ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ

ಪುತ್ತೂರು: ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ ಎಂದು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಆಡಳಿತ ಮಂಡಳಿ ಸದಸ್ಯೆ ಶೋಭಾ ಸಿ. ಅಡಿಗ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು […]

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ Read More »

ಮಂಗಳೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಳ : ಹಸಿರು ಪೀಠದಿಂದ ನೋಟಿಸ್‌

ಕರ್ನಾಟಕದ ಮೂರು ನಗರಗಳು ಅಪಾಯಕಾರಿ ಎಂದು ಗುರುತಿಸಿದ ಗ್ರೀನ್‌ಪೀಸ್‌ ವರದಿ ಮಂಗಳೂರು: ಅತಿಹೆಚ್ಚು ಮಾಲಿನ್ಯವಿರುವ ನಗರಗಳಲ್ಲಿ ಮಂಗಳೂರು ಕೂಡ ಸೇರಿದೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.ದಕ್ಷಿಣ ಭಾರತದ ಇತರ ನಗರಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ ಎಂಬ ಗ್ರೀನ್‌ಪೀಸ್ ಸಂಸ್ಥೆ ವರದಿ ಅಧರಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠ ನೋಟಿಸ್‌ ನೀಡಿದೆ. ಬೆಂಗಳೂರು, ಮೈಸೂರು ಮತ್ತು ಮಂಗಳೂರು ಕರ್ನಾಟಕದಲ್ಲಿ ಅತಿ ಹೆಚ್ಚು ಮಾಲಿನ್ಯವಿರುವ ನಗರಗಳು ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಳ : ಹಸಿರು ಪೀಠದಿಂದ ನೋಟಿಸ್‌ Read More »

ಸ್ಮಾರ್ಟ್ ವಾಚ್, ಸ್ಮಾರ್ಟ್ ಫೋನ್ ನಂತರ ಈಗ ಸ್ಮಾರ್ಟ್ ಗ್ಲಾಸ್ ಸರದಿ

ಮಾರ್ಕೆಟ್‌ಗೆ ದಾಂಗುಡಿ ಇಡ್ತಾ ಇವೆ ಮೆಟಾ-ರೆಬಾನ್ ಕನ್ನಡಕಗಳು ಇವತ್ತು ಯಾವುದಾದರೂ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆ ಆಗ್ತಾ ಇದೆ ಎಂದರೆ ಅದು ಐಟಿ ಕ್ಷೇತ್ರದಲ್ಲಿ. ಅದರಲ್ಲಿಯೂ ಯಾವಾಗ ಕೃತಕ ಬುದ್ಧಿಮತ್ತೆಯು (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಜೊತೆಗೆ ಸೇರಿತೋ ಆಗ ಇನ್ನೂ ವೇಗವಾಗಿ ತಾಂತ್ರಿಕತೆ ಬೆಳೆಯುತ್ತ ಇದೆ. 2030ಕ್ಕೆ ತಲುಪುವಾಗ ಮನುಷ್ಯನ ಬುದ್ಧಿಮತ್ತೆಗೆ ಸಮನಾದ ಸಾಮರ್ಥ್ಯ ಇರುವ ಸಾಫ್ಟ್‌ವೇರ್ ಕಂಡುಹಿಡಿಯುತ್ತೇವೆ ಎಂದು ಐಟಿ ಕಂಪನಿಗಳು ಸವಾಲು ಸ್ವೀಕರಿಸಿವೆ ಮತ್ತು ಈಗಲೇ ಸಂಶೋಧನೆ ಆರಂಭವಾಗಿವೆ. ಇದು ಎಲ್ಲಿಯವರೆಗೆ ತಲುಪಬಹುದು ಎನ್ನುವುದು ನಮ್ಮ ಊಹೆಗೆ

ಸ್ಮಾರ್ಟ್ ವಾಚ್, ಸ್ಮಾರ್ಟ್ ಫೋನ್ ನಂತರ ಈಗ ಸ್ಮಾರ್ಟ್ ಗ್ಲಾಸ್ ಸರದಿ Read More »

ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ, ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು

ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ನಾಮಪತ್ರ ಸಲ್ಲಿಕೆ Read More »

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು

ಪುತ್ತೂರು: ‘ ಹುಲಿವೇಷ ಕುಣಿತ’ ತುಳು ನಾಡಿನ ಛಾಪಿನ ಹಿನ್ನೆಲೆ ಇರುವ ಜನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಶನಿವಾರ ಹಾಗೂ ಅ.6 ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್ ರೈ ಬಳಜ್ಜ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪಿಲಿ ಗೊಬ್ಬು ಕಾರ್ಯಕ್ರಮದ ಉದ್ಘಾಟನೆ ಅ.6 ಭಾನುವಾರ ಬೆಳಿಗ್ಗೆ

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು Read More »

ಸಾವರ್ಕರ್‌ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು : ದಿನೇಶ್‌ ಗುಂಡೂರಾವ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮಾಂಸಾಹಾರಿಯಾಗಿದ್ದರು ಮತ್ತು ಮಾಂಸಹಾರ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಬ್ರಾಹ್ಮಣ ಸಮುದಾಯದ ಸಾವರ್ಕರ್ ಮಾಂಸ ಸೇವಿಸುತ್ತಿದ್ದರು.‌ ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಸ್ಟ್‌ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರು

ಸಾವರ್ಕರ್‌ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು : ದಿನೇಶ್‌ ಗುಂಡೂರಾವ್‌ ವಿವಾದಾತ್ಮಕ ಹೇಳಿಕೆ Read More »

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

ಪುತ್ತೂರು: ಹಿಂದಿ ಭಾಷೆಯ ಪ್ರಾವೀಣ್ಯತೆಯಿಂದ ವಿವಿಧ ವೃತ್ತಿಯಲ್ಲಿ ಆವಕಾಶಗಳು ದೊರಕುತ್ತವೆ ಹಾಗೂ ಈ ಅವಕಾಶಗಳು ಹಿಂದಿ ಭಾಷೆಯ ಪ್ರಸ್ತುತತೆಯನ್ನು ಒತ್ತಿಹೇಳುತ್ತವೆ ಎಂದು ಮಂಗಳೂರು ಕೆನರಾ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಲ್ಪನಾ ಪ್ರಭು ಹೇಳಿದರು. ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆದ ಹಿಂದಿ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ, ಕಾಲೇಜಿನ ಪ್ರಾಂಶುಪಾಲ ರೆ..ಡಾ.ಆ್ಯಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ಮಕ್ಕಳು ಭಾಷಾ ಕೌಶಲ್ಯವನ್ನು ಮೈಗೂಡಿಸಿಕೊಂಡು ಸೃಜನಶೀಲರಾಗಬೇಕು ಎಂದರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಾದ ಡೆಲ್ವಿನ್ಹಾ ಹಿಂದಿ ಕಲಿಕೆಯ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಹಿಂದಿ ದಿನಾಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ

ಪುತ್ತೂರು: ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿಯನ್ನು ಆಚರಿಸಲಾಯಿತು. ಪ್ರಾರಂಭದಲ್ಲಿ ಆಡಳಿತ ಮಂಡಳಿಯವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಸೇರಿ ಶಾಲಾ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಕುಕ್ಕೆ ಸುಬ್ರಹ್ಮಣ್ಯ ಸಬ್ ಡಿವಿಷನ್ ನ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್  ಕೆ.ಕೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಗಾಂಧೀಜಿಯವರ ಸರಳತೆ ಅಹಿಂಸಾ ತತ್ವ, ತ್ಯಾಗ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ Read More »

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ

ಸಾಹಿತಿ ಹಂಪನಾ ಅವರಿಂದ ಉತ್ಸವಗಳ ವಿಧ್ಯುಕ್ತ ಉದ್ಘಾಟನೆ, ಪುಷ್ಪಾರ್ಚನೆ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಇಂದು ಬೆಳಗ್ಗೆ ಶುಭ ಮುಹೂರ್ತದಲ್ಲಿ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಉದ್ಘಾಟಿಸಿದರು. ನಾಡದೇವತೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಬೆಳಗ್ಗೆ 9.29ಕ್ಕೆ ಶುಭ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪರ್ಚಾನೆ ಮಾಡುವ ಮೂಲಕ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ದಸರಾ ಮತ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತವಾಗಿದೆ. ಇದು ಅರಮನೆ ಹಬ್ಬವಲ್ಲ. ಜನರ ಆರಿಸಿದ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ Read More »

50 ಕೋ.ರೂ. ಕೊಡಲು ಧಮಕಿ : ಕುಮಾರಸ್ವಾಮಿ ವಿರುದ್ಧ ದೂರು

ಚನ್ನಪಟ್ಟಣ ಉಪಚುನಾವಣೆಗೆ ಹಣ ಹೊಂದಿಸಿಕೊಡಲು ಜೀವ ಬೆದರಿಕೆ ಎಂದು ಆರೋಪ ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ 50 ಕೋ.ರೂ.ಗೆ ಬೇಡಿಕೆಯಿಟ್ಟು ಜೀವ ಬೆದರಿಕೆ ಹಾಕಿದ್ದಾರೆ ಎಂದು ಜೆಡಿಎಸ್‌ ನಾಯಕ ವಿಜಯ್‌ ಟಾಟಾ ಎಂಬವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ವಿಜಯ್ ಟಾಟಾ ಬೆಂಗಳೂರಿನಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷರಾಗಿದ್ದಾರೆ.ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ

50 ಕೋ.ರೂ. ಕೊಡಲು ಧಮಕಿ : ಕುಮಾರಸ್ವಾಮಿ ವಿರುದ್ಧ ದೂರು Read More »

error: Content is protected !!
Scroll to Top