ಪ್ರತಿಭಾ ಕಾರಂಜಿ : ನಮ್ಮ ಶಾಲೆ ಸಾಮೆತ್ತಡ್ಕ ದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ “ನಮ್ಮ ಶಾಲೆ ಸಾಮೆತ್ತಡ್ಕ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಶಝ್ಮ ಫಾತಿಮಾ ಕಿರಿಯರ ವಿಭಾಗದ ಅರೇಬಿಕ್ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ದೇಶ ಭಕ್ತಿ ಗೀತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. 2ನೇ ತರಗತಿಯ ಪರೀಕ್ಷಿತ್ ಎಸ್‍.ಎನ್‍. ಕಿರಿಯರ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು […]

ಪ್ರತಿಭಾ ಕಾರಂಜಿ : ನಮ್ಮ ಶಾಲೆ ಸಾಮೆತ್ತಡ್ಕ ದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೆಳಂದೂರು:- ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ನೇತೃತ್ವದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ, ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು 2023-24 ನೇ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಯಿತು. ವಚನ ಜಯರಾಮ್ ಅರವಗುತ್ತು ದೀಪ ಪ್ರಜ್ವಲನದ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿಗಳು, ಪೋಷಕರು ಕಾಲೇಜಿನ ರಾಯಭಾರಿಗಳಾಗಿ ಕಾಲೇಜಿನ ಬೆಳವಣಿಗೆಗಳಿಗೆ ಸಹಕರಿಸಲು

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ Read More »

ಕರ್ನಾಟಕ ಸುವರ್ಣ ಸಂಭ್ರಮ ಜ್ಯೋತಿ ರಥಯಾತ್ರೆ ನಾಳೆ ಪುತ್ತೂರಿಗೆ

ಪುತ್ತೂರು: ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಜ್ಯೋತಿ ರಥಯಾತ್ರೆ’ ನಾಳೆ (ಅ.1) ಪುತ್ತೂರಿಗೆ ಆಗಮಿಸಲಿದೆ. ಪುತ್ತೂರು ತಾಲೂಕು ಆಡಳಿತ ಹಾಗೂ  ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಈ ಭವ್ಯ ರಥವನ್ನು ಕನಕಮಜುಲುವಿನಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸ್ವಾಗತಿಸಲಿದ್ದು ಬಳಿಕ 10:30 ಕ್ಕೆ ಸರಿಯಾಗಿ ಪುತ್ತೂರು ಆಡಳಿತ ಸೌಧದ ಬಳಿ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಕನ್ನಡ ಪ್ರೇಮಿಗಳಾದ ತಾವೆಲ್ಲರೂ 

ಕರ್ನಾಟಕ ಸುವರ್ಣ ಸಂಭ್ರಮ ಜ್ಯೋತಿ ರಥಯಾತ್ರೆ ನಾಳೆ ಪುತ್ತೂರಿಗೆ Read More »

ಶಾಂತಿಗೋಡು ವಿಕ್ರಂ ಯುವಕ ಮಂಡಲದ ನೂತನ ಆಡಳಿತ ಸಮಿತಿ ರಚನೆ

ಪುತ್ತೂರು: ಶಾಂತಿಗೋಡು ವಿಕ್ರಂ ಯುವಕ ಮಂಡಲದ ನೂತನ  ಆಡಳಿತ ಸಮಿತಿ  ರಚನೆ ಶಾಂತಿಗೋಡು ವಠಾರದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವರುಣ್ ಓಲಾಡಿ, ಉಪಾಧ್ಯಕ್ಷರಾಗಿ ಪ್ರದೀಪ್ ಕೈಂದಾಡಿ, ಕಾರ್ಯದರ್ಶಿ ದಿವಿತ್ ಪಜಿರೋಡಿ, ಕ್ರೀಡಾ ಕಾರ್ಯದರ್ಶಿಯಾಗಿ ಯುವರಾಜ್  ಪಜಿರೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ಕೈಂದಾಡಿ, ಪ್ರವೀಣ್ ಬೊಳ್ಳೆಕ್ಕು, ಜೊತೆ ಕಾರ್ಯದರ್ಶಿ ನಿಖಿತ್ ಓಲಾಡಿ, ಖಜಾಂಜಿ ಶಶಿ ಓಲಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ಮನೀಶ್ ಪಾನಂಬು, ಸ್ವಚ್ಛತಾ ಪ್ರಮುಖರಾಗಿ ವಿನೋದ್ ಕರ್ಪುತಮೂಳೆ, ಗೌರವ ಸಲಹೆಗರರಾಗಿ ಶಿವಪ್ರಸಾದ್ ಕೈಂದಾಡಿ, ನಾಗೇಶ್ ಸರಕಾರೆ, ವಸಂತ್ ಕೈಂದಾಡಿ

ಶಾಂತಿಗೋಡು ವಿಕ್ರಂ ಯುವಕ ಮಂಡಲದ ನೂತನ ಆಡಳಿತ ಸಮಿತಿ ರಚನೆ Read More »

ಅ.3-12 : ಪುತ್ತೂರು ಶ್ರೀ ಮಹಾಲಿಂಗೇಶ್ವರ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ‘ಪುತ್ತೂರು ಶಾರದೋತ್ಸವ’ | ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ ಅ.3 ರಿಂದ 12 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ ಮಂದಿರದ ಆಡಳಿತ ಮಂಡಳಿ ಗೌರವಾಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 9 ದಶಕಗಳ ಹಿಂದೆ ಆರಂಭಗೊಂಡ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿತ್ತು. 9 ದಶಕಗಳ

ಅ.3-12 : ಪುತ್ತೂರು ಶ್ರೀ ಮಹಾಲಿಂಗೇಶ್ವರ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ‘ಪುತ್ತೂರು ಶಾರದೋತ್ಸವ’ | ವೈಭವದ ಶೋಭಾಯಾತ್ರೆ Read More »

ಮಿಥುನ್‌ ಚಕ್ರವರ್ತಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

ಅ.8ರಂದು ರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದಾನ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅ.8ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 74ರ ಹರೆಯದ ಮಿಥುನ್‌ ಚಕ್ರವರ್ತಿಗೆ ಪ್ರಶಸ್ತಿ ಪ್ರದಾನಿಸಲಾಗುವುದು. ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮಾ ಪ್ರಯಾಣ ತಲೆಮಾರಿಗೆ

ಮಿಥುನ್‌ ಚಕ್ರವರ್ತಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ Read More »

ಕಂಟೈನರ್‌ಗೆ ಡಿಕ್ಕಿಯಾದ ಬಸ್‌ : 20 ಪ್ರಯಾಣಿಕರು ಗಂಭೀರ

ಮಂಡ್ಯ : ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್​ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಂಟೈನರ್‌ಗೆ ಡಿಕ್ಕಿಯಾದ ಬಸ್‌ : 20 ಪ್ರಯಾಣಿಕರು ಗಂಭೀರ Read More »

ಈಜಲು ಫಲ್ಗುಣಿ ನದಿಗಿಳಿದ ಇಬ್ಬರು ಯುವಕರು ಮುಳುಗಿ ಸಾವು

ಮಂಗಳೂರು: ಮರವೂರು ಸಮೀಪ ಪಲ್ಗುಣಿ ನದಿಯಲ್ಲಿ ಈಜಲು ಹೋದ ಮಂಗಳೂರಿನ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ನಾಪತ್ತೆಯಾದ ಯುವಕರನ್ನು ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂದು ಗುರುತಿಸಲಾಗಿದೆ.ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆಯ ಬಳಿ ಪಲ್ಗುಣಿ ನದಿಯಲ್ಲಿ ಈಜಲು ನಾಲ್ವರು ಯುವಕರ ತಂಡ ಹೋಗಿದ್ದು, ಕೋಡಿಕಲ್ ನಿವಾಸಿಗಳಾದ ಅರುಣ್ ಹಾಗೂ ದೀಕ್ಷಿತ್ ಅಪಾಯವಿಲ್ಲದೆ ಬಚಾವಾಗಿದ್ದಾರೆ. ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು

ಈಜಲು ಫಲ್ಗುಣಿ ನದಿಗಿಳಿದ ಇಬ್ಬರು ಯುವಕರು ಮುಳುಗಿ ಸಾವು Read More »

ವರ್ಧಮಾನ್‌ ಗ್ರೂಪ್‌ ಎಂಡಿಗೆ 7 ಕೋಟಿ ರೂ. ವಂಚಿಸಿದ ಸೈಬರ್‌ ಖದೀಮರು

ಸಿಬಿಐ ಅಧಿಕಾರಿಗಳಂತೆ ಸೋಗು ಹಾಕಿ ಉದ್ಯಮಿಯನ್ನು ಡಿಜಿಟಲ್‌ ಬಂಧನದಲ್ಲಿಟ್ಟು ವಂಚನೆ ಹೊಸದಿಲ್ಲಿ : ಸಿಬಿಐ ಅಧಿಕಾರಿಗಳ ಸೋಗುಹಾಕಿ ಆನ್‌ಲೈನ್‌ ಮೂಲಕ ವರ್ಧಮಾನ್‌ ಕಂಪನಿ ಮಾಲೀಕ ಎಸ್‌.ಪಿ.ಓಸ್ವಾಲ್‌ ಅವರ ಖಾತೆಯಿಂದ 7 ಕೋ. ರೂ. ಎಗರಿಸಿದ್ದ ಇಬ್ಬರು ಸೈಬರ್‌ ವಂಚಕರನ್ನು ಪಂಜಾಬ್‌ ಪೊಲೀಸರು 48 ತಾಸುಗಳೊಳಗೆ ಬಂಧಿಸಿದ್ದಾರೆ. ಈ ಗ್ಯಾಂಗಿನಲ್ಲಿ ಇನ್ನೂ 7 ಮಂದಿಯಿದ್ದು, ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ.ಓರ್ವ ಆರೋಪಿ ಸಿಬಿಐ ಅಧಿಕಾರಿಯಂತೆ ಸೋಗು ಹಾಕಿ ಓಸ್ವಾಲ್‌ ಅವರನ್ನು ಸಂಪರ್ಕಿಸಿ ಅವರಿಗೆ ತನ್ನ ನಕಲಿ ಗುರುತಿನ ಕಾರ್ಡ್‌ ತೋರಿಸಿದ್ದ.

ವರ್ಧಮಾನ್‌ ಗ್ರೂಪ್‌ ಎಂಡಿಗೆ 7 ಕೋಟಿ ರೂ. ವಂಚಿಸಿದ ಸೈಬರ್‌ ಖದೀಮರು Read More »

ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ಘಟಕದಿಂದ ಸ್ವಚ್ಛತಾ ಕಾರ್ಯ

ಪುತ್ತೂರು: ಸಂತ ಫಿಲೋ ಮಿನಾ ಕಾಲೇಜಿ(ಸ್ವಾಯತ್ತ)ನ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ ಕ್ರಮ ಆಯೋಜಿಸಲಾಯಿತು. ‘ಸ್ವಚ್ಛತಾ ಹಿ ಸೇವಾ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಾಲೇಜು ಬಸ್ ನಿಲ್ದಾಣದಿಂದ ದರ್ಬೆ ವೃತ್ತದವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚಂದ್ರಶೇಖರ್ ಕೆ., ಪುಷ್ಪಾ ಎನ್. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿಎನ್ ಎಸ್ ಎಸ್ ಕಾರ್ಯದರ್ಶಿ, ಘಟಕ ನಾಯಕ, ನಾಯಕಿಯರು ಮತ್ತು ಸ್ವಯಂಸೇವಕರು ಪಾಲ್ಗೊಂಡಿದ್ದರು.

ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ಘಟಕದಿಂದ ಸ್ವಚ್ಛತಾ ಕಾರ್ಯ Read More »

error: Content is protected !!
Scroll to Top