ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ

ಹೊಸದಿಲ್ಲಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧವಿರುವಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​​ಗೆ ಅರ್ಜಿ […]

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ Read More »

ಕೇರ್ಪಡ ದಲ್ಲಿ ಹಿಂದೂ ಧಾರ್ಮಿಕ  ಶಿಕ್ಷಣ ಪ್ರಾರಂಭ

ಕಡಬ: ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರದ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಆರಂಭಿಸಲಾಯಿತು. ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ  ಕೇಶವಪ್ರಸಾದ್ ಮುಳಿಯ ಹಾಗೂ ಮುರಳೀಕೃಷ್ಣ ಹಸಂತಡ್ಕ ಅವರ ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100

ಕೇರ್ಪಡ ದಲ್ಲಿ ಹಿಂದೂ ಧಾರ್ಮಿಕ  ಶಿಕ್ಷಣ ಪ್ರಾರಂಭ Read More »

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂ ಮೂಡಬೇಕು. ಆಲೋಚನೆಗಳು ನಿರ್ದಿಷ್ಟ ಪರಿಧಿಗೆ ಸೀಮಿತವಾಗದೆ ವಿವಿಧ ಆಯಾಮಗಳಲ್ಲಿ ಚಿಂತಿಸುವಂತಾಗಬೇಕು. ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರನಾಗಬೇಕು ಎಂದು ಕುಂಬ್ಳೆ ಸಮೂಹ ಸಂಸ್ಥೆಗಳ ನಿರ್ದೇಶಕ ಕುಂಬ್ಳೆ ನರಸಿಂಹ ಪ್ರಭು ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ’ಉದ್ಯಮಶೀಲತೆ- ಕಲ್ಪನೆಯಿಂದ ವಾಸ್ತವಕ್ಕೆ ಪರಿವರ್ತನೆ’ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರಾಯಣಮೂರ್ತಿ, ಅಜಿಂ ಪ್ರೇಮ್‌ಜಿ ಇನ್ಫೋಸಿಸ್, ವಿಪ್ರೋ ಕಂಪನಿಗಳನ್ನು ಕಟ್ಟುವ

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ Read More »

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಮಾಡಲು ಸರಕಾರ ಆದೇಶ

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸದಿದ್ದರೆ ಬೀಳಲಿದೆ ದಂಡ ಬೆಂಗಳೂರು: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿಪಿಎಲ್‌) ಪಡಿತರ ಚೀಟಿ ಹೊಂದಿದ್ದಿದ್ದರೆ ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್ ನೀಡದಿದ್ದರೆ ಕಾನೂನು ಕ್ರಮದ ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣೆ ನಡೆಯುತ್ತಿದ್ದು, ಅನರ್ಹವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಮಾಡಲು ಸರಕಾರ ಆದೇಶ Read More »

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.ರೈಲು ಸಂಖ್ಯೆ 06597 ಎಸ್‌ಎಂವಿಟಿ ಬೆಂಗಳೂರು – ಕಾರವಾರ ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ಟ್ರೈನ್‌ ಅಕ್ಟೋಬರ್ 30ರಂದು ಮಧ್ಯಾಹ್ನ 1 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು Read More »

ಕಾಶ್ಮೀರ : ವೈದ್ಯ, 6 ಕಾರ್ಮಿಕರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರು

ಶ್ರೀನಗರ: ಕೆಲ ದಿನಗಳಿಂದ ಶಾಂತಿಯುತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದೆ.ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಓರ್ವ ವೈದ್ಯ ಮತ್ತು ಆರು ಮಂದಿ ಕಾರ್ಮಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತಲುಪಿದ್ದು, ಪ್ರದೇಶವನ್ನು ಸುತ್ತುವರಿದಿವೆ. ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಿವೆ. ದಾಳಿಗೊಳಗಾದ ಕಾರ್ಮಿಕರು ಝಡ್

ಕಾಶ್ಮೀರ : ವೈದ್ಯ, 6 ಕಾರ್ಮಿಕರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರು Read More »

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

ಬೆಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ಹೋದ ವೇಳೆ ಹೃದಯಾಘಾತವಾಗಿ ನಿಧನ ಮಂಗಳೂರು : ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಸೋಮವಾರ ಮುಂಜಾನೆ ವೇಳೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಸೋಮವಾರದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್.ಕೆ ಭಟ್‌ ಅವರ ಮನೆಯಲ್ಲಿ ಬಂದಿಳಿದ ತಂಡದಲ್ಲಿದ್ದ ಬಂಟ್ವಾಳ ಆಚಾರ್ಯರಿಗೆ ಇಂದು ಮುಂಜಾನೆ 4 ಗಂಟೆಗೆ ವೇಳೆಗೆ ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ Read More »

ಬಳ್ಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು : ಚಿನ್ನಾಭರಣ ಕಳವು

ಸುಬ್ರಹ್ಮಣ್ಯ: ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರ ಮನೆಯಿಂದ ಅಪಾರ ಪ್ರಮಾಣದ ಚಿನ್ನ ಮತ್ತು ಹಣ ಕಳವು ಮಾಡಿದ ಘಟನೆ ನಡದಿದೆ. 12 ಲಕ್ಷ ರೂಪಾಯಿ ನಗದು ಮತ್ತು 28 ಪವನ್ ಚಿನ್ನ ಕಳ್ಳತನವಾಗಿರುವುದು ಭಾನುವಾರ  ಬೆಳಕಿಗೆ ಬಂದಿದೆ. ಅಕ್ಕೇಣಿ ಸುಂದರ ಗೌಡ ಅವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆ ಪೆರಿಗೇರಿಗೆ ಹೋಗಿದ್ದರು. ಭಾನುವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ

ಬಳ್ಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು : ಚಿನ್ನಾಭರಣ ಕಳವು Read More »

شحن 1xbet مجان

شحن 1xbet مجانا تحميل سكربت الطياره 1xbet مجانا واربح 500$ عن طريق هكر الطيارة 1xbet Collision Apk معلومة Content الوسائل المالية التي يدعمها 1xbet المغرب” يقدم 1xbet Cell Phone مجموعة كبيرة من الأحداث وخيارات الرهان كود الخصم 1xbet 2024: أدخل 1xcompletesports للحصول على رهان مجاني إضافي بنسبة 30% يقدم 1xbet Mobile مجموعة كبيرة من الأحداث

شحن 1xbet مجان Read More »

ಕಾಂಗ್ರೆಸ್ ಮುಖಂಡನಿಗೆ ಗಂಭೀರ ಹಲ್ಲೆ | ಆರೋಪಿಗಳು ಪೊಲೀಸ್ ವಶಕ್ಕೆ,, ವಿಚಾರಣೆ

ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಜಂಕ್ಷನ್ ನಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರಿಗೆ ಇಬ್ಬರು ಸೇರಿಕೊಂಡು ಗಂಭೀರ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಸ್ಥಳೀಯ ನಿವಾಸಿ, ಕಾಂಗ್ರೆಸ್ ಮುಖಂಡರಾದ  ರಘುನಾಥ ರೈ ಎಂಬವರ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ತಿಂಗಳಾಡಿಯ ಅಂಗಡಿಯೊಂದರ ಬಳಿ ರಘುನಾಥ ರೈ ಅವರು ನಿಂತಿದ್ದಾಗ ಅಲ್ಲಿಗೆ ಬಂದ ಯುವಕರಿಬ್ಬರು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಿದ್ದಾರೆ. ತಲೆಯನ್ನು ಹಿಡಿದು ಗೋಡೆಗೆ ಜಜ್ಜಿದ್ದು ಗಂಭೀರ ಗಾಯಗೊಂಡ ರಘುನಾಥ ರೈ ಅವರನ್ನು ಆಸ್ಪತ್ರೆಗೆ

ಕಾಂಗ್ರೆಸ್ ಮುಖಂಡನಿಗೆ ಗಂಭೀರ ಹಲ್ಲೆ | ಆರೋಪಿಗಳು ಪೊಲೀಸ್ ವಶಕ್ಕೆ,, ವಿಚಾರಣೆ Read More »

error: Content is protected !!
Scroll to Top