ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಪ್ರತಿಭಾ ಶೋಧ” ಗುರುವಾರ ಲಿಟ್ಲ್‍ ಫ್ಲವರ್ ಶಾಲೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ಶಿಕ್ಷಣ […]

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ನಿವೃತ್ತ ಶಿಕ್ಷಕ ಕೊಲೆ ಪ್ರಕರಣ | ಕೊಲೆಗೆ ಬಳಸಿದ ಬೈಕ್‍, ಕತ್ತಿ, ಬಟ್ಟೆ ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಮಧ್ಯಾಹ್ನ ಕಾಸರಗೋಡು ಮನೆಗೆ ತೆರಳಿದ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕಾಸರಗೋಡು ತಾಲೂಕಿನ ಕುಂಬ್ರಾಜಿ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ( 53)

ನಿವೃತ್ತ ಶಿಕ್ಷಕ ಕೊಲೆ ಪ್ರಕರಣ | ಕೊಲೆಗೆ ಬಳಸಿದ ಬೈಕ್‍, ಕತ್ತಿ, ಬಟ್ಟೆ ವಶಕ್ಕೆ ಪಡೆದ ಪೊಲೀಸರು Read More »

ಎತ್ತಿನಹೊಳೆ ಯೋಜನೆ ಶೀಘ್ರ ಲೋಕಾರ್ಪಣೆ: ಡಿ.ಕೆ.ಶಿವಕುಮಾರ್‌

ಕರಾವಳಿ ಜನರ ವಿರೋಧ ಲೆಕ್ಕಿಸದೆ ಅನುಷ್ಠಾನಗೊಂಡ ಯೋಜನೆ ಬೆಂಗಳೂರು: ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಜ್ಜಾಗಿದೆ. ಎತ್ತಿನಹೊಳೆ ಯೋಜನೆಯ ಟ್ರಯಲ್ ರನ್ ಪ್ರಾರಂಭ ಮಾಡಿದ್ದೇವೆ. ಯೋಜನೆಗಾಗಿ ಇಂಜಿನಿಯರ್‌ಗಳು ಸೇರಿದಂತೆ ಪ್ರತಿಯೊಬ್ಬ ನೌಕರ ಬಹಳ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈಗ 550 ಕ್ಯುಸೆಕ್ ನೀರು ಹರಿಯುತ್ತಿದೆ. ಇದರ ಆರು ಪಟ್ಟು ನೀರು ಉದ್ಘಾಟನೆ ದಿನ ಹರಿಸುತ್ತೇವೆ ಎಂದು ಉಪಮುಖ್ಯಮಂತ್ರು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಎತ್ತಿನಹೊಳೆ ಯೋಜನೆಗೆ ಬಹಳ ಜನ ಭೂಮಿ ಕೊಟ್ಟಿದ್ದಾರೆ. ಇದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಇದನ್ನು

ಎತ್ತಿನಹೊಳೆ ಯೋಜನೆ ಶೀಘ್ರ ಲೋಕಾರ್ಪಣೆ: ಡಿ.ಕೆ.ಶಿವಕುಮಾರ್‌ Read More »

ಕಾಶ್ಮೀರ : ಮೂವರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾಪಡೆ ನಡೆಸಿದ ಎನ್‌ಕೌಂಟಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಕುಪ್ವಾರ ಜಿಲ್ಲೆಯ ತಂಗ್ದಾರ್‌ಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಇದರಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಈ ನಡುವೆ ರಜೋರಿಯಲ್ಲಿಯೂ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಕಾಳಗ ಮುಂದುವರಿದಿದ್ದು, ಸೇನಾಪಡೆ ಎನ್‌ಕೌಟರ್ ಆರಂಭಿಸಿದೆ. ಖೇರಿ ಮೊಹ್ರಾ

ಕಾಶ್ಮೀರ : ಮೂವರು ಉಗ್ರರನ್ನು ಸದೆಬಡಿದ ಸೇನೆ Read More »

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಹೋದ ಅಪರಿಚಿತ ಶವ | ಪ್ರವಾಹ ರಕ್ಷಣಾ ತಂಡದಿಂದ ಕಾರ್ಯಾಚರಣೆ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇರುವುದರಿಂದ ಪ್ರವಾಹ ರಕ್ಷಣಾ ತಂಡದವರಿಗೆ ದೋಣಿಗೆ ಒಬಿಎಂ ಸಿಕ್ಕಿಸಿ ದೋಣಿ ಚಲಾಯಿಸಲು ಸಾಧ್ಯವಾಗದಿರುವುದರಿಂದ ಅವರ ಕೈಗೂ ಮೃತದೇಹ ಸಿಗದೆ ನೀರಿನಲ್ಲಿ ತೇಲಿಕೊಂಡು ಹೋಗಿದೆ ಎಂದು ತಿಳಿದು ಬಂದಿದೆ. ನೀಲಿ ಬಣ್ಣದ ಒಳ ಉಡುಪನ್ನು ತೊಟ್ಟಿರುವ ಮೃತದೇಹವೊಂದು ನದಿಯಲ್ಲಿ ತೇಲಿ ಹೋಗುತ್ತಿರುವುದನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಹೋದ ಅಪರಿಚಿತ ಶವ | ಪ್ರವಾಹ ರಕ್ಷಣಾ ತಂಡದಿಂದ ಕಾರ್ಯಾಚರಣೆ Read More »

ವಿದ್ಯುತ್‌ ಕಂಬದಲ್ಲಿ ಬಿಲ್ಲುಬಾಣ, ಗದೆ ಅಳವಡಿಸಿದ್ದಕ್ಕೆ ಎಸ್‌ಡಿಪಿಐ ವಿರೋಧ : ತೆರವಿಗೆ ಆದೇಶ

ಹನುಮಂತನ ಜನ್ಮಸ್ಥಳದಲ್ಲಿ ಧಾರ್ಮಿಕ ಸಂಕೇತ ಬಳಸಿರುವುದನ್ನು ಆಕ್ಷೇಪಿಸಿದ ಎಸ್‌ಡಿಪಿಐ ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬಿಲ್ಲುಬಾಣ ಮತ್ತು ಗದೆಯ ಆಕೃತಿಗಳಿರುವ ವಿದ್ಯುತ್‌ ಕಂಬಗಳಿಗೆ ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದ ಬಳಿಕ ಈ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ತಹಶೀಲ್ದಾರ್‌ ಆದೇಶಿಸಿದ್ದಾರೆ. ಹನುಮಂತನ ಜನ್ಮಸ್ಥಾನ ಎಂದು ಅರಿಯಲ್ಪಡುವ ಅಂಜನಾದ್ರಿ ಬೆಟ್ಟ ಇರುವ ಗಂಗಾವತಿಯಲ್ಲಿ ಅಯೋಧ್ಯೆ ಮತ್ತು ತಿರುಪತಿ ಮಾದರಿಯಲ್ಲಿ ವಿದ್ಯುತ್‌ ಕಂಬಗಳನ್ನು ವಿನ್ಯಾಸಗೊಳಿಸಲಾಗಿತ್ತು. ಜುಲೈನಗರ ಎಂಬಲ್ಲಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಬಿಲ್ಲುಬಾಣ ಮತ್ತು ಗದೆ ವಿನ್ಯಾಸವಿರುವ

ವಿದ್ಯುತ್‌ ಕಂಬದಲ್ಲಿ ಬಿಲ್ಲುಬಾಣ, ಗದೆ ಅಳವಡಿಸಿದ್ದಕ್ಕೆ ಎಸ್‌ಡಿಪಿಐ ವಿರೋಧ : ತೆರವಿಗೆ ಆದೇಶ Read More »

ವಿದ್ಯಾಭಾರತಿ ಶಟಲ್ ಬ್ಯಾಡ್‍ಮಿಂಟನ್ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಾಮೆತ್ತಡ್ಕ ಸುದಾನ ಸ್ಪೋಟ್ಸ್ ಕ್ಲಬ್ ನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಾಲವರ್ಗದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಅಯ್ಕೆಯಾಗಿದೆ.  ಬಾಲವರ್ಗದ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಅದ್ಯಾನ್.ಆರ್.,  ಜಶ್.ಎಚ್.ಬಿ., ಪ್ರಣವ ಹೆಬ್ಬಾರ್, 8ನೇ ತರಗತಿಯ ಇಶಾನ್.ಕೆ., ನಿಧಿತ್ ಗೌಡ, ವಿಸ್ತಾರ್ ರೈ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ

ವಿದ್ಯಾಭಾರತಿ ಶಟಲ್ ಬ್ಯಾಡ್‍ಮಿಂಟನ್ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌

ಅಭಿಮಾನಿಗಳ ಕಣ್ಣು ತಪ್ಪಿಸಲು ವಾಹನಕ್ಕೆ ಪರದೆ ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಕೊಲೆ ಆರೋಪಿ ನಟ ದರ್ಶನ್‌ನನ್ನು ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿಯ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್‌ನನ್ನು ಪೊಲೀಸರು ಕರೆದೊಯ್ದಿದ್ದಾರೆ. 10 ಗಂಟೆಯೊಳಗೆ ಬಳ್ಳಾರಿ ಜೈಲು ತಲುಪುವ ಸಾಧ್ಯತೆ ಇದೆ. ಬೊಲೆರೋ ವಾಹನದಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ಕರೆದೊಯ್ಯಲಾಗಿದೆ. ಇತ್ತೀಚೆಗೆ ದರ್ಶನ್ ಜೈಲಿನಲ್ಲಿ ಕುಖ್ಯಾತ ರೌಡಿಗಳೊಂದಿಗೆ ಚೇರ್‌ನಲ್ಲಿ ಕುಳಿತು

ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳಿಗೆ ಚಾಲನೆ

ಪುತ್ತೂರು: ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ ನಡೆಸುವ ಪರೀಕ್ಷೆ ಸೈನ್ಯ ಸೇರುವವರಿಗೆ ಒಳ್ಳೆಯ ಅವಕಾಶ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸೈನ್ಯದಲ್ಲಿ ಹುಡುಗರು ಮತ್ತು ಹುಡುಗಿಯರು ಇಬ್ಬರಿಗೂ  ಸಮಾನ ಅವಕಾಶವಿದೆ. ಆದರೆ ಪ್ರಸ್ತುತ ನಮ್ಮ ಪ್ರದೇಶಗಳಿಂದ ಯುವ ಸಮೂಹ ದೊಡ್ಡ ಉತ್ಸಾಹ ತೋರದಿರುವುದು, ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರದಿರುವುದು ವಿಷಾದಕರ ಎಂದು ರಾಷ್ಟ್ರೀಯ ಸೈನಿಕ ಸಂಸ್ಥೆಯ ರಾಜ್ಯ ಯುವ ಅಧ್ಯಕ್ಷ ಅರವಿಂದ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್‌.ಡಿ.ಎ. ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳಿಗೆ ಚಾಲನೆ Read More »

ಸಿಎಂ, ಡಿಸಿಎಂ ಭವಿಷ್ಯ ಇಂದು ಕೋರ್ಟಿನಲ್ಲಿ ನಿರ್ಧಾರ

ಮುಡಾ ಕೇಸಿನಲ್ಲಿ ಸಿದ್ದರಾಮಯ್ಯ, ಸಿಬಿಐ ತನಿಖೆ ಹಿಂದೆಗೆದುಕೊಂಡ ಕೇಸಿನಲ್ಲಿ ಡಿಕೆಶಿ ವಿಚಾರಣೆ ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ನಿರ್ಧಾರದ ಭವಿಷ್ಯ ಇಂದು ಹೈಕೋರ್ಟಿನಲ್ಲಿ ನಿರ್ಧಾರವಾಗಲಿದೆ. ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಲಾಭ ಪಡೆದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ನಿರ್ಧಾರ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್

ಸಿಎಂ, ಡಿಸಿಎಂ ಭವಿಷ್ಯ ಇಂದು ಕೋರ್ಟಿನಲ್ಲಿ ನಿರ್ಧಾರ Read More »

error: Content is protected !!
Scroll to Top