ಜಿಲ್ಲಾ ಮಟ್ಟಡ ಕಬಡ್ಡಿಯನ್ನು ಪ್ರತಿನಿಧಿಸಿದ ವಯೋಮಿತಿ ಮೀರಿದ ಯುವಕ | ಪ್ರಥಮ ಸ್ಥಾನ ಕಳೆದುಕೊಂಡ ತಂಡ

ಸುಳ್ಯ: ವಯೋಮಿತಿ ಮೀರಿದ ವಿದ್ಯಾರ್ಥಿಯೊಬ್ಬ ಪ್ರಾಥಮಿಕ ಶಾಲಾ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಆಡಿದ ಕಾರಣಕ್ಕಾಗಿ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಪಡೆದುಕೊಂಡಿದ್ದ ತಂಡ ತನ್ನ ಸ್ಥಾನ ಕಳೆದುಕೊಂಡ ಘಟನೆ ವರದಿಯಾಗಿದೆ. ಗುತ್ತಿಗಾರಿನ ಪಿ.ಎಂ. ಶ್ರೀ ಶಾಲಾ ಮೈದಾನದಲ್ಲಿ ಎರಡು ದಿನಗಳ ಹಿಂದೆ  ನಡೆದ ಪ್ರಾಥಮಿಕ ಶಾಲಾ ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು ತಾಲೂಕಿನ ಹೆಸರಲ್ಲಿ ಆಡಿರುವ ಕಡಬ ತಾಲೂಕಿನ ಸೈಂಟ್ ಆನ್ಸ್ ಕಡಬ ತಂಡ ಪ್ರಥಮ ಸ್ಥಾನ ಪಡೆದಿತ್ತು. ಆದರೆ ಈ ತಂಡದಲ್ಲಿ ವಯೋಮಿತಿ […]

ಜಿಲ್ಲಾ ಮಟ್ಟಡ ಕಬಡ್ಡಿಯನ್ನು ಪ್ರತಿನಿಧಿಸಿದ ವಯೋಮಿತಿ ಮೀರಿದ ಯುವಕ | ಪ್ರಥಮ ಸ್ಥಾನ ಕಳೆದುಕೊಂಡ ತಂಡ Read More »

ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ

ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ಶನಿವಾರ ನಿಧನರಾಗಿದ್ದಾರೆ. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದ ಅವರು, ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು

ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ | 2.01 ಕೋಟಿ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಡ್ ಘೊಷಣೆ : ಪಿ.ಸಿ.ಜಯರಾಮ

ಸುಳ್ಯ: ಗೌಡರ ಯುವ ಸೇವಾ ಸಂಘದಡಿ ಕಾರ್ಯಾಚರಿಸುತ್ತಿರುವ ಶ್ರೀ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ ಭಾನುವಾರ ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ವರದಿ ವರ್ಷದಲ್ಲಿ 1,060 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 2.01 ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಘದಲ್ಲಿ 19 ಸಾವಿರಕ್ಕೂ ಮಿಕ್ಕಿ ಸದಸ್ಯರಿದ್ದು, ಶೇ.15ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಘೋಷಿಸಿದರು. ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ.ಟಿ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ | 2.01 ಕೋಟಿ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಡ್ ಘೊಷಣೆ : ಪಿ.ಸಿ.ಜಯರಾಮ Read More »

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಫೆಸೇರ ಫ್ಯಾಷನ್ ಅಸೋಸಿಯೇಶನ್ ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಭಾಗಿತ್ವದಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಪ್ರತಿಷ್ಠಿತ  ಲಿಲ್ ಒಹಾನ ಸಂಸ್ಥೆಯ ಸ್ಥಾಪಕಿ, ಪ್ರಾಧ್ಯಾಪಕಿ ಅಲ್ಕಾ ಮನೋಜ್ ತಮ್ಮದೇ ಬ್ರ್ಯಾಂಡ್  “ಓಹನಾ” ದ ಬಗ್ಗೆ ವಿಸೃತ ಮಾಹಿತಿನೀಡಿ, ಪರಿಸರ ಸ್ನೇಹಿ ಬಟ್ಟೆ ಬರೆಗಳ ಬಳಕೆ ಮತ್ತು ಉತ್ಪಾದನೆಯನ್ನು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ನಾವು

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ Read More »

ಕೊಡುಗು ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | ಕಾರ್ಯಕಾರಿಣಿ ಸಭೆ

ಕೊಡಗು : ಜಿಲ್ಲೆಯ ಸೋಮವಾರಪೇಟೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ  ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮತ್ತು ಕಾರ್ಯಕಾರಿಣಿ ಸಭೆ ಸೋಮವಾರಪೇಟೆ ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸೋಮವಾರಪೇಟೆ ಮಂಡಲ ಅಧ್ಯಕ್ಷ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚಿಸಿ ಬಳಿಕ ಸದಸ್ಯತ್ವ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಓಬಿಸಿ ಉಪಾಧ್ಯಕ್ಷವಿಠಲ ಪೂಜಾರಿ, ಒಬಿಸಿ ರಾಜ್ಯದ ಕಾರ್ಯದರ್ಶಿ, ಮಂಗಳೂರು ವಿಭಾಗ ಪ್ರಭಾರಿ ಆರ್ ಸಿ ನಾರಾಯಣ್, ಮಾಜಿ ವಿಧಾನ ಪರಿಷತ್ ಸದಸ್ಯ

ಕೊಡುಗು ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | ಕಾರ್ಯಕಾರಿಣಿ ಸಭೆ Read More »

ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ : ರೈಲು ಅವಘಡಕ್ಕೆ ಮತ್ತೊಂದು ಸಂಚು

ಲಖನೌ: ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲು ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ರೈಲನ್ನು ಉರುಳಿಸುವ ಸಂಚು ನಡೆದಿದೆ. ಕಾನ್ಪುರದಿಂದ ಫತೇಪುರ್‌ಗೆ ಬರುತ್ತಿದ್ದ ದೆಹಲಿ-ಹೌರಾ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಇರಿಸಲಾಗಿತ್ತು. ಕಾನ್ಪುರದ ಪ್ರೇಂಪುರ ರೈಲು ನಿಲ್ದಾಣದ ಬಳಿ ಲೂಪ್ ಲೈನ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ಇರಿಸಲಾಗಿತ್ತು. ಬೆಳಗ್ಗೆ 5.50ಕ್ಕೆ ಈ ಘಟನೆ ನಡೆದಿದೆ. ಲೋಕೊ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ತುರ್ತು ಬ್ರೇಕ್ ಮೂಲಕ ಗೂಡ್ಸ್ ರೈಲನ್ನು ನಿಲ್ಲಿಸಿದ್ದರು.ರೈಲಿನಲ್ಲಿದ್ದ ನೌಕರರು ಆರ್‌ಪಿಎಫ್ ಮತ್ತು ಇತರ

ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ : ರೈಲು ಅವಘಡಕ್ಕೆ ಮತ್ತೊಂದು ಸಂಚು Read More »

ಮೊದಲ ಟೆಸ್ಟ್‌ : ಭಾರತಕ್ಕೆ 280 ರನ್‌ಗಳ ಭರ್ಜರಿ ಗೆಲುವು

ಅಶ್ವಿನ್‌ ಸ್ಪಿನ್‌ ಮೋಡಿಗೆ ಮಕಾಡೆ ಮಲಗಿದ ಬಾಂಗ್ಲಾ ಹುಲಿಗಳು ಚೆನ್ನೈ: ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗ ಬಾಂಗ್ಲಾದೇಶ ವಿರುದ್ಧ ಆಡಿದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಚೆನ್ನೈಯ ಚಿಪಾಕ್‌ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದಾಟದಲ್ಲಿ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾ, ಭಾರತದ ಸ್ಪಿನ್‌ ಮಾಂತ್ರಿಕರ ದಾಳಿಗೆ ಮಕಾಡೆ ಮಲಗಿತು. 158 ರನ್‌ಗಳಿಗೆ 4

ಮೊದಲ ಟೆಸ್ಟ್‌ : ಭಾರತಕ್ಕೆ 280 ರನ್‌ಗಳ ಭರ್ಜರಿ ಗೆಲುವು Read More »

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ

ಪುತ್ತೂರು: ಚೆಸ್ ಭಾರತದಅತ್ಯಂತ ಪ್ರಾಚೀನಕ್ರೀಡೆ. ಕ್ರಮೇಣ ವಿದೇಶಗಳಲ್ಲೂ ಕ್ರೀಡೆಯಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹ ವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆ ಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದು ಪುತ್ತೂರು ಜಿ. ಎಲ್.ಆಚಾರ್ಯಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ. ಆಚಾರ್ಯ ಹೇಳಿದರು. ಅವರು ಪುತ್ತೂರಿನ  ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ (ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಅಂತರ್‌ ಜಿಲ್ಲೆ, ಅಂತರ್‌ ಕಾಲೇಜು

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ Read More »

ತೋಟದಲ್ಲಿ ಮಾಂಸಕ್ಕಾಗಿ ಅಕ್ರಮ ಗೋವಧೆ | ಐವರು ಆರೋಪಿಗಳು ಪರಾರಿ | ಸೊತ್ತುಗಳು ವಶಕ್ಕೆ | ಆರೋಪಿಗಳಿಗಾಗಿ ಶೋಧ ಕಾರ್ಯ

ಉಪ್ಪಿನಂಗಡಿ: ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದ್ದು, ಐವರು ಆರೋಪಿಗಳು ಪರಾರಿಯಾದ ಘಟನೆ ನಡೆದಿದೆ. ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಪರಾರಿಯಾದವರು ಎಂದು ಗುರುತಿಸಲಾಗಿದೆ. ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ

ತೋಟದಲ್ಲಿ ಮಾಂಸಕ್ಕಾಗಿ ಅಕ್ರಮ ಗೋವಧೆ | ಐವರು ಆರೋಪಿಗಳು ಪರಾರಿ | ಸೊತ್ತುಗಳು ವಶಕ್ಕೆ | ಆರೋಪಿಗಳಿಗಾಗಿ ಶೋಧ ಕಾರ್ಯ Read More »

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಇಂದು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಪುಣೆಯ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.ನಸುಕಿನ ಹೊತ್ತು ಹಂತಕರು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ವಿನಾಯಕ ನಾಯ್ಕ

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ Read More »

error: Content is protected !!
Scroll to Top