ಮತ್ತೆ ಭುಗಿಲೆದ್ದ ಮಹಿಷ ದಸರಾ ವಿವಾದ

ಆಚರಣೆಗೆ ಅವಕಾಶ ಕೊಡಲ್ಲ ಎಂದು ಪ್ರತಾಪ್‌ ಸಿಂಹ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬದ ಸಂಭ್ರಮಕ್ಕೆ ಸಿದ್ಧವಾಗುತ್ತಿರುವಂತೆಯೇ ಮತ್ತೆ ಮಹಿಷ ದಸರಾದ ಕಿರಿಕ್‌ ಶುರುವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಿಷ ದಸರಾ ಆಚರಿಸಲು ಕೆಲವರು ಮುಂದಾಗಿದ್ದು, ಇದಕ್ಕೆ ಇನ್ನೊಂದೆಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಮೈಸೂರಿನಲ್ಲಿ ದಸರಾ ಸಂಭ್ರಮ ಆರಂಭವಾಗಲು ಇನ್ನು ಒಂದು ವಾರ ಮಾತ್ರ ಬಾಕಿ ಇರುವಾಗ ಮಹಿಷ ದಸರಾ ವಿಚಾರವೂ ಮುನ್ನೆಲೆಗೆ ಬಂದಿದೆ. ಸೆಪ್ಟೆಂಬರ್ 29ರಂದು ಮಹಿಷ ದಸರಾ ಮಾಡುತ್ತೇವೆ ಅಂತ ಮಹಿಷ ದಸರಾ […]

ಮತ್ತೆ ಭುಗಿಲೆದ್ದ ಮಹಿಷ ದಸರಾ ವಿವಾದ Read More »

ಟ್ಯಾಂಕರ್ – ಸರಕಾರಿ ಬಸ್ ಡಿಕ್ಕಿ : ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯ

ಉಪ್ಪಿನಂಗಡಿ : ಟ್ಯಾಂಕರ್ ಹಾಗೂ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟ್ಯಾಂಕ‌ರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು

ಟ್ಯಾಂಕರ್ – ಸರಕಾರಿ ಬಸ್ ಡಿಕ್ಕಿ : ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯ Read More »

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್ ಪ್ರತಿನಿಧಿಸಿದ್ದರು. ತಂಡವನ್ನು ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಲೆಬನಾನ್‌ ಮೇಲೆ ಇಸ್ರೇಲ್‌ ಮಾರಕ ದಾಳಿ : 492 ಮಂದಿ ಸಾವು

28 ವರ್ಷಗಳ ಬಳಿಕ ಲೆಬನಾನ್‌ ಮೇಲೆ ನಡೆದ ಭೀಕರ ದಾಳಿ ಬೇರುತ್:‌ ಲೆಬನಾನ್‌–ಇಸ್ರೇಲ್‌ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿರುವುದರಿಂದ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್‌ ವಾಯುದಾಳಿ ನಡೆಸಿದ್ದು, ಇದಕ್ಕೆ ಪ್ರತೀಕಾರವಾಗಿ ಉತ್ತರ ಇಸ್ರೇಲ್‌ನ ಸೇನಾ ನೆಲೆಗಳ ಮೇಲೆ ಲೆಬನಾನ್‌ ನಡೆಸಿದೆ.ಪೇಜರ್‌, ವಾಕಿಟಾಕಿ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಇರಾನ್‌ ಬೆಂಬಲಿತ ಲೆಬನಾನ್‌ ಬಂಡುಕೋರ ಪಡೆಯ ಮೇಲೆ ಸೋಮವಾರ ಇಸ್ರೇಲ್‌ ಮಾರಣಾಂತಿಕ ದಾಳಿ ನಡೆಸಿದೆ. ಹಿಜ್ಜುಲ್ಲಾ

ಲೆಬನಾನ್‌ ಮೇಲೆ ಇಸ್ರೇಲ್‌ ಮಾರಕ ದಾಳಿ : 492 ಮಂದಿ ಸಾವು Read More »

ಮುಡಾ ಹಗರಣ : ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದರೆ ಸಿಎಂಗೆ ಶುರುವಾಗಲಿದೆ ಸಂಕಷ್ಟಗಳ ಸರಮಾಲೆ ಬೆಂಗಳೂರು: ಮುಡಾ ಹಗರಣದ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೇಸ್‌ ಇಂದು ಹೈಕೋರ್ಟ್‌ನಲ್ಲಿ ಇತ್ಯರ್ಥವಾಗುವ ಸಾಧ್ಯತೆಯಿದೆ. ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಇಂದು ಪ್ರಕಟವಾಗಲಿದ್ದು, ಸಿದ್ದರಾಮಯ್ಯನವರ ಭವಿಷ್ಯದ ನಿಟ್ಟಿನಲ್ಲಿ ಇದು ನಿರ್ಣಾಯಕ ತೀರ್ಪು ಆಗಲಿದೆ. ಹೀಗಾಗಿ ಈ ಪ್ರಕರಣ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಕುತೂಹಲ ಕೆರಳಿಸಿದೆ.ಪತ್ನಿಯ ಹೆಸರಿನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ

ಮುಡಾ ಹಗರಣ : ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ Read More »

STRESS ನಿಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಕೆಡಿಸುತ್ತದೆ

ಒತ್ತಡ ನಿವಾರಣೆಗೆ ಪ್ರಾಕ್ಟಿಕಲ್ ಆದ 30 ಸಲಹೆಗಳು STRESS ಅಂದರೆ ಒತ್ತಡ ಎಂದು ಅರ್ಥ. ಅದು ಮಾನಸಿಕ ಅಥವಾ ದೈಹಿಕ ಒತ್ತಡ ಆಗಿರಬಹುದು. ಎರಡೂ ಅಪಾಯಕಾರಿ ವಿದ್ಯಮಾನಗಳು. ಅದರಲ್ಲಿಯೂ ಮಾನಸಿಕ ಒತ್ತಡ ನಮ್ಮನ್ನು ಹೆಚ್ಚು ಬಳಲಿಸುತ್ತದೆ. ಇದು ನಮ್ಮಲ್ಲಿ ನೂರಾರು ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ. ನಿದ್ರಾಹೀನತೆ, ತೀವ್ರ ಬಳಲಿಕೆ, ಪದೇಪದೆ ಕೋಪ ಬರುವುದು, ಏಕಾಗ್ರತೆಯ ಕೊರತೆ, ಕೆಲಸದಲ್ಲಿ ಆಸಕ್ತಿ ಇಲ್ಲದಿರುವುದು, ಕುತ್ತಿಗೆ ಮತ್ತು ಭುಜದ ನೋವು, ತೀವ್ರ ತಲೆನೋವು, ಉದಾಸೀನತೆ, ಅಭದ್ರತೆಯ ಭಾವನೆ, ಆಹಾರ ಜೀರ್ಣ ಆಗದಿರುವುದು,

STRESS ನಿಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಕೆಡಿಸುತ್ತದೆ Read More »

ಆ್ಯಂಬುಲೆನ್ಸ್-ಪಿಕಪ್ ಡಿಕ್ಕಿ : ಹಸುಳೆಗೆ ಗಾಯ

ಪುತ್ತೂರು: ಪುತ್ತೂರು ಮುರ ಸಮೀಪ ಸೋಮವಾರ ರಂದು ರಾತ್ರಿ ಸುಳ್ಯದ ಆ್ಯಂಬುಲೆನ್ಸ್ ಮತ್ತು ಪಿಕಪ್ ಜೀಪು ನಡುವೆ ಅಪಘಾತ ಸಂಭವಿಸಿದ್ದು, ಆ್ಯಂಬುಲೆನ್ಸ್ ನಲ್ಲಿದ್ದ ಹಸುಳೆಗೆ ಗಾಯವಾಗಿದೆ. ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವಿಗೆ ಬೆಳವಣಿಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಪಿಕಪ್ ನಡುವೆ ಮುರದಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ನಲ್ಲಿದ್ದ ಹಸುಳೆ ಮತ್ತು ಚಾಲಕನಿಗೆ ಗಾಯವಾಗಿದೆ. ಗಾಯಾಳು ಹಸುಳೆಯನ್ನು ತಕ್ಷಣ ಪುತ್ತೂರು ಚೇತನಾ ಆಸ್ಪತ್ರೆಗೆ ಕರೆದುಕೊಂಡು

ಆ್ಯಂಬುಲೆನ್ಸ್-ಪಿಕಪ್ ಡಿಕ್ಕಿ : ಹಸುಳೆಗೆ ಗಾಯ Read More »

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಸುಳ್ಯ, ಗುತ್ತಿಗಾರು ಪಿ.ಎಂ ಶ್ರೀ ಸ.ಮಾ.ಹಿ.ಪ್ರಾ ಶಾಲೆ, ಗುತ್ತಿಗಾರು ಸ.ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ, ಪವನ್ ಕುಮಾರ್

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ

ಲಾಪತಾ ಲೇಡಿಸ್’ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಕಿರಣ್ ರಾವ್ ನಿರ್ದೇಶನದ ಈ ಚಿತ್ರವನ್ನು ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆಯಿತು. ಒಟ್ಟಿನಲ್ಲಿ ರಿಲೀಸ್ ಆದ ಬಳಿಕ ಮತ್ತೊಂದಷ್ಟು ಮಂದಿ ಈ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಲಾಪತಾ ಲೇಡಿಸ್’ ಸಿನಿಮಾ ಮಹಿಳೆಯರ ಸಬಲೀಕರಣದ ಬಗ್ಗೆ ಇದೆ. ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ Read More »

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ತಂಡದಿಂದ ಹಲ್ಲೆ | ಪ್ರಕರಣ ದಾಖಲು

ಸುಳ್ಯ: ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ತಂಡವೊಂದು ಥಳಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅಬ್ದುಲ್ ನಿಯಾಝ್ ಎಂಬಾತ ಅಸಭ್ಯ ವರ್ತನೆ ತೋರಿದ್ದ ಎನ್ನಲಾಗಿದೆ. ಆತನಿಗೆ ತಂಡ ಹಿಗ್ಗಾಮುಗ್ಗಾ ಥಳಿಸಿದ್ದು, ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆತ ಅಲ್ಲಿಂದ ತೆರಳಿರುವುದಾಗಿ ತಿಳಿದುಬಂದಿದೆ. ಬಸ್ ಸುಬ್ರಹ್ಮಣ್ಯಕ್ಕೆ ತಲುಪಿದಾಗ ಆರೋಪಿ ಯುವಕ ಬಸ್ಸಿನಿಂದ ಇಳಿದಿದ್ದಾನೆ. ವಿದ್ಯಾರ್ಥಿನಿ ಅದೇ ಬಸ್ಸಿನಲ್ಲಿ ಸುಳ್ಯಕ್ಕೆ ಬಂದಿದ್ದಾಳೆ. ಅಲ್ಲಿ ವಿದ್ಯಾರ್ಥಿನಿಯ ಸಹಪಾಠಿಗಳು ಜಮಾಯಿಸಿದ್ದರು. ಬಳಿಕ

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ತಂಡದಿಂದ ಹಲ್ಲೆ | ಪ್ರಕರಣ ದಾಖಲು Read More »

error: Content is protected !!
Scroll to Top