ಬೆಳ್ಳಂಬೆಳಗ್ಗೆ ಪತ್ನಿಯನ್ನು ಕಡಿದು ಕೊಂದ ಪತಿ !

ಉಡುಪಿ: ಪತಿಯೇ ಪತ್ನಿಯನ್ನು ಕದಿಡು ಕೊಲೆ ಮಾಡಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಯಶ್ರೀ (28) ಕೊಲೆಯಾದವರು. ಕಿರಣ್ ಉಪಾಧ್ಯ (30) ಕೊಲೆ ಆರೋಪಿಯಾಗಿದ್ದಾನೆ. ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆಬ್ಬಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇದೆ. ಶಂಕೆ ಮೇರೆಗೆ ಪತಿ ಕಿರಣ್ […]

ಬೆಳ್ಳಂಬೆಳಗ್ಗೆ ಪತ್ನಿಯನ್ನು ಕಡಿದು ಕೊಂದ ಪತಿ ! Read More »

ಷೇರು ಮಾರುಕಟ್ಟೆಯಿಂದ ಅಂಬಾನಿಗೆ 5 ವರ್ಷ ಬ್ಯಾನ್‌

ಹೊಸದಿಲ್ಲಿ: ಷೇರುಗಳನ್ನು ಮತ್ತು ಹಣವನ್ನು ಬೇರೊಂದು ಕಂಪನಿಗೆ ವರ್ಗಾಯಿಸಿ ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದ ಉದ್ಯಮಿ ಅನಿಲ್‌ ಅಂಬಾನಿಗೆ ಷೇರು ಮಾರುಕಟ್ಟೆ ನಿಯಂತ್ರಕ ವ್ಯವಸ್ಥೆ ಸೆಬಿ (SEBI) ದೊಡ್ಡದೊಂದು ಶಾಕ್‌ ನೀಡಿದೆ. ಅನಿಲ್ ಅಂಬಾನಿ ಅವರನ್ನು ಐದು ವರ್ಷಗಳ ಮಟ್ಟಿಗೆ ಷೇರು ಮಾರುಕಟ್ಟೆಯಿಂದಲೇ ಬ್ಯಾನ್‌ ಮಾಡಲಾಗಿದೆ. ಜತೆಗೆ 25 ಕೋಟಿ ರೂ. ದಂಡವನ್ನೂ ಸೆಬಿ ವಿಧಿಸಿದೆ.ರಿಲಯನ್ಸ್ ಹೋಮ್ ಫೈನಾನ್ಸ್‌ನ (RIHL) ಕಂಪನಿಯಿಂದ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದಕ್ಕೆ ಕಂಪನಿಯ ಪ್ರಮುಖ ಅಧಿಕಾರಿಗಳು ಸೇರಿದಂತೆ ಅನಿಲ್‌ ಅಂಬಾನಿಗೆ ಸೇರಿದ 24

ಷೇರು ಮಾರುಕಟ್ಟೆಯಿಂದ ಅಂಬಾನಿಗೆ 5 ವರ್ಷ ಬ್ಯಾನ್‌ Read More »

ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್‌ ಉಚಿತ ತರಬೇತಿ: ಮಧು ಬಂಗಾರಪ್ಪ

ಬೆಂಗಳೂರು: ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ತಜ್ಞರು ರಾಜ್ಯದ 25 ಸಾವಿರ ಬಡ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಿದ್ದಾರೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ ಎಂದು ತಿಳಿಸಿದ್ದಾರೆ.25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲಿದೆ. ತೇರ್ಗಡೆ

ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್‌ ಉಚಿತ ತರಬೇತಿ: ಮಧು ಬಂಗಾರಪ್ಪ Read More »

ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ | ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದಿಂದ ಮನವಿ

ಬಂಟ್ವಾಳ: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟುವಿನಲ್ಲಿ ಪದ್ಮನಾಭಕೋಟ್ಯಾನ್ ಅವರ ಮನೆಗೆ ಮುಸುಕುಧಾರಿಗಳು ನುಗ್ಗಿ ಮನೆಮಂದಿಗೆ ಹಲ್ಲೆ ನಡೆಸಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳನ್ನು ಬಂಧಿಸಿ ದರೋಡೆ ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳುವಂತೆ ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ನೇತೃತ್ವದಲ್ಲಿ ಆಡಳಿತ ಮಂಡಳಿಯ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಕೆಲವು ಆರೋಪಿಗಳನ್ನು ಬಂಧಿಸಿದ್ದರೂ ಅವರು ದರೋಡೆ ಮಾಡಿದ ನಗದು ಹಾಗೂ ಚಿನ್ನಾಭರಣಗಳು ವಶಕ್ಕೆ

ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ | ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದಿಂದ ಮನವಿ Read More »

ಜಿಂದಾಲ್‌ಗೆ 3 ಸಾವಿರ ಎಕರೆ ಭೂಮಿ ಮಾರಾಟ : ಪರಮೇಶ್ವರ್‌ ಸಮರ್ಥನೆ

ಅಂದು ವಿರೋಧಿಸಿದ್ದ ಡೀಲನ್ನು ಇಂದು ತಾನೇ ಅನುಮೋದಿಸಿದ ಕಾಂಗ್ರೆಸ್‌ ಬೆಂಗಳೂರು: ಬಳ್ಳಾರಿ ಬಳಿ ಜೆಎಸ್​ಡಬ್​ಲ್ಯೂ (ಜಿಂದಾಲ್​) ಸ್ಟೀಲ್​ ಕಂಪನಿಗೆ 3,667.31 ಎಕರೆ ಜಮೀನು ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಜೆಎಸ್‌ಡಬ್‌ಲ್ಯೂ ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006-07ರಲ್ಲೇ ಗುತ್ತಿಗೆ ಮತ್ತು ಮಾರಾಟದ ಆಧಾರದಲ್ಲಿ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ಧಕ್ರಯ ಅಂದರೆ ಮಾರಾಟ ಮಾಡಿಕೊಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಶೇಷವೆಂದರೆ ಇದು ಹಿಂದಿನ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ನಡೆದಿದ್ದ

ಜಿಂದಾಲ್‌ಗೆ 3 ಸಾವಿರ ಎಕರೆ ಭೂಮಿ ಮಾರಾಟ : ಪರಮೇಶ್ವರ್‌ ಸಮರ್ಥನೆ Read More »

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ

ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ಕ್ಕೆ ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪಾಳ್ಗೊಳ್ಳಲಿದ್ದಾರೆ.

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ Read More »

ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ | ಮಾರ್ಗಸೂಚಿಯಲ್ಲಿ ಏನೆಲ್ಲಾ ಇದೆ ? | ಇಲ್ಲಿದೆ ಡಿಟೈಲ್ಸ್

ಪುತ್ತೂರು : ಈ ವರ್ಷದ  ಗೌರಿ ಗಣೇಶ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ದ.ಕ.ಜಿಲ್ಲಾಡಳಿತ ಸೂಚಿಸಿದೆ. ವಿಗ್ರಹ ವಿಸರ್ಜನೆ ಕಾರಣದಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲಮೂಲ ಸಂರಕ್ಷಿಸುವ ನಿಟ್ಟಿನಲ್ಲಿ ಫ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ರಾಸಾಯನಿಕ ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಕೆರೆ, ಬಾವಿ ಮುಂತಾದ ಜಲಮೂಲಗಳಲ್ಲಿ ವಿಸರ್ಜಿಸಿರುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅನುಸಾರ ಕ್ರಮ ಕೈಗೊಳ್ಳಲಾಗುವುದು. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ

ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ | ಮಾರ್ಗಸೂಚಿಯಲ್ಲಿ ಏನೆಲ್ಲಾ ಇದೆ ? | ಇಲ್ಲಿದೆ ಡಿಟೈಲ್ಸ್ Read More »

ಮೋದಿ ನಂತರ ದೇಶದ ಜನ ಪ್ರಧಾನಿಯಾಗಿ ನೋಡ ಬಯಸುವುದು ಯಾರನ್ನು ಗೊತ್ತೇ?

ಸಮೀಕ್ಷೆಯಲ್ಲಿ ಬಂದಿದೆ ಅಚ್ಚರಿಯ ಫಲಿತಾಂಶ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಮುಂಬರುವ ಸೆ.17ರಂದು 75ರ ಹರೆಯಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಉನ್ನತ ಹುದ್ದೆಯಲ್ಲಿರುವವರು 75 ವರ್ಷವಾದ ಬಳಿಕ ಸಕ್ರಿಯ ರಾಜಕಾರಣದಿಂದ ನಿರ್ಗಮಿಸಿ ಮಾರ್ಗದರ್ಶಕ ಮಂಡಲ ಸೇರುವುದು ಬಿಜೆಪಿಯಲ್ಲಿರುವ ಅಲಿಖಿತ ನಿಯಮ. ಈ ಹಿನ್ನೆಲೆಯಲ್ಲಿ ಮೋದಿಯವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಕುತೂಹಲ ಇಡೀ ದೇಶದಲ್ಲಿ ಇದೆ. ಆದರೆ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸುವಾಗ ಮೋದಿ ಪ್ರಧಾನಿ ಹುದ್ದೆ ಬಿಡುವ ಸಾಧ್ಯತೆ ಗೋಚರಿಸುತ್ತಿಲ್ಲ. ಮೂರನೇ ಅವಧಿಯಲ್ಲಿ ತುಸು ಹಿನ್ನಡೆ

ಮೋದಿ ನಂತರ ದೇಶದ ಜನ ಪ್ರಧಾನಿಯಾಗಿ ನೋಡ ಬಯಸುವುದು ಯಾರನ್ನು ಗೊತ್ತೇ? Read More »

ಸೆ.1ರಿಂದ ರಾಜ್ಯದಲ್ಲಿ ಮದ್ಯ ಅಗ್ಗ?

ಮಾರಾಟ ಹೆಚ್ಚಿಸಲು ಬೆಲೆ ಇಳಿಕೆಗೆ ಮುಂದಾದ ಸರಕಾರ ಬೆಂಗಳೂರು: ಗ್ಯಾರಂಟಿಗಳಿಗೆ ಸಂಪನ್ಮೂಲ ಸಂಗ್ರಹಿಸುವ ಸಲುವಾಗಿ ಮದ್ಯದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಿದ್ದ ಸರಕಾರ ಇದೀಗ ಬೆಲೆ ಇಳಿಸುವ ಕುರಿತು ಚಿಂತನೆ ನಡೆಸುತ್ತಿದೆ. ಬೆಲೆ ಏರಿಸಿದರೆ ಮದ್ಯ ಮಾರಾಟ ಮೂಲಕ ದೊಡ್ಡ ಮೊತ್ತದ ಸಂಪನ್ಮೂಲ ಸಂಗ್ರಹವಾಗಬಹುದು ಎಂಬ ಸರಕಾರದ ಲೆಕ್ಕಾಚಾರ ಉಲ್ಟಾ ಆಗಿದೆ. ಜನ ಇದ್ದುದರಲ್ಲೇ ಅಗ್ಗದ ಮದ್ಯ ಖರೀದಿಸುತ್ತಿದ್ದಾರೆ. ಗಡಿ ಭಾಗದ ಜನರು ಮದ್ಯ ಸೇವನೆಗಾಗಿ ಪಕ್ಕದ ರಾಜ್ಯಗಳಿಗೆ ಹೋಗುತ್ತಾರೆ. ಈ ಕಾರಣಕ್ಕೆ ಮದ್ಯ ಮಾರಾಟದಿಂದ ನಿರೀಕ್ಷಿತ ಆದಾಯ

ಸೆ.1ರಿಂದ ರಾಜ್ಯದಲ್ಲಿ ಮದ್ಯ ಅಗ್ಗ? Read More »

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಆರೋಪಿ ಮೋಹನ್ ನಾಯಕ್‍ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿಂದ ನಿರಾಕರಣೆ

ಹೊಸದಿಲ್ಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೊಲೆ ಆರೋಪಿ ಮೋಹನ್ ನಾಯಕ್‌ ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು. 2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಡಿಸೆಂಬರ್ 7,

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಆರೋಪಿ ಮೋಹನ್ ನಾಯಕ್‍ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿಂದ ನಿರಾಕರಣೆ Read More »

error: Content is protected !!
Scroll to Top