ನೇಣು ಬಿಗಿದು ಆತ್ಮಹತ್ಯೆ !

ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ. ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅಣ್ಣಿ ಗೌಡ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮಧ್ಯಾಹ್ನ ಮನೆ ಸಮೀಪದ ಹಲಸಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡಿದ್ದರು. ಇದನ್ನು ಗಮನಿಸಿದ್ದ ಅವರ ಪುತ್ರರಾದ ಗಣೇಶ, ಸುರೇಶ ಅವರು ನೇಣು ಹಗ್ಗವನ್ನು ತುಂಡು ಮಾಡಿ ಚಿಕಿತ್ಸೆಗಾಗಿ ಕಡಬ ಸರಕಾರಿ […]

ನೇಣು ಬಿಗಿದು ಆತ್ಮಹತ್ಯೆ ! Read More »

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಶಾಸಕರ ಕಚೇರಿ ಸಭಾಂಗಣದಲ್ಲಿ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸರಕಾರದಿಂದ ಕೆಲವೊಂದು ಸೌಲಭ್ಯಗಳನ್ನು ವೆಬ್ ಸೈಟ್ ಮೂಲಕ ಅಥವಾ ಆನ್ ಲೈನ್ ಮೂಲಕ ಅರ್ಜಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಕರ್ಮ ಜಯಂತಿ | ವಿಶ್ವಕರ್ಮರ ಪಂಚ ಕಸುಬಿಗೆ ಸರಕಾರದಿಂದ ಪ್ರೋತ್ಸಾಹ ಅಗತ್ಯ : ರಾಜೇಶ್‍

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಮಂಗಳವಾರ ಆಡಳಿತ ಸೌಧದಲ್ಲಿರುವ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಗುರುವಾಯನಕೆರೆ ಬಿಆರ್‍ ಸಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಾಜೇಶ್‍ ಉಪನ್ಯಾಸ ನೀಡಿ, ಪ್ರಸ್ತುತ ವಿಶ್ವಕರ್ಮರು ಕುಲಕಸುಬು ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ಪರಿಣಾಮ ಕುಲಕಸುಬು ನಶಿಸಿ ಹೋಗುತ್ತಿದ್ದು, ವಿಶ್ವಕರ್ಮರು ಹಿಂದೆ ಬೀಳಲು ಇದು ಮುಖ್ಯ ಕಾರಣವಾಗಿದೆ. ಈ ನಿಟ್ಟಿನಲ್ಲಿ ವಿಶ್ವಕರ್ಮರು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಕರ್ಮ ಜಯಂತಿ | ವಿಶ್ವಕರ್ಮರ ಪಂಚ ಕಸುಬಿಗೆ ಸರಕಾರದಿಂದ ಪ್ರೋತ್ಸಾಹ ಅಗತ್ಯ : ರಾಜೇಶ್‍ Read More »

ಪ್ರಧಾನಿ ಮೋದಿ 74ನೇ ಜನ್ಮ ದಿನಾಚರಣೆ : ಸವಣೂರು-65, ಮೊಗರು-66 ಬಿಜೆಪಿ ಬೂತ್‍ ಜಂಟಿ ಆಶ್ರಯದಲ್ಲಿ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಸವಣೂರು: ಬಿಜೆಪಿ ಬೂತ್ ಸಮಿತಿ 66-ಮೊಗರು ಹಾಗೂ 65-ಸವಣೂರು ಜಂಟಿ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 74ನೇ ಜನ್ಮದಿನಾಚರಣೆಯ ಅಂಗವಾಗಿ ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮೋದಿ ಅವರ ಆರೋಗ್ಯವೃದ್ಧಿ ಹಾಗೂ ಪ್ರಧಾನಿ ಹುದ್ದೆಯಲ್ಲಿ ಆಡಳಿತ ನಡೆಸಲು ಇನ್ನು ಹೆಚ್ಚಿನ ಶಕ್ತಿ ಸಿಗಲು ಪ್ರಾಥನೆಯೊಂದಿಗೆ ದೇವರಿಗೆ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.  ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಎಸ್.ಟಿ. ಮೋರ್ಚಾದ ಅಧ್ಯಕ್ಷ ಗಂಗಾಧರ

ಪ್ರಧಾನಿ ಮೋದಿ 74ನೇ ಜನ್ಮ ದಿನಾಚರಣೆ : ಸವಣೂರು-65, ಮೊಗರು-66 ಬಿಜೆಪಿ ಬೂತ್‍ ಜಂಟಿ ಆಶ್ರಯದಲ್ಲಿ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

ಮೋದಿ ಹುಟ್ಟುಹಬ್ಬ | ಚಿಕ್ಕಮುಡ್ನೂರು ಬಿಜೆಪಿ ಶಕ್ತಿಕೇಂದ್ರದಿಂದ ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನ ಕೇಮ್ಮಾಯಿಯಲ್ಲಿ ನರೇಂದ್ರ ಮೋದಿಯವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ದೇವರಿಗೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸೇವೆ ಮಾಡಲಾಯಿತು. ಈ ಸಂದರ್ಭದಲ್ಲಿ ಚಿಕ್ಕಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕಾರ್ತಿಕ್ ಗೌಡ ಅಂದ್ರಟ್ಟ, ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ  ಆಡಳಿತ ಮುಖ್ಯಸ್ಥ ಶ್ರೀಧರ ಬೈಪಾಡಿತ್ತಾಯ, ಪ್ರಕಾಶ್ ಪಂಜಿಗ, ಯೋಗೀಶ್ ಮೆರ್ಲ, ಪದ್ಮಚಂದ್ರ ಕೊಳ್ಯ, ರಾಜು ಶೆಟ್ಟಿ, ಸಾಯಿ ಲಕ್ಷ್ಮಿ,

ಮೋದಿ ಹುಟ್ಟುಹಬ್ಬ | ಚಿಕ್ಕಮುಡ್ನೂರು ಬಿಜೆಪಿ ಶಕ್ತಿಕೇಂದ್ರದಿಂದ ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನಲ್ಲಿ ವಿಶೇಷ ಪ್ರಾರ್ಥನೆ Read More »

ನರೇಂದ್ರ ಮೋದಿ ಜನುಮ ದಿನ : ಇದ್ಪಾಡಿ ಶಿರಾಡಿ ಗ್ರಾಮ ದೈವ ಸ್ಥಾನದಲ್ಲಿ  ಬಿಜೆಪಿ ವತಿಯಿಂದ ಪ್ರಾರ್ಥನೆ

ಸವಣೂರು: ನರೇಂದ್ರ ಮೋದಿಯವರ ಜನುಮ ದಿನದ ಪ್ರಯುಕ್ತ ಬಿಜೆಪಿ ಕೆದಂಬಾಡಿ 186ನೇ ಬೂತ್ ಸಮಿತಿಯ ವತಿಯಿಂದ ಶಿರಾಡಿ ಗ್ರಾಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಬಿಜೆಪಿ ಮುಖಂಡರು ಪ್ರಾರ್ಥನೆ ಸಲ್ಲಿಸಿ ವಿಶೇಷ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಸೀತಾರಾಮ ಗೌಡ ಇದ್ಯಪ್ಪೆ, ಮಂಡಲ ಕಾರ್ಯದರ್ಶಿ ರತನ್ ರೈ ಕುಂಬ್ರ, ಕೃಷಿಕ ಸಮಾಜದ ಅಧ್ಯಕ್ಷ ವಿಜಯ ಕುಮಾರ್ ರೈ ಕೊರಂಗ, ಸುಧಾಕರ್ ರೈ ಮುಂಡಾಲಗುತ್ತು, ಬೂತ್ ಕಾರ್ಯದರ್ಶಿ ಚಂದ್ರ ಇದ್ಪಾಡಿ, ಸದಸ್ಯತ್ವ ಅಭಿಯಾನ ಬೂತ್ ಸಂಯೋಜಕ

ನರೇಂದ್ರ ಮೋದಿ ಜನುಮ ದಿನ : ಇದ್ಪಾಡಿ ಶಿರಾಡಿ ಗ್ರಾಮ ದೈವ ಸ್ಥಾನದಲ್ಲಿ  ಬಿಜೆಪಿ ವತಿಯಿಂದ ಪ್ರಾರ್ಥನೆ Read More »

ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ

ಹೊಸದಿಲ್ಲಿ: ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಷಿ ಮರ್ಲೆನಾ ಆಯ್ಕೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅರವಿಂದ ಕೇಜ್ರಿವಾಲ್‌ ಇಂದು ನಡೆದ ಮುಖ್ಯಮಂತ್ರಿ ಆಯ್ಕೆ ಸಭೆಯಲ್ಲಿ ಆತಿಷಿ ಮರ್ಲೆನಾ ಅವರ ಹೆಸರನ್ನು ಪ್ರಾಸ್ತಾವಿಸಿದ್ದು ಅದು ವಿರೋಧವಿಲ್ಲದೆ ಅಂಗೀಕಾರಗೊಂಡಿದೆ. ಈ ಮೂಲಕ ಮತೊಮ್ಮೆ ದಿಲ್ಲಿಗೆ ಮಹಿಳಾ ಮುಖ್ಯಮಂತ್ರಿಯೊಬ್ಬರು ಲಭಿಸಿದಂತಾಗಿದೆ. ಈ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್‌ ಮತ್ತು ಕಾಂಗ್ರೆಸ್‌ನ ಶೀಲಾ ದೀಕ್ಷಿತ್‌ ದಿಲ್ಲಿ ಮುಖ್ಯಮಂತ್ರಿಯಾಗಿದ್ದರು.ಕೇಜ್ರಿವಾಲ್‌ ಸರಕಾರದಲ್ಲಿ ಹಣಕಾಸು, ಶಿಕ್ಷಣ ಮತ್ತಿತರ ಮಹತ್ವದ

ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ Read More »

ಸಂಬಂಧಿಕ ಮಹಿಳೆಗೆ ಯಕೃತ್‌ ದಾನ ಮಾಡಿದ ಉಪನ್ಯಾಸಕಿ ಸಾವು

ಇನ್ನೊಬ್ಬರ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಮಹಿಳೆ ಮಂಗಳೂರು: ಸಂಬಂಧಿಕರೊಬ್ಬರ ಪ್ರಾಣ ಉಳಿಸುವ ಸಲುವಾಗಿ ತನ್ನ ಯಕೃತ್‌ ದಾನ ಮಾಡಿದ ನಗರದ ಕಾಲೇಜು ಉಪನ್ಯಾಸಕಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಿನ್ನೆ ಸಂಭಿವಿಸದೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದವರಾದ ಅರ್ಚನಾ ಕಾಮತ್ (34) ಮೃತಪಟ್ಟವರು. 69 ವರ್ಷ ಸಂಬಂಧಿಕ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ

ಸಂಬಂಧಿಕ ಮಹಿಳೆಗೆ ಯಕೃತ್‌ ದಾನ ಮಾಡಿದ ಉಪನ್ಯಾಸಕಿ ಸಾವು Read More »

ಕನ್ನಡ ಚಿತ್ರರಂಗದಲ್ಲಿ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ

ಕನ್ನಡದಲ್ಲೂ ಇದೆ ನಟಿಯರ ಶೋಷಣೆ ಎಂದು ಆರೋಪ ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತಂತೆ ಅಧ್ಯಯನ ನಡೆಸಿದ ಹೇಮಾ ಆಯೋಗದ ವರದಿ ಬಿಡುಗಡೆಯಾದ ಬಳಿಕ ಅಲ್ಲೋಲಕಲ್ಲೋಲ ಉಂಟಾಗಿದ್ದು, ಹಲವು ಸ್ಟಾರ್‌ ನಟರು, ನಿರ್ದೇಶಕರು, ನಿರ್ಮಾಪಕರು ಅತ್ಯಾಚಾರ ಪ್ರಕರಣ ಎದುರಿವಂತಾಗಿದೆ. ಇದೇ ಮಾದರಿಯ ಆಯೋಗವೊಂದು ಕನ್ನಡ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ತನಿಖೆ ನಡೆಸಲು ರಚನೆಯಾಗಬೇಕೆಂಬ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ.ಆದರೆ ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ಸಮಿತಿ ರಚಿಸುವ ಪ್ರಸ್ತಾಪಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ

ಕನ್ನಡ ಚಿತ್ರರಂಗದಲ್ಲಿ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ Read More »

ಮೋದಿ ಹುಟ್ಟುಹಬ್ಬ | ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಭವ್ಯಭಾರತದ ಪ್ರಧಾನಿ ನರೇಂದ್ರ ಮೋದಿಜೀ ಯವರ 74ನೇ ಜನುಮದಿನದ ಪ್ರಯುಕ್ತ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ಮೋದಿ ಹುಟ್ಟುಹಬ್ಬ | ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

error: Content is protected !!
Scroll to Top