ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ನೇತೃತ್ವದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಹಾಗೂ ಹಿಂದೂ ವಿರೋಧಿ ಶಕ್ತಿಗಳ ಪ್ರತಿಕೃತಿ ದಹನ ನಡೆಯಿತು. ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ಸಾಥ್ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಉಪನ್ಯಾಸಕ ಆದರ್ಶ ಗೋಖಲೆ, ಇಂದು ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂ ದೌರ್ಜನ್ಯ ನಾಳೆ ಭಾರತದಲ್ಲೂ ನಡೆದರೆ ಅಚ್ಚರಿಯಿಲ್ಲ. ಇದನ್ನು ತಡೆಯಬೇಕಾದರೆ ಹಿಂದೂಗಳೆಲ್ಲರೂ ಒಂದಾಗಿ […]

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಸಂಸದ ಕ್ಯಾ.ಬ್ರಿಜೇಶ್‍ ಚೌಟರನ್ನು ಭೇಟಿಯಾದ ಪುತ್ತೂರು ಬಿಜೆಪಿ, ಗ್ರಾಮಾಂತರ ಮಂಡಲ ಪದಾಧಿಕಾರಿಗಳು

ಪುತ್ತೂರು: ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲಕ್ಕೆ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರು ಸಹಿತ ಇನ್ನಿತರ ಪದಾಧಿಕಾರಿಗಳು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಭೇಟಿ ಮಾಡಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಕುಮಾರ್ ಮಾರ್ತ ಭೇಟಿ ಮಾಡಿ ಸಂಸದರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ನಿತೇಶ್‍ ಕುಮಾರ್ ಶಾಂತಿವನ, ಜಯಶ್ರೀ ಎಲ್‍.

ಸಂಸದ ಕ್ಯಾ.ಬ್ರಿಜೇಶ್‍ ಚೌಟರನ್ನು ಭೇಟಿಯಾದ ಪುತ್ತೂರು ಬಿಜೆಪಿ, ಗ್ರಾಮಾಂತರ ಮಂಡಲ ಪದಾಧಿಕಾರಿಗಳು Read More »

ಬೈಕ್‌ ಅಪಘಾತ ದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತಾಲೂಕಿನ ಬೆಳಾಲು ಗ್ರಾಮದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಓದುತ್ತಿದ್ದ ವಿಧ್ಯಾರ್ಥಿ ಜೀವಾ ಮೃತಪಟ್ಟವರು. ಆಗಸ್ಟ್ 13ರ ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ಹೋಗುವಾಗ ನಡೆದ ಟೆಂಪೋ ಮತ್ತು ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಉಮೇಶ್ ಮಂಜೊತ್ತು ಮತ್ತು ಕವಿತಾ ದಂಪತಿ ಪುತ್ರ ಅಪಘಾತಕ್ಕೆ ಈಡಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೈಕ್‌ ಅಪಘಾತ ದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು Read More »

ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 42ನೇ ವರ್ಷದ ಶ್ರೀ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಸವಣೂರಿನಲ್ಲಿ ನಡೆಯಿತು. ಸಮಿತಿ ಗೌರವಾಧ್ಯಕ್ಷರಾದ ಕೆ. ಸೀತಾರಾಮ ರೈ ಸವಣೂರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಶಿವರಾಮ ಗೌಡ ಮೆದು,  ಉಪಾಧ್ಯಕ್ಷ ರಾಘವ ಗೌಡ ಗುರುಪುತ್ತಾರು, ಜೊತೆ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ನಡುಬೈಲು, ಕೋಶಧಿಕಾರಿ ರಾಮಕೃಷ್ಣ ಪ್ರಭು, ಸದಸ್ಯರಾದ ಸುಂದರ ರೈ ಸವಣೂರು, ಸಂಜೀವ ಪೂಜಾರಿ ಅಗರಿ, ಗಂಗಾಧರ ಪೆರಿಯಡ್ಕ, ವೆಂಕಪ್ಪ

ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 42ನೇ ವರ್ಷದ ಶ್ರೀ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಆ.16ರಂದು ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ವೇ ಮೂ ಹರಿಪ್ರಸಾದ ವೈಲಾಯ ಅವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ

ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ನಾಳೆ ಪುತ್ತೂರಿನಲ್ಲಿಯೂ ವೈದ್ಯಕೀಯ ಸೇವೆಗಳು ಭಾಗಶಃ ಬಂದ್ | ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‍ ಘೋಷಣೆ

ಪುತ್ತೂರು: ಕೋಲ್ಕತ್ತಾದ ಆರ್ ಜಿ ಆರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ ಹಾಗೂ ಈ ಘಟನೆಯ ಬಗೆಗಿನ ಸಾಕ್ಷಿ ನಾಶದ ದುರುದ್ದೇಶ ಇಟ್ಟುಕೊಂಡು ಆಸ್ಪತ್ರೆಯ ಮೇಲೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿದ ಧಾಳಿಯನ್ನು ಖಂಡಿಸಿ ಆ.17 ನಾಳೆ  ಬೆಳಗ್ಗೆ 6:00 ಗಂಟೆಯಿಂದ ಆ.18ರ ಬೆಳಗ್ಗೆ 6:00ರ ವರೆಗೆ ರಾಷ್ಟ್ರವ್ಯಾಪ್ತಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡುವುದಾಗಿ ಭಾರತೀಯ ವೈದ್ಯಕೀಯ ಸಂಘ ರಾಷ್ಟೀಯ ಶಾಖೆ ಘೋಷಿಸಿದೆ. ಅದರಂತೆ ಪುತ್ತೂರಿನಲ್ಲಿಯೂ ವೈದ್ಯಕೀಯ

ನಾಳೆ ಪುತ್ತೂರಿನಲ್ಲಿಯೂ ವೈದ್ಯಕೀಯ ಸೇವೆಗಳು ಭಾಗಶಃ ಬಂದ್ | ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‍ ಘೋಷಣೆ Read More »

ಸಕಲೇಶಪುರ ಮತ್ತೆ ರೈಲ್ವೇ ಹಳಿಗೆ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್

ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಇಂದು ಮತ್ತೆ ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಕಳೆದ ಒಂದು ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಮಣ್ಣು ಕುಸಿತಗೊಂಡಿದೆ. ಭೂ ಕುಸಿತದಿಂದಾಗಿ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ ನಿಂತಿದೆ. ರೈಲು ನಿಲುಗಡೆಯಿಂದ ಪ್ರಯಾಣಿಕರು ಪರದಾಟ ಪಡುವಂತಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು

ಸಕಲೇಶಪುರ ಮತ್ತೆ ರೈಲ್ವೇ ಹಳಿಗೆ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್ Read More »

ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ

ಪುತ್ತೂರು: ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಗೌಡವ ಯುವ ಸಂಘ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಇಂದು ನಡೆಯಿತು. ಪೂಜೆಯ ಅಂಗವಾಗಿ ಬೆಳಿಗ್ಗೆ ವಿಶ್ರಾಂತ ಪ್ರಾಧ್ಯಾಪಕಿ ಲೀಲಾವತಿ ಎಂ. ನೇರಳ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಶಶಿಧರ್, ಸಮಿತಿಯ

ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ Read More »

ಸ್ಕೂಟರ್-ಗೂಡ್ಸ್  ವಾಹನ ಡಿಕ್ಕಿ | ಸ್ಕೂಟರ್ ಸವಾರ ಗಂಭೀರ

ಪುತ್ತೂರು: ಸ್ಕೂಟರ್ ಗೆ ಗೂಡ್ಸ್ ವಾಹನ ಡಿಕ್ಕಿ ಹೋಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸಂಪ್ಯ ಮಸೀದಿ ಬಳಿ ಇಂದು ನಡೆದಿದೆ. ಸ್ಕೂಟರ್ ಸವಾರರನ್ನು ದರ್ಬೆ ಸಂತ‌ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಗಳೆಂದು ಗುರುತಿಸಲಾಗಿದೆ. ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಗೂಡ್ಸ್ ವಾಹನ‌ವನ್ನು ತಮಿಳುನಾಡು ಮೂಲದ್ದು ಎಂದು‌ ಗುರುತಿಸಲಾಗಿದೆ.

ಸ್ಕೂಟರ್-ಗೂಡ್ಸ್  ವಾಹನ ಡಿಕ್ಕಿ | ಸ್ಕೂಟರ್ ಸವಾರ ಗಂಭೀರ Read More »

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ | ಆರೋಪಿ ಸಹಿತ ಖರೀದಿದಾರರ ಬಂಧನ

ಕೊಡಗು : ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮೂಲತಃ ಕೇರಳ ರಾಜ್ಯದ ಇಡುಕ್ಕಿಯವನಾದ ಸುರೇಶ್  ಬಂಧಿತ ಆರೋಪಿ. ಮಡಿಕೇರಿ ತಾಲ್ಲೂಕಿನ ಸಣ್ಣಪುಲಿಕೋಟು ಗ್ರಾಮದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದಿದ್ದ ಸುರೇಶ್ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ. ಇವನಿಂದ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಬಂದೂಕು ಖರೀದಿಸಿದ್ದ ಕರಿಕೆ ನಿವಾಸಿ ಎನ್.ಜೆ ಶಿವರಾಮ(45), ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಎಸ್.ರವಿ(35), ಮಡಿಕೇರಿ ತಾಲ್ಲೂಕಿನ

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ | ಆರೋಪಿ ಸಹಿತ ಖರೀದಿದಾರರ ಬಂಧನ Read More »

error: Content is protected !!
Scroll to Top