ಬಿಸಿಸಿಐ ಐಪಿಎಲ್‌ನಿಂದ ಗಳಿಸಿದ ಲಾಭ 5,120 ಕೋಟಿ ರೂ!

ಮುಂಬಯಿ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) 2023ರಲ್ಲಿ ಐಪಿಎಲ್‌ ಒಂದರಿಂದಲೇ ಗಳಿಸಿದ ಆದಾಯ ಬರೋಬ್ಬರಿ 5,120 ಕೋಟಿ ರೂ! ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿರುವ ಬಿಸಿಸಿಐ 2022-23ರ ವಾರ್ಷಿಕ ಹಣಕಾಸು ವರದಿಯನ್ನು ಪ್ರಕಟಿಸಿದ್ದು, ಇದರಲ್ಲಿ ಈ ಮಾಹಿತಿಯಿದೆ. 2023ರಲ್ಲಿ ಐಪಿಎಲ್‌ನಿಂದ 11,769 ಕೋಟಿ ರೂ. ಆದಾಯ ಬಿಸಿಸಿಐಗೆ ಹರಿದು ಬಂದಿದೆ. ಇದರಲ್ಲಿ ಖರ್ಷು ಕಳೆದು 5,120.13 ಕೋಟಿ ರೂ. ಉಳಿತಾಯವಾಗಿದೆ. ಐಪಿಎಲ್‌ಗೆ 6,648 ಕೋ. ರೂ. ಬಿಸಿಸಿಐ ಖರ್ಚು ಮಾಡಿದೆ.ಐಪಿಎಲ್ 2022ರ ಆದಾಯ 2,367 ಕೋಟಿ […]

ಬಿಸಿಸಿಐ ಐಪಿಎಲ್‌ನಿಂದ ಗಳಿಸಿದ ಲಾಭ 5,120 ಕೋಟಿ ರೂ! Read More »

ರಾಜ್ಯ-ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜಿಲ್ಲಾ ಸಮಿತಿ ಸಭೆ

ಪುತ್ತೂರು: ದ. ಕ ಜಿಲ್ಲೆಯ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸಂಘದ ಸಭೆ ಪುತ್ತೂರಿನ ಮಾತೃಛಾಯಾ ಸಭಾಂಗಣದಲ್ಲಿ  ಜಿಲ್ಲಾಧ್ಯಕ್ಷ ರಾಷ್ಟ್ರ ಪ್ರಶಸ್ತಿ ಪುರಸ್ಕೃತ  ಬಿ.ಐತಪ್ಪ ನಾಯ್ಕ್ ಅಧ್ಯಕ್ಷತೆಯಲ್ಲಿ ಜರಗಿತು. ಬೆಂಗಳೂರಿನ ಕೇಂದ್ರ ಸಂಘದ ಸಭೆಯ  ಈ ವರೆಗಿನ ಬೆಳವಣಿಗೆಗಳನ್ನು ಕಾರ್ಯದರ್ಶಿ  ರಮೇಶ್. ರಾಯಿ ವಿವರಿಸಿದರು. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನ ಎಲ್ಲಾ ಸಭೆಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪರವಾಗಿ ಭಾಗವಹಿಸಿದ  ರಮೇಶ್ ರಾಯಿ ಅವರನ್ನು  ಸನ್ಮಾನಿಸಲಾಯಿತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಂಗಾಧರ ಆರ್ ಕೆ

ರಾಜ್ಯ-ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜಿಲ್ಲಾ ಸಮಿತಿ ಸಭೆ Read More »

ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್‌ ನಾಯ್ಕ್‌ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ

ಹೊಸದಿಲ್ಲಿ: ಮಂಗಳೂರಿನ ಕುಕ್ಕರ್‌ ಸ್ಫೋಟ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಸೇರಿದಂತೆ ದೇಶದಲ್ಲಿ ನಡೆದಿರುವ ಅನೇಕ ಬಾಂಬ್‌ಸ್ಫೋಟ ಕೃತ್ಯಗಳಲ್ಲಿ ಶಾಮೀಲಾಗಿರುವ ಉಗ್ರರಿಗೆ ಸ್ಫೂರ್ತಿಯಾಗಿರುವ ವಿವಾದಿತ ಇಸ್ಲಾಮಿಕ್ ಬೋಧಕ ಜಾಕೀರ್‌ ನಾಯ್ಕ್‌ನನ್ನು ಸಾಕ್ಷ್ಯಾಧಾರ ಒದಗಿಸಿದರೆ ಭಾರತಕ್ಕೆ ಹಸ್ತಾಂತರಿಸುವ ಪ್ರಸ್ತಾವ ಪರಿಗಣಿಸಲು ಮಲೇಷ್ಯಾ ಒಪ್ಪಿದೆ.ಸೂಕ್ತವಾದ ಸಾಕ್ಷ್ಯಾಧಾರ ಸಿಕ್ಕಿದರೆ ಜಾಕೀರ್‌ ನಾಯ್ಕ್‌ನನ್ನು ಹಸ್ತಾಂತರಿಸಬೇಕೆಂಬ ಭಾರತದ ಮನವಿಯನ್ನು ನಮ್ಮ ಸರ್ಕಾರ ಪರಿಗಣಿಸಬಹುದು ಎಂದು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದಾರೆ.2022ರಲ್ಲಿ ಪ್ರಧಾನಮಂತ್ರಿ ಹುದ್ದೆ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಅನ್ವರ್ ಇಬ್ರಾಹಿಂ ಮೂರು

ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್‌ ನಾಯ್ಕ್‌ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ Read More »

ಮುಡಾ ಹಗರಣ : ಶುಕ್ರವಾರ ಮತ್ತೊಮ್ಮೆ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿ

*ಸಿಎಂ ಪರ ಬ್ಯಾಟಿಂಗ್‌ಗೆ ಅತ್ಯಾಪ್ತರ ಬಳಗ ಸಿದ್ಧತೆ ಬೆಂಗಳೂರು : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಕಂಗೆಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮತ್ತೊಮ್ಮೆ ಹೈಕಮಾಂಡ್‌ ಮುಂದೆ ಹೋಗಿ ತನ್ನನ್ನು ಸಮರ್ಥಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಹೈಕೋರ್ಟ್​​ ಸದ್ಯಕ್ಕೆ ರಿಲೀಫ್ ನೀಡಿದ್ದರೂ ಇದು ತಾತ್ಕಾಲಿಕವಷ್ಟೆ. ಆ.29ರ ವಿಚಾರಣೆಯಲ್ಲಿ ಹೈಕೋರ್ಟ್‌ ತನಿಖೆಗೆ ಅನುಮತಿ ನೀಡಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ. ಹೀಗಾಗಿ ಸಿದ್ದರಾಮಯ್ಯನವರು ಇದಕ್ಕೂ ಮೊದಲೇ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಮುಂದಿನ ನಡೆಯ ಬಗ್ಗೆ ಚರ್ಚಿಸಲಿದ್ದಾರೆ. ಈ ವೇಳೆ ತನ್ನ

ಮುಡಾ ಹಗರಣ : ಶುಕ್ರವಾರ ಮತ್ತೊಮ್ಮೆ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಪುತ್ತೂರು:  ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನದ ಸ್ಮರಣಾರ್ಥವಾಗಿ ಸದ್ಭಾವನಾ ದಿನವನ್ನು ಆಚರಿಸಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಡಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಕೆ ಸದ್ಭಾವನಾ ದಿನದ ಮಹತ್ವವನ್ನು ವಿವರಿಸಿ, ಸದ್ಭಾವನಾ ದಿನ ಅಂದರೆ ಸೌಹಾರ್ದತೆ ಮತ್ತು ಸಮರಸತೆಯ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು. ಪ್ರಾಚಾರ್ಯರಾದ ರೆ.ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋರವರ ನೇತೃತ್ವದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ  ಸಂದರ್ಭದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ Read More »

ಬಾಂಗ್ಲಾದ ಹಿಂದೂಗಳ ವಿರುದ್ಧ ಕ್ರೌರ್ಯ | ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ ಬಾಂಧವರ ದಯನೀಯ ಸ್ಥಿತಿಗಾಗಿ ಅಶ್ರು ತರ್ಪಣ, ಮೌನ ಪ್ರಾರ್ಥನೆ ನಡೆಯಿತು. ಹಿಂದೂಗಳ ವಿರುದ್ಧದ ಅತ್ಯಾಚಾರ, ಅನಾಚಾರ, ಆಕ್ರಮಣ, ಅಮಾನವೀಯ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧವಾಗಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಹಿಂದೂ ವಿರೋಧಿ ದುಷ್ಟ ಶಕ್ತಿಗಳ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಮ್ಮ ದೇಶದ ಪ್ರಧಾನ ಮಂತ್ರಿಯವರಿಗೆ ಬಾಂಗ್ಲಾದ ಹಿಂದೂಗಳ ಹಿತರಕ್ಷಣೆಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪತ್ರಬರೆಯುವ ನಿರ್ಣಯ ಕೈಗೊಳ್ಳಲಾಯಿತು. ವಿದ್ಯಾರ್ಥಿ

ಬಾಂಗ್ಲಾದ ಹಿಂದೂಗಳ ವಿರುದ್ಧ ಕ್ರೌರ್ಯ | ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕಾಂಗ್ರೆಸ್‌ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್‌ ನಾಯಕರು ರಾಜ್ಯಪಾಲರ ವಿರುದ್ಧ ಮಾಡಿರುವ ಟೀಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.ರಾಜ್ಯಪಾಲರು ಮಾಡಿರುವ ಕೆಲಸವನ್ನು ನಮ್ಮ ನಾಯಕರು ಹೇಳಿದ್ದಾರೆ. ಅದನ್ನು ರಾಜ್ಯಪಾಲರನ್ನು ಹೀಯಾಳಿಸಿದರು ಎಂದು ಹೇಳುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ನಿಂದಿಸಿರುವ ಕುರಿತು ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ಮಾಡಿರುವ ಕೆಲಸವನ್ನು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದನ್ನು ಹೇಳಿದರೆ ಹೀಯಾಳಿಕೆಯಾ? ಶಶಿಕಲಾ ಜೊಲ್ಲೆ ಕೇಸ್

ಕಾಂಗ್ರೆಸ್‌ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ Read More »

ಮಹಿಳಾ ಟಿ20 ವಿಶ್ವಕಪ್​ ಟೂರ್ನಮೆಂಟ್‌ ದುಬೈಗೆ ಶಿಫ್ಟ್‌

ದುಬೈ : ಬಾಂಗ್ಲಾದೇಶದಲ್ಲಿ ರಾಜಕೀಯ ದಂಗೆಯಿಂದ ಪರಿಸ್ಥಿತಿ ಪ್ರಕುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಆ ದೇಶದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್​ ಟೂರ್ನಮೆಂಟನ್ನು ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಮಂಗಳವಾರ ನಡೆದ ಐಸಿಸಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಅದರಂತೆ ಈ ಬಾರಿಯ ಮಹಿಳಾ ಟಿ20 ವಿಶ್ವಕಪ್​ ಪಂದ್ಯಗಳು ದುಬೈ, ಶಾರ್ಜಾ ಸ್ಟೇಡಿಯಂಗಳಲ್ಲಿ ನಡೆಯಲಿವೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ದಂಗೆಗಳ ಬಳಿಕ ಆ ದೇಶದಲ್ಲಿ ಇನ್ನೂ ಸ್ಥಿರತೆ ನೆಲೆಯಾಗಿಲ್ಲ. ಹೀಗಾಗಿ ಟೂರ್ನಿಯನ್ನು

ಮಹಿಳಾ ಟಿ20 ವಿಶ್ವಕಪ್​ ಟೂರ್ನಮೆಂಟ್‌ ದುಬೈಗೆ ಶಿಫ್ಟ್‌ Read More »

ಇಂದಿನಿಂದ ಪ್ರಧಾನಿ ಮೋದಿ ಉಕ್ರೇನ್‌, ಪೋಲೆಂಡ್‌ ಪ್ರವಾಸ

ಹೊಸದಿಲ್ಲಿ: ಪೋಲೆಂಡ್‌ ಮತ್ತು ಯುದ್ಧತ್ರಸ್ತವಾಗಿರುವ ಉಕ್ರೇನ್‌ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಇಂದಿನಿಂದ ಪ್ರಾರಂಭವಾಗಲಿದೆ. ಇದು ಮೊರಾರ್ಜಿ ದೇಸಾಯಿ ನಂತರ 45 ವರ್ಷಗಳ ಬಳಿಕ ಯುರೋಪ್‌ ದೇಶಗಳಿಗೆ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿ. ಈ ವರ್ಷ ಭಾರತ ಮತ್ತು ಪೋಲೆಂಡ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70ನೇ ವಾರ್ಷಿಕೋತ್ಸವವೂ ಆಗಿದೆ. ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. 45

ಇಂದಿನಿಂದ ಪ್ರಧಾನಿ ಮೋದಿ ಉಕ್ರೇನ್‌, ಪೋಲೆಂಡ್‌ ಪ್ರವಾಸ Read More »

ಅನಾಥಾಶ್ರಮದ ಹುಡುಗಿ ಅಮೆರಿಕದ ಕಂಪನಿಯ ಸಿಇಒ ಆದ ಕಥೆ

ವಾರಂಗಲ್‌ನಲ್ಲಿ ಕಲ್ಲು ಒಡೆಯುತ್ತಿದ್ದ ಜ್ಯೋತಿ ರೆಡ್ಡಿ ಬಿಲಿಯನ್ ಡಾಲರ್ ಕಂಪನಿ ಕಟ್ಟಿದರು ‘ಯಾವಾಗ ನಿನ್ನ ಆಕಾಂಕ್ಷೆಗಳು ಪ್ರಬಲವಾಗಿ ಇರುತ್ತವೆಯೋ, ಆಗ ನಿನ್ನೊಳಗೆ ಅತಿಮಾನುಷ ಶಕ್ತಿಗಳು ಪ್ರವಹಿಸುತ್ತವೆ. – ನೆಪೋಲಿಯನ್ ಹಿಲ್ ಈ ಮಾತಿಗೆ ನಿದರ್ಶನ ಆಗುವ ಸಾಧನೆ ಮಾಡಿ ತನ್ನ ಬದುಕನ್ನು ತಾನೇ ರೂಪಿಸಿಕೊಂಡಿರುವ ಒಬ್ಬ ಅನಾಥ ಹುಡುಗಿಯ ಕಥೆ ಇಂದು ನಿಮ್ಮ ಮುಂದೆ. ಆಕೆಯ ಹೆಸರು ಜ್ಯೋತಿ ರೆಡ್ಡಿ. ತೆಲಂಗಾಣ ರಾಜ್ಯದ ವಾರಂಗಲ್‌ನ ಅತ್ಯಂತ ಬಡ ಕುಟುಂಬದ ಹುಡುಗಿ ಆಗಿದ್ದಳು. ಆಕೆಯ ಹೆತ್ತವರಿಗೆ ಮೂರು ಗಂಡು

ಅನಾಥಾಶ್ರಮದ ಹುಡುಗಿ ಅಮೆರಿಕದ ಕಂಪನಿಯ ಸಿಇಒ ಆದ ಕಥೆ Read More »

error: Content is protected !!
Scroll to Top