ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ

ಸುಳ್ಯ : ಕೆಎಸ್‍ ಆರ್‍ ಟಿಸಿ ಬಸ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಸಹೋದರಿಯರಿಬ್ಬರು ಗಾಯಗೊಂಡು, ಒಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ತಿರುವಿನಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ […]

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ Read More »

ಕೆರೆಗೆ ಬಿದ್ದು ಮೃತ್ಯು

ಪುತ್ತೂರು: ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ಇಂದು ನಡೆದಿದೆ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತಪಟ್ಟವರು. ತನ್ನ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೆರೆಗೆ ಬಿದ್ದು ಮೃತ್ಯು Read More »

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್‌ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ಪಟ್ಟವರು. ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು Read More »

ಸಿಎಂ ಸಮಾವೇಶಕ್ಕೆ 300 ರೂ. ಕೊಟ್ಟು ಜನ ಕರೆತಂದ ಕಾಂಗ್ರೆಸ್‌ : ವೀಡಿಯೊ ವೈರಲ್‌

ಬೆಂಗಳೂರು: ಸಂಡೂರು ಉಪಚುನಾವಣೆಗಾಗಿ ನಿನ್ನೆ ಬಳ್ಳಾರಿಯ ಸಂಡೂರಿನಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮಾವೇಶಕ್ಕೆ 300 ರೂ. ಕೊಟ್ಟು ಜನರನ್ನು ಕರೆದುಕೊಂಡು ಬಂದಿರುವ ವೀಡಿಯೊ ವೈರಲ್‌ ಆಗಿ ಕಾಂಗ್ರೆಸ್‌ ತೀವ್ರ ಮುಜುಗರ ಅನುಭವಿಸಿದೆ. ಸಂಡೂರಿನ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಸಿದ್ದರಾಮಯ್ಯ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಜನರನ್ನು ಕರೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 300 ರೂ. ಕೊಡುವುದಾಗಿ ಮಹಿಳೆಯರಿಗೆ ಆಮಿಷವೊಡ್ಡಲಾಗಿತ್ತು ಎನ್ನಲಾಗಿದೆ. ಟೋಕನ್ ಸಮೇತ ಮಹಿಳೆಯರು

ಸಿಎಂ ಸಮಾವೇಶಕ್ಕೆ 300 ರೂ. ಕೊಟ್ಟು ಜನ ಕರೆತಂದ ಕಾಂಗ್ರೆಸ್‌ : ವೀಡಿಯೊ ವೈರಲ್‌ Read More »

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ವಾಸ್ತು ವಿನ್ಯಾಸ”ದ  ಕುರಿತು ರಾಜ್ಯ  ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸತ್ಯ ಗಣೇಶ್  ಎಂ. ಕಾರ್ಯಾಗಾರ ಉದ್ಘಾಟಿಸಿ, ವಾಸ್ತು ಶಾಸ್ತ್ರವು ಪ್ರಕೃತಿಗೆ ಹೊಂದಿಕೊಂಡು ಗೃಹ ನಿರ್ಮಾಣ  ಹಾಗೂ ಯಾವುದೇ ಸಂಸ್ಥೆಗಳನ್ನು ನಿರ್ಮಿಸಲು ಅನುಸರಿಸ ಬೇಕಾದ ನಿಯಮಗಳು. ಪುರಾತನ ನಾಗರಿಕತೆ ಕಾಲದಿಂದಲೂ  ವಾಸ್ತು ಶಾಸ್ತ್ರವನ್ನು ಅನುಸರಿಸಿಕೊಂಡು ಬಂದಿದ್ದೇವೆ. ವೈಜ್ಞಾನಿಕವಾಗಿ ವಾಸ್ತು ವಿನ್ಯಾಸ, ವಾಸ್ತು ಶಾಸ್ತ್ರವು  ಪ್ರಸ್ತುತ ವಿವಿಧ ಪದವಿಗಳ ಮೂಲಕ ಲಭ್ಯವಿದ್ದು ಬಹಳಷ್ಟು ವ್ಯಾಪ್ತಿ

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ Read More »

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌

ರೈತನ ಆತ್ಮಹತ್ಯೆಗೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪ ಹೊರಿಸಿ ಕೇಸ್‌ ಬೆಂಗಳೂರು: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ Read More »

ಒಂದು ತಿಂಗಳಲ್ಲಿ ಗತಿ ಕಾಣಿಸುತ್ತೇವೆ, ಧೈರ್ಯವಿದ್ದರೆ ಉಳಿಸಿ…

ಸಲ್ಮಾನ್‌ ಖಾನ್‌ಗೆ ಬಂತು ಮತ್ತೊಂದು ಬೆದರಿಕೆ ಕರೆ ಮುಂಬಯಿ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ಬಳಿಕ ಭೀತಿಯಿಂದಲೇ ಬದುಕುತ್ತಿರುವ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ಮುಂಬಯಿಯ ಟ್ರಾಫಿಕ್‌ ಕಂಟ್ರೋಲ್‌ ರೂಮ್‌ಗೆ ಗುರುವಾರ ಮಧ್ಯರಾತ್ರಿ ಕರೆ ಬಂದಿದ್ದು, ಜೈಲಿನಲ್ಲಿರುವ ಲಾರೆನ್ಸ್‌ ಬಿಷ್ಣೋಯ್‌ ಮತ್ತು ಸಲ್ಮಾನ್‌ ಖಾನ್‌ ಹೆಸರು ಸೇರಿಸಿ ಹಾಡು ಬರೆದ ಹಿಂದಿ ಸಿನೇಮಾಗಳ ಗೀತ ರಚನೆಕಾರನಿಗೆ ಒಂದು ತಿಂಗಳಲ್ಲಿ ಒಂದು ಗತಿ ಕಾಣಿಸುತ್ತೇವೆ ಎಂದು ಬೆದರಿಕೆಯೊಡ್ಡಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.ಹಾಡು

ಒಂದು ತಿಂಗಳಲ್ಲಿ ಗತಿ ಕಾಣಿಸುತ್ತೇವೆ, ಧೈರ್ಯವಿದ್ದರೆ ಉಳಿಸಿ… Read More »

ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ

ಪುತ್ತೂರು: ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ. ರಾಷ್ಟ್ರೀಯತೆಯ ಚಿಂತನೆಯಲ್ಲಿ ಬೀಜಾಂಕುರವಾದ ಪಕ್ಷ ಇಂದು ದೇಶದ ಜನ ಮಾನಸದಲ್ಲಿ ಆಳವಾಗಿ ಬೇರೂರಿದೆ. ದೇಶದ ಜನತೆಯ ಅಭೂತಪೂರ್ವ ಬೆಂಬಲದಿಂದ ಇವೆಲ್ಲ ಸಾಧ್ಯವಾಗಿದೆ ಎಂದರು.

ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಪುತ್ತೂರು: ಯಾವುದೇ ಅಪರಾಧವನ್ನು ಮಾಡಿ ಪೋಲಿಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಆವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೋಲಿಸ್ ಸಬ್-ಇನ್ಸ್‌ಪೆಕ್ಟರ್ ಭವಾನಿ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಂಟಿ ರ್ಯಾಗಿಂಗ್‍ ಕಮಿಟಿ, ಆಂಟಿ ರ್‍ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು.

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ Read More »

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರ ಓಡಾಟದ ಶಂಕೆ

ಚಿಕ್ಕಮಗಳೂರು : ಕಾರ್ಕಳದ ಬಳಿಕ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ನಕ್ಸಲರ ಓಡಾಟದ ಶಂಖೆ ವ್ಯಕ್ತವಾಗಿದೆ. ಆರು ಮಂದಿ ನಕ್ಸಲರು ಓಡಾಡಿದ್ದಾರೆ ಎಂಬ ಮಾಹಿತಿ ಹರಿದಾಡಿ ಆಧಾರದ ಮೇಲೆ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದೆ.ಕಳಸ ಮತ್ತು ಶೃಂಗೇರಿ ತಾಲೂಕಿನ ಘಟ್ಟ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಗೊಂಡಿದೆ. ಹಲವು ವರ್ಷಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಓಡಾಟದ ಸದ್ದು ಕೇಳಿದ್ದು, ಈ ಭಾಗಗಳಲ್ಲಿ ಆತಂಕ ಹೆಚ್ಚಿಸಿದೆ.ಈ ವರ್ಷ ಏಪ್ರಿಲ್‌ನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಕರಾವಳಿ ಭಾಗದಲ್ಲಿ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರ ಓಡಾಟದ ಶಂಕೆ Read More »

error: Content is protected !!
Scroll to Top