ನರೇಂದ್ರ ಮೋದಿ ಹುಟ್ಟುಹಬ್ಬ | ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ರಕ್ತದಾನ ಶಿಬಿರ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು. ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜಿರೆಮಾರ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮರ್, ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣ ನಗರ, […]

ನರೇಂದ್ರ ಮೋದಿ ಹುಟ್ಟುಹಬ್ಬ | ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ರಕ್ತದಾನ ಶಿಬಿರ Read More »

ಬಿಜೆಪಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಆಯ್ಕೆ

ಪುತ್ತೂರು: ಪುತ್ತೂರು ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಅಯ್ಕೆಯಾಗಿದ್ದಾರೆ ಬಿಜೆಪಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಆಯ್ಕೆ ಮಾಡಿದ್ದಾರೆ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಬಳತ್ತಡ್ಡ ತನ್ನ ಕಿರಿಯ ವಯಸ್ಸಿನಲ್ಲಿ ಭಾಜಪ, ಹಿಂದು ಸಂಘಟನೆಯಲ್ಲಿ ಸಕ್ರೀಯರಾಗಿದ್ದರು. ಇದೀಗ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಯುವಮೋರ್ಚಾ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ.

ಬಿಜೆಪಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಆಯ್ಕೆ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ 2024ನೇ ಸಾಲಿನ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪುತ್ತೂರು: ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ 2024ನೇ ಸಾಲಿನ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

40 ಪರ್ಸೆಂಟ್‌ ಆರೋಪದ ಕೆಂಪಣ್ಣ ನಿಧನ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮತ್ತು ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ

40 ಪರ್ಸೆಂಟ್‌ ಆರೋಪದ ಕೆಂಪಣ್ಣ ನಿಧನ Read More »

ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ : ಪೋಷಕರ ಆಕ್ಷೇಪ

ಮಕ್ಕಳಿಗೆ ಅರಬ್‌ ಉಡುಪು ಹಾಕಿ ಕುಣಿಸಿದ್ದಕ್ಕೆ ಆಕ್ರೋಶ ಕಾರ್ಕಳ : ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಈದ್ ಮಿಲಾದ್ ಹಬ್ಬ ಆಚರಿಸಿದ ವಿಡಿಯೋ ವೈರಲ್‌ ಆದ ಬಳಿಕ ವಿವಾದ ಸೃಷ್ಟಿಯಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಹಬ್ಬ ಆಚರಿಸಲಾಗಿತ್ತು. ಬಿಜೆಪಿ ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇದರ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅನೇಕ ಹಿಂದೂ ಮಕ್ಕಳ ಪೋಷಕರು ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ : ಪೋಷಕರ ಆಕ್ಷೇಪ Read More »

ಈತ ದೇಶದ ಶ್ರೀಮಂತ ಭಿಕ್ಷುಕ!

ಮುಂಬಯಿಯಲ್ಲಿ ಭಿಕ್ಷೆ ಬೇಡುವ ಈತನ ಬಳಿಯಿದೆ 7.5 ಕೋ. ರೂ. ಆಸ್ತಿ ಮುಂಬಯಿ : ಭಿಕ್ಷೆ ಬೇಡುವವರೆಲ್ಲ ಕಡುಬಡವರು, ಒಂದೊತ್ತಿನ ಊಟಕ್ಕೂ ಗತಿಯಿಲ್ಲದವರು ಎನ್ನುವುದು ಸಾಮಾನ್ಯವಾದ ಭಾವನೆ. ಬಹುತೇಕ ಭೀಕ್ಷುಕರು ಇದೇ ರೀತಿ ಇರುತ್ತಾರೆ. ಆದರೆ ಭಿಕ್ಷೆ ಬೇಡಿಯೇ ಕೋಟಿಗಟ್ಟಲೆ ಸಂಪತ್ತು ಗಳಿಸಿದವರೂ ಇದ್ದಾರೆ. ಈ ಪೈಕಿ ಮುಂಬಯಿಯಲ್ಲಿ ಭಿಕ್ಷೆ ಬೇಡುವ ಭರತ್‌ ಜೈನ್‌ ಎಂಬವರು ದೇಶದ ಅತ್ಯಂತ ಶ್ರೀಮಂತ ಭಿಕ್ಷುಕ ಎಂದು ಗುರುತಿಸಲ್ಪಟ್ಟಿದ್ದಾರೆ. ಇವರ ಒಟ್ಟು ಆಸ್ತಿ ಬರೋಬ್ಬರಿ 7.5 ಕೋ. ರೂ.! ಭರತ್‌ ಜೈನ್‌ಗೆ

ಈತ ದೇಶದ ಶ್ರೀಮಂತ ಭಿಕ್ಷುಕ! Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ

ಪುತ್ತೂರು: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಓಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಓಮ್ನಿಯು ತಿಂಗಳಾಡಿಯಿಂದ ರೆಂಜಲಾಡಿಗೆ ತೆರಳುತ್ತಿತ್ತು.ಅಪಘಾತವು ಬೆಳಗಿನ ಜಾವ 7.30ರ ಸುಮಾರಿಗೆ ನಡೆದಿದೆ. ರೆಂಜಿಲಾಡಿಗೆ ನಿವಾಸಿ ರಫೀಕ್ ಎಂಬವರು ಅಪಘಾತಕ್ಕಿಡಾದ ವಾಹನ ಚಲಾಯಿಸುತ್ತಿದ್ದರು. ನಿದ್ದೆ ಮಂಪರು ಆವರಿಸಿದ್ದರಿಂದ ವಾಹನ ಹತೋಟಿ ಕಳೆದುಕೊಂಡು ರಸ್ತೆಯಿಂದ 1 ಮೀಟರ್ ದೂರದಲ್ಲಿದ ಚರಂಡಿಗೆ ಉರುಳಿದೆ. ವಾಹನ

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ Read More »

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ನಾಯ್ಡು ಆರೋಪ

ಕ್ಷೇತ್ರದ ಪಾವಿತ್ರ್ಯ ಕೆಡಿಸಲು ಪ್ರಯತ್ನಿಸಿದ್ದಾರೆ ಎಂದ ಆಂಧ್ರ ಸಿಎಂ ಅಮರಾವತಿ: ಕೋಟ್ಯಂತರ ಹಿಂದುಗಳು ಪರಮ ಪವಿತ್ರ ಎಂಬ ನಂಬಿಕೆಯಿಂದ ಸ್ವೀಕರಿಸುವ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪವೊಂದು ಭಾರಿ ಕೋಲಾಹಲ ಉಂಟು ಮಾಡಿದೆ. ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ ಬಳಿಕ ಈ ಕುರಿತು ದೇಶಾದ್ಯಂತ ಚರ್ಚೆ ಶುರುವಾಗಿದೆ. ಈ

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ನಾಯ್ಡು ಆರೋಪ Read More »

ಅಂಬಿಕಾ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಹಿಂದಿ ದಿವಸ್ ಆಚರಣೆ ನಡೆಯಿತು. ಪ್ರಸಿದ್ಧ ಸಾಹಿತಿಗಳ ವೇಷ ಧರಿಸಿ ಬಂದು ಅವರನ್ನು ಎಲ್ಲರಿಗೂ ಪರಿಚಯಿಸುವ ಮೂಲಕ ವಿಶಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಹಿಂದಿ ದಿವಸ್ ದಂದು ಕೊಡಮಾಡುವ ಪ್ರಶಸ್ತಿಗಳ ಬಗ್ಗೆ ಹೇಳುತ್ತಾ ಭಾಷಾ ವೈಶಿಷ್ಟ್ಯವನ್ನು ತಿಳಿಸಿದರು. ಹಿಂದಿ ಶಿಕ್ಷಕಿ ಕುಸುಮ, ಸಂತ ಕಬೀರರ ದೋಹೆಯ ಮೌಲ್ಯವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳಾದ ಸಾರಿಕಾ ಹಿಂದಿ ಭಾಷೆಯ ಮಹತ್ವದ ಬಗ್ಗೆ, ಶ್ರೀಹರಿ ಸ್ವತಃ ರಚಿಸಿದ ಶಾಯರಿಯನ್ನು

ಅಂಬಿಕಾ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ Read More »

ಪೇಜರ್‌ ಬಳಿಕ ಲೆಬನಾನ್‌ನಲ್ಲಿ ವಾಕಿಟಾಕಿ ಸ್ಫೋಟ : 20 ಮಂದಿ ಸಾವು

ಜಗತ್ತನ್ನು ಚಕಿತಗೊಳಿಸಿದ ಹೊಸ ರೀತಿಯ ಯುದ್ಧತಂತ್ರ ಬೇರುತ್‌ : ಮಂಗಳವಾರವಷ್ಟೇ ಲೆಬನಾನ್​ನಲ್ಲಿ ಹಿಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಸಾವಿರಾರು ಪೇಜರ್​ಗಳು ಸ್ಫೋಟಗೊಂಡು 10 ಮಂದಿ ಸತ್ತು 3,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಈಗ ವಾಕಿಟಾಕಿಗಳು ಸ್ಫೋಟಗೊಂಡಿವೆ. ಮಂಗಳವಾರದ ಸ್ಫೋಟದಲ್ಲಿ ಮೃತಪಟ್ಟವರ ಅಂತ್ಯಕ್ರಿಯೆ ಬುಧವಾರ ನಡೆಯುತ್ತಿರುವಾಗಲೇ ವಾಕಿಟಾಕಿಗಳು ಹಾಗೂ ಇತರ ಉಪಕರಣಗಳು ಸ್ಫೋಟಗೊಂಡು 20ಕ್ಕೂ ಅಧಿಕ ಮಂದಿ ಸಾವಿಒಗೀಡಾಗಿದ್ದಾರೆ ಹಾಗೂ 500ರಷ್ಟು ಮಂದಿ ಗಾಯಗೊಂಡಿದ್ದಾರೆ.ಇದು ಕೂಡ ಇಸ್ರೇಲ್‌ನದ್ದೇ ಕೃತ್ಯ ಎನ್ನಲಾಗಿದೆ. ಇಸ್ರೇಲ್‌ ಸಾರಿರುವ ಈ ಹೊಸ ಸಮರವನ್ನು

ಪೇಜರ್‌ ಬಳಿಕ ಲೆಬನಾನ್‌ನಲ್ಲಿ ವಾಕಿಟಾಕಿ ಸ್ಫೋಟ : 20 ಮಂದಿ ಸಾವು Read More »

error: Content is protected !!
Scroll to Top