ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ

ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ದ ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ಇಲಾಖೆಯ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಕುಶಲ ಕರ್ಮಿಗಳಿಗೆ ಸಲಕರಣೆ ವಿತರಿಸಿ ಮಾತನಾಡಿದರು. ಯಾವ ಇಲಾಖೆಯಲ್ಲಿ ಯಾವ ಸೌಲಭ್ಯಗಳು ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ಮಾಹಿತಿ ಕೊರತೆಯಿದೆ. ಕೆಲವರಿಗೆ ಆನ್ ಲೈನ್ […]

ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ Read More »

ತ್ರೋಬಾಲ್ ಪಂದ್ಯಾಟ : ನರಿಮೊಗರು ಸರಸ್ವತಿ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. 10ನೇ ತರಗತಿಯ ವಿಹಾನ್ ಉತ್ತಮ ಆಟಗಾರ ಪ್ರಶಸ್ತಿ ಪಡೆದುಕೊಂಡರು. ತಂಡವನ್ನು 10ನೇ ತರಗತಿಯ ವಿಹಾನ್, ಶ್ರೇಯಸ್, ಯಶ್ವಿನ್, ವಿವೇಕ್, 9ನೇ ತರಗತಿಯ ಮೋಕ್ಷಿತ್, ಧನ್ವಿತ್, ಭನ್ನಿತ್, ಜೀವಿತ್, ಸುದೃಶ್, ಜೋಹನ್ ಮತ್ತು

ತ್ರೋಬಾಲ್ ಪಂದ್ಯಾಟ : ನರಿಮೊಗರು ಸರಸ್ವತಿ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ Read More »

ನೆಲ್ಲಿಕಟ್ಟೆ ನಿವಾಸಿ ಮೆಲ್ವಿನ್ ಮಸ್ಕರೇನಸ್ ನಿಧನ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ  ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೆಲ್ವಿನ್ ಮಸ್ಕರೇನಸ್ (57)  ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಕಿನ್ನಿಗೋಳಿಯ ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ನಿಧನ ಹೊಂದಿದರು. ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅವರು ಅನಾರೋಗ್ಯ ನಿಮಿತ್ತ ಊರಿಗೆ ವಾಪಾಸಾಗಿದ್ದರು. ನೆಲ್ಲಿಕಟ್ಟೆ ಮಿತ್ರವೃಂದದ ಸಕ್ರೀಯ ಸದಸ್ಯರಾಗಿದ್ದ ಇವರು, ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿಹಾಗೂ ಮಕ್ಕಳನ್ನು ಅಗಲಿದ್ದಾರೆ.

ನೆಲ್ಲಿಕಟ್ಟೆ ನಿವಾಸಿ ಮೆಲ್ವಿನ್ ಮಸ್ಕರೇನಸ್ ನಿಧನ Read More »

ಕೊಲೆ ಪ್ರಕರಣ : ದರ್ಶನ್‌ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಪವಿತ್ರಾ ಎ1, ದರ್ಶನ್‌ ಎ2 ಆರೋಪಿ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಕೋರ್ಟ್‌ಗೆ ಪೊಲೀಸರು ಇಂದು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವುದಾಗಿ ತಿಳಿದುಬಂದಿದೆ.ಇಂದು ಬೆಳಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ

ಕೊಲೆ ಪ್ರಕರಣ : ದರ್ಶನ್‌ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ Read More »

ಪ್ಯಾರಾಲಿಂಪಿಕ್ಸ್‌: ಟೋಕಿಯೊ ಸಾಧನೆ ಮೀರಿ ಮುನ್ನಡೆದ ಭಾರತ

ಭಾರತೀಯರಿಗೆ 3 ಚಿನ್ನದೊಂದಿಗೆ 20 ಪದಕಗಳ ಸಿಂಗಾರ ಪ್ಯಾರಿಸ್: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಅತ್ಯುತ್ತಮ ಸಾಧನೆ ಮೆರೆದಿದೆ. ಪದಕ ಬೇಟೆಯಲ್ಲಿ ಭಾರತೀಯರು ಈಗಾಗಲೇ ಟೋಕಿಯೋ ಒಲಿಂಪಿಕ್ಸ್‌ ಸಾಧನೆಯನ್ನು ಮೀರಿ ಮುನ್ನಡೆದಿದ್ದಾರೆ. ಚಿನ್ನದಿಂದಲೇ ಪದಕ ಬೇಟೆ ಆರಂಭಿಸಿದ ಭಾರತದ ಅದ್ಭುತ ಪ್ರದರ್ಶನದೊಂದಿಗೆ ಸಾರ್ವಕಾಲಿಕ ಶ್ರೇಷ್ಠ ಪ್ರದರ್ಶನ ನೀಡಿದೆ. ಮಂಗಳವಾರ ಒಂದೇ ದಿನ 5 ಪದಕ ಗೆದ್ದಿದ್ದು, ಪ್ಯಾರಾಲಿಂಪಿಕ್ಸ್‌ನಲ್ಲೇ ಸಾರ್ವಕಾಲಿಕ ಶ್ರೇಷ್ಠ ಪ್ರದರ್ಶನ ನೀಡಿದೆ. ಭಾರತ ಪದಕಗಳ ಸಂಖ್ಯೆ 20ಕ್ಕೇರಿದೆ. ಈ ಮೂಲಕ ಟೋಕಿಯೊ ಕ್ರೀಡಾಕೂಟದಲ್ಲಿ ಗೆದ್ದಿದ್ದ 19

ಪ್ಯಾರಾಲಿಂಪಿಕ್ಸ್‌: ಟೋಕಿಯೊ ಸಾಧನೆ ಮೀರಿ ಮುನ್ನಡೆದ ಭಾರತ Read More »

ಉಪ್ಪಿನಂಗಡಿಯಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ | ಜನತೆ ಆತಂಕದಲ್ಲಿ

ಉಪ್ಪಿನಂಗಡಿ: ಭಾರೀ ಗಾತ್ರದ ಮೊಸಳೆಯೊಂದು ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ಸಂಜೆ ಇಳಂತಿಲ ಗ್ರಾ. ಪಂ. ಎಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತರೊಬ್ಬರು ಗಮನಿಸಿದ್ದು, ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ದೊಡ್ಡ ಗಾತ್ರದ ಮೊಸಳೆ ಇದಾಗಿದೆ. ಕಳೆದ 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ ಮೂರು ಮೊಸಳೆಗಳು ಕಂಡು ಬಂದಿದ್ದವು. ಮಧ್ಯಾಹ್ನ

ಉಪ್ಪಿನಂಗಡಿಯಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ | ಜನತೆ ಆತಂಕದಲ್ಲಿ Read More »

ಅಮರ ಸುಳ್ಯ ಸಂಗ್ರಾಮ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ | ಜಗತ್ತಿನ ಎಲ್ಲಾ ಕ್ರಾಂತಿಗಳು ನಡೆದಿರುವುದು ಉಳ್ಳವರು ಮತ್ತು ಇಲ್ಲದವರ ನಡುವೆ : ಕೆ. ವಿ. ಹೇಮನಾಥ

ಸುಳ್ಯ: ಜಗತ್ತಿನ ಎಲ್ಲಾ ಕ್ರಾಂತಿಗಳು ನಡೆದಿರುವುದು ಉಳ್ಳವರು ಮತ್ತು ಇಲ್ಲದವರ ನಡುವೆ.  ಅನೇಕ ರಾಜರುಗಳು ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಆದರೆ ಸುಳ್ಯದಲ್ಲಿ ನಡೆದಂತಹ ಅಮರ ಸುಳ್ಯ ಸಂಗ್ರಾಮ ನಡೆದಿರುವುದು ರೈತರು ಮತ್ತು ರಾಜರುಗಳ ನಡುವೆ ಎನ್ನುವುದೇ ಈ ಸಂಗ್ರಾಮದ ವಿಶೇಷ ಎಂದು  ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕಾರ್ಯದರ್ಶಿ ಕೆ ವಿ ಹೇಮನಾಥ್ ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಡೆದ  ಡಾ. ವಿಜಯ ಪೂಣಚ್ಚ ತಂಬಂಡ ವಿರಚಿತ ಕೃತಿ, “ಅಮರಸುಳ್ಯ ಸಂಗ್ರಾಮ

ಅಮರ ಸುಳ್ಯ ಸಂಗ್ರಾಮ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ | ಜಗತ್ತಿನ ಎಲ್ಲಾ ಕ್ರಾಂತಿಗಳು ನಡೆದಿರುವುದು ಉಳ್ಳವರು ಮತ್ತು ಇಲ್ಲದವರ ನಡುವೆ : ಕೆ. ವಿ. ಹೇಮನಾಥ Read More »

ಭೀಕರ ಅಪಘಾತ : ನಾಲ್ವರು ಭಾರತೀಯರು ಜೀವಂತ ದಹನ

ವಾಷಿಂಗ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಭಾರತೀಯರು ಜೀವಂತ ಸುಟ್ಟು ಕರಕಲಾಗಿದ್ದಾರೆ.ಶುಕ್ರವಾರ ಅರ್ಕಾನ್ಸಾಸ್‌ನ ಬೆಂಟನ್‌ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಹೊತ್ತಿ ಉರಿದು ಒಳಗಿದ್ದವರು ಜೀವಂತ ದಹನವಾಗಿದ್ದಾರೆ. ಮೃತರ ಗುರುತು ಖಚಿತಪಡಿಸಲು ಅಧಿಕಾರಿಗಳು ಡಿಎನ್ಎ ಪರೀಕ್ಷೆ ಮಾಡಿಸಬೇಕಾಯಿತು.ಮೃತರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ.ಓರಂಪತಿ ಮತ್ತು ಅವರ ಸ್ನೇಹಿತ ಶೇಕ್ ಡಲ್ಲಾಸ್‌ನಲ್ಲಿರುವ ತನ್ನ

ಭೀಕರ ಅಪಘಾತ : ನಾಲ್ವರು ಭಾರತೀಯರು ಜೀವಂತ ದಹನ Read More »

ಶಾಲೆಯ ಸೈಟ್‌ನಲ್ಲಿ ದಮ್‌ ಬಿರಿಯಾನಿ ಹೋಟೆಲ್‌ : ಛಲವಾದಿ ವಿರುದ್ಧ ಕಾಂಗ್ರೆಸ್‌ ಆರೋಪ

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಭೂ ಹಗರಣಗಳನ್ನು ಬಯಲು ಮಾಡಿ ದಾಳಿ ನಡೆಸುತ್ತಿರುವ ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮೇಲೆ ಕಾಂಗ್ರೆಸ್‌ ಮುಗಿಬಿದ್ದಿದೆ. ಛಲವಾದಿ ನಾರಾಯಣ ಸ್ವಾಮಿ ಶಾಲೆಗೆಂದು ಪಡೆದುಕೊಂಡ ಸೈಟ್‌ನಲ್ಲಿ ದಮ್‌ ಬಿರಿಯಾನಿ ಹೋಟೆಲ್‌ ಪ್ರಾರರಂಭಿಸಿದ್ದಾರೆ ಎಂದು ನಿನ್ನೆ ಕಾಂಗ್ರೆಸ್‌ ನಾಯಕರು ರಾಜ್ಯಪಾಲರಿಗೆ ದೂರು ನೀಡಿ ವಿಧಾನಪರಿಷತ್‌ ಸದಸ್ಯ ಸ್ಥಾನದಿಂದ ಅವರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿದ್ದಾರೆ.ವಿಧಾನ ಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ನೇತೃತ್ವದಲ್ಲಿ ಕಾಂಗ್ರೆಸ್‌‍ ನಾಯಕರು ಮಂಗಳವಾರ

ಶಾಲೆಯ ಸೈಟ್‌ನಲ್ಲಿ ದಮ್‌ ಬಿರಿಯಾನಿ ಹೋಟೆಲ್‌ : ಛಲವಾದಿ ವಿರುದ್ಧ ಕಾಂಗ್ರೆಸ್‌ ಆರೋಪ Read More »

ಮಾಡೆಲಿಂಗ್ ಜಗತ್ತಿಗೆ ಪ್ರಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರನ್ನ ನೂತನ ರೂಪದರ್ಶಿಗಳಾಗಿ ಪರಿಚಯಿಸುವ ‘ಫೇಸಸ್ ಆಫ್ ಮುಳಿಯ’ | ಹೊಸತನಕ್ಕೆ ಇನ್ನೊಂದು ಆಯಾಮ

ಪುತ್ತೂರು: ಮುಳಿಯ ಚಿನ್ನಾಭರಣ ಮಳಿಗೆ ಕಳೆದ 80 ವರ್ಷಗಳಿಂದ ನಂಬಿಕೆಯ ಆಭರಣ  ಮಳಿಗೆಯಾಗಿರುತ್ತದೆ. ಹಾಗೆಯೇ  ಸ್ಥಳೀಯರಿಗೆ ಅವಕಾಶಕ್ಕಾಗಿ ಗಾನರಥ ಗಾಯನ ಸ್ಪರ್ಧೆ, ಕೃಷಿಯನ್ನುಉದ್ಯಮವಾಗಿ ನೋಡಬೇಕು ಅನ್ನುವ ಕೃಷಿಕೋದ್ಯಮ ಸೆಮಿನಾರ್, ಕಾಡು ಬೆಳೆಸಲು ಲಕ್ಷಕ್ಕೂ ಮಿಕ್ಕಿ ಸೀಡ್ ಬಾಲ್ ಎಸೆತ, ದೇಶದಲ್ಲೇ ಮೊದಲ ಬಾರಿ ಸ್ವಚ್ಛ ಪುತ್ತೂರು ಕಾರ್ಯಕ್ರಮ ಹೀಗೆ ಸದಾ ಹಲವು ಹೊಸತನವನ್ನು ಪರಿಚಯಿಸುವ ಕೆಲಸ ಮಾಡಿಕೊಂಡು ಬಂದಿದೆ. ಈ ಹೊಸತನಕ್ಕೆ ಈಗ ಇನ್ನೊಂದು ಆಯಾಮವೇ ಫೇಸಸ್ ಆಫ್ ಮುಳಿಯ ನಮ್ಮ ಶಾಖೆಗಗಳಿರುವ ಕೊಡಗು ಪುತ್ತೂರು ಬೆಳ್ತಂಗಡಿ

ಮಾಡೆಲಿಂಗ್ ಜಗತ್ತಿಗೆ ಪ್ರಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರನ್ನ ನೂತನ ರೂಪದರ್ಶಿಗಳಾಗಿ ಪರಿಚಯಿಸುವ ‘ಫೇಸಸ್ ಆಫ್ ಮುಳಿಯ’ | ಹೊಸತನಕ್ಕೆ ಇನ್ನೊಂದು ಆಯಾಮ Read More »

error: Content is protected !!
Scroll to Top