ಆಟೋರಿಕ್ಷಾಕ್ಕೆ ಕಾರು ಡಿಕ್ಕಿ : ತಂದೆ, ಐವರು ಮಕ್ಕಳಿಗೆ ಗಾಯ

ಉಪ್ಪಿನಂಗಡಿ: ವೇಗವಾಗಿ ಬಂದ ಕಾರು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಆಟೋ ಚಾಲಕ ಕಲಂದರ್ ಶಾಫಿ ಮತ್ತು ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5) ಮತ್ತು ಸಝ್ಮಾ (4) ಎಂದು ಗುರುತಿಸಲಾಗಿದೆ. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ ಮತ್ತು ಮಹಮ್ಮದ್ ಜಾಝೀರ್ […]

ಆಟೋರಿಕ್ಷಾಕ್ಕೆ ಕಾರು ಡಿಕ್ಕಿ : ತಂದೆ, ಐವರು ಮಕ್ಕಳಿಗೆ ಗಾಯ Read More »

ಸಹಪಾಠಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಸಾಯಿಸಿದ ವಿದ್ಯಾರ್ಥಿ ಸೆರೆ

ಸಹಪಾಠಿಗಳು, ವಾರ್ಡನ್‌ ಮೇಲೆ ಹಲ್ಲೆ ಮಾಡಿದ್ದ 9ನೇ ತರಗತಿ ವಿದ್ಯಾರ್ಥಿ ಬಳ್ಳಾರಿ: ಜಿಲ್ಲೆಯ ಗೋನಾಳ ಪ್ರದೇಶದ ವಸತಿ ಶಾಲೆಯಲ್ಲಿ ಸಹಪಾಠಿ ವಿದ್ಯಾರ್ಥಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದು ಹಾಸ್ಟೆಲ್‌ ವಾರ್ಡನ್‌ ಮತ್ತು ಇತರ ಏಳು ವಿದ್ಯಾರ್ಥಿಗಲ ಮೇಲೆ ಹಲ್ಲೆ ಮಾಡಿ ಓಡಿಹೋಗಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಅಪ್ರಾಪ್ತ ವಯಸ್ಸಿನವನನ್ನು ಬಳ್ಳಾರಿ ನಗರದ ಶ್ರೀರಾಮಪುರ ಕಾಲೊನಿಯ ರೂಪನಗುಡಿಯಲ್ಲಿ ಸೋಮವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ

ಸಹಪಾಠಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಸಾಯಿಸಿದ ವಿದ್ಯಾರ್ಥಿ ಸೆರೆ Read More »

ಕುತೂಹಲಕ್ಕೆ ಕಾರಣವಾದ ಡಿಕೆಶಿ ಔತಣಕೂಟ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷವಾದ ಹಿನ್ನೆಲೆಯಲ್ಲಿ ಡಿನ್ನರ್‌ ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಶಾಸಕರಿಗಾಗಿ ಏರ್ಪಡಿಸಿರುವ ಔತಣಕೂಟ ನಾನಾ ಕಾರಣಗಳಿಗಾಗಿ ಕುತೂಹಲ ಹುಟ್ಟಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ ಡಿ.ಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು, ಈ ಸಂಭ್ರಮಾಚರಣೆಗಾಗಿ ಪಕ್ಷದ ಶಾಸಕರಿಗೆ ಔತಣಕೂಟ ಆಯೋಜಿಸಿದ್ದಾರೆ ಎನ್ನಲಾಗಿದ್ದರೂ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಈಗಲೂ ಶೀತಲ ಸಮರ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ಔತಣಕೂಟಕ್ಕೆ ಮಹತ್ವ ಬಂದಿದೆ. ಇಂದಿನ ಔತಣಕೂಟದಲ್ಲಿ ಮಹತ್ವದ ಘೋಷಣೆ ಅಥವಾ ಸ್ಪಷ್ಟ ಸಂದೇಶ ರವಾನೆಗೆ

ಕುತೂಹಲಕ್ಕೆ ಕಾರಣವಾದ ಡಿಕೆಶಿ ಔತಣಕೂಟ Read More »

ವೈದ್ಯರ ಮುಷ್ಕರ : ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ವ್ಯತ್ಯಯ ಸಾಧ್ಯತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತಗೊಳಿಸಲಿರುವ ವೈದ್ಯರು ಬೆಂಗಳೂರು : ಸರ್ಕಾರದ ಎಚ್ಚರಿಕೆಯ ಹೊರತಾಗಿಯೂ ವೈದ್ಯರು ಮುಷ್ಕರ ಹೂಡಲು ಮುಂದಾಗಿರುವುದರಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ

ವೈದ್ಯರ ಮುಷ್ಕರ : ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ವ್ಯತ್ಯಯ ಸಾಧ್ಯತೆ Read More »

ಇರಾನ್‌ ಯುದ್ಧ ಶೀಘ್ರ ಮುಕ್ತಾಯ : ಟ್ರಂಪ್‌ ಹೇಳಿಕೆ

ಇರಾನ್‌ ವಾಯುನೆಲೆ, ನೌಕಾನೆಲೆ ಧ್ವಂಸ, ಸಂಪರ್ಕ ಕಡಿತ ಎಂದ ಅಧ್ಯಕ್ಷ ಅಮೆರಿಕ: ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಜಗತ್ತಿನಾದ್ಯಂತ ಕೋಲಾಹಲ ಸೃಷ್ಟಿಸಿರುವಂತೆಯೇ ಡೊನಾಲ್ಡ್‌ ಟ್ರಂಪ್‌ ಯುದ್ಧ ನಿಲ್ಲಿಸುವ ಕುರಿತು ಮಾತನಾಡಿದ್ದಾರೆ. ಫೆಬ್ರವರಿ 28ರಿಂದ ನಡೆಯುತ್ತಿರುವ ಅಮೆರಿಕ, ಇಸ್ರೇಲ್ ಮತ್ತು ಇರಾನ್ ಮೇಲಿನ ಸಂಘರ್ಷ ಕೊನೆಯಾಗುವ ಸುದ್ದಿ ಸಿಕ್ಕಿದೆ. ಇರಾನ್ ಯುದ್ಧ ಶೀಘ್ರ ಕೊನೆಗೊಳ್ಳಲಿದೆ ಎಂದು ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿಕೆ ನೀಡಿದ್ದಾರೆ. ಫ್ಲೋರಿಡಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಟೆಹ್ರಾನ್ ಯಾವುದೇ

ಇರಾನ್‌ ಯುದ್ಧ ಶೀಘ್ರ ಮುಕ್ತಾಯ : ಟ್ರಂಪ್‌ ಹೇಳಿಕೆ Read More »

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ

ಯುದ್ಧದಿಂದಾಗಿ ಗ್ಯಾಸ್‌ ಸಿಗುವುದಿಲ್ಲ ಎಂಬ ಆತಂಕದಿಂದ ಸಿಲಿಂಡರ್‌ ಸಂಗ್ರಹಿಸಲು ಮುಂದಾದ ಜನ ನವದೆಹಲಿ : ಇಸ್ರೇಲ್‌, ಅಮೆರಿಕ ಹಾಗೂ ಇರಾನ್‌ ನಡುವಿನ ಯುದ್ಧದಿಂದ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಅಭಾವ ತಲೆದೋರಿದೆ. ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ನಗರಗಳಲ್ಲಿ ಗ್ಯಾಸ್‌ ಅಭಾವದಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವ

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ Read More »

ದಂಪತಿ ಆತ್ಮಹತ್ಯೆ: ಕುಟುಂಬ ಕಲಹದ ಶಂಕೆ

ಮಂಡ್ಯ: ಕುಟುಂಬ ಕಲಹಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ. ಆರ್. ಪೇಟೆ ಪಟ್ಟಣದಲ್ಲಿ ನಡೆದಿದೆ. ದಂಪತಿ ಆತ್ಮಹತ್ಯೆಗೂ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲ್ಲಲು ಪ್ರಯತ್ನ ನಡೆಸಿದ್ದು, ಆದರೆ ಅಸ್ವಸ್ಥಗೊಂಡ ಮಗು ಬದುಕುಳಿದ ಘಟನೆ ನಡೆದಿದೆ. ಮೃತರನ್ನು ದರ್ಶನ್ ಮತ್ತು ದಿವ್ಯಶ್ರೀ ಎಂದು ಗುರುತಿಸಲಾಗಿದೆ. ಇವರು ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರ ಬಡಾವಣೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಯಾವುದೋ ಕಾರಣಕ್ಕೆ ದಂಪತಿ ತಮ್ಮ ಮಗುವನ್ನು ಕತ್ತು

ದಂಪತಿ ಆತ್ಮಹತ್ಯೆ: ಕುಟುಂಬ ಕಲಹದ ಶಂಕೆ Read More »

ಜಾತಿಗೆ ಬೆಲೆ ನಮ್ಮ ದೇಶದಲ್ಲಿ ಇರಲಿಲ್ಲ ಎನ್ನುವುದು ಇತಿಹಾಸ ಓದಿದರೆ ತಿಳಿಯುತ್ತದೆ: ಅನಂತ ಕುಮಾರ್ ಹೆಗಡೆ

ಭಟ್ಕಳ: ಭಾರತದಲ್ಲಿ ಜಾತಿಗೆ ಎಂದೂ ಬೆಲೆ ಇರಲಿಲ್ಲ. ಯೋಗ್ಯತೆಗೆ ಬೆಲೆ ಇತ್ತು. ನಮ್ಮಂತಹ ಬುದ್ಧಿವಂತರು ಜಾತಿಗೆ ಪ್ರಾಶಸ್ತ್ಯ ನೀಡಿದ್ದು. ನಮ್ಮ ಹಿಂದಿನ ಕಾಲದ ಸತ್ಯ ಏನು ಎನ್ನುವುದು ಇತಿಹಾಸ ಓದಿದರೆ ಅರಿವಾಗುತ್ತದೆ ಎಂದು ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ತಿಳಿಸಿದ್ದಾರೆ. ಅವರು ಭಟ್ಕಳದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ಇತಿಹಾಸದಲ್ಲಿ ಆಗಿ ಹೋದ 90% ಗಳಷ್ಟು ಋಷಿಗಳು ಬ್ರಾಹ್ಮಣರಲ್ಲ. ವಾಲ್ಮೀಕಿ, ವಿಶ್ವಾಮಿತ್ರರೂ ಬ್ರಾಹ್ಮಣರಲ್ಲ. ಜಾತ್ಯಾತೀತತೆ ಎಂದರೆ ಅದು ಹಿಂದುತ್ವ. ನಾವು

ಜಾತಿಗೆ ಬೆಲೆ ನಮ್ಮ ದೇಶದಲ್ಲಿ ಇರಲಿಲ್ಲ ಎನ್ನುವುದು ಇತಿಹಾಸ ಓದಿದರೆ ತಿಳಿಯುತ್ತದೆ: ಅನಂತ ಕುಮಾರ್ ಹೆಗಡೆ Read More »

ಕಾಡಾನೆ ದಾಳಿ ಮಹಿಳೆ ಬಲಿ

ಕುಶಾಲನಗರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ತ್ಯಾಗತ್ತೂರಿನಲ್ಲಿ ‌ನಡೆದಿದೆ. ನಂಜರಾಯಪಟ್ಟಣದ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯೆ, ಬಾಳೆಗುಂಡಿ ಗಿರಿಜನ ಹಾಡಿಯ ‌ನಿವಾಸಿ ಜಲಜಾಕ್ಷಿ(53) ಎಂಬವರೇ ಮೃತ ದುರ್ದೈವಿ. ಸ್ಥಳಕ್ಕೆ ಎಸಿಎಫ್ ಗೋಪಾಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ ಮಹಿಳೆ ಬಲಿ Read More »

ಅಕ್ಷಯ ಕಾಲೇಜಿನಲ್ಲಿ ‘ಆರ್ಥಿಕ ಸಾಕ್ಷರತೆ’ ಮಾಹಿತಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಎಲೈಟ್” ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ “ಆರ್ಥಿಕ ಸಾಕ್ಷರತೆ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಕಿಶೋರ್ ಕುಮಾರ್ ರೈ ಕೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆರ್ಥಿಕ ಸಾಕ್ಷರತೆಯ ವ್ಯಾಪ್ತಿಗೆ ಬರುವ ಕೌಶಲ್ಯಗಳಲ್ಲಿ ಮನೆಯ ಬಜೆಟ್, ಸಾಲ ನಿರ್ವಹಣೆ,

ಅಕ್ಷಯ ಕಾಲೇಜಿನಲ್ಲಿ ‘ಆರ್ಥಿಕ ಸಾಕ್ಷರತೆ’ ಮಾಹಿತಿ ಕಾರ್ಯಾಗಾರ Read More »

error: Content is protected !!
Scroll to Top