ಎನ್ ಎಸ್ ಎಸ್ ನಿಂದ ಬದುಕು ಸದೃಢ : ಡಾ. ರಾಧಾಕೃಷ್ಣ ಗೌಡ | ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಪುತ್ತೂರು: ಬದುಕನ್ನು ಸದೃಢವಾಗಿ ರೂಪಿಸಿಕೊಳ್ಳುವಲ್ಲಿ ಎನ್ಎಸ್ಎಸ್ ನ ಪಾತ್ರ ಸ್ಮರಣಿಯವಾದುದು. ಹಲವಾರು ಮಂದಿ ಹಲವು ರೀತಿಯಲ್ಲಿ ಬದುಕನ್ನು ವ್ಯಾಖ್ಯಾನಿಸಿದರೆ ಎನ್ ಎಸ್ ಎಸ್ ಸ್ವಯಂ ಸೇವಕರು ಸೇವೆಯೇ ಬದುಕು ಎಂದು ವ್ಯಾಖ್ಯಾನಿಸುತ್ತಾರೆ ಎಂದು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ಹೇಳಿದರು. ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಮಂಗಳವಾರ ನಡೆದ ಎನ್ ಎಸ್ ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಎನ್ಎಸ್ಎಸ್ ದಿನಾಚರಣೆಯ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]










