ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 111ನೇ ವಾರ್ಷಿಕ ಮಹಾ ಸಭೆ

ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 111ನೇ ವಾರ್ಷಿಕ ಮಹಾ ಸಭೆಯು ಆ.24 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಪೈ ಬಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 2023-24 ನೇ ಸಾಲಿನಲ್ಲಿ 4936 ಸದಸ್ಯರನ್ನು ಹೊಂದಿದೆ. 8.56 ಕೋಟಿ ರೂ. ಪಾಲು ಬಂಡವಾಳ ಸಂಗ್ರಹಿಸಿ, 50.82 ಕೋಟಿ ರೂ. ಠೇವಣಿ ಹೊಂದಿರುತ್ತದೆ. ರೂ 42.71 ಕೋಟಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಲ ಪಡೆದು ರೂ.83.42 […]

ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 111ನೇ ವಾರ್ಷಿಕ ಮಹಾ ಸಭೆ Read More »

ದೇಶಭಕ್ತಿ ಗೀತ ಗಾಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು:  2024 25 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ಪುತ್ತೂರು ಸ್ಥಳೀಯ ಸಂಸ್ಥೆಯ ನೇತೃತ್ವದಲ್ಲಿ ನಡೆದ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ವಿಭಾಗದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ವಿದ್ಯಾರ್ಥಿಗಳಾದ ವಂಶಿಕ್ ಕೆ., ಎ.ವಿ.ಧನ್ವಿಕ್ ಕುಮಾರ್, ಉದ್ಯಾನ್ ಎಂ., ಅಥರ್ವ ಎಸ್.ಆರ್., ಧನ್ವಿತ್ ಎಚ್. ಭಟ್, ಮತ್ತು ಬಿ. ಸಮರ್ಥ್ ಪ್ರತಿನಿಧಿಸಿ

ದೇಶಭಕ್ತಿ ಗೀತ ಗಾಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿ ಸಿ ಟ್ರಸ್ಟ್ ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಟ್ರಸ್ಟ್ ಧರ್ಮಸ್ಥಳ ಮತ್ತು ಪೆರಿಯಡ್ಕ ಸರ್ವೋದಯ ಪ್ರೌಢಶಾಲೆ  ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆಯಿತು ಶಾಲಾ ಪರಿವೀಕ್ಷಕ  ಬಾಲಕೃಷ್ಣ ಬಿ.ಟಿ. ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ  ಮುಖ್ಯ ಶಿಕ್ಷಕಿ ಲಕ್ಷ್ಮೀ ಪಿ. ಅಧ್ಯಕ್ಷತೆ ವಹಿಸಿದ್ದರು. ಉಪ್ಪಿನಂಗಡಿ ವಲಯದ ಜನಜಾಗೃತಿ ವೇದಿಕೆ  ವಲಯಧ್ಯಕ್ಷ ಲೋಕೇಶ್ ಬೆತ್ತೋಡಿ ರವರು

ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ | ಕನ್ನಡ ಭಾಷೆ ಉಳಿವಿಗೆ ಯಕ್ಷಗಾನ ಬಹುಮುಖ್ಯವಾದುದು-ನಾ. ಕಾರಂತ ಪೆರಾಜೆ

ಪುತ್ತೂರು: ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ ಯಕ್ಷಗಾನ ಬಹುದೊಡ್ಡ ಕೊಡುಗೆ ನೀಡಿದೆ. ಯಕ್ಷಗಾನವನ್ನು ಉಳಿಸುವುದೇ

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ | ಕನ್ನಡ ಭಾಷೆ ಉಳಿವಿಗೆ ಯಕ್ಷಗಾನ ಬಹುಮುಖ್ಯವಾದುದು-ನಾ. ಕಾರಂತ ಪೆರಾಜೆ Read More »

ಸಿದ್ದರಾಮಯ್ಯ ಸಂಪುಟಕ್ಕೆ ಸದ್ಯದಲ್ಲೇ ಸರ್ಜರಿ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಚಿಂತನೆ ಬೆಂಗಳೂರು: ಸಂಪುಟದಲ್ಲಿರುವ ಕೆಲವು ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆಗೊಳಸುವ ಕುರಿತು ಚಿಂತನೆ ನಡೆದಿದೆ ಎಂದು ಮೂಲವೊಂದು ತಿಳಿಸಿದೆ. ಶುಕ್ರವಾರ ಹೈಕಮಾಂಡ್‌ ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂಪುಟಕ್ಕೆ ಸರ್ಜರಿ ಮಾಡುವ ವಿಷಯವನ್ನೂ ಪ್ರಸ್ತಾಪಿಸಿದ್ದಾರೆ. ಈ ವೇಳೆ ಸದ್ಯ ವಿವಾದ ತಣ್ಣಗಾಗಲಿ, ನಂತರ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸುವ ಎಂದು ಹೈಕಮಾಂಡ್‌ ನಾಯಕರು ಹೇಳಿದ್ದಾರೆ ಎನ್ನಲಾಗಿದೆ.ನಿಷ್ಕ್ರಿಯ ಮತ್ತು ಹೆಸರು ಕೆಡಿಸಿಕೊಂಡಿರುವ ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ

ಸಿದ್ದರಾಮಯ್ಯ ಸಂಪುಟಕ್ಕೆ ಸದ್ಯದಲ್ಲೇ ಸರ್ಜರಿ? Read More »

ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣ | ಮೂವರು ಪೊಲೀಸ್ ವಶಕ್ಕೆ

ಪುತ್ತೂರು: ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಫ್ಯಾನ್ಸಿ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಕೋರ್ಟ್ ರಸ್ತೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಕಟ್ಟಡದಲ್ಲಿರುವ ಬ್ಲಾಕ್ ಡೈಮಂಡ್ ಫ್ರಾನ್ಸಿ ಅಂಗಡಿಗೆ ಆ.23ರ ನಸುಕಿನ ಜಾವ ಬೈಕ್‌ನಲ್ಲಿ ಹೆಲ್ಮಟ್ ಧರಿಸಿದ ವ್ಯಕ್ತಿಯೊಬ್ಬರು ಬಂದು ಅಂಗಡಿಯ ರೋಲಿಂಗ್ ಶೆಟರ್‌ಗೆ ತೈಲ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಈ ಘಟನೆ ಅಂಗಡಿಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಂಜೆ ಮೂವರು ಆರೋಪಿಗಳನ್ನು

ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣ | ಮೂವರು ಪೊಲೀಸ್ ವಶಕ್ಕೆ Read More »

ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗ ವಿಶ್ವ ಉದ್ಯಮಿಗಳ ದಿನವನನ್ನು ಸ್ಫೂರ್ತಿದಾಯಕ ಯಶಸ್ಸು, ಸ್ಫೂರ್ತಿ ಮತ್ತು ಬೆಳವಣಿಗೆಯ ಬಗ್ಗೆ ಹಳೆಯ ವಿದ್ಯಾರ್ಥಿಗಳ ಅರಿವು ಎಂಬ ವಿಷಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಸೀಮೆನ್ಸ್ ಎಜಿಯ ಹೋಡ್ ಗ್ಲೋಬಲ್ ಸಿಆರ್‌ಎಂಒ ಶ್ರೀನಿವಾಸ ವೆಂಕಟೇಶ್ ಮೂರ್ತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಶ್ರೀಮೂರ್ತಿ ಅವರು ಉದ್ಯಮಿಗಳಾಗಲು ಎದುರಿಸಿದ ಸವಾಲುಗಳು ಮತ್ತು ತಮ್ಮ ಉದ್ಯಮಿತ್ವದ ಆರಂಭಿಕ ಹಂತಗಳಲ್ಲಿ ಅನುಭವಿಸಿದ ಕಷ್ಟಗಳು ಸೇರಿದಂತ, ತಮ್ಮ ಯಶಸ್ವಿ ಜೀವನಯಾನವನ್ನು ವಿದ್ಯಾರ್ಥಿಗಳಿಗೆ ಹಂಚಿಕೊಂಡರು

ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಶಿಖರ ಧವನ್‌ ವಿದಾಯ

ಎರಡು ವರ್ಷಗಳಿಂದ ಅವಕಾಶಗಳಿಲ್ಲದೆ ಮೂಲೆಗುಂಪಾಗಿದ್ದ ಕ್ರಿಕೆಟರ್‌ ಹೊಸದಿಲ್ಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 38 ವರ್ಷದ ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಶಿಖರ್ ಧವನ್ ಕೊನೆಯ ಬಾರಿಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದು 2022ರಲ್ಲಿ. 2022ರ ಬಾಂಗ್ಲಾದೇಶ ಪ್ರವಾಸದ ನಂತರ ಧವನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಅದಾಗ್ಯೂ ಅವರು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಶಿಖರ ಧವನ್‌ ವಿದಾಯ Read More »

ಸಾಮಾಜಿಕ ಜಾಲತಾಣಗಳಲ್ಲಿ ವಯನಾಡು ದುರಂತದ ಬಗ್ಗೆ ಕೋಮುದ್ವೇಷ ಸಂದೇಶ ರವಾನೆ | ಆರೋಪಿಗೆ ಪುತ್ತೂರು ನ್ಯಾಯಾಲಯದಿಂದ ಜಾಮೀನು

ಪುತ್ತೂರು: ವಯನಾಡಿನಲ್ಲಿ ನಡೆದ ಭೂಕುಸಿತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನಿಸಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದುರಂತದಲ್ಲಿ ಸಾವಿಗೀಡಾದವರನ್ನು ಉದ್ದೇಶಿಸಿ ಪುತ್ತೂರು ಡಾಕ್ಟರ್ ಇನ್ನಿತರ ಗ್ರೂಪ್ ಗಳಲ್ಲಿ ಒಂದು ಸಮುದಾಯದ ವಿರುದ್ಧ ಪೋಸ್ಟ್ ಮಾಡಿ ಸಂದೇಶ ವಿನಿಮಯ ಮಾಡಿಕೊಂಡಿರುವುದು ಧರ್ಮದ ಮಧ್ಯೆ, ಕೋಮು ದ್ವೇಷ ಭಾವನೆ ಹುಟ್ಟಿಸುವ, ಕೋಮು ಸಾಮರಸ್ಯಕ್ಕೆ ಧಕ್ಕೆ ಬರುವಂತಹ, ಸಮುದಾಯಗಳ ನಡುವೆ ವೈಮನಸ್ಸು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಸಾಧ್ಯತೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವಯನಾಡು ದುರಂತದ ಬಗ್ಗೆ ಕೋಮುದ್ವೇಷ ಸಂದೇಶ ರವಾನೆ | ಆರೋಪಿಗೆ ಪುತ್ತೂರು ನ್ಯಾಯಾಲಯದಿಂದ ಜಾಮೀನು Read More »

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ !

ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದ ಪರಿಣಾಮ ಕಾರುಗಳೆರಡು ಜಖಂ ಗೊಂಡಿದೆ. ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಕತ್ಯಾಡಿ ನಿವಾಸಿಯೊಬ್ಬರಿಗೆ ತೀವು ಗಾಯವಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ ! Read More »

error: Content is protected !!
Scroll to Top