ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೇಜೋವಧೆ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ

ಪುತ್ತೂರು: ಅರುಣ್ ಪುತ್ತಿಲರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿರುವುದರ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ನ್ಯಾಯಾಲಯವು ಯಾವುದೇ  ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನ ಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ  ನಿರ್ಬಂಧಕಾಜ್ಙೆ ನೀಡಿರುತ್ತದೆ. ಈ ಕುರಿತು ಪ್ರಕಟಣೆಯನ್ನು ಅರುಣ್ ಕುಮಾರ್ ಪುತ್ತಿಲ ನೀಡಿರುತ್ತಾರೆ.

ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೇಜೋವಧೆ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ Read More »

ಪೊಲೀಸ್‌ ಅಧಿಕಾರಿಗೆ ಕಂಟಕವಾದ ದರ್ಶನ್‌ ಕೂಲಿಂಗ್‌ ಗ್ಲಾಸ್‌

ಬಳ್ಳಾರಿಗೆ ಕರೆದೊಯ್ಯುವಾಗ ಕೂಲಿಂಗ್‌ ಧರಿಸಲು ಅವಕಾಶ ಕೊಟ್ಟ ಆರೋಪ ಬೆಂಗಳೂರು : ಕೊಲೆ ಆರೋಪಿ ದರ್ಶನ್‌ಗೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳಿಗೆ ಕಂಟಕ ತಪ್ಪುತ್ತಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಅನುಭವಿಸಿದ ಕಾರಣಕ್ಕೆ ನಟನನ್ನು ನಿನ್ನೆ ನಸುಕಿನ ಹೊತ್ತು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ವಿಐಪಿ ಸೌಲಭ್ಯಕ್ಕೆ ಅವಕಾಶ ಮಾಡಿಕೊಟ್ಟ ಬೆಂಗಳೂರಿನ 9 ಜೈಲು ಅಧಿಕಾರಿಗಳು ಅಮಾನತಾಗಿ ಶಿಸ್ತು ಕ್ರಮ ಎದುರಿಸುತ್ತಿದ್ದಾರೆ. ಈಗ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋದ ಪೊಲೀಸ್‌ ಅಧಿಕಾರಿಗೂ ದರ್ಶನ್‌ ಕಾರಣದಿಂದ ಕಂಟಕ ಎದುರಾಗಿದೆ.

ಪೊಲೀಸ್‌ ಅಧಿಕಾರಿಗೆ ಕಂಟಕವಾದ ದರ್ಶನ್‌ ಕೂಲಿಂಗ್‌ ಗ್ಲಾಸ್‌ Read More »

ಮಹಿಳೆಗೆ ಬೆದರಿಕೆ ಕರೆ | ತಡರಾತ್ರಿ ಠಾಣೆಗೆ ಬಂದ ಮಹಿಳೆ !

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ಅವರ ಜೊತೆ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಮಹಿಳೆಯೊಬ್ಬರು ನಿನ್ನೆ ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದು, ಇನ್‍ ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆ ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ರಾತ್ರಿ ಬಂದು ಪೊಲೀಸ್ ಇನ್ಸೆಕ್ಟರ್ ಜೊತೆ ಮಾತುಕತೆ ನಡೆಸಿದ್ದಾರೆ. ತಡರಾತ್ರಿ ಮಹಿಳೆ ಠಾಣೆಗೆ

ಮಹಿಳೆಗೆ ಬೆದರಿಕೆ ಕರೆ | ತಡರಾತ್ರಿ ಠಾಣೆಗೆ ಬಂದ ಮಹಿಳೆ ! Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ

ಸವಣೂರು: ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಮ್ಯಾರಥಾನ್‌ ಏರ್ಪಡಿಸಲಾಗಿತ್ತು. ಭಾಗವಹಿಸಿದ ಸರಿ ಸುಮಾರು 62 ವಿದ್ಯಾರ್ಥಿಗಳಲ್ಲಿ ಹುಡುಗಿಯರ ವಿಭಾಗದಲ್ಲಿ ನಿತ್ಯಶ್ರೀ ದ್ವಿತೀಯ ಬಿ.ಸಿ.ಎ ಪ್ರಥಮ, ಕಾವ್ಯ ದ್ವಿತೀಯ ಬಿ.ಸಿ.ಎ ದ್ವಿತೀಯ ಹಾಗೂ ವಿನುತಾ ದ್ವಿತೀಯ ಬಿ.ಎ ತೃತೀಯ, ಹುಡುಗರ ವಿಭಾಗದಲ್ಲಿ ಚಿಂತನ್ ದ್ವಿತೀಯ ಬಿ.ಎ ಪ್ರಥಮ, ಹರ್ಶನ್ ದ್ವಿತೀಯ ಬಿ.ಸಿ.ಎ ದ್ವಿತೀಯ, ಮಹಮ್ಮದ್ ಆಶಿರ್ ಪ್ರಥಮ ಬಿ.ಕಾಂ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಮ್ಯಾರಥಾನ್‌ನನ್ನು ಉದ್ಘಾಟಿಸಿ ಚಾಲನೆ ಕೊಟ್ಟವರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ Read More »

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಎಂದರೆ ಕೇವಲ ಅಂಕಗಳಿಕೆ ಮಾತ್ರ ಸೀಮಿತವಲ್ಲ. ಅದು ವ್ಯವಹಾರ ಜ್ಞಾನಕ್ಕಿರುವ ಸಂಗತಿ. ನಮ್ಮ ಶೈಕ್ಷಣಿಕ ಹಂತದ ನಂತರ ಬದುಕು ಕಟ್ಟಿಕೊಳ್ಳಲು ಸಾಂಸ್ಕೃತಿಕ ಕಾರ್ಯಕ್ರಮ ಸಹಾಯ ಮಾಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ವಿವೇಕಾನಂದ ಸಂಶೋಧನಾ ಕೇಂದ್ರ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ,  ಯಕ್ಷ ರಂಜಿನಿ, ಕನ್ನಡ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಕೀರ್ತಿಶೇಷ ಪಾದೇಕಲ್ಲು ನಾರಾಯಣ

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ Read More »

ಈಗ ಬೇಕರಿ ತಿನಿಸುಗಳ ಮೇಲೆ ಆಹಾರ ಇಲಾಖೆ ಕಣ್ಣು : ಕೇಕ್‌ಗಳ ಪರಿಶೀಲನೆ

ಬೆಂಗಳೂರು: ಗೋಬಿ ಮಂಚೂರಿ, ಕಬಾಬ್, ಕಾಟನ್ ಕ್ಯಾಂಡಿ, ಪಾನಿಪುರಿಗಳಲ್ಲಿರುವ ಹಾನಿಕಾರಕ ರಾಸಾಯನಿಕ ಅಂಶಗಳನ್ನು ನಿಷೇಧಿಸಿರುವ ಆಹಾರ ಇಲಾಖೆ ಈಗ ಬೇಕರಿ ತಿನಿಸುಗಳ ಮೇಲೆ ಕಣ್ಣಿಟ್ಟಿದೆ. ಬೇಕರಿ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.‌ ಜನರು ಹೆಚ್ಚು ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ.‌ ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಫ್ಲೇವರ್‌ಗಳು ಹಾಗೂ ಕಲರ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ ಸೇರಿದಂತೆ ವಿವಿಧ ಫ್ಲೇವರ್‌ಗಳನ್ನ ಜನರು

ಈಗ ಬೇಕರಿ ತಿನಿಸುಗಳ ಮೇಲೆ ಆಹಾರ ಇಲಾಖೆ ಕಣ್ಣು : ಕೇಕ್‌ಗಳ ಪರಿಶೀಲನೆ Read More »

ಗ್ಯಾರಂಟಿಗಳ ಹೊರೆ : ಶಾಸಕರು, ಕಾರ್ಯದರ್ಶಿಗಳ ಸಂಬಳ ಕಟ್‌

ಉಚಿತ ಕೊಡುಗೆಗಳಿಂದ ಬೊಕ್ಕಸ ಖಾಲಿ ಶಿಮ್ಲಾ: ಕಾಂಗ್ರೆಸ್‌ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿ ಕೊಡುಗೆಗಳ ಹೊಡೆತದಿಂದ ರಾಜ್ಯದ ಬೊಕ್ಕಸ ಬರಿದಾಗಿದೆ. ಪರಿಸ್ಥಿತಿ ಎಲ್ಲಿಗೆ ತಲುಪಿದೆ ಎಂದರೆ ಅಲ್ಲಿ ಶಾಸಕರಿಗೆ ವೇತನ ನೀಡಲು ಹಣ ಇಲ್ಲದಂತಾಗಿದೆ. ಹೀಗಾಗಿ ಸರಕಾರ ಸಚಿವರೂ ಸೇರಿದಂತೆ ಎಲ್ಲ ಶಾಸಕರಿಗೆ ಎರಡು ತಿಂಗಳ ವೇತನ, ಭತ್ಯೆಗಳು ಸೇರಿದಂತೆ ಯಾವೊಂದು ಪಾವತಿಯೂ ಸಾಧ್ಯವಿಲ್ಲ ಎಂದು ಹೇಳಿದೆ.ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳವರೆಗೆ ಯಾವುದೇ ವೇತನ ಹಾಗೂ ಭತ್ಯೆ ನೀಡಲಾಗುವುದಿಲ್ಲ

ಗ್ಯಾರಂಟಿಗಳ ಹೊರೆ : ಶಾಸಕರು, ಕಾರ್ಯದರ್ಶಿಗಳ ಸಂಬಳ ಕಟ್‌ Read More »

ಬನ್ನೂರಿನ ಮನೆಯೊಂದಕ್ಕೆ ಪೊಲೀಸರಿಂದ ದಾಳಿ | ಇಬ್ಬರು ಮಹಿಳೆಯರು ವಶಕ್ಕೆ !

ಪುತ್ತೂರು: ಬನ್ನೂರಿನ ಕರ್ಮಲದ ಮನೆಯೊಂದಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರಲ್ಲಿ ಹೊರ ಊರಿನ ಓರ್ವ ಮುಸ್ಲಿಂ ಮಹಿಳೆ ಹಾಗೂ ಓರ್ವ ಕ್ರಿಶ್ಚಿಯನ್ ಮಹಿಳೆಯಾಗಿದ್ದು, ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಹಲವು ಸಂಶಯದ ಮೇಲೆ ದಾಳಿ ನಡೆಸಲಾಗಿತ್ತು. ಆದರೆ ದಾಳಿ ವೇಳೆ ಅನುಮಾನಾಸ್ಪದ ಇಬ್ಬರು ಮಹಿಳೆಯರನ್ನು ಹೊರತುಪಡಿಸಿ ಬೇರೆನು ಪತ್ತೆಯಾಗಿಲ್ಲ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬನ್ನೂರಿನ ಮನೆಯೊಂದಕ್ಕೆ ಪೊಲೀಸರಿಂದ ದಾಳಿ | ಇಬ್ಬರು ಮಹಿಳೆಯರು ವಶಕ್ಕೆ ! Read More »

ಯೂಟೂಬ್ ಚಾನೆಲ್‍ ಗಳ ಗುಣಮಟ್ಟ, ಏಕರೂಪದ ದರ ನಿಗದಿಗೆ ಅಸೋಸಿಯೇಶನ್‍ ರಚನೆಗೆ ನಿರ್ಧಾರ | ಮೂಡಬಿದಿರೆಯಲ್ಲಿ ನಡೆಯಿತು ಪೂರ್ವಭಾವಿ ಸಭೆ

ಮೂಡಬಿದ್ರೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಇತರ ಕಡೆಗಳಲ್ಲಿ ನೇರಪುಸಾರ ಮಾಡುತ್ತಿರುವ ಯೂಟೂಬ್ ಚಾನಲ್ ಗಳು ಗುಣಮಟ್ಟ ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ, ಅಸೋಸಿಯೇಷನ್ ರಚಿಸುವ ಅವಶ್ಯಕತೆಯ ಉದ್ದೇಶಕ್ಕಾಗಿ ಮೂಡಬಿದಿರೆ ಕೋಟೆಬಾಗಿಲು ವೀರ ಮಾರುತಿ ದೇವಸ್ಥಾನದ ಸಭಾಂಗಣದಲ್ಲಿ ಇಂದು ಪೂರ್ವಭಾವಿ ಸಭೆ ಆಯೋಜಿಸಲಾಯಿತು. ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ಯಾವ ರೀತಿಯಲ್ಲಿ ಮಾಡಬಹುದು ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಜೊತೆಗೆ

ಯೂಟೂಬ್ ಚಾನೆಲ್‍ ಗಳ ಗುಣಮಟ್ಟ, ಏಕರೂಪದ ದರ ನಿಗದಿಗೆ ಅಸೋಸಿಯೇಶನ್‍ ರಚನೆಗೆ ನಿರ್ಧಾರ | ಮೂಡಬಿದಿರೆಯಲ್ಲಿ ನಡೆಯಿತು ಪೂರ್ವಭಾವಿ ಸಭೆ Read More »

ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ

ಪುತ್ತೂರು : ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಇಂದು ನಡೆಯಿತು. ಮಂಡಲಗಳ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ನೂತನ ಅಧ್ಯಕ್ಷರುಗಳಾದ ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್ ಅವರಿಗೆ ಬಿಜೆಪಿ ಶಲ್ಯ ಹಾಕಿ ಕಛೇರಿಯ ದಾಖಲಾತಿ ಪುಸ್ತಕ ಹಸ್ತಾಂತರಿಸಿ ನೂತನ ಸಮಿತಿಗೆ ಶುಭ ಹಾರೈಸಿದರು. ಗ್ರಾಮಾಂತರ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್

ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ Read More »

error: Content is protected !!
Scroll to Top