ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ ಮತ್ತು ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನಡ ಭಾಷೆ ಬೇಕೆ.. ? ಬೇಡವೇ….? ಚರ್ಚಾ ಸ್ಪರ್ಧೆ ನೆಹರೂನಗರ ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ […]

ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ Read More »

ಜೆ.ಕೆ.ಕನ್‍ ಸ್ಟ್ರಕ್ಷನ್‍ ಕಚೇರಿಯಲ್ಲಿ ಮೂರನೇ ವರ್ಷದ ಪೂಜಾ ಸಂಭ್ರಮ

ಪುತ್ತೂರು: ಏಳ್ಮುಡಿಯ ಮುಖ್ಯರಸ್ತೆಯಲ್ಲಿರುವ ಪ್ರಾವಿಡೆನ್ಸ್ ಕಾಂಪ್ಲೆಕ್ಸ್‍ ನ ಎರಡನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಜೆ.ಕೆ.ಕನ್‍ ಸ್ಟ್ರಕ್ಷನ್ ಮೂರನೇ ವರ್ಷದ ಪೂಜಾ ಸಂಭ್ರಮ ಬುಧವಾರ ನಡೆಯಿತು. ಈ ಪ್ರಯುಕ್ತ ಕಚೇರಿಯಲ್ಲಿ ಪೂಜಾ ವಿಧಿವಿಧಾನ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಜಯಕುಮಾರ್ ನಾಯರ್, ಪತ್ನಿ ಸುನಿತಾ ಜೆ.ಕೆ. ನಾಯರ್, ಪುತ್ರ ಸಿದ್ಧಾರ್ಥ್‍ ಜೆ.ಕೆ.ನಾಯರ್, ಪುತ್ರಿ ಶಿಂಧ್ಯ ಜೆ.ಕೆ.ನಾಯರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ನ್ಯೂಸ್ ಪುತ್ತೂರು ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್‍ ಕೆಡೆಂಜಿ, ಉದ್ಯಮಿ ಶಿವರಾಮ

ಜೆ.ಕೆ.ಕನ್‍ ಸ್ಟ್ರಕ್ಷನ್‍ ಕಚೇರಿಯಲ್ಲಿ ಮೂರನೇ ವರ್ಷದ ಪೂಜಾ ಸಂಭ್ರಮ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವದ ಅಂಗವಾಗಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ, ದಶಮಾನೋತ್ಸವ ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಅಂಗವಾಗಿ ಟ್ರಸ್ಟ್ ಕಚೇರಿಯ ಮೇಲ್ಭಾಗದಲ್ಲಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ ಹಾಗೂ ಟ್ರಸ್ಟ್ ಕಾರ್ಯಾಲಯದ ಉದ್ಘಾಟನೆ ಬುಧವಾರ ನಡೆಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಕಾರ್ಯಾಲಯವನ್ನು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‍ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ನಮ್ಮ ಸಮಾಜ ಎಂದು ಬಾಯಲ್ಲಿ ಹೇಳಿಕೊಳ್ಳುವುದು ಮಾತ್ರವಲ್ಲ. ಬದಲಾಗಿ ಹೃದಯದಿಂದ ಬರಬೇಕು. ಟ್ರಸ್ಟ್ ನ ವತಿಯಿಂದ ಇಚ್ಲಂಪಾಡಿಯಲ್ಲಿ ಗ್ರಾಮ ಸಮಿತಿ ಮಾಡುವಲ್ಲಿ

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವದ ಅಂಗವಾಗಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ, ದಶಮಾನೋತ್ಸವ ಕಾರ್ಯಾಲಯ ಉದ್ಘಾಟನೆ Read More »

ನ.15 : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನೆ | ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಸಮುದಾಯದವರು ಪಾಲ್ಗೊಳ್ಳಿ : ಸುರೇಶ್‍ ಬೈಲು

ಕಡಬ: ನ.15 ಶುಕ್ರವಾರ ಕಸ್ತೂರಿರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಈ ಭಾಗದ ಜನರು ಭಾಗವಹಿಸುವ ಮೂಲಕ ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಕರೆ ನೀಡಿದ್ದಾರೆ. ವರದಿ ಜಾರಿಗೆ ತುದಿಕಾಲಲ್ಲಿ ನಿಂತಿರುವ ವ್ಯವಸ್ಥೆಯ ವಿರುದ್ಧ ನಾವು ಸಂಘಟಿತವಾಗಿ ಹೋರಾಟ ಮಾಡಬೇಕಾಗಿತ್ತು. ಈ ಹಿನ್ನಲೆಯಲ್ಲಿ ನ.15ರಂದು ಗುಂಡ್ಯದಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ

ನ.15 : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನೆ | ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಸಮುದಾಯದವರು ಪಾಲ್ಗೊಳ್ಳಿ : ಸುರೇಶ್‍ ಬೈಲು Read More »

ಕಡಬ : ಮನೆ ಕೆಡವಿದ ಅಧಿಕಾರಿಗಳು; ದಯಾಮರಣ ಯಾಚಿಸಿದ ವೃದ್ಧ ದಂಪತಿ

ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ದಿಢೀರ್‌ ತೆರವುಗೊಳಿಸಿದ ಕಾರಣ ವೃದ್ಧರು ಅತಂತ್ರ ಮಂಗಳೂರು : ಅಧಿಕಾರಿಗಳು ದಿಢೀರ್‌ ಎಂದು ಮನೆಯನ್ನು ಧ್ವಂಸ ಮಾಡಿದ ಕಾರಣ ಅತಂತ್ರವಾಗೊರುವ ವೃದ್ಧ ದಂಪತಿ ಮನೆ ನಿರ್ಮಿಸಕೊಡಿ ಅಥವಾ ಸಾಯಲು ಅನುಮತಿ ಕೊಡಿ ಎಂದು ಯಾಚಿಸಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಕಡಬದಲ್ಲಿ ಸಂಭವಿಸಿದೆ.ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು ಏಕಾಏಕಿ ಧ್ವಂಸಗೊಳಿಸಲಾಗಿದೆ. ಇದರಿಂದ ಕಂಗಾಲು ಆಗಿರುವ ದಂಪತಿ ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ದಂಪತಿ

ಕಡಬ : ಮನೆ ಕೆಡವಿದ ಅಧಿಕಾರಿಗಳು; ದಯಾಮರಣ ಯಾಚಿಸಿದ ವೃದ್ಧ ದಂಪತಿ Read More »

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ

ಮುಂಡಗಾರು ಲತಾ ನೇAತೃತ್ವದ ನಕ್ಸಲ್‌ ತಂಡ ಸಕ್ರಿಯ ಕಾರ್ಕಳ : ಪಶ್ಚಿಮ ಘಟ್ಟದ ಕಾಡಿನಂಚಿನಲ್ಲಿ ಕೊಂಚ ಸಮಯ ತಣ್ಣಗಾಗಿದ್ದ ನಕ್ಸಲ್‌ ಚಟುವಟಿಕೆ ಮತ್ತೆ ಜೀವ ಪಡೆದುಕೊಂಡಿರುವುದು ಕಳೆದ ಒಂದು ವಾರದ ಬೆಳವಣಿಗೆಯಿಂದ ದೃಢಪಟ್ಟಿದೆ. ಹೋರಾಡಲು ಗಟ್ಟಿಯಾದ ವಿಷಯ ಇಲ್ಲದೆ ಮತ್ತು ನಿರಂತರವಾದ ಪ್ರತಿರೋಧದಿಂದಾಗಿ ಕಳೆದ ಕೆಲ ವರ್ಷಗಳಿಂದ ಪಶ್ಚಿಮ ಘಟ್ಟದ ಅಂಚಿನ ಪ್ರದೇಶಗಳಲ್ಲಿ ನಕ್ಸಲರು ಹೆಚ್ಚು ಚಟುವಟಿಕೆ ನಡೆಸುತ್ತಿರಲಿಲ್ಲ. ಆದರೆ ಯಾವಾಗ ಸರಕಾರ ಕುದುರೆಮುಖ ರಾಷ್ಟ್ರೀಯ ಅರಣ್ಯದ ಒತುವರಿ ತೆರವಿಗೆ ಆದೇಶಿಸಿತೋ ಆಗಲೇ ಎದ್ದು ಕುಳಿತ ನಕ್ಸಲರು

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ Read More »

ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ?

ಸರಕಾರದ ಇಮೇಜ್‌ ಸುಧಾರಣೆಗೆ 7-8 ಸಚಿವರನ್ನು ಕೈಬಿಡಲು ಚಿಂತನೆ ಬೆಂಗಳೂರು : ಉಪಚುನಾವಣೆ ಮುಗಿದ ಬಳಿಕ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡಿ ಸರಕಾರದ ಇಮೇಜ್‌ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಹರಿದಾಡಲಾರಂಭಿಸಿದೆ. ಬರೀ ಒಂದೂವರೆ ವರ್ಷದ ಆಡಳಿತದಲ್ಲಿ ಕಾಂಗ್ರೆಸ್‌ ಸರಕಾರ ಇನ್ನಿಲ್ಲದ ಹಿನ್ನಡೆಯನ್ನು ಅನುಭವಿಸಿದೆ. ಭ್ರಷ್ಟಾಚಾರದ ಕಳಂಕ ಸರಕಾರಕ್ಕೆ ಮೆತ್ತಿಕೊಂಡಿದ್ದು, ಹಲವು ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನವಿದೆ. ಈ ಹಿನ್ನೆಲೆಯಲ್ಲಿ ನಿಷ್ಕ್ರಿಯ ಮತ್ತು ಆರೋಪ ಹೊತ್ತಿರುವ ಸಚಿವರನ್ನು ಬದಲಾಯಿಸಿ ಆಡಳಿತವನ್ನು ಚುರುಕುಗೊಳಿಸಲು

ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ? Read More »

ಅಂಬಿಕಾದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳ ಉದ್ಘಾಟನೆ | ಆಧುನಿಕ ಶಿಕ್ಷಣದೊಂದಿಗೆ ಧರ್ಮದ ಜ್ಞಾನವೂ ಅಗತ್ಯ : ಬಾಲಚಂದ್ರ ನಟ್ಟೋಜ

ಪುತ್ತೂರು: ಆಧುನಿಕ ಶಿಕ್ಷಣದ ಜೊತೆಗೆ ಸನಾತನ ಧರ್ಮದ ಜ್ಞಾನವೂ ಸಿಕ್ಕಿದಾಗ ಶಿಕ್ಷಣ ವ್ಯವಸ್ಥೆಗೆ ನ್ಯಾಯ ಕೊಟ್ಟಂತಾಗುತ್ತದೆ. ರಸಾಯನಶಾಸ್ತ್ರ, ಭೌತಶಾಸ್ತ್ರದಂತಹ ವಿಷಯಗಳ ಜತೆಗೆ ಧರ್ಮ ಶಿಕ್ಷಣವನ್ನೂ ಕೊಟ್ಟಾಗ ನಿಜವಾದ ಶಿಕ್ಷಣ ಸಾಕಾರಗೊಳ್ಳುತ್ತದೆ. ಧರ್ಮದ ಜೊತೆಗೆ ಜಾಗೃತಿಯನ್ನೂ ಮೂಡಿಸುವುದು ಅಗತ್ಯ ಎಂದು ಪುಣೆಯ ದೀಪಕ್ ಫರ್ಟಿಲೈಝರ್ಸ್ ಆಂಡ್ ಕೆಮಿಕಲ್ಸ್‌ನ ವಿಶ್ರಾಂತ ಜನರಲ್ ಮ್ಯಾನೇಜರ್ ಬಾಲಚಂದ್ರ ನಟ್ಟೋಜ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರಂಭಿಸಲಾದ ಧಾರ್ಮಿಕ ಶಿಕ್ಷಣ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು.ಪರಪೀಡನೆ ಮಾಡದೆ ಪರೋಪಕಾರ ಮಾಡುತ್ತಾ ಮುಕ್ತಿಯತ್ತ

ಅಂಬಿಕಾದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳ ಉದ್ಘಾಟನೆ | ಆಧುನಿಕ ಶಿಕ್ಷಣದೊಂದಿಗೆ ಧರ್ಮದ ಜ್ಞಾನವೂ ಅಗತ್ಯ : ಬಾಲಚಂದ್ರ ನಟ್ಟೋಜ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.20 ಸಾವಿರ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಸರಿತಾ ಡಿ ಅವರು ತೀರ್ಪು ನೀಡಿದ್ದಾರೆ. ಕಬಕ ಗ್ರಾಮದ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಾಫ ಯಾನೆ ಮುಸ್ತಾಫ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ Read More »

ಸಂಪುಟದಿಂದ ಜಮೀರ್‌ ಖಾನ್‌ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ

ಕುಮಾರಸ್ವಾಮಿಯವರನ್ನು ಕರಿಯ ಎಂದು ಹೀಯಾಳಿಸಿದ್ದ ಜಮೀರ್‌ ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿಯವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘ ಹಾಗೂ ಸಭಾದ ಪದಾಧಿಕಾರಿಗಳು, ಕುಮಾರಸ್ವಾಮಿ ಅವರ ಮೈಬಣ್ಣದ ಬಗ್ಗೆ ಜಮೀರ್‌ ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಸಚಿವರಾದವರಿಗೆ

ಸಂಪುಟದಿಂದ ಜಮೀರ್‌ ಖಾನ್‌ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ Read More »

error: Content is protected !!
Scroll to Top