾಖೆಯ ಬಿಟ್ ಅಧಿಕಾರಿ ರಾಜುಚಂದ್ರ ಧ್ವಜಾರೋಹಣ ನೆರವೇರಿಸಿದರು. ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ತಂದರು.  ಪುತ್ತೂರು ಸಂಚಾರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕುಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಹಾರಾಡಿ ಸರಕಾರಿ ಶಾಲೆಯಲ್ಲಿ ಸುಮಾರು 850 ವಿಧ್ಯಾರ್ಥಿಗಳು ಇರುವುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಲ್ಲದೆ, ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಭಾರತ ದೇಶವನ್ನು

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ Read More »

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು

ನ್ಯೂಯಾರ್ಕ್ : ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಕೇಸ್‌ ದಾಖಲಾಗಿದ್ದು, ಅರೆಸ್ಟ್‌ ವಾರಂಟ್‌ ಹೊರಡಿಸಲಾಗಿದೆ. ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಅದಾನಿ ವಿರುದ್ಧ ಕೇಳಿಬಂದಿದೆ. ಕೆನಡಾದ ಪೆನ್ಶನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗೂ ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಸೈರಿಲ್ ಕೆಬನೆಸ್ ಅವರೂ ಆರೋಪಿಗಳ ಪೈಕಿ ಒಬ್ಬರು. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು Read More »

ನ.24 : ಭಜಕರ ಬೃಹತ್ ಸಮಾವೇಶ | ಭಜನೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ನಡೆಯಲಿದೆ ಸಮಾವೇಶ

ಪುತ್ತೂರು: ಭಜನಾ ಸೇವೆ ಹಾಗೂ ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೃಹತ್ ಭಜಕರ ಸಮಾವೇಶವನ್ನು  ನ.24 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭಜನಾ ಪರಿಷತ್ ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್‍ ಬೆತ್ತೋಡಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಭಜನಾ ಪರಿಷತ್ ಪುತ್ತೂರು ತಾಲೂಕು, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಭಜಕರ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು,

ನ.24 : ಭಜಕರ ಬೃಹತ್ ಸಮಾವೇಶ | ಭಜನೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ನಡೆಯಲಿದೆ ಸಮಾವೇಶ Read More »

ಸೌತಡ್ಕ  ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಯಾತ್ರಾರ್ಥಿಗಳಿಂದ ಹಲ್ಲೆ

ಕೊಕ್ಕಡ :  ಸೌತಡ್ಕ ಶ್ರೀ ಮಹಾಗಣಪತಿ ಸನ್ನಿದಾನದ ಸ್ವಚ್ಚತಾ ಕೆಲಸ ನಿರ್ವಹಿಸುತ್ತಿದ್ದ  ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.20ರಂದು ನಡೆದಿದೆ. ಹಲ್ಲೆಗೊಳಗಾದ ಮಹೇಂದ್ರ ಕೊಲ್ಲಾಜೆಪಳಿಕೆ ಅವರ ತಲೆಗೆ ಗಂಭೀರ ಏಟಾಗಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು, ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಚ್ಚತಾ ಸಿಬ್ಬಂದಿಯಾದ ಮಹೇಂದ್ರ ಅವರು ತನ್ನ

ಸೌತಡ್ಕ  ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಯಾತ್ರಾರ್ಥಿಗಳಿಂದ ಹಲ್ಲೆ Read More »

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ

ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುಧಾರಿತ ನಕ್ಸಲರು ಬೆಂಗಳೂರು: ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ ನಕಲಿ ಎಂಬ ದಟ್ಟ ಅನುಮಾನಗಳಿರುವ ಹಿನ್ನೆಲೆಯಲ್ಲಿ ಎನ್‌ಕೌಂಟರ್‌ನ ಸಾಚಾತನ ತಿಳಿಯಲು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕೆಂದು ಸುಧಾರಿತ ನಕ್ಸಲೀಯರು ಒತ್ತಾಯಿಸಿದ್ದಾರೆ. ವಿಕ್ರಂ ಗೌಡ ಅಲಿಯಾಸ್ ವಿಕ್ರಮ್ ಗೌಡ್ಲುವನ್ನು ಸೋಮವಾರ ರಾತ್ರಿ ಹೆಬ್ರಿಯ ಪೀತಬೈಲಿನಲ್ಲಿ ನಕ್ಸಲ್‌ ನಿಗ್ರಹ ಪಡೆಯವರು ಎನ್‌ಕೌಂಟರ್‌ ಮಾಡಿದ್ದಾರೆ. ಈ ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸುಧಾರಿತ ನಕ್ಸಲೀಯರು ಎನ್‌ಕೌಂಟರ್ ನಿಜವೋ ನಕಲಿಯೋ ಎಂದು ತಿಳಿಯಲು ನಿವೃತ್ತ

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ Read More »

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಫೆ.15ರಿಂದ 10ನೇ ತರಗತಿ, ಫೆ.17ರಿಂದ 12ನೇ ತರಗತಿ ಪರೀಕ್ಷೆಗಳು ಆರಂಭ ಹೊಸದಿಲ್ಲಿ : ಸಿಬಿಎಸ್‌ಇ ಶಿಕ್ಷಣ ಮಂಡಳಿ 2025ನೇ ಸಾಲಿನ 10 ಮತ್ತು 12ನೇ ತರಗತಿ ಅಂತಿಮ ಬೋರ್ಡ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಸಿದೆ. ಆ ಪ್ರಕಾರ 10ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಶುರುವಾಗಿ ಮಾರ್ಚ್‌ 18ರ ವರೆಗೆ ನಡೆಯಲಿದೆ. 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 17ರಿಂದ ಶುರುವಾಗಿ ಏಪ್ರಿಲ್‌ 4ರ ತನಕ ನಡೆಯಲಿವೆ. 10ನೇ ತರಗತಿಗೆ ಫೆ.15ರಂದು ಮೊದಲ ಪರೀಕ್ಷೆ ಇಂಗ್ಲಿಷ್‌ ಆಗಿರುತ್ತದೆ. ಅಂತೆಯೇ 12ನೇ

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್

ಪುತ್ತೂರು: ಮದುವೆಗೆ ತೆರಳುತ್ತಿದ್ದ ಬಸ್ದೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಆಮ್ಮಿನಡ್ಕ ಎಂಬಲ್ಲಿ ಇಂದು ನಡೆದಿದೆ. ಘಟನೆಯ ಪರಿಣಾಮ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್ Read More »

error: Content is protected !!
Scroll to Top