ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧವಾದ ಮಹಿಳೆಯ ಮನವೊಲಿಸಿದ ಡೆಲಿವರಿ ಬಾಯ್

ಚೆನ್ನೈ: ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಮಹಿಳೆಯೊಬ್ಬರು ‌ಮಧ್ಯರಾತ್ರಿ ವೇಳೆ ಬ್ಲಿಂಕಿಟ್ ಮೂಲಕ ಇಲಿಪಾಶಾಣ ಆರ್ಡರ್ ಮಾಡಿದ್ದು, ಆರ್ಡರ್ ತಂದು ಕೊಡಲು ಬಂದ ಡೆಲಿವರಿ ಬಾಯ್ ಆಕೆಯ ಜೀವ ಉಳಿಸಿದ ಘಟನೆ ನಡೆದಿದೆ. ಈ ವಿಷಯವನ್ನು ಡೆಲಿವರಿ ಕೊಡಲು ಹೋಗಿ, ಮಹಿಳೆಯ ಮನಃಪರಿವರ್ತನೆ ಮಾಡಿದ ಯುವಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮಧ್ಯರಾತ್ರಿ ಇಲಿ ಪಾಷಾಣದ ಆರ್ಡರ್ ಸಿಕ್ಕಾಗ ನನಗೆ ಅನುಮಾನ ಬಂತು. ಆ ಪಾರ್ಸೆಲ್ ಡೆಲಿವರಿಗೆ ಹೋದಾಗ ಆರ್ಡರ್ ಮಾಡಿದ ಮಹಿಳೆ ಅಳುತ್ತಾ ಬಾಗಿಲು ತೆರೆದರು. ತಾನು ಡೆಲಿವರಿ […]

ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧವಾದ ಮಹಿಳೆಯ ಮನವೊಲಿಸಿದ ಡೆಲಿವರಿ ಬಾಯ್ Read More »

ಕಾರು ವ್ಯಾಪಾರಕ್ಕೆ ಸಂಬಂಧಿಸಿದ ಮಾತುಕತೆ: ಚೂರಿ ಇರಿತ, ದೂರು ದಾಖಲು

ಪುತ್ತೂರು: ಕಾರು ವ್ಯಾಪಾರಕ್ಕೆ ಸಂಬಂಧಿಸಿದ ಮಾತುಕತೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರಿಗೆ ‌ತಂಡವೊಂದು ಚೂರಿಯಿಂದ ತಿವಿದು, ಹಲ್ಲೆ ನಡೆಸಿರುವ ಘಟನೆ ಕೆದಿಲದ ಸತ್ತಿಕಲ್ಲು ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಗಾಯಾಳುವನ್ನು ಸರೋಳಿ ನಿವಾಸಿ ಅಬ್ಬುಬಕ್ಕರ್ ರಾಶೀಕ್(28) ಎಂದು ಗುರುತಿಸಲಾಗಿದೆ. ರಾಶೀಕ್ ಅವರಿಗೆ ಬೆಂಗಳೂರಿನ ಶ್ರೀರಾಮ ಫೈನಾನ್ಸ್‌ನವರು ಸ್ವಾಧೀನಕ್ಕೆ ತೆಗೆದುಕೊಂಡ ಇನ್ನೋವಾ ಕಾರನ್ನು ಮಾರಾಟ ಮಾಡಲಾಗಿತ್ತು. ಆದರೆ ಕಾರಿನ ಮಾಲೀಕ ಸೂರಜ್ ಎಂಬವರು ಈ ಕಾರನ್ನು ಮತ್ತೆ ಖರೀದಿ ಮಾಡಲು ತಮ್ಮ ಏಳೆಂಟು ಮಂದಿ ಸ್ನೇಹಿತರ ಜೊತೆಗೆ ರಾಶೀಕ್ ಅವರೊಂದಿಗೆ

ಕಾರು ವ್ಯಾಪಾರಕ್ಕೆ ಸಂಬಂಧಿಸಿದ ಮಾತುಕತೆ: ಚೂರಿ ಇರಿತ, ದೂರು ದಾಖಲು Read More »

ಮಾಜಿ ಸಚಿವ ಈಶ್ವರಪ್ಪನವರಿಗೆ ವಿದೇಶದಿಂದ ಬೆದರಿಕೆ ಕರೆ

ಭದ್ರತೆ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಕಳವಳ ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಜ.7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಬಂದ ಬೆದರಿಕೆ ಕರೆ ಅವರ ಭದ್ರತೆ ಕುರಿತಾಗಿ ಮತ್ತೊಮ್ಮೆ ಆತಂಕ ಹುಟ್ಟುಹಾಕಿದೆ. ಈಶ್ವರಪ್ಪ ಅವರಿಗೆ ಈ ಹಿಂದೆಯೂ ಬೆದರಿಕೆ ಕರೆಗಳು ಬಂದ ಹಿನ್ನೆಲೆ ಪೊಲೀಸ್ ಭದ್ರತೆ ಹಾಗೂ

ಮಾಜಿ ಸಚಿವ ಈಶ್ವರಪ್ಪನವರಿಗೆ ವಿದೇಶದಿಂದ ಬೆದರಿಕೆ ಕರೆ Read More »

ಬುರ್ಖಾ, ಹಿಜಾಬ್‌ ಧರಿಸಿದವರಿಗೆ ಚಿನ್ನದಂಗಡಿಗಳಿಗೆ ಪ್ರವೇಶವಿಲ್ಲ!

ಚಿನ್ನ ಖರೀದಿಸಬೇಕಾದರೆ ಮುಖ ತೋರಿಸಲೇಬೇಕೆಂಬ ನಿಯಮ ಜಾರಿ ಪಾಟ್ನಾ: ಬಿಹಾರದಾದ್ಯಂತ ಆಭರಣದ ಅಂಗಡಿಗಳಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಮಾಸ್ಕ್, ಹೆಲ್ಮೆಟ್ ಧರಿಸಿದ ಗ್ರಾಹಕರಿಗೆ ಪ್ರವೇಶವಿಲ್ಲ ಎಂದು ನೋಟಿಸ್ ಹಾಕಲಾಗಿದೆ. ಹಾಗೆಂದು ಇದು ಯಾವುದೇ ಧಾರ್ಮಿಕ ದ್ವೇಷದ ಕ್ರಮವಲ್ಲ. ಮುಖ ಸಂಪೂರ್ಣವಾಗಿ ಅಥವಾ ಭಾಗಶಃ ಮುಚ್ಚಿರುವ ಗ್ರಾಹಕರಿಗೆ ಪ್ರವೇಶ ನಿರಾಕರಿಸುವ ತೀರ್ಮಾನವನ್ನು ಅಲ್ಲಿನ ಆಭರಣ ವ್ಯಾಪಾರಿಗಳು ಕೈಗೊಂಡಿದ್ದಾರೆ. ಆಭರಣ ಅಂಗಡಿಗಳಲ್ಲಿ ಕಳ್ಳತನ ಮತ್ತು ದರೋಡೆ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಠಿಯಿಂದ ಅಖಿಲ ಭಾರತ ಜುವೆಲ್ಲರ್ಸ್ ಮತ್ತು ಗೋಲ್ಡ್

ಬುರ್ಖಾ, ಹಿಜಾಬ್‌ ಧರಿಸಿದವರಿಗೆ ಚಿನ್ನದಂಗಡಿಗಳಿಗೆ ಪ್ರವೇಶವಿಲ್ಲ! Read More »

ಮೇಯಲು ಬಿಟ್ಟಿದ್ದ ದನಗಳನ್ನು ಕದ್ದವ ಸೆರೆ

ವಿಟ್ಲ : ಮೇಯಲು ಬಿಟ್ಟಿದ್ದ ಹಸುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ (30) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಅವಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ್ ಎಂಬವರ ಒಟ್ಟು 4 ದನಗಳನ್ನು ಕಳ್ಳತನ ಮಾಡಿದ ಅರೋಪಿಯಾಗಿದ್ದು, ಈತನನ್ನು ವಿಟ್ಲ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೇಯಲು ಬಿಟ್ಟಿದ್ದ ದನಗಳನ್ನು ಕದ್ದವ ಸೆರೆ Read More »

ಆಸ್ಕರ್‌ ಪ್ರಶಸ್ತಿ ರೇಸ್‌ಗೆ ಕಾಂತಾರ-ಚಾಪ್ಟರ್ 1 ಎಂಟ್ರಿ

ʻಮಹಾವತಾರ್‌ ನರಸಿಂಹʼ ಅನಿಮೇಟೆಡ್‌ ವಿಭಾಗದಲ್ಲಿ ಸ್ಪರ್ಧೆ ಬೆಂಗಳೂರು : ಕನ್ನಡದ ಯಶಸ್ವಿಯಾದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರ ಆಸ್ಕರ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದೆ. ʻಮಹಾವತಾರ್‌ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿವೆ. ಇದು ಭಾರತೀಯ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣವಾಗಿದೆ. ಆಸ್ಕರ್‌ ಪ್ರಶಸ್ತಿ ರೇಸ್‌ನಲ್ಲಿರುವ ಚಿತ್ರಗಳ ಅಂತಿಮ ಪಟ್ಟಿ ಜ.22 ರಂದು ಪ್ರಕಟವಾಗಲಿದೆ. ಮಾರ್ಚ್‌ 15 ರಂದು ಚಿತ್ರಗಳಿಗೆ ಆಸ್ಕರ್‌ ಪ್ರಶಸ್ತಿ

ಆಸ್ಕರ್‌ ಪ್ರಶಸ್ತಿ ರೇಸ್‌ಗೆ ಕಾಂತಾರ-ಚಾಪ್ಟರ್ 1 ಎಂಟ್ರಿ Read More »

ಕುಖ್ಯಾತ ಕ್ರಿಮಿನಲ್‌ ವಿಟ್ಲದಿಂದ ಮೂಡಿಗೆರೆಗೆ ಗಡಿಪಾರು

ವಿಟ್ಲ: ವಿಟ್ಲ ಕಸಬ ಗ್ರಾಮದ ನಿವಾಸಿ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬ ಕ್ರಿಮಿನಲ್‌ನನ್ನು ಪೊಲೀಸರು ಚಿಕ್ಕಮಗಳೂರಿಗೆ ಗಡಿಪಾರು ಮಾಡಿದ್ದಾರೆ. ಈತನ ವಿರುದ್ಧ ಹಲ್ಲೆ, ನಿಷೇಧಿತ ಮಾದಕ ವಸ್ತುಗಳ ಸೇವನೆ ಮತ್ತು NDPS ಕಾಯ್ದೆಯಡಿ ಉಲ್ಲಂಘನೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಿವೆ. ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಗಡಿಪಾರು ಮಾಡಲಾಗಿದೆ. ವಿಟ್ಲ ಕಸಬ ಗ್ರಾಮ ಬಂಟ್ವಾಳ ತಾಲೂಕಿನ ಅಬ್ದುಲ್‌ ಖಾದರ್‌ ಗಡಿಪಾರು ಆದ ಆರೋಪಿ. ಆರೋಪಿ ವಿರುದ್ಧ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಎನ್‌ಡಿಪಿಎಸ್

ಕುಖ್ಯಾತ ಕ್ರಿಮಿನಲ್‌ ವಿಟ್ಲದಿಂದ ಮೂಡಿಗೆರೆಗೆ ಗಡಿಪಾರು Read More »

ಪ್ರಸಾರವೇ ಇಲ್ಲದ ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಗೆ ಕೋಟಿ ಕೋಟಿ ಜಾಹೀರಾತು : ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ರಾಜ್ಯದ ಖಜಾನೆ ನಿಮ್ಮ ಪಕ್ಷದ ಸ್ವಂತ ಖಜಾನೆಯೇ ಎಂದು ಪ್ರಶ್ನಿಸಿದ ಆರ್‌.ಅಶೋಕ್‌ ಬೆಂಗಳೂರು: ಪ್ರಸಾರವೇ ಇಲ್ಲದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕರ್ನಾಟಕ ಸರ್ಕಾರ ಕೋಟಿ ಕೋಟಿ ಜಾಹೀರಾತು ಕೊಟ್ಟಿರುವ ವಿಚಾರ ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್‌ ಮೇಲೆ ಮುಗಿಬಿದ್ದಿರುವ ಬಿಜೆಪಿ ರಾಜ್ಯದ ಖಜಾನೆ ನಿಮ್ಮ ಪಕ್ಷದ ಸ್ವಂತ ಖಜಾನೆಯೇ ಎಂದು ಪ್ರಶ್ನಿಸಿದೆ. ಕರ್ನಾಟಕದ ಖಜಾನೆಯನ್ನು ಕಾಂಗ್ರೆಸ್ ಖಜಾನೆ ಮಾಡುವುದಕ್ಕೆ ಸರ್ಕಾರ ಹೊರಟಿದೆ ಎಂದು ವಿಪಕ್ಷ ‌ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸರ್ಕಾರದಿಂದ ಹೆಚ್ಚು

ಪ್ರಸಾರವೇ ಇಲ್ಲದ ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಗೆ ಕೋಟಿ ಕೋಟಿ ಜಾಹೀರಾತು : ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ Read More »

ಕನ್ನಡಿಗರ ಮೇಲೆ ಮಲಯಾಳಂ ಹೇರಿಕೆಗೆ ಸಿದ್ದರಾಮಯ್ಯ ವಿರೋಧ

ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯನ್ನು ಹಿಂದೆಗೆದುಕೊಳ್ಳಲು ಒತ್ತಾಯ ಬೆಂಗಳೂರು: ಕೇರಳ ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳಂ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ ನಿರ್ಲಕ್ಷಿಸಿ ಅವರ ಮೇಲೆ ಭಾಷೆಯನ್ನು ಹೇರಿದ್ದೇ ಆದಲ್ಲಿ ನಮ್ಮ ಸರ್ಕಾರ ಅವರ ಜತೆಯಲ್ಲಿ ನಿಂತು ಸರ್ವ ರೀತಿಯ ಬೆಂಬಲ ನೀಡಲಿದೆ ಎಂದಿದ್ದಾರೆ.

ಕನ್ನಡಿಗರ ಮೇಲೆ ಮಲಯಾಳಂ ಹೇರಿಕೆಗೆ ಸಿದ್ದರಾಮಯ್ಯ ವಿರೋಧ Read More »

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ: ಆತಂಕ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರಿಗೆ ಪೇಜಾವರ ಶ್ರೀ ಪತ್ರ

ಉಡುಪಿ: ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯ ಕೃತ್ಯದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಅವರು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಪತ್ರದಲ್ಲಿ ಹಿಂದೂ ಸಮಾಜವು ಯಾವಾಗಲೂ ಶಾಂತಿ ಮತ್ತು ಸಹಬಾಳ್ವೆಯ ತತ್ವಗಳನ್ನು ಪಾಲಿಸುತ್ತಾ ಬಂದಿದೆ. ಯಾರ ಮೇಲೆಯೂ ಹಿಂಸೆಯನ್ನು ಅಸ್ತ್ರವಾಗಿ ಬಳಸಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ: ಆತಂಕ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರಿಗೆ ಪೇಜಾವರ ಶ್ರೀ ಪತ್ರ Read More »

error: Content is protected !!
Scroll to Top