ಮಂಗಳೂರಿನ ಬಾವುಟಗುಡ್ಡೆಯಲ್ಲಿ ದ.ಕ.ಜಿಲ್ಲೆಯಲ್ಲೇ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣ | ನೆರವೇರಿತು ಶಂಕುಸ್ಥಾಪನೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಶಂಕು ಸ್ಥಾಪನೆ ಭಾನುವಾರ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ನಡೆಯಿತು. ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭವನ್ನು ನಿರ್ಮಿಸಲು ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಮಂಜುನಾಥ ಭಂಡಾರಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು […]










