ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ: ಆತಂಕ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರಿಗೆ ಪೇಜಾವರ ಶ್ರೀ ಪತ್ರ
ಉಡುಪಿ: ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯ ಕೃತ್ಯದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಅವರು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಪತ್ರದಲ್ಲಿ ಹಿಂದೂ ಸಮಾಜವು ಯಾವಾಗಲೂ ಶಾಂತಿ ಮತ್ತು ಸಹಬಾಳ್ವೆಯ ತತ್ವಗಳನ್ನು ಪಾಲಿಸುತ್ತಾ ಬಂದಿದೆ. ಯಾರ ಮೇಲೆಯೂ ಹಿಂಸೆಯನ್ನು ಅಸ್ತ್ರವಾಗಿ ಬಳಸಿ […]










