ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಪ್ರಸ್ತುತ ವರ್ಷದಲ್ಲಿ 1.52 ಕೋಟಿ ರೂ. ಲಾಭ | ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಬಾಜನ : ತಾರನಾಥ ಕಾಯರ್ಗ
ಸವಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2023-2024ನೇ ಸಾಲಿನಲ್ಲಿ ಸತತ 22 ನೇ ಬಾರಿಗೆ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇಕಡಾ 99.22% ಸಾಲ ವಸೂಲಾತಿಯೊಂದಿಗೆ 1.52 ಕೋಟಿ ಲಾಭ ಗಳಿಸಿದ್ದು, ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರು ಅವರು, ಸಂಘದಲ್ಲಿ 3451 ಸದಸ್ಯರಿದ್ದು, ರೂ. 5.52 ಕೋಟಿ ಪಾಲು ಬಂಡವಾಳ ಮತ್ತು ರೂ. 36.39 ಕೋಟಿ ಠೇವಣಿ ಸಂಗ್ರಹಿಸಲಾಗಿದೆ. […]










