ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ

ಸವಣೂರು: ದೇಶದ ವಿಚಾರ ಬಂದಾಗ ಸ್ವಾರ್ಥವನ್ನು ಮರೆತು ಇಡೀ ಸಮಾಜವನ್ನು ಒಂದಾಗಿ ಕೊಂಡೊಯ್ಯುವ ಮನೋಭಾವ ಸೈನಿಕರದ್ದಾಗಿದೆ. ಒಮ್ಮೆ ಸೈನಿಕನಾದಲ್ಲಿ ಜೀವನಪೂರ್ತಿ ಆತ ಅಂತಹ ಮನೋಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾನೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ಭಾರತಕ್ಕೆ ಸೈನಿಕನ ಮನಸ್ಥಿತಿಯ ಚಿಂತನೆಯ ಅವಶ್ಯಕತೆಯಿದೆ ಎಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಇಂದು ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ […]

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 13ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಪ್ರಶಸ್ತಿ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘದ ಸಾಧನೆಗೆ ಸತತ 13ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇಂದು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್‍ ನ ಮಹಾಸಭೆಯಲ್ಲಿ ಸಂಘ ಅಧ್ಯಕ್ಷ ತಾರನಾಥ ಕಾಯರ್ಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಅವರಿಗೆ  ಕೇಂದ್ರ ಸಹಕಾರಿ ಬ್ಯಾಂಕ್‍ ಅಧ್ಯಕ್ಷ, ಸಹಕಾರಿ ರತ್ನ  ಎಂ.ಎನ್‍ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ ರೈ

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 13ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಪ್ರಶಸ್ತಿ Read More »

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರ್ಸ್ ನ  ಬಾಲಿಕಾ ಪ್ರೌಢ ಶಾಲೆ, ಇದರ ಜಂಟಿ ಆಶ್ರಯದಲ್ಲಿ ಆಫಿಸರ್ಸ್‍ ಕ್ಲಬ್‍ ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡ ಮತ್ತು ಪ್ರಾಥಮಿಕ ವಿಭಾಗದ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡಲ್ಲಿ 10ನೇ ತರಗತಿಯ ಸಮನ್ಮಿತಾ.ಕೆ, 9ನೇ ತರಗತಿಯ

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಸತತ 3 ನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಕ್ಕೆ ಚಿನ್ನದ ಪದಕ

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ 3ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನ ಪ್ರಶಸ್ತಿ ಪಡೆದು ಕೊಂಡ ಪುತ್ತೂರು, ಕಡಬ, ಬಂಟ್ವಾಳ ತಾಲೂಕು ಸಹಿತ 10 ಶಾಖೆಗಳನ್ನು ಹೊಂದಿರುವ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು ಈ ಭಾರಿ ಸಾಧನ ಪ್ರಶಸ್ತಿಯೊಂದಿಗೆ ಪ್ರಥಮ ಬಾರಿಗೆ ಚಿನ್ನದ ಪದಕವನ್ನೂ ಪಡೆದುಕೊಂಡಿದೆ. ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ‘ಸಾಧನ ಪ್ರಶಸ್ತಿ’ಯನ್ನು ಪಡೆದು ಕೊಂಡರೆ ಸಂಘವು ರೂ.103 ಕೋಟಿ ಡೆಪೋಸಿಟ್‌ ಮತ್ತು ರೂ. 542 ಕೋಟಿ ದಾಖಲೆಯ

ಸತತ 3 ನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಕ್ಕೆ ಚಿನ್ನದ ಪದಕ Read More »

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸನ್ಮಾನ

ಕೆದಿಲ : ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಬಿ. ಪೆರ್ನಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಕಾಂತುಕೋಡಿ ಅವರನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರಿನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿದರು. 2023-24ರ ಆರ್ಥಿಕ ವರ್ಷದಲ್ಲಿ ಕೆದಿಲ ವ್ಯ. ಸೇ. ಸ. ಸಂಘದ ಸದಸ್ಯರು 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸನ್ಮಾನ Read More »

ಎಸ್ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರದ ಕುರಿತು ಯಾವುದೇ ಪ್ರಸ್ತಾಪ ಇಲ್ಲ | ಖಡಾಖಂಡಿತವಾಗಿ ಹೇಳಿದ ಗೃಹ ಸಚಿವ ಜಿ.ಪರಮೇಶ್ವರ್

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಮಂಗಳೂರಿನಿಂದ ಪುತ್ತೂರಿಗೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಥಳಾಂತರಿಸುವ ಪ್ರಸ್ತಾವನೆಯನ್ನು ಕೈಬಿಟ್ಟಿದೆ. ಬಿಜೆಪಿಯ ಅಂದಿನ ಪುತ್ತೂರು ಶಾಸಕ ಸಂಜೀವ ಮಠಂದೂರುರವರು 2020ರಲ್ಲಿ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಮುಂದಾಗಿದ್ದರು. ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾಗಿ ತಿಳಿಸಿದ್ದರು. ಪುತ್ತೂರು ಪೇಟೆಯ ಮೂರು ಭಾಗಗಳಲ್ಲಿ 19 ಎಕರೆಗೂ ಹೆಚ್ಚ ಭೂಮಿಯನ್ನು ಎಸ್ಪಿ ಮತ್ತು ಡಿಎಆರ್ ಕಚೇರಿಗಳನ್ನು ಸ್ಥಳಾಂತರಿಸಲು ಮತ್ತು ಪೊಲೀಸ್ ಕ್ವಾರ್ಟಸ್ ಸ್ಥಾಪಿಸಲು ಕಾಯ್ದಿರಿಸಲಾಗಿದೆ ಎಂದು ಅವರು

ಎಸ್ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರದ ಕುರಿತು ಯಾವುದೇ ಪ್ರಸ್ತಾಪ ಇಲ್ಲ | ಖಡಾಖಂಡಿತವಾಗಿ ಹೇಳಿದ ಗೃಹ ಸಚಿವ ಜಿ.ಪರಮೇಶ್ವರ್ Read More »

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ

ಪುತ್ತೂರು: ನಗರದ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ ರ್ 18ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ 18ನೇ ವರ್ಷದ “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆಯನ್ನು ಆ.18 ಭಾನುವಾರ ಹಮ್ಮಿಕೊಂಡಿದೆ. ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಾಂತ ಹೆಸರು ವಾಸಿಯಾಗಿದೆ. ಇಲ್ಲಿ ಹತ್ತನೇ ತರಗತಿ, ದ್ವಿತೀಯ ಪಿಯುಸಿಯ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ, ಕಂಪ್ಯೂಟರ್ ತರಗತಿ, ಸಿಇಟಿ, ನೀಟ್, ತರಗತಿ, ಜವಾಹರ್ ನವೋದಯ ತರಬೇತಿ,

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ Read More »

ಪುತ್ತೂರು ಬೀಡಿ ಕಾರ್ಮಿಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪಿ.ಕೆ.ಸತೀಶನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಆಯ್ಕೆ

ಪುತ್ತೂರು: ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷರಾಗಿ ನ್ಯಾಯವಾದಿ ಪಿಕೆ ಸತೀಶನ್ , ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಭಟ್, ಖಜಾಂಜಿಯಾಗಿ ಈಶ್ವರಿ ಶಂಕರ್ ಮುಂಡೂರು ಆಯ್ಕೆ ಪುತ್ತೂರು ಮಾಜಿ ಸೈನಿಕ ಭವನದಲ್ಲಿ ನಡೆದ ಪುತ್ತೂರು ತಾಲೂಕು ಬೀಡಿ ಕಾರ್ಮಿಕ ಸಂಘದ 10ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾದ್ಯಕ್ಷರಾಗಿ ಗುಡ್ಡಪ್ಪ ಗೌಡ, ಮತ್ತು ಚಿತ್ರಕಲಾ ದೋಳ್ಪಾಡಿ, ಸಹಕಾರ್ಯದರ್ಶಿಯಾಗಿ ಪವಿತ್ರ ಗೆಜ್ಜೆಗಿರಿ ಮತ್ತು ಜಾನಕಿ ಕೊಪ್ಪ ಹಾಗೂ ಸದಸ್ಯರಾಗಿ ಕಸ್ತೂರಿ ರೈ ಕೋಳ್ತಿಗೆ, ಜಯಂತಿ ಪಾಲ್ತಡಿ, ವಾರಿಜ ದೋಳ್ಪಾಡಿ, ಸುಂದರಿ

ಪುತ್ತೂರು ಬೀಡಿ ಕಾರ್ಮಿಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪಿ.ಕೆ.ಸತೀಶನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಆಯ್ಕೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ

ಪುತ್ತೂರು: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ರಚಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ. ,ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ಆಯ್ಕೆಯಾದರು. ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ ,ರಾಧಿಕಾ ಹರೀಶ್ ಕೆ ತೆಂಕಪಾಡಿ ಆಯ್ಕೆಯಾದರು . ಶಾಲಾ ಆಡಳಿತ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಭೆಯ ಅಧ್ಯಕ್ಷತೆ ವಹಿಸಿ, ನೂತನವಾಗಿ ಆಯ್ಕೆಯಾದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಿಗೆ ,ಉಪಾಧ್ಯಕ್ಷರಿಗೆ ಹಾಗೂ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು

ಕೊಣಾಜೆ:  ವಿದೇಶದಲ್ಲಿ ಕೆಲಸಕ್ಕಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕ ವಿದೇಶದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ನಡುಪದವಿನ ಉಮ್ಮರ್ ಅವರ  ಪುತ್ರ ನೌಫಲ್(25) ಮೃತ ಯುವಕ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ‌ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವಿವಾಹಿತನಾಗಿರುವ ನೌಫಲ್ ಅವರ ಮೃತದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು  ನೌಫಲ್ ಅವರ ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ತಿಳಿಸಿದ್ದಾರೆ.

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು Read More »

error: Content is protected !!
Scroll to Top