ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ

ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ ದೇವದಾಸ್‌ ಕಪಿಕಾಡ್‌ ಅವರ ಪುತ್ರ ಅರ್ಜುನ್‌ ಕಾಪಿಕಾಡ್‌ ಅವರನ್ನು ದೊಡ್ಡಮಟ್ಟದಲ್ಲಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸುವ ಉದ್ದೇಶದಿಂದ ಕಲ್ಜಿಗ ಚಿತ್ರ ತಯಾರಾಗಿತ್ತು. […]

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ Read More »

ಟೈಟಾನಿಕ್‌ನಲ್ಲಿ ಅರಳಿದ ಅಮರ ಪ್ರೇಮಕಥೆ

ಕ್ಯಾಮರೂನ್ ಎಂಬ ನಿರ್ದೇಶಕನ ಕಲ್ಪನೆಯಲ್ಲಿ ಮೂಡಿದ ಶತಮಾನದ ಸಿನಿಮಾ ಅದು ಜಗತ್ತಿನ ಅತ್ಯಂತ ವೈಭವದ ಹಡಗಾಗಿತ್ತು. ಇಂಗ್ಲೆಂಡಿನ ಶ್ರೇಷ್ಠವಾದ ವಿನ್ಯಾಸಗಾರರು ವರ್ಷಾನುಗಟ್ಟಲೆ ದುಡಿದು ನಿರ್ಮಿಸಿದ ಹಡಗು ಅದು. ಎಂದಿಗೂ ಮುಳುಗದ ಹಡಗು ಎಂಬ ಕೀರ್ತಿ ಪಡೆದ ಹಡಗದು. ಅದರಲ್ಲಿ ನೂರಾರು ವೈಭವದ ಕ್ಯಾಬಿನ್‌ಗಳು, ಭಾರಿ ದುಬಾರಿಯಾದ ರೆಸ್ಟೋರೆಂಟ್, ಕೆಫೆ, ಆಕಾಶ ಬಣ್ಣದ ಸ್ವಿಮ್ಮಿಂಗ್ ಪೂಲ್, ಸ್ಮೋಕ್ ರೂಮ್, ವಿಶಾಲವಾದ ಡೆಕ್, ಮನಮೋಹಕ ಇಂಟೀರಿಯರ್ ವಿನ್ಯಾಸಗಳು, ಬೆಲೆ ಕಟ್ಟಲು ಸಾಧ್ಯವೇ ಇಲ್ಲದ ಕಲಾಕೃತಿಗಳು, ಹಡಗಿನ ರಕ್ಷಣೆಗೆ 20 ಲೈಫ್

ಟೈಟಾನಿಕ್‌ನಲ್ಲಿ ಅರಳಿದ ಅಮರ ಪ್ರೇಮಕಥೆ Read More »

ಮುಂದಿನ ಸಪ್ಟೆಂಬರ್‌ ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು: 2025ರ ಸಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲಾದಲ್ಲಿ ಪಶು ವೈಧ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು ಕೊಯಿಲಾ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದೆ. ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲ ಭೂತ ಸೌಕರ್ಯಗಳಿಗಾಗಿ ಸರಕಾರ ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು ಮತ್ತು ಒಂದು

ಮುಂದಿನ ಸಪ್ಟೆಂಬರ್‌ ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ Read More »

ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ

ಲೀಟರಿಗೆ 3 ರೂ. ಹೆಚ್ಚಿಸುವ ಕುರಿತು ಸಿದ್ದರಾಮಯ್ಯ ಸುಳಿವು ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ. ಈ ಕುರಿತು ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು. ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು.ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು

ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ Read More »

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಪುತ್ತೂರು: ಜಿಲ್ಲೆಯ 2ನೇ ಅತೀ ಹಿರಿಯ ಗಣಪ ಎಂದೇ ಖ್ಯಾತಿ ಪಡೆದಿರುವ ಪುತ್ತೂರಿನ ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ 68ನೇ ವರ್ಷದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಇಂದು ರಾತ್ರಿ ಸಂಪನ್ನಗೊಳ್ಳಲಿದೆ. ತುಳುನಾಡ ದೈವಾರಾಧನೆಯ ನಂಟು ಹೊಂದಿರುವ ಕಿಲ್ಲೆ ಗಣಪನಿಗೆ ಶುಕ್ರವಾರ ಮಧ್ಯಾಹ್ನ 108 ಕಾಯಿ ಗಣಪತಿ ಹೋಮ ನಡೆಯಿತು. ಬಳಿಕ ಶ್ರೀ ಗಣೇಶನ ಮೂರ್ತಿಯೊಂದಿಗೆ ವೈಭವದ ಬಲಿ ಉತ್ಸವ ಚೆಂಡೆ, ಸ್ಕ್ಯಾಕ್ಸೊಫೋನ್ ನೊಂದಿಗೆ ವಿಜೃಂಭಣೆಯಿಂದ ಜರಗಿತು. ಬಳಿಕ ಮಹಾಪೂಜೆ ನಡೆದು ಸಹಸ್ರಾರು

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ Read More »

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಎಸ್‍.ಮಾಧವ ರೈ ಆಯ್ಕೆ

ಪುತ್ತೂರು: ಬಿಜೆಪಿ ಒಳಮೊಗ್ರು ಶಕ್ತಿ ಕೇಂದ್ರದ ಸಂಚಾಲಕರಾಗಿ ಹಿರಿಯ ಕಾರ್ಯಕರ್ತ ಎಸ್. ಮಾಧವ ರೈ ಕುಂಬ್ರ ಆಯ್ಕೆಯಾಗಿದ್ದಾರೆ. ಮಾಧವ ರೈ ಅವರು ಬೂತ್ ಸಮಿತಿ ಅಧ್ಯಕ್ಷರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷರಾಗಿ, ಕುಂಬ್ರ ವರ್ತಕ ಸಂಘದ ಅಧ್ಯಕ್ಷರಾಗಿ, ಹಾಗೂ ಕುಂಬ್ರ KPS ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾಗಿ, ಕುಂಬ್ರ ಅಂಗನವಾಡಿ ಬಾಲವಿಕಾಸ ಸಮಿತಿ ಸದಸ್ಯರಾಗಿದ್ದರು. ಕುಂಬ್ರ ಶ್ರೀರಾಮ ಭಜನಾ ಮಂದಿರದ ಕಾರ್ಯಕಾರಿ ಸಹಿತಿ ವಿವಿಧ ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾಗಿ ಎಸ್‍.ಮಾಧವ ರೈ ಆಯ್ಕೆ Read More »

ಕೆಎಸ್‍ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿತ : ಪ್ರಕರಣ ದಾಖಲು

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ನೌಕರನೊಬ್ಬ ಈ ಕೃತ್ಯ ಎಸಗಿದ್ದಾನೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಚುಚ್ಚಿದ್ದಾನೆ. ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಅವರ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ನೌಕರ ರಿತೇಶ್ ನನ್ನು

ಕೆಎಸ್‍ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿತ : ಪ್ರಕರಣ ದಾಖಲು Read More »

ಎಸ್‍ಡಿಪಿಐ, ಪಿಎಫ್‍ಐಗೆ ಶರಣಾಗಿರುವ ಕಾಂಗ್ರೆಸ್‌ ಸರಕಾರ : ತೇಜಸ್ವಿ ಸೂರ್ಯ ಕಿಡಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಟಿಪ್ಪು, ಔರಂಗಜೇಬನ ಸಂತತಿ ಜನನ ಎಂದು ಆಕ್ರೋಶ ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದಾಗ ಟಿಪ್ಪು, ಔರಂಗಜೇಬನ ಸಂತತಿ ಹುಟ್ಟುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಮಂಗಲ ಗಲಭೆಯನ್ನು ಗೃಹ ಸಚಿವ ಪರಮೇಶ್ವರ್ ಸಣ್ಣ ಘಟನೆ ಎಂದು ಹೇಳುತ್ತಾರೆ. ನಿಮ್ಮ ಮನೆ ರೋಡ್‍ನಲ್ಲಿ ಯಾರಾದ್ರೂ ಗಣೇಶ ಕೂರಿಸಿದಾಗ ಅಲ್ಲಿ ಯಾರಾದ್ರೂ ಕಲ್ಲು ಹೊಡೆದ್ರೆ, ಬೆಂಕಿ ಹಾಕಿದ್ರೆ ಸಣ್ಣ ಘಟನೆ ಎಂದು ಹೇಳುತ್ತೀರಾ? ನಿಮ್ಮ ಮನೆಗೆ ಬೆಂಕಿ ಬೀಳುವವರೆಗೂ

ಎಸ್‍ಡಿಪಿಐ, ಪಿಎಫ್‍ಐಗೆ ಶರಣಾಗಿರುವ ಕಾಂಗ್ರೆಸ್‌ ಸರಕಾರ : ತೇಜಸ್ವಿ ಸೂರ್ಯ ಕಿಡಿ Read More »

ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

5 ತಿಂಗಳ ಸೆರೆವಾಸd ಬಳಿಕ ಸಿಕ್ಕಿದ ರಿಲೀಫ್‌ ಹೊಸದಿಲ್ಲಿ : ಮದ್ಯನೀತಿ ಹಗರಣದಲ್ಲಿ ಕಳೆದ ಸುಮಾರು ಐದು ತಿಂಗಳಿಂದ ಜೈಲುಪಾಲಾಗಿದ್ದ ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್​ ಕೊನೆಗೂ ಜಾಮೀನು ಸಿಕ್ಕಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.ಮದ್ಯ ನೀತಿ ಹಗರಣದಲ್ಲಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತನ್ನ

ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು Read More »

ಪಿಯುಸಿ ಪರೀಕ್ಷೆ ಅವಧಿ 15 ನಿಮಿಷ ಕಡಿತ

ಇನ್ನು 2.45 ತಾಸಲ್ಲಿ ಮಕ್ಕಳು ಉತ್ತರ ಬರೆದು ಮುಗಿಸಬೇಕು ಬೆಂಗಳೂರು: ಶಾಲೆ ಮತ್ತು ಕಾಲೇಜನ್ನು ತನ್ನ ಪ್ರಯೋಗಶಾಲೆಯಾಗಿ ಮಾಡಿಕೊಂಡಿರುವ ಕಾಂಗ್ರೆಸ್‌ ಸರಕಾರ ಈಗ ಇನ್ನೊಂದು ಪ್ರಯೋಗಕ್ಕೆ ಮುಂದಾಗಿದೆ. ಈ ವರ್ಷದಿಂದಲೇ ದ್ವಿತೀಯ ಪಿಯುಸಿ ಮಕ್ಕಳ ಪರೀಕ್ಷೆ ಬರೆಯುವ ಅವಧಿಯನ್ನು ಕಡಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಹೊಸ ನಿಯಮವನ್ನು ಈ ವರ್ಷದಿಂದಲೇ ಅನುಷ್ಠಾನಗೊಳಿಸಲು ಮಂಡಳಿ ಸಜ್ಜಾಗಿದ್ದು, ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು

ಪಿಯುಸಿ ಪರೀಕ್ಷೆ ಅವಧಿ 15 ನಿಮಿಷ ಕಡಿತ Read More »

error: Content is protected !!
Scroll to Top