ದೇಶದಲ್ಲಿ ಮಂಕಿಪಾಕ್ಸ್ ಭೀತಿ | ಎಚ್ಚರವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ

 ಮಂಗಳೂರು : ದೇಶದ ಎಲ್ಲಾ ವಿಮಾನ ನಿಲ್ದಾಣಗಳು ಹಾಗೂ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಭೂ ಬಂದರುಗಳಲ್ಲಿನ ಅಧಿಕಾರಿಗಳಿಗೆ ಒಳಬರುವ ಪ್ರಯಾಣಿಕರ ಬಗ್ಗೆ  ಮಂಕಿಪಾಕ್ಸ್‌ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಎಚ್ಚರದಿಂದಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ದೆಹಲಿಯ ರಾಮ್ ಮನೋಹ‌ರ್ ಲೋಹಿಯಾ ಆಸ್ಪತ್ರೆ, ಸಫರ್‌ಜಂಗ್‌ ಆಸ್ಪತ್ರೆ ಮತ್ತು ಲೇಡಿ ಹಾರ್ಡಿಂಜ್ ಆಸ್ಪತ್ರೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಮಂಕಿಪಾಕ್ಸ್ ರೋಗಿಯ ಪ್ರತ್ಯೇಕತೆ, ನಿರ್ವಹಣೆ ಮತ್ತು ಚಿಕಿತ್ಸೆಗಾಗಿ ನೋಡಲ್‌ ಕೇಂದ್ರಗಳಾಗಿ ಗುರುತಿಸಿದೆ. ಅಂತಹ ಗೊತ್ತುಪಡಿಸಿದ […]

ದೇಶದಲ್ಲಿ ಮಂಕಿಪಾಕ್ಸ್ ಭೀತಿ | ಎಚ್ಚರವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ Read More »

ಖೋಟಾ ನೋಟು ಚಲಾವಣೆ- ನಾಲ್ವರು ಬಂಧನ

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ

ಖೋಟಾ ನೋಟು ಚಲಾವಣೆ- ನಾಲ್ವರು ಬಂಧನ Read More »

ಈಟಿ ಸ್ಪರ್ಧೆ : ಮೇಘಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು :  ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 17 ರ ವಯೋ ಮಾನದ ಬಾಲಕಿಯರ ವಿಭಾಗದಲ್ಲಿ ಮೇಘಶ್ರೀ ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ಧಾರೆ. ಮಂಗಳ ಕ್ರಿಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಸ್ಪರ್ದೆ ನಡೆಯಿತು. ಕಲ್ಲಡ್ಕ ಶ್ರೀ ರಾಮ ಪ್ರೌಢ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ  ಮೇಘಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಟಿ ಸ್ಪರ್ಧೆ : ಮೇಘಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ | ಗಂಭೀರ ಗಾಯ

ಪುತ್ತೂರು : ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಸ್ಕೂಟರ್ ಸವಾರನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಕುಂಬ್ರ ಪೆಟ್ರೋಲ್‌ ಪಂಪ್ ನ ಮ್ಯಾನೇಜ‌ರ್ ಆಗಿರುವ ಧನುಷ್ ಗಾಯಗೊಂಡವರು. ಧನುಷ್‌ ಅವರು ಮನೆಯಿಂದ ತನ್ನ ಉದ್ಯೋಗದ ಸ್ಥಳವಾದ, ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ ಕುರುಂಜ ಮಣ್ಣಾಪು ಬಳಿ ಕಾಡು ಹಂದಿ ದಿಢೀ‌ರ್ ದಾಳಿ ನಡೆಸಿದೆ. ಇದರಿಂದ ಸವಾರ ಗಲಿಬಿಲಿಗೊಂಡಿದ್ದು, ಬೈಕ್‌ ಸಮೇತ

ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ | ಗಂಭೀರ ಗಾಯ Read More »

ಆ.22 ರಿಂದ 29 : ಪುಣ್ಚಪ್ಪಾಡಿ ವಿನಾಯಕನಗರದಲ್ಲಿ ಮದ್ಯವರ್ಜನ ಶಿಬಿರ | ಕಾರ್ಯಕ್ರಮದ ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ

ಕಡಬ: ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆ.22 ರಿಂದ 29 ರ ತನಕ ವಿನಾಯಕನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ ನಡೆಯುವ 1843ನೇ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ ಭಾನುವಾರ ಸವಣೂರಿನಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಚರ್ಚಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗಾಗಿ ಉಪ ಸಮಿತಿಗಳನ್ನು ರಚಿಸಲಾಯಿತು. ಸಭಾ ವೇದಿಕೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್‍ ಕೆ. ಸವಣೂರು, ಸವಣೂರು ಸಿಎ

ಆ.22 ರಿಂದ 29 : ಪುಣ್ಚಪ್ಪಾಡಿ ವಿನಾಯಕನಗರದಲ್ಲಿ ಮದ್ಯವರ್ಜನ ಶಿಬಿರ | ಕಾರ್ಯಕ್ರಮದ ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ Read More »

ಸೀನಿಯರ್ ವೆಯಿಟ್ಲಿ ಫ್ಟಿಂಗ್ ನಲ್ಲಿ ಪುತ್ತೂರಿನ ರಜತ್ ರೈ ಗೆ ಚಿನ್ನದ ಪದಕ

ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ಲಿಫ್ಟಿಂಗ್ ನಲ್ಲಿ 81ಕೆಜಿ ವಿಭಾಗದಲ್ಲಿ ರಜತ್ ರೈ ಇವರು ಚಿನ್ನದ ಪದಕ ಪಡೆದಿದ್ದಾರೆ ಮತ್ತು ಒಟ್ಟು 298ಕೆಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನು ಮಾಡಿರುತ್ತಾರೆ. ಕಳೆದ 2ವರ್ಷಗಳಿಂದ ಚಿನ್ನದ ಪದಕ ಪಡೆದಿದ್ದು 3ನೇ ವರ್ಷ ಕೂಡ ಚಿನ್ನದ ಪದಕ ಪಡೆದು hat-trick ಸಾಧನೆಯನ್ನು ಮಾಡಿದ್ದಾರೆ. ಈ ಮೂಲಕ ಅಕ್ಟೋಬರ್ ನಲ್ಲಿ ಹಿಮಾಚಲ್ ಪ್ರದೇಶದಲ್ಲಿ ನಡೆಯುವ ಸೀನಿಯ‌ರ್ ನ್ಯಾಷನಲ್ ವೆಯಿಟ್ಲಿಫ್ಟಿಂಗ್ ಚಾಂಪಿನ್ಶಿಪ್ ಗೆ ಮೂರನೇ ಭಾರಿ ಕರ್ನಾಟಕ ರಾಜ್ಯ ತಂಡವನ್ನು

ಸೀನಿಯರ್ ವೆಯಿಟ್ಲಿ ಫ್ಟಿಂಗ್ ನಲ್ಲಿ ಪುತ್ತೂರಿನ ರಜತ್ ರೈ ಗೆ ಚಿನ್ನದ ಪದಕ Read More »

13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್  ದರ ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಬರೋಬ್ಬರಿ 13 ವರ್ಷಗಳ ನಂತರ ರಬ್ಬರ್ ಬೆಲೆ ಏರಿಕೆಯಾಗಿದೆ. ಅಂದರೆ 2011ರಲ್ಲಿ ರಬ್ಬರ್ ಬೆಲೆ ಕೆಜಿಗೆ 242ರೂ. ಈ ಬಳಿಕ ರಬ್ಬರ್ ಬೆಲೆ ಕಳೆದ ವರ್ಷ ರಬ್ಬರ್ ಬೆಲೆ ಕೆಜಿಗೆ 149 ರೂ.ಗೆ ಇಳಿಕೆಯಾಗಿತ್ತು. ಈ ವರ್ಷ ರಬ್ಬರ್ (ಆರ್‌ಎಸ್‌ಎಸ್ 4 ಗ್ರೇಡ್) ಕೆಜಿಗೆ 239 ರೂ., ಆರ್‌ಎಸ್‌ಎಸ್ 5 ಗ್ರೇಡ್ ಕೆಜಿಗೆ 234 ರೂ. ಮತ್ತು ಲ್ಯಾಟೆಕ್ಸ್ ಬೆಲೆಯು ಕೆಜಿಗೆ 165 ರೂ.

13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ Read More »

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ “ಅಷ್ಟಾದಶ” ಸಂಭ್ರಮ

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 18ನೇ ವರ್ಷದ “ಅಷ್ಟಾದಶ ಸಂಭ್ರಮ” ವಿಜೃಂಭಣೆಯಿಂದ ಆಚರಿಸಲಾಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಬದುಕಿನಲ್ಲಿ ಗುರಿ ಹಾಗೂ ಗುರು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ನಾವು ನಮ್ಮ ಗುರಿಯನ್ನು ಮರೆಯಬಾರದು ಎಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲ್‌ನಾಥ್ ಪ್ರಸ್ತಾವಿಕವಾಗಿ ಮಾತನಾಡಿ, ಪ್ರಗತಿಯ ಮುಂದಿನ ಗುರಿಗಳ ಬಗ್ಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ ಗೋಕುಲ್‌ನಾಥ್

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ “ಅಷ್ಟಾದಶ” ಸಂಭ್ರಮ Read More »

ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಬಸ್ಸಿಗೆ ಕಲ್ಲೆಸೆದ ಮೂವರು ಆರೋಪಿಗಳ ಬಂಧನ

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ  ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಶಾಹುಲ್ ಹಮೀದ್, ಅನ್ವ‌ರ್ ಹಾಗೂ ಕಿಶೋ‌ರ್ ಶೆಟ್ಟಿ ಬಂಧಿತರು. ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸೋಮವಾರ ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರು ನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ

ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಬಸ್ಸಿಗೆ ಕಲ್ಲೆಸೆದ ಮೂವರು ಆರೋಪಿಗಳ ಬಂಧನ Read More »

ಈಜು ಸ್ಪರ್ಧೆ : ಸಿಯಾ ಭಾವಿನ್ ಸವಜಾನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಂಗಳೂರು : ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟೋತ್ಥಾನ ವಿದ್ಯಾಕೇಂದ್ರದಲ್ಲಿ ಆ. 17ರಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯಾ ಭಾವಿನ್ ಸವಜಾನಿ ಅವರು 200 ಮೀಟರ್ ಫ್ರೀ ಸ್ಟೈಲ್ ಮತ್ತು 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. 100 ಮೀಟರ್ ಬ್ಯಾಕ್ ಸ್ಟ್ರೋಕ್, 4×100 ರಿಲೇ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿಪದಕ ಪಡೆದು ರಾಷ್ಟ್ರ ಮಟ್ಟಕ್ಕೆ

ಈಜು ಸ್ಪರ್ಧೆ : ಸಿಯಾ ಭಾವಿನ್ ಸವಜಾನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top